Homeಮುಖಪುಟಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

- Advertisement -
- Advertisement -

ಕೊರೊನಾ ಸಾಂಕ್ರಾಮಿಕವನ್ನು ಬಿಜೆಪಿ ಸರ್ಕಾರ ಉತ್ತಮವಾಗಿ ನಿರ್ವಹಿಸಿದೆ ಎಂದು ಉತ್ತರ ಪ್ರದೇಶ ಮತ್ತು ಕರ್ನಾಟಕದ ಬಿಜೆಪಿ ಸರ್ಕಾರಗಳು ತಮ್ಮ ತಮ್ಮ ರಾಜ್ಯಗಳ ಜನರ ಮನವೊಲಿಸಲು ಎಲ್ಲಾ ರೀತಿಯಲ್ಲಿಯೂ ಪ್ರಯತ್ನಿಸುತ್ತಿದ್ದಾರೆ. ಶುಕ್ರವಾರ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಬಿ.ಎಸ್.ಯಡಿಯೂರಪ್ಪ,  ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋದೊಂದಿಗೆ ರಾಷ್ಟ್ರೀಯ ದಿನಪತ್ರಿಕೆಗಳಲ್ಲಿ ಪೂರ್ಣಪುಟದ ಜಾಹೀರಾತುಗಳಿಗಾಗಿ ಹಣ ವ್ಯಯಿಸಿದ್ದಾರೆ.

ದಿ ಹಿಂದೂ, ಎಕನಾಮಿಕ್ ಟೈಮ್ಸ್ ಮತ್ತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನಲ್ಲಿ ನೀಡಲಾಗಿರುವ ಜಾಹೀರಾತುಗಳಲ್ಲಿ ತಮ್ಮ ರಾಜ್ಯದಲ್ಲಿ ಕೊರೊನಾ ವೈರಸ್‌ ಸಾಂಕ್ರಾಮಿಕವನ್ನು ಎದುರಿಸಲು ತಾವು  ಕೈಗೊಂಡ ಪ್ರಯತ್ನಗಳ ಬಗ್ಗೆ ತಮ್ಮನ್ನು ತಾವೇ ಶ್ಲಾಘಿಸಿಕೊಂಡಿವೆ. ಜೊತೆಗೆ ಇದು ಅನೇಕರು ಹೆಮ್ಮೆ ಪಡುವಂತದ್ದು ಎಂದು ಜಾಹೀರಾತಿನಲ್ಲಿ ಹೇಳಿಕೊಂಡಿವೆ.

ಕರ್ನಾಟಕ ಸರ್ಕಾರ ದಿ ಹಿಂದೂ ಪತ್ರಿಕೆಯ 3ನೇ ಪುಟದಲ್ಲಿ ಜಾಹೀರಾತನ್ನು ನೀಡಿದೆ. ಅದು “ಚೇತರಿಕೆ ಹಾದಿಯಲ್ಲಿ ಕರ್ನಾಟಕ” ಎಂಬ ಶೀರ್ಷಿಕೆಯಲ್ಲಿ ‘ಐದು ಸ್ಟೋರಿ’ಗಳನ್ನು ನೀಡಿದೆ. ಅವುಗಳಲ್ಲಿರುವ ಆರು ಚಿತ್ರಗಳ ಪೈಕಿ ಐದರಲ್ಲಿ ಯಡಿಯೂರಪ್ಪ ಕಾಣಿಸಿಕೊಳ್ಳುತ್ತಾರೆ. ಜಾಹೀರಾತಿನ ಒಂದು ಸ್ಟೋರಿಯಲ್ಲಿ “ಕರ್ನಾಟಕದ ನೂರಾರು ಕಾರ್ಮಿಕರಿಗೆ ಸಿಎಂ ಜೊತೆ ಮುಖಾಮುಖಿಯಾಗಿ ಚರ್ಚಿಸಲು ಹೇಗೆ ಅವಕಾಶ ಸಿಕ್ಕಿದೆ” ಎಂದು ವಿವರಿಸಿದೆ. ಇದು ಕೋವಿಡ್‌ ವಿರುದ್ದದ ಹೋರಾಟದಲ್ಲಿ ಕಾರ್ಮಿಕರ ಮನೋಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಬೆಂಗಳೂರು ಆವೃತ್ತಿಯ 3ನೇ ಪುಟದಲ್ಲಿ “ಕರ್ನಾಟಕದ ಭರವಸೆಯ ಪ್ಯಾಕೇಜ್‌ಗಳು” ಮತ್ತು ಅದರ ಹುಬ್ಬಳ್ಳಿ ಆವೃತ್ತಿಯ 12ನೇ ಪುಟದಲ್ಲಿ “ಕೊರೊನಾ ಅಲೆಗಳನ್ನು ಗೆಲ್ಲುವುದು” ಕುರಿತು ಪೂರ್ಣ ಪುಟದ ಜಾಹೀರಾತನ್ನು ಪ್ರಕಟಿಸಿದೆ. ಅಮೆರಿಕನ್ ಕಾದಂಬರಿಕಾರ ಲೂಯಿಸ್ ಎಲ್’ಮೊರ್ ಅವರನ್ನು ಉಲ್ಲೇಖಿಸಿರುವ, ಯಡಿಯೂರಪ್ಪ ಸರ್ಕಾರವು ಎಲ್ಲಾ ಸಂಕಷ್ಟಗಳ ವಿರುದ್ಧ ಹೋರಾಡುತ್ತಿದೆ, ಕತ್ತಲೆಯಲ್ಲಿ ಬೆಳಕನ್ನು ಕಾಣುವಂತೆ ಮಾಡುವ ಭರವಸೆ ಇದೆ ಎಂದು ಜಾಹೀರಾತಿನಲ್ಲಿ ಹೇಳಿದೆ.

