Homeಮುಖಪುಟಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ...

ಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ ಒಕ್ಕೂಟ

- Advertisement -
- Advertisement -

ಭಾರತದ ಹಲವಾರು ಮುಖ್ಯವಾಹಿನಿ ಟಿವಿ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳ ಡಿಜಿಟಲ್ ಅಂಗಗಳನ್ನು ಪ್ರತಿನಿಧಿಸುವ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ ​​(ಡಿಎನ್‌ಪಿಎ), ಕೃತಕ ಬುದ್ಧಿಮತ್ತೆ ಕಂಪನಿಯಾದ ಚಾಟ್‌ಜಿಪಿಟಿ (ChatGPT)ಯ ಮಾತೃ ಸಂಸ್ಥೆ ಓಪನ್‌ಎಐ (OpenAI) ವಿರುದ್ಧದ ಹಕ್ಕುಸ್ವಾಮ್ಯ  (Copy Right) ಉಲ್ಲಂಘಣೆ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದೆ.

“ಓಪನ್‌ಎಐನ ಚಾಟ್ ಜಿಪಿಟಿ ಸೇರಿದಂತೆ ಇತರ ಎಐ ಮಾದರಿಗಳು ತರಬೇತಿ ನೀಡಲು ಯಾವುದೇ ಪರವಾನಗಿ, ಅಧಿಕಾರ ಅಥವಾ ಅನುಮತಿ ಇಲ್ಲದೆ ತಮ್ಮ ವಿಷಯ (Content) ಮತ್ತು ಮಾಹಿತಿಯನ್ನು (Information) ಬಳಸುವ ಮೂಲಕ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ ಎಂದು ಡಿಜಿಟಲ್ ಸುದ್ದಿ ಪ್ರಕಾಶಕರು ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಜನವರಿ 27ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಮಧ್ಯಂತರ ಅರ್ಜಿಯಲ್ಲಿ ಡಿಎನ್‌ಪಿಎ ಒತ್ತಿ ಹೇಳಿದೆ ಎಂದು ವರದಿಯಾಗಿದೆ.

ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ANI) ದಾಖಲಿಸಿರುವ ಮೊಕದ್ದಮೆಯಲ್ಲಿ ಡಿಎನ್‌ಪಿಎ ಮಧ್ಯಪ್ರವೇಶಿಸಿದೆ. ಎಎನ್ಐ ಪ್ರಕರಣದ ಮುಂದಿನ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಈ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ. ಜನವರಿ 28ರಂದು ಪ್ರಕರಣ ಮುಂದಿನ ವಿಚಾರಣೆ ನಿಗದಿಯಾಗಿದೆ.

“ದೆಹಲಿ ಹೈಕೋರ್ಟ್ 19 ನವೆಂಬರ್ 2024 ರಂದು ನೀಡಿರುವ ತನ್ನ ಆದೇಶದಲ್ಲಿ ಎಎನ್ಐ VS ಓಪನ್‌ಎಐ ಪ್ರಕರಣದಿಂದ ಉದ್ಭವಿಸುವ ಹಲವಾರು ಮಹತ್ವದ ಕಾನೂನು ಪ್ರಶ್ನೆಗಳನ್ನು ಗುರುತಿಸಿದೆ” ಎಂದು ಡಿಎನ್‌ಪಿಎ ಹೇಳಿದೆ.

