Homeಮುಖಪುಟಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

- Advertisement -
- Advertisement -

ಕೊರೊನಾ ಸಾಂಕ್ರಾಮಿಕವನ್ನು ಬಿಜೆಪಿ ಸರ್ಕಾರ ಉತ್ತಮವಾಗಿ ನಿರ್ವಹಿಸಿದೆ ಎಂದು ಉತ್ತರ ಪ್ರದೇಶ ಮತ್ತು ಕರ್ನಾಟಕದ ಬಿಜೆಪಿ ಸರ್ಕಾರಗಳು ತಮ್ಮ ತಮ್ಮ ರಾಜ್ಯಗಳ ಜನರ ಮನವೊಲಿಸಲು ಎಲ್ಲಾ ರೀತಿಯಲ್ಲಿಯೂ ಪ್ರಯತ್ನಿಸುತ್ತಿದ್ದಾರೆ. ಶುಕ್ರವಾರ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಬಿ.ಎಸ್.ಯಡಿಯೂರಪ್ಪ,  ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋದೊಂದಿಗೆ ರಾಷ್ಟ್ರೀಯ ದಿನಪತ್ರಿಕೆಗಳಲ್ಲಿ ಪೂರ್ಣಪುಟದ ಜಾಹೀರಾತುಗಳಿಗಾಗಿ ಹಣ ವ್ಯಯಿಸಿದ್ದಾರೆ.

ದಿ ಹಿಂದೂ, ಎಕನಾಮಿಕ್ ಟೈಮ್ಸ್ ಮತ್ತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನಲ್ಲಿ ನೀಡಲಾಗಿರುವ ಜಾಹೀರಾತುಗಳಲ್ಲಿ ತಮ್ಮ ರಾಜ್ಯದಲ್ಲಿ ಕೊರೊನಾ ವೈರಸ್‌ ಸಾಂಕ್ರಾಮಿಕವನ್ನು ಎದುರಿಸಲು ತಾವು  ಕೈಗೊಂಡ ಪ್ರಯತ್ನಗಳ ಬಗ್ಗೆ ತಮ್ಮನ್ನು ತಾವೇ ಶ್ಲಾಘಿಸಿಕೊಂಡಿವೆ. ಜೊತೆಗೆ ಇದು ಅನೇಕರು ಹೆಮ್ಮೆ ಪಡುವಂತದ್ದು ಎಂದು ಜಾಹೀರಾತಿನಲ್ಲಿ ಹೇಳಿಕೊಂಡಿವೆ.

ಕರ್ನಾಟಕ ಸರ್ಕಾರ ದಿ ಹಿಂದೂ ಪತ್ರಿಕೆಯ 3ನೇ ಪುಟದಲ್ಲಿ ಜಾಹೀರಾತನ್ನು ನೀಡಿದೆ. ಅದು “ಚೇತರಿಕೆ ಹಾದಿಯಲ್ಲಿ ಕರ್ನಾಟಕ” ಎಂಬ ಶೀರ್ಷಿಕೆಯಲ್ಲಿ ‘ಐದು ಸ್ಟೋರಿ’ಗಳನ್ನು ನೀಡಿದೆ. ಅವುಗಳಲ್ಲಿರುವ ಆರು ಚಿತ್ರಗಳ ಪೈಕಿ ಐದರಲ್ಲಿ ಯಡಿಯೂರಪ್ಪ ಕಾಣಿಸಿಕೊಳ್ಳುತ್ತಾರೆ. ಜಾಹೀರಾತಿನ ಒಂದು ಸ್ಟೋರಿಯಲ್ಲಿ “ಕರ್ನಾಟಕದ ನೂರಾರು ಕಾರ್ಮಿಕರಿಗೆ ಸಿಎಂ ಜೊತೆ ಮುಖಾಮುಖಿಯಾಗಿ ಚರ್ಚಿಸಲು ಹೇಗೆ ಅವಕಾಶ ಸಿಕ್ಕಿದೆ” ಎಂದು ವಿವರಿಸಿದೆ. ಇದು ಕೋವಿಡ್‌ ವಿರುದ್ದದ ಹೋರಾಟದಲ್ಲಿ ಕಾರ್ಮಿಕರ ಮನೋಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಬೆಂಗಳೂರು ಆವೃತ್ತಿಯ 3ನೇ ಪುಟದಲ್ಲಿ “ಕರ್ನಾಟಕದ ಭರವಸೆಯ ಪ್ಯಾಕೇಜ್‌ಗಳು” ಮತ್ತು ಅದರ ಹುಬ್ಬಳ್ಳಿ ಆವೃತ್ತಿಯ 12ನೇ ಪುಟದಲ್ಲಿ “ಕೊರೊನಾ ಅಲೆಗಳನ್ನು ಗೆಲ್ಲುವುದು” ಕುರಿತು ಪೂರ್ಣ ಪುಟದ ಜಾಹೀರಾತನ್ನು ಪ್ರಕಟಿಸಿದೆ. ಅಮೆರಿಕನ್ ಕಾದಂಬರಿಕಾರ ಲೂಯಿಸ್ ಎಲ್’ಮೊರ್ ಅವರನ್ನು ಉಲ್ಲೇಖಿಸಿರುವ, ಯಡಿಯೂರಪ್ಪ ಸರ್ಕಾರವು ಎಲ್ಲಾ ಸಂಕಷ್ಟಗಳ ವಿರುದ್ಧ ಹೋರಾಡುತ್ತಿದೆ, ಕತ್ತಲೆಯಲ್ಲಿ ಬೆಳಕನ್ನು ಕಾಣುವಂತೆ ಮಾಡುವ ಭರವಸೆ ಇದೆ ಎಂದು ಜಾಹೀರಾತಿನಲ್ಲಿ ಹೇಳಿದೆ.

