Homeಮುಖಪುಟಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

- Advertisement -
- Advertisement -

ಕೊರೊನಾ ಸಾಂಕ್ರಾಮಿಕವನ್ನು ಬಿಜೆಪಿ ಸರ್ಕಾರ ಉತ್ತಮವಾಗಿ ನಿರ್ವಹಿಸಿದೆ ಎಂದು ಉತ್ತರ ಪ್ರದೇಶ ಮತ್ತು ಕರ್ನಾಟಕದ ಬಿಜೆಪಿ ಸರ್ಕಾರಗಳು ತಮ್ಮ ತಮ್ಮ ರಾಜ್ಯಗಳ ಜನರ ಮನವೊಲಿಸಲು ಎಲ್ಲಾ ರೀತಿಯಲ್ಲಿಯೂ ಪ್ರಯತ್ನಿಸುತ್ತಿದ್ದಾರೆ. ಶುಕ್ರವಾರ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಬಿ.ಎಸ್.ಯಡಿಯೂರಪ್ಪ,  ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋದೊಂದಿಗೆ ರಾಷ್ಟ್ರೀಯ ದಿನಪತ್ರಿಕೆಗಳಲ್ಲಿ ಪೂರ್ಣಪುಟದ ಜಾಹೀರಾತುಗಳಿಗಾಗಿ ಹಣ ವ್ಯಯಿಸಿದ್ದಾರೆ.

ದಿ ಹಿಂದೂ, ಎಕನಾಮಿಕ್ ಟೈಮ್ಸ್ ಮತ್ತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನಲ್ಲಿ ನೀಡಲಾಗಿರುವ ಜಾಹೀರಾತುಗಳಲ್ಲಿ ತಮ್ಮ ರಾಜ್ಯದಲ್ಲಿ ಕೊರೊನಾ ವೈರಸ್‌ ಸಾಂಕ್ರಾಮಿಕವನ್ನು ಎದುರಿಸಲು ತಾವು  ಕೈಗೊಂಡ ಪ್ರಯತ್ನಗಳ ಬಗ್ಗೆ ತಮ್ಮನ್ನು ತಾವೇ ಶ್ಲಾಘಿಸಿಕೊಂಡಿವೆ. ಜೊತೆಗೆ ಇದು ಅನೇಕರು ಹೆಮ್ಮೆ ಪಡುವಂತದ್ದು ಎಂದು ಜಾಹೀರಾತಿನಲ್ಲಿ ಹೇಳಿಕೊಂಡಿವೆ.

ಕರ್ನಾಟಕ ಸರ್ಕಾರ ದಿ ಹಿಂದೂ ಪತ್ರಿಕೆಯ 3ನೇ ಪುಟದಲ್ಲಿ ಜಾಹೀರಾತನ್ನು ನೀಡಿದೆ. ಅದು “ಚೇತರಿಕೆ ಹಾದಿಯಲ್ಲಿ ಕರ್ನಾಟಕ” ಎಂಬ ಶೀರ್ಷಿಕೆಯಲ್ಲಿ ‘ಐದು ಸ್ಟೋರಿ’ಗಳನ್ನು ನೀಡಿದೆ. ಅವುಗಳಲ್ಲಿರುವ ಆರು ಚಿತ್ರಗಳ ಪೈಕಿ ಐದರಲ್ಲಿ ಯಡಿಯೂರಪ್ಪ ಕಾಣಿಸಿಕೊಳ್ಳುತ್ತಾರೆ. ಜಾಹೀರಾತಿನ ಒಂದು ಸ್ಟೋರಿಯಲ್ಲಿ “ಕರ್ನಾಟಕದ ನೂರಾರು ಕಾರ್ಮಿಕರಿಗೆ ಸಿಎಂ ಜೊತೆ ಮುಖಾಮುಖಿಯಾಗಿ ಚರ್ಚಿಸಲು ಹೇಗೆ ಅವಕಾಶ ಸಿಕ್ಕಿದೆ” ಎಂದು ವಿವರಿಸಿದೆ. ಇದು ಕೋವಿಡ್‌ ವಿರುದ್ದದ ಹೋರಾಟದಲ್ಲಿ ಕಾರ್ಮಿಕರ ಮನೋಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಬೆಂಗಳೂರು ಆವೃತ್ತಿಯ 3ನೇ ಪುಟದಲ್ಲಿ “ಕರ್ನಾಟಕದ ಭರವಸೆಯ ಪ್ಯಾಕೇಜ್‌ಗಳು” ಮತ್ತು ಅದರ ಹುಬ್ಬಳ್ಳಿ ಆವೃತ್ತಿಯ 12ನೇ ಪುಟದಲ್ಲಿ “ಕೊರೊನಾ ಅಲೆಗಳನ್ನು ಗೆಲ್ಲುವುದು” ಕುರಿತು ಪೂರ್ಣ ಪುಟದ ಜಾಹೀರಾತನ್ನು ಪ್ರಕಟಿಸಿದೆ. ಅಮೆರಿಕನ್ ಕಾದಂಬರಿಕಾರ ಲೂಯಿಸ್ ಎಲ್’ಮೊರ್ ಅವರನ್ನು ಉಲ್ಲೇಖಿಸಿರುವ, ಯಡಿಯೂರಪ್ಪ ಸರ್ಕಾರವು ಎಲ್ಲಾ ಸಂಕಷ್ಟಗಳ ವಿರುದ್ಧ ಹೋರಾಡುತ್ತಿದೆ, ಕತ್ತಲೆಯಲ್ಲಿ ಬೆಳಕನ್ನು ಕಾಣುವಂತೆ ಮಾಡುವ ಭರವಸೆ ಇದೆ ಎಂದು ಜಾಹೀರಾತಿನಲ್ಲಿ ಹೇಳಿದೆ.

