Homeಕರೋನಾ ತಲ್ಲಣಕೊರೊನಾ 3ನೇ ಅಲೆಯ ಉತ್ತುಂಗ ಫೆಬ್ರವರಿಯಲ್ಲಿ: ಕೇಂದ್ರ ಸಮಿತಿ

ಕೊರೊನಾ 3ನೇ ಅಲೆಯ ಉತ್ತುಂಗ ಫೆಬ್ರವರಿಯಲ್ಲಿ: ಕೇಂದ್ರ ಸಮಿತಿ

- Advertisement -
- Advertisement -

ಕೊರೊನಾದ ಮೂರನೇ ಅಲೆಯು ಮುಂದಿನ ವರ್ಷದ ಫೆಬ್ರವರಿಯಲ್ಲಿ ಉತ್ತುಂಗಕ್ಕೇರುವ ನಿರೀಕ್ಷೆಯಿದೆ ಎಂದು ‘ರಾಷ್ಟ್ರೀಯ ಕೊವಿಡ್‌‌ 19 ಸೂಪರ್ ಮಾಡೆಲ್’ ಸಮಿತಿ ತಿಳಿಸಿದೆ. ಆದರೆ ಈ ಅಲೆಯು ಎರಡನೇ ಅಲೆಗಿಂತ ಸೌಮ್ಯವಾಗಿರುತ್ತದೆ ಎಂದು ಅದು ಉಲ್ಲೇಖಿಸಿದೆ.

ಭಾರತದಲ್ಲಿ ಪ್ರಸ್ತುತ ಡೆಲ್ಟಾ ರೂಪಾಂತರ ವೈರಸಿನ ಸುಮಾರು 7,500 ದೈನಂದಿನ ಸೋಂಕುಗಳಿವೆ. ಇದರ ಸ್ಥಳದಲ್ಲಿ ಒಮೈಕ್ರಾನ್ ರೂಪಾಂತರ ಬರುತ್ತಿದ್ದಂತೆ, ಕೊರೊನಾ ಸೋಂಕು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ರಾಷ್ಟ್ರೀಯ ಕೋವಿಡ್ -19 ಸೂಪರ್ ಮಾಡೆಲ್ ಸಮಿತಿಯ ಸದಸ್ಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಒಮೈಕ್ರಾನ್ ಆತಂಕ; ಲಭ್ಯವಿರುವ ಸಾಕ್ಷ್ಯಗಳಿಂದ ಸಾರ್ವಜನಿಕ ಆರೋಗ್ಯದ ಕಣ್ಣೋಟ

ಸಮಿತಿಯ ಮುಖ್ಯಸ್ಥ ವಿದ್ಯಾಸಾಗರ್, “ಭಾರತದಲ್ಲಿ ಒಮೈಕ್ರಾನ್‌ನ ಮೂರನೇ ಅಲೆ ಅಪ್ಪಳಿಸಲಿದೆ. ಆದರೆ ಈಗ ದೇಶದಲ್ಲಿ ದೊಡ್ಡ ಪ್ರಮಾಣದ ರೋಗನಿರೋಧಕ ಶಕ್ತಿ ಇರುವುದರಿಂದ ಇದು ಎರಡನೇ ತರಂಗಕ್ಕಿಂತ ಸೌಮ್ಯವಾಗಿರುತ್ತದೆ” ಎಂದು ಹೇಳಿದ್ದಾರೆ.

ಮೂರನೇ ಅಲೆಯು ದೇಶವನ್ನು ಅಪ್ಪಳಿಸಿದರೆ, ಉತ್ತುಂಗದ ಸಮಯದಲ್ಲೂ ದೇಶದಲ್ಲಿ ಪ್ರತಿದಿನ ಎರಡು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುವುದಿಲ್ಲ ಎಂದು ಅವರು ಸಲಹೆ ನೀಡಿದ್ದಾರೆ. ದೇಶದಲ್ಲಿ ನಿಧಾನವಾಗಿ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜನರು ಲಸಿಕೆ ಹಾಕಿಸಿಕೊಳ್ಳುವಂತೆ ವಿದ್ಯಾಸಾಗರ್‌‌ ಸೂಚಿಸಿದ್ದಾರೆ.

ಈ ಮಧ್ಯೆ, ದೇಶಾದ್ಯಂತ ಒಮೈಕ್ರಾನ್ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಹಾಗಾಗಿ ಹೊಸ ವರ್ಷದ ಆಚರಣೆಗಳನ್ನು ಸರಳವಾಗಿ ಆಚರಿಸಲು ಮತ್ತು ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಲು ಒಕ್ಕೂಟ ಸರ್ಕಾರ ಶುಕ್ರವಾರ ಜನರಿಗೆ ಸಲಹೆ ನೀಡಿದೆ.

ಇದನ್ನೂ ಓದಿ:ಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

ಡೆಲ್ಟಾಗಿಂತ ವೇಗವಾಗಿ ಹರಡುತ್ತದೆ

“ನಾವು ಇಲ್ಲಿಯವರೆಗೆ ತಿಳಿದಿರುವ ಪ್ರಕಾರ, ಒಮೈಕ್ರಾನ್ ಡೆಲ್ಟಾ ರೂಪಾಂತರಕ್ಕಿಂತ ವೇಗವಾಗಿ ಹರಡುತ್ತಿದೆ ಎಂದು ತೋರುತ್ತದೆ. ಇದು ಕಳೆದ ಹಲವಾರು ತಿಂಗಳುಗಳಲ್ಲಿ ಪ್ರಪಂಚದಾದ್ಯಂತ ಕೊರೊನಾ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ವಲಯದ ಪ್ರಾದೇಶಿಕ ನಿರ್ದೇಶಕಿ ಪೂನಮ್ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.

“ಒಮೈಕ್ರಾನ್ ಸೋಂಕಿಗೆ ಒಳಗಾದವರ ಕ್ಲಿನಿಕಲ್ ಚಿತ್ರಣವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಹೆಚ್ಚಿನ ಮಾಹಿತಿಯ ಅಗತ್ಯವಿದೆ. ಮುಂಬರುವ ವಾರಗಳಲ್ಲಿ ನಾವು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸುತ್ತೇವೆ. ಒಮೈಕ್ರಾನ್ ಅನ್ನು ಸೌಮ್ಯವೆಂದು ತಳ್ಳಿಹಾಕಬಾರದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರದ ಮೊದಲ ಒಮೈಕ್ರಾನ್‌ ರೋಗಿ ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...