Homeಮುಖಪುಟಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

- Advertisement -
- Advertisement -

ಕೊರೊನಾ ಸಾಂಕ್ರಾಮಿಕವನ್ನು ಬಿಜೆಪಿ ಸರ್ಕಾರ ಉತ್ತಮವಾಗಿ ನಿರ್ವಹಿಸಿದೆ ಎಂದು ಉತ್ತರ ಪ್ರದೇಶ ಮತ್ತು ಕರ್ನಾಟಕದ ಬಿಜೆಪಿ ಸರ್ಕಾರಗಳು ತಮ್ಮ ತಮ್ಮ ರಾಜ್ಯಗಳ ಜನರ ಮನವೊಲಿಸಲು ಎಲ್ಲಾ ರೀತಿಯಲ್ಲಿಯೂ ಪ್ರಯತ್ನಿಸುತ್ತಿದ್ದಾರೆ. ಶುಕ್ರವಾರ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಬಿ.ಎಸ್.ಯಡಿಯೂರಪ್ಪ,  ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋದೊಂದಿಗೆ ರಾಷ್ಟ್ರೀಯ ದಿನಪತ್ರಿಕೆಗಳಲ್ಲಿ ಪೂರ್ಣಪುಟದ ಜಾಹೀರಾತುಗಳಿಗಾಗಿ ಹಣ ವ್ಯಯಿಸಿದ್ದಾರೆ.

ದಿ ಹಿಂದೂ, ಎಕನಾಮಿಕ್ ಟೈಮ್ಸ್ ಮತ್ತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನಲ್ಲಿ ನೀಡಲಾಗಿರುವ ಜಾಹೀರಾತುಗಳಲ್ಲಿ ತಮ್ಮ ರಾಜ್ಯದಲ್ಲಿ ಕೊರೊನಾ ವೈರಸ್‌ ಸಾಂಕ್ರಾಮಿಕವನ್ನು ಎದುರಿಸಲು ತಾವು  ಕೈಗೊಂಡ ಪ್ರಯತ್ನಗಳ ಬಗ್ಗೆ ತಮ್ಮನ್ನು ತಾವೇ ಶ್ಲಾಘಿಸಿಕೊಂಡಿವೆ. ಜೊತೆಗೆ ಇದು ಅನೇಕರು ಹೆಮ್ಮೆ ಪಡುವಂತದ್ದು ಎಂದು ಜಾಹೀರಾತಿನಲ್ಲಿ ಹೇಳಿಕೊಂಡಿವೆ.

ಕರ್ನಾಟಕ ಸರ್ಕಾರ ದಿ ಹಿಂದೂ ಪತ್ರಿಕೆಯ 3ನೇ ಪುಟದಲ್ಲಿ ಜಾಹೀರಾತನ್ನು ನೀಡಿದೆ. ಅದು “ಚೇತರಿಕೆ ಹಾದಿಯಲ್ಲಿ ಕರ್ನಾಟಕ” ಎಂಬ ಶೀರ್ಷಿಕೆಯಲ್ಲಿ ‘ಐದು ಸ್ಟೋರಿ’ಗಳನ್ನು ನೀಡಿದೆ. ಅವುಗಳಲ್ಲಿರುವ ಆರು ಚಿತ್ರಗಳ ಪೈಕಿ ಐದರಲ್ಲಿ ಯಡಿಯೂರಪ್ಪ ಕಾಣಿಸಿಕೊಳ್ಳುತ್ತಾರೆ. ಜಾಹೀರಾತಿನ ಒಂದು ಸ್ಟೋರಿಯಲ್ಲಿ “ಕರ್ನಾಟಕದ ನೂರಾರು ಕಾರ್ಮಿಕರಿಗೆ ಸಿಎಂ ಜೊತೆ ಮುಖಾಮುಖಿಯಾಗಿ ಚರ್ಚಿಸಲು ಹೇಗೆ ಅವಕಾಶ ಸಿಕ್ಕಿದೆ” ಎಂದು ವಿವರಿಸಿದೆ. ಇದು ಕೋವಿಡ್‌ ವಿರುದ್ದದ ಹೋರಾಟದಲ್ಲಿ ಕಾರ್ಮಿಕರ ಮನೋಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಬೆಂಗಳೂರು ಆವೃತ್ತಿಯ 3ನೇ ಪುಟದಲ್ಲಿ “ಕರ್ನಾಟಕದ ಭರವಸೆಯ ಪ್ಯಾಕೇಜ್‌ಗಳು” ಮತ್ತು ಅದರ ಹುಬ್ಬಳ್ಳಿ ಆವೃತ್ತಿಯ 12ನೇ ಪುಟದಲ್ಲಿ “ಕೊರೊನಾ ಅಲೆಗಳನ್ನು ಗೆಲ್ಲುವುದು” ಕುರಿತು ಪೂರ್ಣ ಪುಟದ ಜಾಹೀರಾತನ್ನು ಪ್ರಕಟಿಸಿದೆ. ಅಮೆರಿಕನ್ ಕಾದಂಬರಿಕಾರ ಲೂಯಿಸ್ ಎಲ್’ಮೊರ್ ಅವರನ್ನು ಉಲ್ಲೇಖಿಸಿರುವ, ಯಡಿಯೂರಪ್ಪ ಸರ್ಕಾರವು ಎಲ್ಲಾ ಸಂಕಷ್ಟಗಳ ವಿರುದ್ಧ ಹೋರಾಡುತ್ತಿದೆ, ಕತ್ತಲೆಯಲ್ಲಿ ಬೆಳಕನ್ನು ಕಾಣುವಂತೆ ಮಾಡುವ ಭರವಸೆ ಇದೆ ಎಂದು ಜಾಹೀರಾತಿನಲ್ಲಿ ಹೇಳಿದೆ.