ರಾಜ್ಯದಲ್ಲಿ ಕೊರೊನಾ ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಗೆ “ಯಶಸ್ವಿಯಾಗಿದ್ದಾರೆ” ಎಂಬ ಕಥೆಗಳೊಂದಿಗೆ ಕರ್ನಾಟಕ ಸರ್ಕಾರ ಗುರುವಾರ ಡೆಕ್ಕನ್ ಹೆರಾಲ್ಡ್‌ನಲ್ಲಿ ಇದೇ ರೀತಿಯ ಜಾಹೀರಾತು ನೀಡಿದೆ.

ಇನ್ನು ಕೊರೊನಾ ನಿರ್ವಹಣೆಯಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿರುವ ಉತ್ತರ ಪ್ರದೇಶ ಸರ್ಕಾರವು ಜಾಹೀರಾತುಗಳ ಮೂಲಕ ತನ್ನ ವಿಫಲತೆಯನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದೆ. ಟೈಮ್ಸ್‌ ಆಫ್‌ ಇಂಡಿಯಾದ ಸಹೋದರಿ ಪತ್ರಿಕೆ ಎಕನಾಮಿಕ್ ಟೈಮ್ಸ್‌ನ ಮೊದಲ ಎರಡು ಪುಟಗಳಲ್ಲಿ ರಾಜ್ಯ ಸರ್ಕಾರಗ ಕೊರೊನಾ ನಿರ್ವಹಿಸಿದ ಬಗ್ಗೆ ಜಾಹೀರಾತುಗಳನ್ನು ಪ್ರಕಟಿಸಿದೆ.

ಮೊದಲ ಪುಟದಲ್ಲಿ ಕೋವಿಡ್‌ ಸೋಲಿಸಲು ಉತ್ತರ ಪ್ರದೇಶದಲ್ಲಿ ಜಾರಿಗೆ ತರಲಾಗಿದೆ ಎಂದು ಹೇಳಿಕೊಳ್ಳುವ “ಐದು-ಹಂತದ ಯೋಜನೆ”ಗಳ ಜೊತೆಗೆ ಪ್ರಧಾನಿ ಮೋದಿ ಮತ್ತು ಆದಿತ್ಯನಾಥ್ ಅವರ ಚಿತ್ರಗಳನ್ನು ಪ್ರಕಟಿಸಲಾಗಿದೆ. ಪ್ರಧಾನಿ ಮೋದಿಗೆ ದೊರೆತ ಪ್ರತಿಯೊಂದು ಅವಕಾಶವನ್ನೂ ಬಿಜೆಪಿ ಪಕ್ಷವು ಶ್ಲಾಘಿಸುವುದು ರೂಡಿಯಾಗಿರುವುದರಿಂದ,  “ಉಚಿತ ಲಸಿಕೆಗಳನ್ನು” ನೀಡಿದ್ದಕ್ಕಾಗಿ ಮೋದಿಯವರ ಸಹಾಯಕ್ಕೆ ಪ್ರತಿಯಾಗಿ ಆದಿತ್ಯನಾಥ್ ಅವರು ಜಾಹೀರಾತಿನ ಮೂಲಕ ಧನ್ಯವಾದ ಸೂಚಿಸಿದ್ದಾರೆ.