ರಾಜ್ಯದಲ್ಲಿ ಕೊರೊನಾ ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಗೆ “ಯಶಸ್ವಿಯಾಗಿದ್ದಾರೆ” ಎಂಬ ಕಥೆಗಳೊಂದಿಗೆ ಕರ್ನಾಟಕ ಸರ್ಕಾರ ಗುರುವಾರ ಡೆಕ್ಕನ್ ಹೆರಾಲ್ಡ್‌ನಲ್ಲಿ ಇದೇ ರೀತಿಯ ಜಾಹೀರಾತು ನೀಡಿದೆ.

ಇನ್ನು ಕೊರೊನಾ ನಿರ್ವಹಣೆಯಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿರುವ ಉತ್ತರ ಪ್ರದೇಶ ಸರ್ಕಾರವು ಜಾಹೀರಾತುಗಳ ಮೂಲಕ ತನ್ನ ವಿಫಲತೆಯನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದೆ. ಟೈಮ್ಸ್‌ ಆಫ್‌ ಇಂಡಿಯಾದ ಸಹೋದರಿ ಪತ್ರಿಕೆ ಎಕನಾಮಿಕ್ ಟೈಮ್ಸ್‌ನ ಮೊದಲ ಎರಡು ಪುಟಗಳಲ್ಲಿ ರಾಜ್ಯ ಸರ್ಕಾರಗ ಕೊರೊನಾ ನಿರ್ವಹಿಸಿದ ಬಗ್ಗೆ ಜಾಹೀರಾತುಗಳನ್ನು ಪ್ರಕಟಿಸಿದೆ.

ಮೊದಲ ಪುಟದಲ್ಲಿ ಕೋವಿಡ್‌ ಸೋಲಿಸಲು ಉತ್ತರ ಪ್ರದೇಶದಲ್ಲಿ ಜಾರಿಗೆ ತರಲಾಗಿದೆ ಎಂದು ಹೇಳಿಕೊಳ್ಳುವ “ಐದು-ಹಂತದ ಯೋಜನೆ”ಗಳ ಜೊತೆಗೆ ಪ್ರಧಾನಿ ಮೋದಿ ಮತ್ತು ಆದಿತ್ಯನಾಥ್ ಅವರ ಚಿತ್ರಗಳನ್ನು ಪ್ರಕಟಿಸಲಾಗಿದೆ. ಪ್ರಧಾನಿ ಮೋದಿಗೆ ದೊರೆತ ಪ್ರತಿಯೊಂದು ಅವಕಾಶವನ್ನೂ ಬಿಜೆಪಿ ಪಕ್ಷವು ಶ್ಲಾಘಿಸುವುದು ರೂಡಿಯಾಗಿರುವುದರಿಂದ,  “ಉಚಿತ ಲಸಿಕೆಗಳನ್ನು” ನೀಡಿದ್ದಕ್ಕಾಗಿ ಮೋದಿಯವರ ಸಹಾಯಕ್ಕೆ ಪ್ರತಿಯಾಗಿ ಆದಿತ್ಯನಾಥ್ ಅವರು ಜಾಹೀರಾತಿನ ಮೂಲಕ ಧನ್ಯವಾದ ಸೂಚಿಸಿದ್ದಾರೆ.

