Homeಮುಖಪುಟಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ...

ಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ ಒಕ್ಕೂಟ

- Advertisement -
- Advertisement -

ಭಾರತದ ಹಲವಾರು ಮುಖ್ಯವಾಹಿನಿ ಟಿವಿ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳ ಡಿಜಿಟಲ್ ಅಂಗಗಳನ್ನು ಪ್ರತಿನಿಧಿಸುವ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ ​​(ಡಿಎನ್‌ಪಿಎ), ಕೃತಕ ಬುದ್ಧಿಮತ್ತೆ ಕಂಪನಿಯಾದ ಚಾಟ್‌ಜಿಪಿಟಿ (ChatGPT)ಯ ಮಾತೃ ಸಂಸ್ಥೆ ಓಪನ್‌ಎಐ (OpenAI) ವಿರುದ್ಧದ ಹಕ್ಕುಸ್ವಾಮ್ಯ  (Copy Right) ಉಲ್ಲಂಘಣೆ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದೆ.

“ಓಪನ್‌ಎಐನ ಚಾಟ್ ಜಿಪಿಟಿ ಸೇರಿದಂತೆ ಇತರ ಎಐ ಮಾದರಿಗಳು ತರಬೇತಿ ನೀಡಲು ಯಾವುದೇ ಪರವಾನಗಿ, ಅಧಿಕಾರ ಅಥವಾ ಅನುಮತಿ ಇಲ್ಲದೆ ತಮ್ಮ ವಿಷಯ (Content) ಮತ್ತು ಮಾಹಿತಿಯನ್ನು (Information) ಬಳಸುವ ಮೂಲಕ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ ಎಂದು ಡಿಜಿಟಲ್ ಸುದ್ದಿ ಪ್ರಕಾಶಕರು ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಜನವರಿ 27ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಮಧ್ಯಂತರ ಅರ್ಜಿಯಲ್ಲಿ ಡಿಎನ್‌ಪಿಎ ಒತ್ತಿ ಹೇಳಿದೆ ಎಂದು ವರದಿಯಾಗಿದೆ.

ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ANI) ದಾಖಲಿಸಿರುವ ಮೊಕದ್ದಮೆಯಲ್ಲಿ ಡಿಎನ್‌ಪಿಎ ಮಧ್ಯಪ್ರವೇಶಿಸಿದೆ. ಎಎನ್ಐ ಪ್ರಕರಣದ ಮುಂದಿನ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಈ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ. ಜನವರಿ 28ರಂದು ಪ್ರಕರಣ ಮುಂದಿನ ವಿಚಾರಣೆ ನಿಗದಿಯಾಗಿದೆ.

“ದೆಹಲಿ ಹೈಕೋರ್ಟ್ 19 ನವೆಂಬರ್ 2024 ರಂದು ನೀಡಿರುವ ತನ್ನ ಆದೇಶದಲ್ಲಿ ಎಎನ್ಐ VS ಓಪನ್‌ಎಐ ಪ್ರಕರಣದಿಂದ ಉದ್ಭವಿಸುವ ಹಲವಾರು ಮಹತ್ವದ ಕಾನೂನು ಪ್ರಶ್ನೆಗಳನ್ನು ಗುರುತಿಸಿದೆ” ಎಂದು ಡಿಎನ್‌ಪಿಎ ಹೇಳಿದೆ.