ರಾಜ್ಯದಲ್ಲಿ ಕೊರೊನಾ ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಗೆ “ಯಶಸ್ವಿಯಾಗಿದ್ದಾರೆ” ಎಂಬ ಕಥೆಗಳೊಂದಿಗೆ ಕರ್ನಾಟಕ ಸರ್ಕಾರ ಗುರುವಾರ ಡೆಕ್ಕನ್ ಹೆರಾಲ್ಡ್‌ನಲ್ಲಿ ಇದೇ ರೀತಿಯ ಜಾಹೀರಾತು ನೀಡಿದೆ.

ಇನ್ನು ಕೊರೊನಾ ನಿರ್ವಹಣೆಯಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿರುವ ಉತ್ತರ ಪ್ರದೇಶ ಸರ್ಕಾರವು ಜಾಹೀರಾತುಗಳ ಮೂಲಕ ತನ್ನ ವಿಫಲತೆಯನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದೆ. ಟೈಮ್ಸ್‌ ಆಫ್‌ ಇಂಡಿಯಾದ ಸಹೋದರಿ ಪತ್ರಿಕೆ ಎಕನಾಮಿಕ್ ಟೈಮ್ಸ್‌ನ ಮೊದಲ ಎರಡು ಪುಟಗಳಲ್ಲಿ ರಾಜ್ಯ ಸರ್ಕಾರಗ ಕೊರೊನಾ ನಿರ್ವಹಿಸಿದ ಬಗ್ಗೆ ಜಾಹೀರಾತುಗಳನ್ನು ಪ್ರಕಟಿಸಿದೆ.

ಮೊದಲ ಪುಟದಲ್ಲಿ ಕೋವಿಡ್‌ ಸೋಲಿಸಲು ಉತ್ತರ ಪ್ರದೇಶದಲ್ಲಿ ಜಾರಿಗೆ ತರಲಾಗಿದೆ ಎಂದು ಹೇಳಿಕೊಳ್ಳುವ “ಐದು-ಹಂತದ ಯೋಜನೆ”ಗಳ ಜೊತೆಗೆ ಪ್ರಧಾನಿ ಮೋದಿ ಮತ್ತು ಆದಿತ್ಯನಾಥ್ ಅವರ ಚಿತ್ರಗಳನ್ನು ಪ್ರಕಟಿಸಲಾಗಿದೆ. ಪ್ರಧಾನಿ ಮೋದಿಗೆ ದೊರೆತ ಪ್ರತಿಯೊಂದು ಅವಕಾಶವನ್ನೂ ಬಿಜೆಪಿ ಪಕ್ಷವು ಶ್ಲಾಘಿಸುವುದು ರೂಡಿಯಾಗಿರುವುದರಿಂದ,  “ಉಚಿತ ಲಸಿಕೆಗಳನ್ನು” ನೀಡಿದ್ದಕ್ಕಾಗಿ ಮೋದಿಯವರ ಸಹಾಯಕ್ಕೆ ಪ್ರತಿಯಾಗಿ ಆದಿತ್ಯನಾಥ್ ಅವರು ಜಾಹೀರಾತಿನ ಮೂಲಕ ಧನ್ಯವಾದ ಸೂಚಿಸಿದ್ದಾರೆ.