ಇದನ್ನೂ ಓದಿ: ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಇನ್ನು ಎರಡನೇ ಪುಟವು ಸುದ್ದಿಯ ರೂಪದ ಜಾಹೀರಾತನ್ನು ಹೊಂದಿದೆ. ಈ ಪುಟದ ಕೆಳಭಾಗದಲ್ಲಿ ಕಾಣಸಿಗುವ ಒಂದು ಸಣ್ಣ “ಗ್ರಾಹಕ ಸಂಪರ್ಕ”ದ ಲೇಬಲ್ ಮಾತ್ರ ಇದು ಜಾಹೀರಾತು ಎಂದು ಸೂಚಿಸುತ್ತದೆ. ಜಾಹೀರಾತುದಾರರು ಪತ್ರಿಕೆಯ ಟೈಟಲ್‌ಹೆಡ್‌ನ ಬದಲಿಗೆ “ಕೊರೊನಾ ವಿರುದ್ಧ ಯುಪಿ ಹೋರಾಟ” ಎಂದು ಬರೆಸಿದ್ದಾರೆ. ಅದರಡಿಯಲ್ಲಿ ಯೋಗಿ ಸರ್ಕಾರದ ಬಹುಸಂಖ್ಯೆಯ ಕಾರ್ಯತಂತ್ರವು ಫಲಿತಾಂಶಗಳನ್ನು ವಿವರಿಸಿದೆ. ಕೊರೊನಾ ಎರಡನೇ ಅಲೆಯಲ್ಲಿ ಉತ್ತರ ಪ್ರದೇಶವು ಹೆಚ್ಚು ಹಾನಿಗೊಳಗಾದ ರಾಜ್ಯಗಳಲ್ಲಿ ಒಂದಾಗಿದೆ. ಆದರೆ, ಜಾಹೀರಾತಿನ ಮುಖ್ಯ ಸ್ಟೋರಿಯಲ್ಲಿ “ರಾಜ್ಯದ ಸಾಂಕ್ರಾಮಿಕ ನಿಯಂತ್ರಣ ಒಂದು ಮಾದರಿ” ಎಂದು ಬರೆದುಕೊಂಡಿದೆ.

“ಉತ್ತರ ಪ್ರದೇಶವು ಎಲ್ಲಾ ರೀತಿಯಲ್ಲಿಯೂ ಸರಿಯಾದ ಕಾರಣಗಳಿಗಾಗಿ ಸುದ್ದಿಯಲ್ಲಿದೆ” ಎಂದು ಜಾಹೀರಾತಿನ ಪ್ರಮುಖ “ಸ್ಟೋರಿ” ಆರಂಭವಾಗುತ್ತದೆ. ಆದರೆ, ರಾಜ್ಯದ ವಾಸ್ತವ ಬೇರೆಯದೇ ಇದೆ. ಗಂಗೆಯಲ್ಲಿ ಶವಗಳು ತೇಲಿದ ಪ್ರಕರಣ, ಆಕ್ಸಿಜನ್ ಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿದವರ ವಿರುದ್ಧ ಪ್ರಕರಣಗಳು, ಬೆದರಿಕೆಗಳಿಂದ ರಾಜ್ಯವು ಭಾರಿ ಸುದ್ದಿಯಲ್ಲಿದೆ.

ಕೃಪೆ: ನ್ಯೂಸ್‌ ಲ್ಯಾಂಡ್ರಿ


ಇದನ್ನೂ ಓದಿ: ವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...