ಓಪನ್ಎಐ ಮಾದರಿಗಳಿಗೆ ತರಬೇತಿ ನೀಡಲು ಮತ್ತು ಅದನ್ನು ತನ್ನ ಔಟ್‌ಪುಟ್‌ಗಳಲ್ಲಿ ಬಳಸಲು ಓಪನ್‌ಎಐ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯಾದ ಅಸೋಸಿಯೇಟೆಡ್ ಪ್ರೆಸ್ (AP), ದಿ ಅಟ್ಲಾಂಟಿಕ್ ಮತ್ತು ನ್ಯೂಸ್ ಕಾರ್ಪ್‌ನೊಂದಿಗೆ ಪರವಾನಗಿ ಒಪ್ಪಂದಗಳನ್ನು ಮಾಡಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಎಐ ಮಾದರಿಗಳಿಗೆ (AI models) ತರಬೇತಿ ನೀಡಲು ಬೇಕಾದ ವಿಷಯವನ್ನು ಬಳಸಬೇಕಾದರೆ, ಓಪನ್ಎಐ ಕೂಡಾ ಪರವಾನಗಿ ಅಥವಾ ಅನುಮತಿ ಪಡೆಯಬೇಕಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಪ್ರಕರಣದ ಫಲಿತಾಂಶವು ಡಿಎನ್‌ಪಿಎ ಸದಸ್ಯರು ನೇಮಿಸಿಕೊಳ್ಳುವ ಪತ್ರಕರ್ತರು ಮಾತ್ರವಲ್ಲದೆ ಭಾರತೀಯ ಪತ್ರಿಕಾರಂಗದ ಉದ್ಯೋಗಿಗಳ ಜೀವನೋಪಾಯದ ಮೇಲೆಯೂ ಪರಿಣಾಮ ಬೀರುತ್ತದೆ ಎಂದು ಮಾಧ್ಯಮಗಳು ಹೇಳಿವೆ.

ಈ ಹಿಂದಿನ ವಿಚಾರಣೆ ವೇಳೆ ಪ್ರತಿಕ್ರಿಯಿಸಿದ್ದ ಓಪನ್‌ಎಐ, “ಯಾವುದೇ ದತ್ತಾಂಶವನ್ನು ಭಾರತದಲ್ಲಿ ಸಂಸ್ಕರಿಸಲಾಗಿಲ್ಲ ಅಥವಾ ಸಂಗ್ರಹಿಸಲಾಗಿಲ್ಲ. ಹೀಗಾಗಿ, ಇದು ಭಾರತೀಯ ನ್ಯಾಯಾಲಯಗಳ ವ್ಯಾಪ್ತಿಗೆ ಬರುವುದಿಲ್ಲ” ಎಂದು ವಾದಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 18ರಂದು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಏಕಸದಸ್ಯ ಪೀಠವು ಶಿಕ್ಷಣತಜ್ಞ ಅರುಲ್ ಜಾರ್ಜ್ ಸ್ಕಾರಿಯಾ ಮತ್ತು ವಕೀಲ ಆದರ್ಶ್ ರಾಮಾನಾಜುನ್ ಅವರನ್ನು ಸಲಹೆಗಾರರಾಗಿ ನೇಮಿಸಿತ್ತು.

ಶುಕ್ರವಾರ (ಜ.28) ದೆಹಲಿ ಹೈಕೋರ್ಟ್ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶೀಯ ಮತ್ತು ಅಂತಾರಾಷ್ಟ್ರೀಯ ಪುಸ್ತಕ ಪ್ರಕಾಶಕರನ್ನು ಪ್ರತಿನಿಧಿಸುವ ಭಾರತೀಯ ಪ್ರಕಾಶಕರ ಒಕ್ಕೂಟಕ್ಕೆ (ಎಫ್‌ಐಪಿ) ಎಎನ್‌ಐ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಅನುಮತಿ ನೀಡಿತ್ತು.

ಹಲವಾರು ಪ್ರಕಾರಗಳಲ್ಲಿನ ಪುಸ್ತಕಗಳನ್ನು “ಸೂಕ್ಷ್ಮವಾಗಿ ಸಂಗ್ರಹಿಸಲಾಗಿದೆ ಮತ್ತು ರಚಿಸಲಾಗಿದೆ. ಅವು ಇಚ್ಛೆಯಂತೆ ಲೂಟಿ ಮಾಡುವ ಸರಕುಗಳಲ್ಲ” ಎಂದು ಎಫ್‌ಐಪಿ ಮಧ್ಯಂತರ ಅರ್ಜಿಯಲ್ಲಿ ಹೇಳಿದೆ.

ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....