ಇದನ್ನೂ ಓದಿ: ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಇನ್ನು ಎರಡನೇ ಪುಟವು ಸುದ್ದಿಯ ರೂಪದ ಜಾಹೀರಾತನ್ನು ಹೊಂದಿದೆ. ಈ ಪುಟದ ಕೆಳಭಾಗದಲ್ಲಿ ಕಾಣಸಿಗುವ ಒಂದು ಸಣ್ಣ “ಗ್ರಾಹಕ ಸಂಪರ್ಕ”ದ ಲೇಬಲ್ ಮಾತ್ರ ಇದು ಜಾಹೀರಾತು ಎಂದು ಸೂಚಿಸುತ್ತದೆ. ಜಾಹೀರಾತುದಾರರು ಪತ್ರಿಕೆಯ ಟೈಟಲ್‌ಹೆಡ್‌ನ ಬದಲಿಗೆ “ಕೊರೊನಾ ವಿರುದ್ಧ ಯುಪಿ ಹೋರಾಟ” ಎಂದು ಬರೆಸಿದ್ದಾರೆ. ಅದರಡಿಯಲ್ಲಿ ಯೋಗಿ ಸರ್ಕಾರದ ಬಹುಸಂಖ್ಯೆಯ ಕಾರ್ಯತಂತ್ರವು ಫಲಿತಾಂಶಗಳನ್ನು ವಿವರಿಸಿದೆ. ಕೊರೊನಾ ಎರಡನೇ ಅಲೆಯಲ್ಲಿ ಉತ್ತರ ಪ್ರದೇಶವು ಹೆಚ್ಚು ಹಾನಿಗೊಳಗಾದ ರಾಜ್ಯಗಳಲ್ಲಿ ಒಂದಾಗಿದೆ. ಆದರೆ, ಜಾಹೀರಾತಿನ ಮುಖ್ಯ ಸ್ಟೋರಿಯಲ್ಲಿ “ರಾಜ್ಯದ ಸಾಂಕ್ರಾಮಿಕ ನಿಯಂತ್ರಣ ಒಂದು ಮಾದರಿ” ಎಂದು ಬರೆದುಕೊಂಡಿದೆ.

“ಉತ್ತರ ಪ್ರದೇಶವು ಎಲ್ಲಾ ರೀತಿಯಲ್ಲಿಯೂ ಸರಿಯಾದ ಕಾರಣಗಳಿಗಾಗಿ ಸುದ್ದಿಯಲ್ಲಿದೆ” ಎಂದು ಜಾಹೀರಾತಿನ ಪ್ರಮುಖ “ಸ್ಟೋರಿ” ಆರಂಭವಾಗುತ್ತದೆ. ಆದರೆ, ರಾಜ್ಯದ ವಾಸ್ತವ ಬೇರೆಯದೇ ಇದೆ. ಗಂಗೆಯಲ್ಲಿ ಶವಗಳು ತೇಲಿದ ಪ್ರಕರಣ, ಆಕ್ಸಿಜನ್ ಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿದವರ ವಿರುದ್ಧ ಪ್ರಕರಣಗಳು, ಬೆದರಿಕೆಗಳಿಂದ ರಾಜ್ಯವು ಭಾರಿ ಸುದ್ದಿಯಲ್ಲಿದೆ.

ಕೃಪೆ: ನ್ಯೂಸ್‌ ಲ್ಯಾಂಡ್ರಿ


ಇದನ್ನೂ ಓದಿ: ವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...