Homeಮುಖಪುಟತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

ತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

- Advertisement -
- Advertisement -

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ 280 ಜನರು ಸಾವನ್ನಪ್ಪಿದ್ದಾರೆ. “ದುರಂತ ಸಂಭವಿಸುವ ಕೆಲವು ನಿಮಿಷಗಳ ಮೊದಲು ಕೋರಮಂಡಲ್‌ ಎಕ್ಸ್‌ಪ್ರೆಸ್‌ ತಪ್ಪಾದ ಹಳಿಯಲ್ಲಿ ಚಲಿಸುತ್ತಿತ್ತು. ಈ ಅವಘಡ  ಮಾನವ ನಿರ್ಮಿತ ಪ್ರಮಾದದಿಂದಾಗಿರಬಹುದು” ಎಂದು ರೈಲ್ವೆ ಸಿಗ್ನಲಿಂಗ್ ಕಂಟ್ರೋಲ್ ರೂಂನ ಆರಂಭಿಕ ವರದಿಗಳು ತಿಳಿಸಿವೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಖಚಿತ ಕಾರಣವು ಸಂಪೂರ್ಣ ತನಿಖೆಯ ನಂತರವೇ ತಿಳಿದುಬರುತ್ತದೆ.

“ರೈಲ್ವೆಯ ಖರಗ್‌ಪುರ ವಿಭಾಗದ ಸಿಗ್ನಲಿಂಗ್ ಕಂಟ್ರೋಲ್ ರೂಮ್‌ನ ವೀಡಿಯೊ ಪ್ರಕಾರ, ಚೆನ್ನೈಗೆ ಹೋಗುವ ಕೋರಮಂಡಲ್ ಎಕ್ಸ್‌ಪ್ರೆಸ್ ಶುಕ್ರವಾರ ಸಂಜೆ 6.55ಕ್ಕೆ ಬಹಾನಗರ್ ಬಜಾರ್ ನಿಲ್ದಾಣವನ್ನು ದಾಟಿತ್ತು. ನಂತರ ಮುಖ್ಯ ಮಾರ್ಗದ ಬದಲಿಗೆ ಗೂಡ್ಸ್ ರೈಲು ನಿಲುಗಡೆ ಮಾಡಿದ ಲೂಪ್ ಲೈನ್‌ನಲ್ಲಿ ಚಲಿಸುತ್ತಿತ್ತು” ಎಂದು ಹಿರಿಯ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡು ಮುಖ್ಯ ಮಾರ್ಗಗಳು ಮತ್ತು ಎರಡು ಲೂಪ್ ಲೈನ್‌ಗಳು ಸೇರಿದಂತೆ ನಾಲ್ಕು ರೈಲ್ವೆ ಹಳಿಗಳಿಗೆ ಸಂಬಂಧಿಸಿದ ದೃಶ್ಯಾವಳಿಗಳನ್ನು ಗಮನಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ಹೇಳಿಕೊಂಡಿದೆ.

ಗಂಟೆಗೆ ಸುಮಾರು 127 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಮುಖ್ಯ ಮಾರ್ಗದಲ್ಲಿ ಹಳಿ ತಪ್ಪಿದೆ ಎಂದು ರೈಲ್ವೆ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಕೆಲವೇ ನಿಮಿಷಗಳಲ್ಲಿ ಹೌರಾಕ್ಕೆ ಹೋಗುವ ಯಶವಂತನಗರ ಎಕ್ಸ್‌ಪ್ರೆಸ್ ಎದುರು ಭಾಗದಿಂದ ಬರುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

“ಇದು ಹೇಗೆ ಸಂಭವಿಸಿತು ಮತ್ತು ಏಕೆ ಸಂಭವಿಸಿತು ಎಂಬುದು ರೈಲ್ವೆ ಮಂಡಳಿಯು ಆದೇಶಿಸಿದ ವಿವರವಾದ ತನಿಖೆಯಲ್ಲಿ ಕಂಡುಬರುತ್ತದೆ. ಆದರೆ, ಮೇಲ್ನೋಟಕ್ಕೆ ಇದು ಮಾನವ ನಿರ್ಮಿತ ಅವಘಡ ಎಂದು ತೋರುತ್ತದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಅದೇ ಅಧಿಕಾರಿಯ ಹೇಳುವ ಪ್ರಕಾರ 1995ರಲ್ಲಿ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಇದೇ ರೀತಿಯ ಅವಘಡ ಸಂಭವಿಸಿತ್ತು. ಆ ಸಮಯದಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಸುಮಾರು 350 ಜನರು ಸಾವನ್ನಪ್ಪಿದರು. ರಕ್ಷಣಾ ಕಾರ್ಯಾಚರಣೆ ಮೂರು ದಿನಗಳ ಕಾಲ ನಡೆದಿತ್ತು.

ಒಡಿಸ್ಸಾಕ್ಕೆ ಇಂದು ಪ್ರಧಾನಿ ಭೇಟಿ

ಒಡಿಸ್ಸಾ ರಾಜ್ಯದಲ್ಲಿ ನೂರಾರು ಜನರು ಆಸ್ಪತ್ರೆಗೆ ದಾಖಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾಕ್ಕೆ ಇಂದು ಭೇಟಿ ನೀಡಲಿದ್ದಾರೆ.

“ಪ್ರಧಾನಿ ಮೋದಿ ಅವರು ಮೊದಲು ಅಪಘಾತದ ಸ್ಥಳಕ್ಕೆ ಭೇಟಿ ನೀಡುತ್ತಾರೆ ಮತ್ತು ನಂತರ ಸಂತ್ರಸ್ತರು ದಾಖಲಾಗಿರುವ ಆಸ್ಪತ್ರೆಗೆ ತೆರಳಲಿದ್ದಾರೆ” ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಇದನ್ನೂ ಓದಿರಿ: ರೈಲು ದುರಂತ: ಗಾಯಾಳುಗಳ ಚಿಕಿತ್ಸೆಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಜನ

ಪ್ರಧಾನಿ ಮೋದಿ ಅವರು ಇಂದು ಗೋವಾದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದರು. ಒಡಿಶಾದಲ್ಲಿ ನಡೆದ ದುರಂತದ ನಂತರ ವಂದೇ ಭಾರತ್ ಚಾಲನೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಒಡಿಶಾದ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿಯವರು ಹಿರಿಯ ರೈಲ್ವೇ ಅಧಿಕಾರಿಗಳ ಉನ್ನತ ಮಟ್ಟದ ಸಭೆಯನ್ನೂ ಕರೆದಿದ್ದಾರೆ.

ಮೂರು ರೈಲುಗಳ ಅಪಘಾತದ ಸುಮಾರು 16 ಗಂಟೆಗಳ ನಂತರ, ರಕ್ಷಣಾ ಕಾರ್ಯಾಚರಣೆಯು ಶನಿವಾರ ಪೂರ್ಣಗೊಂಡಿದೆ ಎಂದು ಘೋಷಿಸಲಾಗಿದೆ. 280 ಜನರು ಸಾವನ್ನಪ್ಪಿದ್ದಾರೆಂದು ಅಧಿಕೃತವಾಗಿ ಘೋಷಿಸಲಾಯಿತು. ಸುಮಾರು 900 ಪ್ರಯಾಣಿಕರಿಗೆ ಸಣ್ಣ ಮತ್ತು ತೀವ್ರ ಗಾಯತರನಾದ ಗಾಯಗಳಾಗಿದ್ದು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...