Homeಮುಖಪುಟಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ...

ಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ ಒಕ್ಕೂಟ

- Advertisement -
- Advertisement -

ಭಾರತದ ಹಲವಾರು ಮುಖ್ಯವಾಹಿನಿ ಟಿವಿ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳ ಡಿಜಿಟಲ್ ಅಂಗಗಳನ್ನು ಪ್ರತಿನಿಧಿಸುವ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ ​​(ಡಿಎನ್‌ಪಿಎ), ಕೃತಕ ಬುದ್ಧಿಮತ್ತೆ ಕಂಪನಿಯಾದ ಚಾಟ್‌ಜಿಪಿಟಿ (ChatGPT)ಯ ಮಾತೃ ಸಂಸ್ಥೆ ಓಪನ್‌ಎಐ (OpenAI) ವಿರುದ್ಧದ ಹಕ್ಕುಸ್ವಾಮ್ಯ  (Copy Right) ಉಲ್ಲಂಘಣೆ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದೆ.

“ಓಪನ್‌ಎಐನ ಚಾಟ್ ಜಿಪಿಟಿ ಸೇರಿದಂತೆ ಇತರ ಎಐ ಮಾದರಿಗಳು ತರಬೇತಿ ನೀಡಲು ಯಾವುದೇ ಪರವಾನಗಿ, ಅಧಿಕಾರ ಅಥವಾ ಅನುಮತಿ ಇಲ್ಲದೆ ತಮ್ಮ ವಿಷಯ (Content) ಮತ್ತು ಮಾಹಿತಿಯನ್ನು (Information) ಬಳಸುವ ಮೂಲಕ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ ಎಂದು ಡಿಜಿಟಲ್ ಸುದ್ದಿ ಪ್ರಕಾಶಕರು ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಜನವರಿ 27ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಮಧ್ಯಂತರ ಅರ್ಜಿಯಲ್ಲಿ ಡಿಎನ್‌ಪಿಎ ಒತ್ತಿ ಹೇಳಿದೆ ಎಂದು ವರದಿಯಾಗಿದೆ.

ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ANI) ದಾಖಲಿಸಿರುವ ಮೊಕದ್ದಮೆಯಲ್ಲಿ ಡಿಎನ್‌ಪಿಎ ಮಧ್ಯಪ್ರವೇಶಿಸಿದೆ. ಎಎನ್ಐ ಪ್ರಕರಣದ ಮುಂದಿನ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಈ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ. ಜನವರಿ 28ರಂದು ಪ್ರಕರಣ ಮುಂದಿನ ವಿಚಾರಣೆ ನಿಗದಿಯಾಗಿದೆ.

“ದೆಹಲಿ ಹೈಕೋರ್ಟ್ 19 ನವೆಂಬರ್ 2024 ರಂದು ನೀಡಿರುವ ತನ್ನ ಆದೇಶದಲ್ಲಿ ಎಎನ್ಐ VS ಓಪನ್‌ಎಐ ಪ್ರಕರಣದಿಂದ ಉದ್ಭವಿಸುವ ಹಲವಾರು ಮಹತ್ವದ ಕಾನೂನು ಪ್ರಶ್ನೆಗಳನ್ನು ಗುರುತಿಸಿದೆ” ಎಂದು ಡಿಎನ್‌ಪಿಎ ಹೇಳಿದೆ.

