Homeಮುಖಪುಟತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

ತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

- Advertisement -
- Advertisement -

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ 280 ಜನರು ಸಾವನ್ನಪ್ಪಿದ್ದಾರೆ. “ದುರಂತ ಸಂಭವಿಸುವ ಕೆಲವು ನಿಮಿಷಗಳ ಮೊದಲು ಕೋರಮಂಡಲ್‌ ಎಕ್ಸ್‌ಪ್ರೆಸ್‌ ತಪ್ಪಾದ ಹಳಿಯಲ್ಲಿ ಚಲಿಸುತ್ತಿತ್ತು. ಈ ಅವಘಡ  ಮಾನವ ನಿರ್ಮಿತ ಪ್ರಮಾದದಿಂದಾಗಿರಬಹುದು” ಎಂದು ರೈಲ್ವೆ ಸಿಗ್ನಲಿಂಗ್ ಕಂಟ್ರೋಲ್ ರೂಂನ ಆರಂಭಿಕ ವರದಿಗಳು ತಿಳಿಸಿವೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಖಚಿತ ಕಾರಣವು ಸಂಪೂರ್ಣ ತನಿಖೆಯ ನಂತರವೇ ತಿಳಿದುಬರುತ್ತದೆ.

“ರೈಲ್ವೆಯ ಖರಗ್‌ಪುರ ವಿಭಾಗದ ಸಿಗ್ನಲಿಂಗ್ ಕಂಟ್ರೋಲ್ ರೂಮ್‌ನ ವೀಡಿಯೊ ಪ್ರಕಾರ, ಚೆನ್ನೈಗೆ ಹೋಗುವ ಕೋರಮಂಡಲ್ ಎಕ್ಸ್‌ಪ್ರೆಸ್ ಶುಕ್ರವಾರ ಸಂಜೆ 6.55ಕ್ಕೆ ಬಹಾನಗರ್ ಬಜಾರ್ ನಿಲ್ದಾಣವನ್ನು ದಾಟಿತ್ತು. ನಂತರ ಮುಖ್ಯ ಮಾರ್ಗದ ಬದಲಿಗೆ ಗೂಡ್ಸ್ ರೈಲು ನಿಲುಗಡೆ ಮಾಡಿದ ಲೂಪ್ ಲೈನ್‌ನಲ್ಲಿ ಚಲಿಸುತ್ತಿತ್ತು” ಎಂದು ಹಿರಿಯ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡು ಮುಖ್ಯ ಮಾರ್ಗಗಳು ಮತ್ತು ಎರಡು ಲೂಪ್ ಲೈನ್‌ಗಳು ಸೇರಿದಂತೆ ನಾಲ್ಕು ರೈಲ್ವೆ ಹಳಿಗಳಿಗೆ ಸಂಬಂಧಿಸಿದ ದೃಶ್ಯಾವಳಿಗಳನ್ನು ಗಮನಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ಹೇಳಿಕೊಂಡಿದೆ.

ಗಂಟೆಗೆ ಸುಮಾರು 127 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಮುಖ್ಯ ಮಾರ್ಗದಲ್ಲಿ ಹಳಿ ತಪ್ಪಿದೆ ಎಂದು ರೈಲ್ವೆ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಕೆಲವೇ ನಿಮಿಷಗಳಲ್ಲಿ ಹೌರಾಕ್ಕೆ ಹೋಗುವ ಯಶವಂತನಗರ ಎಕ್ಸ್‌ಪ್ರೆಸ್ ಎದುರು ಭಾಗದಿಂದ ಬರುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

“ಇದು ಹೇಗೆ ಸಂಭವಿಸಿತು ಮತ್ತು ಏಕೆ ಸಂಭವಿಸಿತು ಎಂಬುದು ರೈಲ್ವೆ ಮಂಡಳಿಯು ಆದೇಶಿಸಿದ ವಿವರವಾದ ತನಿಖೆಯಲ್ಲಿ ಕಂಡುಬರುತ್ತದೆ. ಆದರೆ, ಮೇಲ್ನೋಟಕ್ಕೆ ಇದು ಮಾನವ ನಿರ್ಮಿತ ಅವಘಡ ಎಂದು ತೋರುತ್ತದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಅದೇ ಅಧಿಕಾರಿಯ ಹೇಳುವ ಪ್ರಕಾರ 1995ರಲ್ಲಿ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಇದೇ ರೀತಿಯ ಅವಘಡ ಸಂಭವಿಸಿತ್ತು. ಆ ಸಮಯದಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಸುಮಾರು 350 ಜನರು ಸಾವನ್ನಪ್ಪಿದರು. ರಕ್ಷಣಾ ಕಾರ್ಯಾಚರಣೆ ಮೂರು ದಿನಗಳ ಕಾಲ ನಡೆದಿತ್ತು.

ಒಡಿಸ್ಸಾಕ್ಕೆ ಇಂದು ಪ್ರಧಾನಿ ಭೇಟಿ

ಒಡಿಸ್ಸಾ ರಾಜ್ಯದಲ್ಲಿ ನೂರಾರು ಜನರು ಆಸ್ಪತ್ರೆಗೆ ದಾಖಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾಕ್ಕೆ ಇಂದು ಭೇಟಿ ನೀಡಲಿದ್ದಾರೆ.

“ಪ್ರಧಾನಿ ಮೋದಿ ಅವರು ಮೊದಲು ಅಪಘಾತದ ಸ್ಥಳಕ್ಕೆ ಭೇಟಿ ನೀಡುತ್ತಾರೆ ಮತ್ತು ನಂತರ ಸಂತ್ರಸ್ತರು ದಾಖಲಾಗಿರುವ ಆಸ್ಪತ್ರೆಗೆ ತೆರಳಲಿದ್ದಾರೆ” ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಇದನ್ನೂ ಓದಿರಿ: ರೈಲು ದುರಂತ: ಗಾಯಾಳುಗಳ ಚಿಕಿತ್ಸೆಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಜನ

ಪ್ರಧಾನಿ ಮೋದಿ ಅವರು ಇಂದು ಗೋವಾದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದರು. ಒಡಿಶಾದಲ್ಲಿ ನಡೆದ ದುರಂತದ ನಂತರ ವಂದೇ ಭಾರತ್ ಚಾಲನೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಒಡಿಶಾದ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿಯವರು ಹಿರಿಯ ರೈಲ್ವೇ ಅಧಿಕಾರಿಗಳ ಉನ್ನತ ಮಟ್ಟದ ಸಭೆಯನ್ನೂ ಕರೆದಿದ್ದಾರೆ.

ಮೂರು ರೈಲುಗಳ ಅಪಘಾತದ ಸುಮಾರು 16 ಗಂಟೆಗಳ ನಂತರ, ರಕ್ಷಣಾ ಕಾರ್ಯಾಚರಣೆಯು ಶನಿವಾರ ಪೂರ್ಣಗೊಂಡಿದೆ ಎಂದು ಘೋಷಿಸಲಾಗಿದೆ. 280 ಜನರು ಸಾವನ್ನಪ್ಪಿದ್ದಾರೆಂದು ಅಧಿಕೃತವಾಗಿ ಘೋಷಿಸಲಾಯಿತು. ಸುಮಾರು 900 ಪ್ರಯಾಣಿಕರಿಗೆ ಸಣ್ಣ ಮತ್ತು ತೀವ್ರ ಗಾಯತರನಾದ ಗಾಯಗಳಾಗಿದ್ದು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...