Homeಮುಖಪುಟಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ...

ಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ ಒಕ್ಕೂಟ

- Advertisement -
- Advertisement -

ಭಾರತದ ಹಲವಾರು ಮುಖ್ಯವಾಹಿನಿ ಟಿವಿ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳ ಡಿಜಿಟಲ್ ಅಂಗಗಳನ್ನು ಪ್ರತಿನಿಧಿಸುವ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ ​​(ಡಿಎನ್‌ಪಿಎ), ಕೃತಕ ಬುದ್ಧಿಮತ್ತೆ ಕಂಪನಿಯಾದ ಚಾಟ್‌ಜಿಪಿಟಿ (ChatGPT)ಯ ಮಾತೃ ಸಂಸ್ಥೆ ಓಪನ್‌ಎಐ (OpenAI) ವಿರುದ್ಧದ ಹಕ್ಕುಸ್ವಾಮ್ಯ  (Copy Right) ಉಲ್ಲಂಘಣೆ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದೆ.

“ಓಪನ್‌ಎಐನ ಚಾಟ್ ಜಿಪಿಟಿ ಸೇರಿದಂತೆ ಇತರ ಎಐ ಮಾದರಿಗಳು ತರಬೇತಿ ನೀಡಲು ಯಾವುದೇ ಪರವಾನಗಿ, ಅಧಿಕಾರ ಅಥವಾ ಅನುಮತಿ ಇಲ್ಲದೆ ತಮ್ಮ ವಿಷಯ (Content) ಮತ್ತು ಮಾಹಿತಿಯನ್ನು (Information) ಬಳಸುವ ಮೂಲಕ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ ಎಂದು ಡಿಜಿಟಲ್ ಸುದ್ದಿ ಪ್ರಕಾಶಕರು ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಜನವರಿ 27ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಮಧ್ಯಂತರ ಅರ್ಜಿಯಲ್ಲಿ ಡಿಎನ್‌ಪಿಎ ಒತ್ತಿ ಹೇಳಿದೆ ಎಂದು ವರದಿಯಾಗಿದೆ.

ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ANI) ದಾಖಲಿಸಿರುವ ಮೊಕದ್ದಮೆಯಲ್ಲಿ ಡಿಎನ್‌ಪಿಎ ಮಧ್ಯಪ್ರವೇಶಿಸಿದೆ. ಎಎನ್ಐ ಪ್ರಕರಣದ ಮುಂದಿನ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಈ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ. ಜನವರಿ 28ರಂದು ಪ್ರಕರಣ ಮುಂದಿನ ವಿಚಾರಣೆ ನಿಗದಿಯಾಗಿದೆ.

“ದೆಹಲಿ ಹೈಕೋರ್ಟ್ 19 ನವೆಂಬರ್ 2024 ರಂದು ನೀಡಿರುವ ತನ್ನ ಆದೇಶದಲ್ಲಿ ಎಎನ್ಐ VS ಓಪನ್‌ಎಐ ಪ್ರಕರಣದಿಂದ ಉದ್ಭವಿಸುವ ಹಲವಾರು ಮಹತ್ವದ ಕಾನೂನು ಪ್ರಶ್ನೆಗಳನ್ನು ಗುರುತಿಸಿದೆ” ಎಂದು ಡಿಎನ್‌ಪಿಎ ಹೇಳಿದೆ.

