Homeಮುಖಪುಟಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ...

ಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ ಒಕ್ಕೂಟ

- Advertisement -
- Advertisement -

ಭಾರತದ ಹಲವಾರು ಮುಖ್ಯವಾಹಿನಿ ಟಿವಿ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳ ಡಿಜಿಟಲ್ ಅಂಗಗಳನ್ನು ಪ್ರತಿನಿಧಿಸುವ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ ​​(ಡಿಎನ್‌ಪಿಎ), ಕೃತಕ ಬುದ್ಧಿಮತ್ತೆ ಕಂಪನಿಯಾದ ಚಾಟ್‌ಜಿಪಿಟಿ (ChatGPT)ಯ ಮಾತೃ ಸಂಸ್ಥೆ ಓಪನ್‌ಎಐ (OpenAI) ವಿರುದ್ಧದ ಹಕ್ಕುಸ್ವಾಮ್ಯ  (Copy Right) ಉಲ್ಲಂಘಣೆ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದೆ.

“ಓಪನ್‌ಎಐನ ಚಾಟ್ ಜಿಪಿಟಿ ಸೇರಿದಂತೆ ಇತರ ಎಐ ಮಾದರಿಗಳು ತರಬೇತಿ ನೀಡಲು ಯಾವುದೇ ಪರವಾನಗಿ, ಅಧಿಕಾರ ಅಥವಾ ಅನುಮತಿ ಇಲ್ಲದೆ ತಮ್ಮ ವಿಷಯ (Content) ಮತ್ತು ಮಾಹಿತಿಯನ್ನು (Information) ಬಳಸುವ ಮೂಲಕ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ ಎಂದು ಡಿಜಿಟಲ್ ಸುದ್ದಿ ಪ್ರಕಾಶಕರು ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಜನವರಿ 27ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಮಧ್ಯಂತರ ಅರ್ಜಿಯಲ್ಲಿ ಡಿಎನ್‌ಪಿಎ ಒತ್ತಿ ಹೇಳಿದೆ ಎಂದು ವರದಿಯಾಗಿದೆ.

ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ANI) ದಾಖಲಿಸಿರುವ ಮೊಕದ್ದಮೆಯಲ್ಲಿ ಡಿಎನ್‌ಪಿಎ ಮಧ್ಯಪ್ರವೇಶಿಸಿದೆ. ಎಎನ್ಐ ಪ್ರಕರಣದ ಮುಂದಿನ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಈ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ. ಜನವರಿ 28ರಂದು ಪ್ರಕರಣ ಮುಂದಿನ ವಿಚಾರಣೆ ನಿಗದಿಯಾಗಿದೆ.

“ದೆಹಲಿ ಹೈಕೋರ್ಟ್ 19 ನವೆಂಬರ್ 2024 ರಂದು ನೀಡಿರುವ ತನ್ನ ಆದೇಶದಲ್ಲಿ ಎಎನ್ಐ VS ಓಪನ್‌ಎಐ ಪ್ರಕರಣದಿಂದ ಉದ್ಭವಿಸುವ ಹಲವಾರು ಮಹತ್ವದ ಕಾನೂನು ಪ್ರಶ್ನೆಗಳನ್ನು ಗುರುತಿಸಿದೆ” ಎಂದು ಡಿಎನ್‌ಪಿಎ ಹೇಳಿದೆ.