ಓಪನ್ಎಐ ಮಾದರಿಗಳಿಗೆ ತರಬೇತಿ ನೀಡಲು ಮತ್ತು ಅದನ್ನು ತನ್ನ ಔಟ್‌ಪುಟ್‌ಗಳಲ್ಲಿ ಬಳಸಲು ಓಪನ್‌ಎಐ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯಾದ ಅಸೋಸಿಯೇಟೆಡ್ ಪ್ರೆಸ್ (AP), ದಿ ಅಟ್ಲಾಂಟಿಕ್ ಮತ್ತು ನ್ಯೂಸ್ ಕಾರ್ಪ್‌ನೊಂದಿಗೆ ಪರವಾನಗಿ ಒಪ್ಪಂದಗಳನ್ನು ಮಾಡಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಎಐ ಮಾದರಿಗಳಿಗೆ (AI models) ತರಬೇತಿ ನೀಡಲು ಬೇಕಾದ ವಿಷಯವನ್ನು ಬಳಸಬೇಕಾದರೆ, ಓಪನ್ಎಐ ಕೂಡಾ ಪರವಾನಗಿ ಅಥವಾ ಅನುಮತಿ ಪಡೆಯಬೇಕಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಪ್ರಕರಣದ ಫಲಿತಾಂಶವು ಡಿಎನ್‌ಪಿಎ ಸದಸ್ಯರು ನೇಮಿಸಿಕೊಳ್ಳುವ ಪತ್ರಕರ್ತರು ಮಾತ್ರವಲ್ಲದೆ ಭಾರತೀಯ ಪತ್ರಿಕಾರಂಗದ ಉದ್ಯೋಗಿಗಳ ಜೀವನೋಪಾಯದ ಮೇಲೆಯೂ ಪರಿಣಾಮ ಬೀರುತ್ತದೆ ಎಂದು ಮಾಧ್ಯಮಗಳು ಹೇಳಿವೆ.

ಈ ಹಿಂದಿನ ವಿಚಾರಣೆ ವೇಳೆ ಪ್ರತಿಕ್ರಿಯಿಸಿದ್ದ ಓಪನ್‌ಎಐ, “ಯಾವುದೇ ದತ್ತಾಂಶವನ್ನು ಭಾರತದಲ್ಲಿ ಸಂಸ್ಕರಿಸಲಾಗಿಲ್ಲ ಅಥವಾ ಸಂಗ್ರಹಿಸಲಾಗಿಲ್ಲ. ಹೀಗಾಗಿ, ಇದು ಭಾರತೀಯ ನ್ಯಾಯಾಲಯಗಳ ವ್ಯಾಪ್ತಿಗೆ ಬರುವುದಿಲ್ಲ” ಎಂದು ವಾದಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 18ರಂದು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಏಕಸದಸ್ಯ ಪೀಠವು ಶಿಕ್ಷಣತಜ್ಞ ಅರುಲ್ ಜಾರ್ಜ್ ಸ್ಕಾರಿಯಾ ಮತ್ತು ವಕೀಲ ಆದರ್ಶ್ ರಾಮಾನಾಜುನ್ ಅವರನ್ನು ಸಲಹೆಗಾರರಾಗಿ ನೇಮಿಸಿತ್ತು.

ಶುಕ್ರವಾರ (ಜ.28) ದೆಹಲಿ ಹೈಕೋರ್ಟ್ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶೀಯ ಮತ್ತು ಅಂತಾರಾಷ್ಟ್ರೀಯ ಪುಸ್ತಕ ಪ್ರಕಾಶಕರನ್ನು ಪ್ರತಿನಿಧಿಸುವ ಭಾರತೀಯ ಪ್ರಕಾಶಕರ ಒಕ್ಕೂಟಕ್ಕೆ (ಎಫ್‌ಐಪಿ) ಎಎನ್‌ಐ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಅನುಮತಿ ನೀಡಿತ್ತು.

ಹಲವಾರು ಪ್ರಕಾರಗಳಲ್ಲಿನ ಪುಸ್ತಕಗಳನ್ನು “ಸೂಕ್ಷ್ಮವಾಗಿ ಸಂಗ್ರಹಿಸಲಾಗಿದೆ ಮತ್ತು ರಚಿಸಲಾಗಿದೆ. ಅವು ಇಚ್ಛೆಯಂತೆ ಲೂಟಿ ಮಾಡುವ ಸರಕುಗಳಲ್ಲ” ಎಂದು ಎಫ್‌ಐಪಿ ಮಧ್ಯಂತರ ಅರ್ಜಿಯಲ್ಲಿ ಹೇಳಿದೆ.

ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...