Homeಮುಖಪುಟತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

ತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

- Advertisement -
- Advertisement -

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ 280 ಜನರು ಸಾವನ್ನಪ್ಪಿದ್ದಾರೆ. “ದುರಂತ ಸಂಭವಿಸುವ ಕೆಲವು ನಿಮಿಷಗಳ ಮೊದಲು ಕೋರಮಂಡಲ್‌ ಎಕ್ಸ್‌ಪ್ರೆಸ್‌ ತಪ್ಪಾದ ಹಳಿಯಲ್ಲಿ ಚಲಿಸುತ್ತಿತ್ತು. ಈ ಅವಘಡ  ಮಾನವ ನಿರ್ಮಿತ ಪ್ರಮಾದದಿಂದಾಗಿರಬಹುದು” ಎಂದು ರೈಲ್ವೆ ಸಿಗ್ನಲಿಂಗ್ ಕಂಟ್ರೋಲ್ ರೂಂನ ಆರಂಭಿಕ ವರದಿಗಳು ತಿಳಿಸಿವೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಖಚಿತ ಕಾರಣವು ಸಂಪೂರ್ಣ ತನಿಖೆಯ ನಂತರವೇ ತಿಳಿದುಬರುತ್ತದೆ.

“ರೈಲ್ವೆಯ ಖರಗ್‌ಪುರ ವಿಭಾಗದ ಸಿಗ್ನಲಿಂಗ್ ಕಂಟ್ರೋಲ್ ರೂಮ್‌ನ ವೀಡಿಯೊ ಪ್ರಕಾರ, ಚೆನ್ನೈಗೆ ಹೋಗುವ ಕೋರಮಂಡಲ್ ಎಕ್ಸ್‌ಪ್ರೆಸ್ ಶುಕ್ರವಾರ ಸಂಜೆ 6.55ಕ್ಕೆ ಬಹಾನಗರ್ ಬಜಾರ್ ನಿಲ್ದಾಣವನ್ನು ದಾಟಿತ್ತು. ನಂತರ ಮುಖ್ಯ ಮಾರ್ಗದ ಬದಲಿಗೆ ಗೂಡ್ಸ್ ರೈಲು ನಿಲುಗಡೆ ಮಾಡಿದ ಲೂಪ್ ಲೈನ್‌ನಲ್ಲಿ ಚಲಿಸುತ್ತಿತ್ತು” ಎಂದು ಹಿರಿಯ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡು ಮುಖ್ಯ ಮಾರ್ಗಗಳು ಮತ್ತು ಎರಡು ಲೂಪ್ ಲೈನ್‌ಗಳು ಸೇರಿದಂತೆ ನಾಲ್ಕು ರೈಲ್ವೆ ಹಳಿಗಳಿಗೆ ಸಂಬಂಧಿಸಿದ ದೃಶ್ಯಾವಳಿಗಳನ್ನು ಗಮನಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ಹೇಳಿಕೊಂಡಿದೆ.

ಗಂಟೆಗೆ ಸುಮಾರು 127 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಮುಖ್ಯ ಮಾರ್ಗದಲ್ಲಿ ಹಳಿ ತಪ್ಪಿದೆ ಎಂದು ರೈಲ್ವೆ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಕೆಲವೇ ನಿಮಿಷಗಳಲ್ಲಿ ಹೌರಾಕ್ಕೆ ಹೋಗುವ ಯಶವಂತನಗರ ಎಕ್ಸ್‌ಪ್ರೆಸ್ ಎದುರು ಭಾಗದಿಂದ ಬರುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

“ಇದು ಹೇಗೆ ಸಂಭವಿಸಿತು ಮತ್ತು ಏಕೆ ಸಂಭವಿಸಿತು ಎಂಬುದು ರೈಲ್ವೆ ಮಂಡಳಿಯು ಆದೇಶಿಸಿದ ವಿವರವಾದ ತನಿಖೆಯಲ್ಲಿ ಕಂಡುಬರುತ್ತದೆ. ಆದರೆ, ಮೇಲ್ನೋಟಕ್ಕೆ ಇದು ಮಾನವ ನಿರ್ಮಿತ ಅವಘಡ ಎಂದು ತೋರುತ್ತದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಅದೇ ಅಧಿಕಾರಿಯ ಹೇಳುವ ಪ್ರಕಾರ 1995ರಲ್ಲಿ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಇದೇ ರೀತಿಯ ಅವಘಡ ಸಂಭವಿಸಿತ್ತು. ಆ ಸಮಯದಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಸುಮಾರು 350 ಜನರು ಸಾವನ್ನಪ್ಪಿದರು. ರಕ್ಷಣಾ ಕಾರ್ಯಾಚರಣೆ ಮೂರು ದಿನಗಳ ಕಾಲ ನಡೆದಿತ್ತು.

ಒಡಿಸ್ಸಾಕ್ಕೆ ಇಂದು ಪ್ರಧಾನಿ ಭೇಟಿ

ಒಡಿಸ್ಸಾ ರಾಜ್ಯದಲ್ಲಿ ನೂರಾರು ಜನರು ಆಸ್ಪತ್ರೆಗೆ ದಾಖಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾಕ್ಕೆ ಇಂದು ಭೇಟಿ ನೀಡಲಿದ್ದಾರೆ.

“ಪ್ರಧಾನಿ ಮೋದಿ ಅವರು ಮೊದಲು ಅಪಘಾತದ ಸ್ಥಳಕ್ಕೆ ಭೇಟಿ ನೀಡುತ್ತಾರೆ ಮತ್ತು ನಂತರ ಸಂತ್ರಸ್ತರು ದಾಖಲಾಗಿರುವ ಆಸ್ಪತ್ರೆಗೆ ತೆರಳಲಿದ್ದಾರೆ” ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಇದನ್ನೂ ಓದಿರಿ: ರೈಲು ದುರಂತ: ಗಾಯಾಳುಗಳ ಚಿಕಿತ್ಸೆಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಜನ

ಪ್ರಧಾನಿ ಮೋದಿ ಅವರು ಇಂದು ಗೋವಾದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದರು. ಒಡಿಶಾದಲ್ಲಿ ನಡೆದ ದುರಂತದ ನಂತರ ವಂದೇ ಭಾರತ್ ಚಾಲನೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಒಡಿಶಾದ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿಯವರು ಹಿರಿಯ ರೈಲ್ವೇ ಅಧಿಕಾರಿಗಳ ಉನ್ನತ ಮಟ್ಟದ ಸಭೆಯನ್ನೂ ಕರೆದಿದ್ದಾರೆ.

ಮೂರು ರೈಲುಗಳ ಅಪಘಾತದ ಸುಮಾರು 16 ಗಂಟೆಗಳ ನಂತರ, ರಕ್ಷಣಾ ಕಾರ್ಯಾಚರಣೆಯು ಶನಿವಾರ ಪೂರ್ಣಗೊಂಡಿದೆ ಎಂದು ಘೋಷಿಸಲಾಗಿದೆ. 280 ಜನರು ಸಾವನ್ನಪ್ಪಿದ್ದಾರೆಂದು ಅಧಿಕೃತವಾಗಿ ಘೋಷಿಸಲಾಯಿತು. ಸುಮಾರು 900 ಪ್ರಯಾಣಿಕರಿಗೆ ಸಣ್ಣ ಮತ್ತು ತೀವ್ರ ಗಾಯತರನಾದ ಗಾಯಗಳಾಗಿದ್ದು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...