Homeