Homeಮುಖಪುಟಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ...

ಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ ಒಕ್ಕೂಟ

- Advertisement -
- Advertisement -

ಭಾರತದ ಹಲವಾರು ಮುಖ್ಯವಾಹಿನಿ ಟಿವಿ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳ ಡಿಜಿಟಲ್ ಅಂಗಗಳನ್ನು ಪ್ರತಿನಿಧಿಸುವ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ ​​(ಡಿಎನ್‌ಪಿಎ), ಕೃತಕ ಬುದ್ಧಿಮತ್ತೆ ಕಂಪನಿಯಾದ ಚಾಟ್‌ಜಿಪಿಟಿ (ChatGPT)ಯ ಮಾತೃ ಸಂಸ್ಥೆ ಓಪನ್‌ಎಐ (OpenAI) ವಿರುದ್ಧದ ಹಕ್ಕುಸ್ವಾಮ್ಯ  (Copy Right) ಉಲ್ಲಂಘಣೆ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದೆ.

“ಓಪನ್‌ಎಐನ ಚಾಟ್ ಜಿಪಿಟಿ ಸೇರಿದಂತೆ ಇತರ ಎಐ ಮಾದರಿಗಳು ತರಬೇತಿ ನೀಡಲು ಯಾವುದೇ ಪರವಾನಗಿ, ಅಧಿಕಾರ ಅಥವಾ ಅನುಮತಿ ಇಲ್ಲದೆ ತಮ್ಮ ವಿಷಯ (Content) ಮತ್ತು ಮಾಹಿತಿಯನ್ನು (Information) ಬಳಸುವ ಮೂಲಕ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ ಎಂದು ಡಿಜಿಟಲ್ ಸುದ್ದಿ ಪ್ರಕಾಶಕರು ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಜನವರಿ 27ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಮಧ್ಯಂತರ ಅರ್ಜಿಯಲ್ಲಿ ಡಿಎನ್‌ಪಿಎ ಒತ್ತಿ ಹೇಳಿದೆ ಎಂದು ವರದಿಯಾಗಿದೆ.

ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ANI) ದಾಖಲಿಸಿರುವ ಮೊಕದ್ದಮೆಯಲ್ಲಿ ಡಿಎನ್‌ಪಿಎ ಮಧ್ಯಪ್ರವೇಶಿಸಿದೆ. ಎಎನ್ಐ ಪ್ರಕರಣದ ಮುಂದಿನ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಈ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ. ಜನವರಿ 28ರಂದು ಪ್ರಕರಣ ಮುಂದಿನ ವಿಚಾರಣೆ ನಿಗದಿಯಾಗಿದೆ.

“ದೆಹಲಿ ಹೈಕೋರ್ಟ್ 19 ನವೆಂಬರ್ 2024 ರಂದು ನೀಡಿರುವ ತನ್ನ ಆದೇಶದಲ್ಲಿ ಎಎನ್ಐ VS ಓಪನ್‌ಎಐ ಪ್ರಕರಣದಿಂದ ಉದ್ಭವಿಸುವ ಹಲವಾರು ಮಹತ್ವದ ಕಾನೂನು ಪ್ರಶ್ನೆಗಳನ್ನು ಗುರುತಿಸಿದೆ” ಎಂದು ಡಿಎನ್‌ಪಿಎ ಹೇಳಿದೆ.

ಓಪನ್ಎಐ ಮಾದರಿಗಳಿಗೆ ತರಬೇತಿ ನೀಡಲು ಮತ್ತು ಅದನ್ನು ತನ್ನ ಔಟ್‌ಪುಟ್‌ಗಳಲ್ಲಿ ಬಳಸಲು ಓಪನ್‌ಎಐ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯಾದ ಅಸೋಸಿಯೇಟೆಡ್ ಪ್ರೆಸ್ (AP), ದಿ ಅಟ್ಲಾಂಟಿಕ್ ಮತ್ತು ನ್ಯೂಸ್ ಕಾರ್ಪ್‌ನೊಂದಿಗೆ ಪರವಾನಗಿ ಒಪ್ಪಂದಗಳನ್ನು ಮಾಡಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಎಐ ಮಾದರಿಗಳಿಗೆ (AI models) ತರಬೇತಿ ನೀಡಲು ಬೇಕಾದ ವಿಷಯವನ್ನು ಬಳಸಬೇಕಾದರೆ, ಓಪನ್ಎಐ ಕೂಡಾ ಪರವಾನಗಿ ಅಥವಾ ಅನುಮತಿ ಪಡೆಯಬೇಕಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಪ್ರಕರಣದ ಫಲಿತಾಂಶವು ಡಿಎನ್‌ಪಿಎ ಸದಸ್ಯರು ನೇಮಿಸಿಕೊಳ್ಳುವ ಪತ್ರಕರ್ತರು ಮಾತ್ರವಲ್ಲದೆ ಭಾರತೀಯ ಪತ್ರಿಕಾರಂಗದ ಉದ್ಯೋಗಿಗಳ ಜೀವನೋಪಾಯದ ಮೇಲೆಯೂ ಪರಿಣಾಮ ಬೀರುತ್ತದೆ ಎಂದು ಮಾಧ್ಯಮಗಳು ಹೇಳಿವೆ.

ಈ ಹಿಂದಿನ ವಿಚಾರಣೆ ವೇಳೆ ಪ್ರತಿಕ್ರಿಯಿಸಿದ್ದ ಓಪನ್‌ಎಐ, “ಯಾವುದೇ ದತ್ತಾಂಶವನ್ನು ಭಾರತದಲ್ಲಿ ಸಂಸ್ಕರಿಸಲಾಗಿಲ್ಲ ಅಥವಾ ಸಂಗ್ರಹಿಸಲಾಗಿಲ್ಲ. ಹೀಗಾಗಿ, ಇದು ಭಾರತೀಯ ನ್ಯಾಯಾಲಯಗಳ ವ್ಯಾಪ್ತಿಗೆ ಬರುವುದಿಲ್ಲ” ಎಂದು ವಾದಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 18ರಂದು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರ ಏಕಸದಸ್ಯ ಪೀಠವು ಶಿಕ್ಷಣತಜ್ಞ ಅರುಲ್ ಜಾರ್ಜ್ ಸ್ಕಾರಿಯಾ ಮತ್ತು ವಕೀಲ ಆದರ್ಶ್ ರಾಮಾನಾಜುನ್ ಅವರನ್ನು ಸಲಹೆಗಾರರಾಗಿ ನೇಮಿಸಿತ್ತು.

ಶುಕ್ರವಾರ (ಜ.28) ದೆಹಲಿ ಹೈಕೋರ್ಟ್ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶೀಯ ಮತ್ತು ಅಂತಾರಾಷ್ಟ್ರೀಯ ಪುಸ್ತಕ ಪ್ರಕಾಶಕರನ್ನು ಪ್ರತಿನಿಧಿಸುವ ಭಾರತೀಯ ಪ್ರಕಾಶಕರ ಒಕ್ಕೂಟಕ್ಕೆ (ಎಫ್‌ಐಪಿ) ಎಎನ್‌ಐ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಅನುಮತಿ ನೀಡಿತ್ತು.

ಹಲವಾರು ಪ್ರಕಾರಗಳಲ್ಲಿನ ಪುಸ್ತಕಗಳನ್ನು “ಸೂಕ್ಷ್ಮವಾಗಿ ಸಂಗ್ರಹಿಸಲಾಗಿದೆ ಮತ್ತು ರಚಿಸಲಾಗಿದೆ. ಅವು ಇಚ್ಛೆಯಂತೆ ಲೂಟಿ ಮಾಡುವ ಸರಕುಗಳಲ್ಲ” ಎಂದು ಎಫ್‌ಐಪಿ ಮಧ್ಯಂತರ ಅರ್ಜಿಯಲ್ಲಿ ಹೇಳಿದೆ.

ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...