ಓಪನ್ಎಐ ಮಾದರಿಗಳಿಗೆ ತರಬೇತಿ ನೀಡಲು ಮತ್ತು ಅದನ್ನು ತನ್ನ ಔಟ್‌ಪುಟ್‌ಗಳಲ್ಲಿ ಬಳಸಲು ಓಪನ್‌ಎಐ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯಾದ ಅಸೋಸಿಯೇಟೆಡ್ ಪ್ರೆಸ್ (AP), ದಿ ಅಟ್ಲಾಂಟಿಕ್ ಮತ್ತು ನ್ಯೂಸ್ ಕಾರ್ಪ್‌ನೊಂದಿಗೆ ಪರವಾನಗಿ ಒಪ್ಪಂದಗಳನ್ನು ಮಾಡಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಎಐ ಮಾದರಿಗಳಿಗೆ (AI models) ತರಬೇತಿ ನೀಡಲು ಬೇಕಾದ ವಿಷಯವನ್ನು ಬಳಸಬೇಕಾದರೆ, ಓಪನ್ಎಐ ಕೂಡಾ ಪರವಾನಗಿ ಅಥವಾ ಅನುಮತಿ ಪಡೆಯಬೇಕಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಪ್ರಕರಣದ ಫಲಿತಾಂಶವು ಡಿಎನ್‌ಪಿಎ ಸದಸ್ಯರು ನೇಮಿಸಿಕೊಳ್ಳುವ ಪತ್ರಕರ್ತರು ಮಾತ್ರವಲ್ಲದೆ ಭಾರತೀಯ ಪತ್ರಿಕಾರಂಗದ ಉದ್ಯೋಗಿಗಳ ಜೀವನೋಪಾಯದ ಮೇಲೆಯೂ ಪರಿಣಾಮ ಬೀರುತ್ತದೆ ಎಂದು ಮಾಧ್ಯಮಗಳು ಹೇಳಿವೆ.

ಈ ಹಿಂದಿನ ವಿಚಾರಣೆ ವೇಳೆ ಪ್ರತಿಕ್ರಿಯಿಸಿದ್ದ ಓಪನ್‌ಎಐ, “ಯಾವುದೇ ದತ್ತಾಂಶವನ್ನು ಭಾರತದಲ್ಲಿ ಸಂಸ್ಕರಿಸಲಾಗಿಲ್ಲ ಅಥವಾ ಸಂಗ್ರಹಿಸಲಾಗಿಲ್ಲ. ಹೀಗಾಗಿ, ಇದು ಭಾರತೀಯ ನ್ಯಾಯಾಲಯಗಳ ವ್ಯಾಪ್ತಿಗೆ ಬರುವುದಿಲ್ಲ” ಎಂದು ವಾದಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 18ರಂದು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಏಕಸದಸ್ಯ ಪೀಠವು ಶಿಕ್ಷಣತಜ್ಞ ಅರುಲ್ ಜಾರ್ಜ್ ಸ್ಕಾರಿಯಾ ಮತ್ತು ವಕೀಲ ಆದರ್ಶ್ ರಾಮಾನಾಜುನ್ ಅವರನ್ನು ಸಲಹೆಗಾರರಾಗಿ ನೇಮಿಸಿತ್ತು.

ಶುಕ್ರವಾರ (ಜ.28) ದೆಹಲಿ ಹೈಕೋರ್ಟ್ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶೀಯ ಮತ್ತು ಅಂತಾರಾಷ್ಟ್ರೀಯ ಪುಸ್ತಕ ಪ್ರಕಾಶಕರನ್ನು ಪ್ರತಿನಿಧಿಸುವ ಭಾರತೀಯ ಪ್ರಕಾಶಕರ ಒಕ್ಕೂಟಕ್ಕೆ (ಎಫ್‌ಐಪಿ) ಎಎನ್‌ಐ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಅನುಮತಿ ನೀಡಿತ್ತು.

ಹಲವಾರು ಪ್ರಕಾರಗಳಲ್ಲಿನ ಪುಸ್ತಕಗಳನ್ನು “ಸೂಕ್ಷ್ಮವಾಗಿ ಸಂಗ್ರಹಿಸಲಾಗಿದೆ ಮತ್ತು ರಚಿಸಲಾಗಿದೆ. ಅವು ಇಚ್ಛೆಯಂತೆ ಲೂಟಿ ಮಾಡುವ ಸರಕುಗಳಲ್ಲ” ಎಂದು ಎಫ್‌ಐಪಿ ಮಧ್ಯಂತರ ಅರ್ಜಿಯಲ್ಲಿ ಹೇಳಿದೆ.

ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...