ಓಪನ್ಎಐ ಮಾದರಿಗಳಿಗೆ ತರಬೇತಿ ನೀಡಲು ಮತ್ತು ಅದನ್ನು ತನ್ನ ಔಟ್‌ಪುಟ್‌ಗಳಲ್ಲಿ ಬಳಸಲು ಓಪನ್‌ಎಐ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯಾದ ಅಸೋಸಿಯೇಟೆಡ್ ಪ್ರೆಸ್ (AP), ದಿ ಅಟ್ಲಾಂಟಿಕ್ ಮತ್ತು ನ್ಯೂಸ್ ಕಾರ್ಪ್‌ನೊಂದಿಗೆ ಪರವಾನಗಿ ಒಪ್ಪಂದಗಳನ್ನು ಮಾಡಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಎಐ ಮಾದರಿಗಳಿಗೆ (AI models) ತರಬೇತಿ ನೀಡಲು ಬೇಕಾದ ವಿಷಯವನ್ನು ಬಳಸಬೇಕಾದರೆ, ಓಪನ್ಎಐ ಕೂಡಾ ಪರವಾನಗಿ ಅಥವಾ ಅನುಮತಿ ಪಡೆಯಬೇಕಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಪ್ರಕರಣದ ಫಲಿತಾಂಶವು ಡಿಎನ್‌ಪಿಎ ಸದಸ್ಯರು ನೇಮಿಸಿಕೊಳ್ಳುವ ಪತ್ರಕರ್ತರು ಮಾತ್ರವಲ್ಲದೆ ಭಾರತೀಯ ಪತ್ರಿಕಾರಂಗದ ಉದ್ಯೋಗಿಗಳ ಜೀವನೋಪಾಯದ ಮೇಲೆಯೂ ಪರಿಣಾಮ ಬೀರುತ್ತದೆ ಎಂದು ಮಾಧ್ಯಮಗಳು ಹೇಳಿವೆ.

ಈ ಹಿಂದಿನ ವಿಚಾರಣೆ ವೇಳೆ ಪ್ರತಿಕ್ರಿಯಿಸಿದ್ದ ಓಪನ್‌ಎಐ, “ಯಾವುದೇ ದತ್ತಾಂಶವನ್ನು ಭಾರತದಲ್ಲಿ ಸಂಸ್ಕರಿಸಲಾಗಿಲ್ಲ ಅಥವಾ ಸಂಗ್ರಹಿಸಲಾಗಿಲ್ಲ. ಹೀಗಾಗಿ, ಇದು ಭಾರತೀಯ ನ್ಯಾಯಾಲಯಗಳ ವ್ಯಾಪ್ತಿಗೆ ಬರುವುದಿಲ್ಲ” ಎಂದು ವಾದಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 18ರಂದು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಏಕಸದಸ್ಯ ಪೀಠವು ಶಿಕ್ಷಣತಜ್ಞ ಅರುಲ್ ಜಾರ್ಜ್ ಸ್ಕಾರಿಯಾ ಮತ್ತು ವಕೀಲ ಆದರ್ಶ್ ರಾಮಾನಾಜುನ್ ಅವರನ್ನು ಸಲಹೆಗಾರರಾಗಿ ನೇಮಿಸಿತ್ತು.

ಶುಕ್ರವಾರ (ಜ.28) ದೆಹಲಿ ಹೈಕೋರ್ಟ್ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶೀಯ ಮತ್ತು ಅಂತಾರಾಷ್ಟ್ರೀಯ ಪುಸ್ತಕ ಪ್ರಕಾಶಕರನ್ನು ಪ್ರತಿನಿಧಿಸುವ ಭಾರತೀಯ ಪ್ರಕಾಶಕರ ಒಕ್ಕೂಟಕ್ಕೆ (ಎಫ್‌ಐಪಿ) ಎಎನ್‌ಐ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಅನುಮತಿ ನೀಡಿತ್ತು.

ಹಲವಾರು ಪ್ರಕಾರಗಳಲ್ಲಿನ ಪುಸ್ತಕಗಳನ್ನು “ಸೂಕ್ಷ್ಮವಾಗಿ ಸಂಗ್ರಹಿಸಲಾಗಿದೆ ಮತ್ತು ರಚಿಸಲಾಗಿದೆ. ಅವು ಇಚ್ಛೆಯಂತೆ ಲೂಟಿ ಮಾಡುವ ಸರಕುಗಳಲ್ಲ” ಎಂದು ಎಫ್‌ಐಪಿ ಮಧ್ಯಂತರ ಅರ್ಜಿಯಲ್ಲಿ ಹೇಳಿದೆ.

ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...