Homeಮುಖಪುಟತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

ತಪ್ಪಾದ ಹಳಿಯಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌: ಅಧಿಕಾರಿಗಳು ಹೇಳುವುದೇನು?

- Advertisement -
- Advertisement -

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ 280 ಜನರು ಸಾವನ್ನಪ್ಪಿದ್ದಾರೆ. “ದುರಂತ ಸಂಭವಿಸುವ ಕೆಲವು ನಿಮಿಷಗಳ ಮೊದಲು ಕೋರಮಂಡಲ್‌ ಎಕ್ಸ್‌ಪ್ರೆಸ್‌ ತಪ್ಪಾದ ಹಳಿಯಲ್ಲಿ ಚಲಿಸುತ್ತಿತ್ತು. ಈ ಅವಘಡ  ಮಾನವ ನಿರ್ಮಿತ ಪ್ರಮಾದದಿಂದಾಗಿರಬಹುದು” ಎಂದು ರೈಲ್ವೆ ಸಿಗ್ನಲಿಂಗ್ ಕಂಟ್ರೋಲ್ ರೂಂನ ಆರಂಭಿಕ ವರದಿಗಳು ತಿಳಿಸಿವೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಖಚಿತ ಕಾರಣವು ಸಂಪೂರ್ಣ ತನಿಖೆಯ ನಂತರವೇ ತಿಳಿದುಬರುತ್ತದೆ.

“ರೈಲ್ವೆಯ ಖರಗ್‌ಪುರ ವಿಭಾಗದ ಸಿಗ್ನಲಿಂಗ್ ಕಂಟ್ರೋಲ್ ರೂಮ್‌ನ ವೀಡಿಯೊ ಪ್ರಕಾರ, ಚೆನ್ನೈಗೆ ಹೋಗುವ ಕೋರಮಂಡಲ್ ಎಕ್ಸ್‌ಪ್ರೆಸ್ ಶುಕ್ರವಾರ ಸಂಜೆ 6.55ಕ್ಕೆ ಬಹಾನಗರ್ ಬಜಾರ್ ನಿಲ್ದಾಣವನ್ನು ದಾಟಿತ್ತು. ನಂತರ ಮುಖ್ಯ ಮಾರ್ಗದ ಬದಲಿಗೆ ಗೂಡ್ಸ್ ರೈಲು ನಿಲುಗಡೆ ಮಾಡಿದ ಲೂಪ್ ಲೈನ್‌ನಲ್ಲಿ ಚಲಿಸುತ್ತಿತ್ತು” ಎಂದು ಹಿರಿಯ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡು ಮುಖ್ಯ ಮಾರ್ಗಗಳು ಮತ್ತು ಎರಡು ಲೂಪ್ ಲೈನ್‌ಗಳು ಸೇರಿದಂತೆ ನಾಲ್ಕು ರೈಲ್ವೆ ಹಳಿಗಳಿಗೆ ಸಂಬಂಧಿಸಿದ ದೃಶ್ಯಾವಳಿಗಳನ್ನು ಗಮನಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ಹೇಳಿಕೊಂಡಿದೆ.

ಗಂಟೆಗೆ ಸುಮಾರು 127 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಮುಖ್ಯ ಮಾರ್ಗದಲ್ಲಿ ಹಳಿ ತಪ್ಪಿದೆ ಎಂದು ರೈಲ್ವೆ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಕೆಲವೇ ನಿಮಿಷಗಳಲ್ಲಿ ಹೌರಾಕ್ಕೆ ಹೋಗುವ ಯಶವಂತನಗರ ಎಕ್ಸ್‌ಪ್ರೆಸ್ ಎದುರು ಭಾಗದಿಂದ ಬರುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

“ಇದು ಹೇಗೆ ಸಂಭವಿಸಿತು ಮತ್ತು ಏಕೆ ಸಂಭವಿಸಿತು ಎಂಬುದು ರೈಲ್ವೆ ಮಂಡಳಿಯು ಆದೇಶಿಸಿದ ವಿವರವಾದ ತನಿಖೆಯಲ್ಲಿ ಕಂಡುಬರುತ್ತದೆ. ಆದರೆ, ಮೇಲ್ನೋಟಕ್ಕೆ ಇದು ಮಾನವ ನಿರ್ಮಿತ ಅವಘಡ ಎಂದು ತೋರುತ್ತದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಅದೇ ಅಧಿಕಾರಿಯ ಹೇಳುವ ಪ್ರಕಾರ 1995ರಲ್ಲಿ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಇದೇ ರೀತಿಯ ಅವಘಡ ಸಂಭವಿಸಿತ್ತು. ಆ ಸಮಯದಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಸುಮಾರು 350 ಜನರು ಸಾವನ್ನಪ್ಪಿದರು. ರಕ್ಷಣಾ ಕಾರ್ಯಾಚರಣೆ ಮೂರು ದಿನಗಳ ಕಾಲ ನಡೆದಿತ್ತು.

ಒಡಿಸ್ಸಾಕ್ಕೆ ಇಂದು ಪ್ರಧಾನಿ ಭೇಟಿ

ಒಡಿಸ್ಸಾ ರಾಜ್ಯದಲ್ಲಿ ನೂರಾರು ಜನರು ಆಸ್ಪತ್ರೆಗೆ ದಾಖಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾಕ್ಕೆ ಇಂದು ಭೇಟಿ ನೀಡಲಿದ್ದಾರೆ.

“ಪ್ರಧಾನಿ ಮೋದಿ ಅವರು ಮೊದಲು ಅಪಘಾತದ ಸ್ಥಳಕ್ಕೆ ಭೇಟಿ ನೀಡುತ್ತಾರೆ ಮತ್ತು ನಂತರ ಸಂತ್ರಸ್ತರು ದಾಖಲಾಗಿರುವ ಆಸ್ಪತ್ರೆಗೆ ತೆರಳಲಿದ್ದಾರೆ” ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಇದನ್ನೂ ಓದಿರಿ: ರೈಲು ದುರಂತ: ಗಾಯಾಳುಗಳ ಚಿಕಿತ್ಸೆಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಜನ

ಪ್ರಧಾನಿ ಮೋದಿ ಅವರು ಇಂದು ಗೋವಾದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದರು. ಒಡಿಶಾದಲ್ಲಿ ನಡೆದ ದುರಂತದ ನಂತರ ವಂದೇ ಭಾರತ್ ಚಾಲನೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಒಡಿಶಾದ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿಯವರು ಹಿರಿಯ ರೈಲ್ವೇ ಅಧಿಕಾರಿಗಳ ಉನ್ನತ ಮಟ್ಟದ ಸಭೆಯನ್ನೂ ಕರೆದಿದ್ದಾರೆ.

ಮೂರು ರೈಲುಗಳ ಅಪಘಾತದ ಸುಮಾರು 16 ಗಂಟೆಗಳ ನಂತರ, ರಕ್ಷಣಾ ಕಾರ್ಯಾಚರಣೆಯು ಶನಿವಾರ ಪೂರ್ಣಗೊಂಡಿದೆ ಎಂದು ಘೋಷಿಸಲಾಗಿದೆ. 280 ಜನರು ಸಾವನ್ನಪ್ಪಿದ್ದಾರೆಂದು ಅಧಿಕೃತವಾಗಿ ಘೋಷಿಸಲಾಯಿತು. ಸುಮಾರು 900 ಪ್ರಯಾಣಿಕರಿಗೆ ಸಣ್ಣ ಮತ್ತು ತೀವ್ರ ಗಾಯತರನಾದ ಗಾಯಗಳಾಗಿದ್ದು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...