ಇದನ್ನೂ ಓದಿ: ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಇನ್ನು ಎರಡನೇ ಪುಟವು ಸುದ್ದಿಯ ರೂಪದ ಜಾಹೀರಾತನ್ನು ಹೊಂದಿದೆ. ಈ ಪುಟದ ಕೆಳಭಾಗದಲ್ಲಿ ಕಾಣಸಿಗುವ ಒಂದು ಸಣ್ಣ “ಗ್ರಾಹಕ ಸಂಪರ್ಕ”ದ ಲೇಬಲ್ ಮಾತ್ರ ಇದು ಜಾಹೀರಾತು ಎಂದು ಸೂಚಿಸುತ್ತದೆ. ಜಾಹೀರಾತುದಾರರು ಪತ್ರಿಕೆಯ ಟೈಟಲ್‌ಹೆಡ್‌ನ ಬದಲಿಗೆ “ಕೊರೊನಾ ವಿರುದ್ಧ ಯುಪಿ ಹೋರಾಟ” ಎಂದು ಬರೆಸಿದ್ದಾರೆ. ಅದರಡಿಯಲ್ಲಿ ಯೋಗಿ ಸರ್ಕಾರದ ಬಹುಸಂಖ್ಯೆಯ ಕಾರ್ಯತಂತ್ರವು ಫಲಿತಾಂಶಗಳನ್ನು ವಿವರಿಸಿದೆ. ಕೊರೊನಾ ಎರಡನೇ ಅಲೆಯಲ್ಲಿ ಉತ್ತರ ಪ್ರದೇಶವು ಹೆಚ್ಚು ಹಾನಿಗೊಳಗಾದ ರಾಜ್ಯಗಳಲ್ಲಿ ಒಂದಾಗಿದೆ. ಆದರೆ, ಜಾಹೀರಾತಿನ ಮುಖ್ಯ ಸ್ಟೋರಿಯಲ್ಲಿ “ರಾಜ್ಯದ ಸಾಂಕ್ರಾಮಿಕ ನಿಯಂತ್ರಣ ಒಂದು ಮಾದರಿ” ಎಂದು ಬರೆದುಕೊಂಡಿದೆ.

“ಉತ್ತರ ಪ್ರದೇಶವು ಎಲ್ಲಾ ರೀತಿಯಲ್ಲಿಯೂ ಸರಿಯಾದ ಕಾರಣಗಳಿಗಾಗಿ ಸುದ್ದಿಯಲ್ಲಿದೆ” ಎಂದು ಜಾಹೀರಾತಿನ ಪ್ರಮುಖ “ಸ್ಟೋರಿ” ಆರಂಭವಾಗುತ್ತದೆ. ಆದರೆ, ರಾಜ್ಯದ ವಾಸ್ತವ ಬೇರೆಯದೇ ಇದೆ. ಗಂಗೆಯಲ್ಲಿ ಶವಗಳು ತೇಲಿದ ಪ್ರಕರಣ, ಆಕ್ಸಿಜನ್ ಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿದವರ ವಿರುದ್ಧ ಪ್ರಕರಣಗಳು, ಬೆದರಿಕೆಗಳಿಂದ ರಾಜ್ಯವು ಭಾರಿ ಸುದ್ದಿಯಲ್ಲಿದೆ.

ಕೃಪೆ: ನ್ಯೂಸ್‌ ಲ್ಯಾಂಡ್ರಿ


ಇದನ್ನೂ ಓದಿ: ವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...