ಓಪನ್ಎಐ ಮಾದರಿಗಳಿಗೆ ತರಬೇತಿ ನೀಡಲು ಮತ್ತು ಅದನ್ನು ತನ್ನ ಔಟ್‌ಪುಟ್‌ಗಳಲ್ಲಿ ಬಳಸಲು ಓಪನ್‌ಎಐ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯಾದ ಅಸೋಸಿಯೇಟೆಡ್ ಪ್ರೆಸ್ (AP), ದಿ ಅಟ್ಲಾಂಟಿಕ್ ಮತ್ತು ನ್ಯೂಸ್ ಕಾರ್ಪ್‌ನೊಂದಿಗೆ ಪರವಾನಗಿ ಒಪ್ಪಂದಗಳನ್ನು ಮಾಡಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಎಐ ಮಾದರಿಗಳಿಗೆ (AI models) ತರಬೇತಿ ನೀಡಲು ಬೇಕಾದ ವಿಷಯವನ್ನು ಬಳಸಬೇಕಾದರೆ, ಓಪನ್ಎಐ ಕೂಡಾ ಪರವಾನಗಿ ಅಥವಾ ಅನುಮತಿ ಪಡೆಯಬೇಕಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಪ್ರಕರಣದ ಫಲಿತಾಂಶವು ಡಿಎನ್‌ಪಿಎ ಸದಸ್ಯರು ನೇಮಿಸಿಕೊಳ್ಳುವ ಪತ್ರಕರ್ತರು ಮಾತ್ರವಲ್ಲದೆ ಭಾರತೀಯ ಪತ್ರಿಕಾರಂಗದ ಉದ್ಯೋಗಿಗಳ ಜೀವನೋಪಾಯದ ಮೇಲೆಯೂ ಪರಿಣಾಮ ಬೀರುತ್ತದೆ ಎಂದು ಮಾಧ್ಯಮಗಳು ಹೇಳಿವೆ.

ಈ ಹಿಂದಿನ ವಿಚಾರಣೆ ವೇಳೆ ಪ್ರತಿಕ್ರಿಯಿಸಿದ್ದ ಓಪನ್‌ಎಐ, “ಯಾವುದೇ ದತ್ತಾಂಶವನ್ನು ಭಾರತದಲ್ಲಿ ಸಂಸ್ಕರಿಸಲಾಗಿಲ್ಲ ಅಥವಾ ಸಂಗ್ರಹಿಸಲಾಗಿಲ್ಲ. ಹೀಗಾಗಿ, ಇದು ಭಾರತೀಯ ನ್ಯಾಯಾಲಯಗಳ ವ್ಯಾಪ್ತಿಗೆ ಬರುವುದಿಲ್ಲ” ಎಂದು ವಾದಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 18ರಂದು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಏಕಸದಸ್ಯ ಪೀಠವು ಶಿಕ್ಷಣತಜ್ಞ ಅರುಲ್ ಜಾರ್ಜ್ ಸ್ಕಾರಿಯಾ ಮತ್ತು ವಕೀಲ ಆದರ್ಶ್ ರಾಮಾನಾಜುನ್ ಅವರನ್ನು ಸಲಹೆಗಾರರಾಗಿ ನೇಮಿಸಿತ್ತು.

ಶುಕ್ರವಾರ (ಜ.28) ದೆಹಲಿ ಹೈಕೋರ್ಟ್ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶೀಯ ಮತ್ತು ಅಂತಾರಾಷ್ಟ್ರೀಯ ಪುಸ್ತಕ ಪ್ರಕಾಶಕರನ್ನು ಪ್ರತಿನಿಧಿಸುವ ಭಾರತೀಯ ಪ್ರಕಾಶಕರ ಒಕ್ಕೂಟಕ್ಕೆ (ಎಫ್‌ಐಪಿ) ಎಎನ್‌ಐ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಅನುಮತಿ ನೀಡಿತ್ತು.

ಹಲವಾರು ಪ್ರಕಾರಗಳಲ್ಲಿನ ಪುಸ್ತಕಗಳನ್ನು “ಸೂಕ್ಷ್ಮವಾಗಿ ಸಂಗ್ರಹಿಸಲಾಗಿದೆ ಮತ್ತು ರಚಿಸಲಾಗಿದೆ. ಅವು ಇಚ್ಛೆಯಂತೆ ಲೂಟಿ ಮಾಡುವ ಸರಕುಗಳಲ್ಲ” ಎಂದು ಎಫ್‌ಐಪಿ ಮಧ್ಯಂತರ ಅರ್ಜಿಯಲ್ಲಿ ಹೇಳಿದೆ.

ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...