Homeಮುಖಪುಟತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

ತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

- Advertisement -
- Advertisement -

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ 280 ಜನರು ಸಾವನ್ನಪ್ಪಿದ್ದಾರೆ. “ದುರಂತ ಸಂಭವಿಸುವ ಕೆಲವು ನಿಮಿಷಗಳ ಮೊದಲು ಕೋರಮಂಡಲ್‌ ಎಕ್ಸ್‌ಪ್ರೆಸ್‌ ತಪ್ಪಾದ ಹಳಿಯಲ್ಲಿ ಚಲಿಸುತ್ತಿತ್ತು. ಈ ಅವಘಡ  ಮಾನವ ನಿರ್ಮಿತ ಪ್ರಮಾದದಿಂದಾಗಿರಬಹುದು” ಎಂದು ರೈಲ್ವೆ ಸಿಗ್ನಲಿಂಗ್ ಕಂಟ್ರೋಲ್ ರೂಂನ ಆರಂಭಿಕ ವರದಿಗಳು ತಿಳಿಸಿವೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಖಚಿತ ಕಾರಣವು ಸಂಪೂರ್ಣ ತನಿಖೆಯ ನಂತರವೇ ತಿಳಿದುಬರುತ್ತದೆ.

“ರೈಲ್ವೆಯ ಖರಗ್‌ಪುರ ವಿಭಾಗದ ಸಿಗ್ನಲಿಂಗ್ ಕಂಟ್ರೋಲ್ ರೂಮ್‌ನ ವೀಡಿಯೊ ಪ್ರಕಾರ, ಚೆನ್ನೈಗೆ ಹೋಗುವ ಕೋರಮಂಡಲ್ ಎಕ್ಸ್‌ಪ್ರೆಸ್ ಶುಕ್ರವಾರ ಸಂಜೆ 6.55ಕ್ಕೆ ಬಹಾನಗರ್ ಬಜಾರ್ ನಿಲ್ದಾಣವನ್ನು ದಾಟಿತ್ತು. ನಂತರ ಮುಖ್ಯ ಮಾರ್ಗದ ಬದಲಿಗೆ ಗೂಡ್ಸ್ ರೈಲು ನಿಲುಗಡೆ ಮಾಡಿದ ಲೂಪ್ ಲೈನ್‌ನಲ್ಲಿ ಚಲಿಸುತ್ತಿತ್ತು” ಎಂದು ಹಿರಿಯ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡು ಮುಖ್ಯ ಮಾರ್ಗಗಳು ಮತ್ತು ಎರಡು ಲೂಪ್ ಲೈನ್‌ಗಳು ಸೇರಿದಂತೆ ನಾಲ್ಕು ರೈಲ್ವೆ ಹಳಿಗಳಿಗೆ ಸಂಬಂಧಿಸಿದ ದೃಶ್ಯಾವಳಿಗಳನ್ನು ಗಮನಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ಹೇಳಿಕೊಂಡಿದೆ.

ಗಂಟೆಗೆ ಸುಮಾರು 127 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಮುಖ್ಯ ಮಾರ್ಗದಲ್ಲಿ ಹಳಿ ತಪ್ಪಿದೆ ಎಂದು ರೈಲ್ವೆ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಕೆಲವೇ ನಿಮಿಷಗಳಲ್ಲಿ ಹೌರಾಕ್ಕೆ ಹೋಗುವ ಯಶವಂತನಗರ ಎಕ್ಸ್‌ಪ್ರೆಸ್ ಎದುರು ಭಾಗದಿಂದ ಬರುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

“ಇದು ಹೇಗೆ ಸಂಭವಿಸಿತು ಮತ್ತು ಏಕೆ ಸಂಭವಿಸಿತು ಎಂಬುದು ರೈಲ್ವೆ ಮಂಡಳಿಯು ಆದೇಶಿಸಿದ ವಿವರವಾದ ತನಿಖೆಯಲ್ಲಿ ಕಂಡುಬರುತ್ತದೆ. ಆದರೆ, ಮೇಲ್ನೋಟಕ್ಕೆ ಇದು ಮಾನವ ನಿರ್ಮಿತ ಅವಘಡ ಎಂದು ತೋರುತ್ತದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಅದೇ ಅಧಿಕಾರಿಯ ಹೇಳುವ ಪ್ರಕಾರ 1995ರಲ್ಲಿ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಇದೇ ರೀತಿಯ ಅವಘಡ ಸಂಭವಿಸಿತ್ತು. ಆ ಸಮಯದಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಸುಮಾರು 350 ಜನರು ಸಾವನ್ನಪ್ಪಿದರು. ರಕ್ಷಣಾ ಕಾರ್ಯಾಚರಣೆ ಮೂರು ದಿನಗಳ ಕಾಲ ನಡೆದಿತ್ತು.

ಒಡಿಸ್ಸಾಕ್ಕೆ ಇಂದು ಪ್ರಧಾನಿ ಭೇಟಿ

ಒಡಿಸ್ಸಾ ರಾಜ್ಯದಲ್ಲಿ ನೂರಾರು ಜನರು ಆಸ್ಪತ್ರೆಗೆ ದಾಖಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾಕ್ಕೆ ಇಂದು ಭೇಟಿ ನೀಡಲಿದ್ದಾರೆ.

“ಪ್ರಧಾನಿ ಮೋದಿ ಅವರು ಮೊದಲು ಅಪಘಾತದ ಸ್ಥಳಕ್ಕೆ ಭೇಟಿ ನೀಡುತ್ತಾರೆ ಮತ್ತು ನಂತರ ಸಂತ್ರಸ್ತರು ದಾಖಲಾಗಿರುವ ಆಸ್ಪತ್ರೆಗೆ ತೆರಳಲಿದ್ದಾರೆ” ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಇದನ್ನೂ ಓದಿರಿ: ರೈಲು ದುರಂತ: ಗಾಯಾಳುಗಳ ಚಿಕಿತ್ಸೆಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಜನ

ಪ್ರಧಾನಿ ಮೋದಿ ಅವರು ಇಂದು ಗೋವಾದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದರು. ಒಡಿಶಾದಲ್ಲಿ ನಡೆದ ದುರಂತದ ನಂತರ ವಂದೇ ಭಾರತ್ ಚಾಲನೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಒಡಿಶಾದ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿಯವರು ಹಿರಿಯ ರೈಲ್ವೇ ಅಧಿಕಾರಿಗಳ ಉನ್ನತ ಮಟ್ಟದ ಸಭೆಯನ್ನೂ ಕರೆದಿದ್ದಾರೆ.

ಮೂರು ರೈಲುಗಳ ಅಪಘಾತದ ಸುಮಾರು 16 ಗಂಟೆಗಳ ನಂತರ, ರಕ್ಷಣಾ ಕಾರ್ಯಾಚರಣೆಯು ಶನಿವಾರ ಪೂರ್ಣಗೊಂಡಿದೆ ಎಂದು ಘೋಷಿಸಲಾಗಿದೆ. 280 ಜನರು ಸಾವನ್ನಪ್ಪಿದ್ದಾರೆಂದು ಅಧಿಕೃತವಾಗಿ ಘೋಷಿಸಲಾಯಿತು. ಸುಮಾರು 900 ಪ್ರಯಾಣಿಕರಿಗೆ ಸಣ್ಣ ಮತ್ತು ತೀವ್ರ ಗಾಯತರನಾದ ಗಾಯಗಳಾಗಿದ್ದು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...