ರಾಜ್ಯದಲ್ಲಿ ಕೊರೊನಾ ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಗೆ “ಯಶಸ್ವಿಯಾಗಿದ್ದಾರೆ” ಎಂಬ ಕಥೆಗಳೊಂದಿಗೆ ಕರ್ನಾಟಕ ಸರ್ಕಾರ ಗುರುವಾರ ಡೆಕ್ಕನ್ ಹೆರಾಲ್ಡ್‌ನಲ್ಲಿ ಇದೇ ರೀತಿಯ ಜಾಹೀರಾತು ನೀಡಿದೆ.

ಇನ್ನು ಕೊರೊನಾ ನಿರ್ವಹಣೆಯಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿರುವ ಉತ್ತರ ಪ್ರದೇಶ ಸರ್ಕಾರವು ಜಾಹೀರಾತುಗಳ ಮೂಲಕ ತನ್ನ ವಿಫಲತೆಯನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದೆ. ಟೈಮ್ಸ್‌ ಆಫ್‌ ಇಂಡಿಯಾದ ಸಹೋದರಿ ಪತ್ರಿಕೆ ಎಕನಾಮಿಕ್ ಟೈಮ್ಸ್‌ನ ಮೊದಲ ಎರಡು ಪುಟಗಳಲ್ಲಿ ರಾಜ್ಯ ಸರ್ಕಾರಗ ಕೊರೊನಾ ನಿರ್ವಹಿಸಿದ ಬಗ್ಗೆ ಜಾಹೀರಾತುಗಳನ್ನು ಪ್ರಕಟಿಸಿದೆ.

ಮೊದಲ ಪುಟದಲ್ಲಿ ಕೋವಿಡ್‌ ಸೋಲಿಸಲು ಉತ್ತರ ಪ್ರದೇಶದಲ್ಲಿ ಜಾರಿಗೆ ತರಲಾಗಿದೆ ಎಂದು ಹೇಳಿಕೊಳ್ಳುವ “ಐದು-ಹಂತದ ಯೋಜನೆ”ಗಳ ಜೊತೆಗೆ ಪ್ರಧಾನಿ ಮೋದಿ ಮತ್ತು ಆದಿತ್ಯನಾಥ್ ಅವರ ಚಿತ್ರಗಳನ್ನು ಪ್ರಕಟಿಸಲಾಗಿದೆ. ಪ್ರಧಾನಿ ಮೋದಿಗೆ ದೊರೆತ ಪ್ರತಿಯೊಂದು ಅವಕಾಶವನ್ನೂ ಬಿಜೆಪಿ ಪಕ್ಷವು ಶ್ಲಾಘಿಸುವುದು ರೂಡಿಯಾಗಿರುವುದರಿಂದ,  “ಉಚಿತ ಲಸಿಕೆಗಳನ್ನು” ನೀಡಿದ್ದಕ್ಕಾಗಿ ಮೋದಿಯವರ ಸಹಾಯಕ್ಕೆ ಪ್ರತಿಯಾಗಿ ಆದಿತ್ಯನಾಥ್ ಅವರು ಜಾಹೀರಾತಿನ ಮೂಲಕ ಧನ್ಯವಾದ ಸೂಚಿಸಿದ್ದಾರೆ.

ಇದನ್ನೂ ಓದಿ: ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಇನ್ನು ಎರಡನೇ ಪುಟವು ಸುದ್ದಿಯ ರೂಪದ ಜಾಹೀರಾತನ್ನು ಹೊಂದಿದೆ. ಈ ಪುಟದ ಕೆಳಭಾಗದಲ್ಲಿ ಕಾಣಸಿಗುವ ಒಂದು ಸಣ್ಣ “ಗ್ರಾಹಕ ಸಂಪರ್ಕ”ದ ಲೇಬಲ್ ಮಾತ್ರ ಇದು ಜಾಹೀರಾತು ಎಂದು ಸೂಚಿಸುತ್ತದೆ. ಜಾಹೀರಾತುದಾರರು ಪತ್ರಿಕೆಯ ಟೈಟಲ್‌ಹೆಡ್‌ನ ಬದಲಿಗೆ “ಕೊರೊನಾ ವಿರುದ್ಧ ಯುಪಿ ಹೋರಾಟ” ಎಂದು ಬರೆಸಿದ್ದಾರೆ. ಅದರಡಿಯಲ್ಲಿ ಯೋಗಿ ಸರ್ಕಾರದ ಬಹುಸಂಖ್ಯೆಯ ಕಾರ್ಯತಂತ್ರವು ಫಲಿತಾಂಶಗಳನ್ನು ವಿವರಿಸಿದೆ. ಕೊರೊನಾ ಎರಡನೇ ಅಲೆಯಲ್ಲಿ ಉತ್ತರ ಪ್ರದೇಶವು ಹೆಚ್ಚು ಹಾನಿಗೊಳಗಾದ ರಾಜ್ಯಗಳಲ್ಲಿ ಒಂದಾಗಿದೆ. ಆದರೆ, ಜಾಹೀರಾತಿನ ಮುಖ್ಯ ಸ್ಟೋರಿಯಲ್ಲಿ “ರಾಜ್ಯದ ಸಾಂಕ್ರಾಮಿಕ ನಿಯಂತ್ರಣ ಒಂದು ಮಾದರಿ” ಎಂದು ಬರೆದುಕೊಂಡಿದೆ.

“ಉತ್ತರ ಪ್ರದೇಶವು ಎಲ್ಲಾ ರೀತಿಯಲ್ಲಿಯೂ ಸರಿಯಾದ ಕಾರಣಗಳಿಗಾಗಿ ಸುದ್ದಿಯಲ್ಲಿದೆ” ಎಂದು ಜಾಹೀರಾತಿನ ಪ್ರಮುಖ “ಸ್ಟೋರಿ” ಆರಂಭವಾಗುತ್ತದೆ. ಆದರೆ, ರಾಜ್ಯದ ವಾಸ್ತವ ಬೇರೆಯದೇ ಇದೆ. ಗಂಗೆಯಲ್ಲಿ ಶವಗಳು ತೇಲಿದ ಪ್ರಕರಣ, ಆಕ್ಸಿಜನ್ ಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿದವರ ವಿರುದ್ಧ ಪ್ರಕರಣಗಳು, ಬೆದರಿಕೆಗಳಿಂದ ರಾಜ್ಯವು ಭಾರಿ ಸುದ್ದಿಯಲ್ಲಿದೆ.

ಕೃಪೆ: ನ್ಯೂಸ್‌ ಲ್ಯಾಂಡ್ರಿ


ಇದನ್ನೂ ಓದಿ: ವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...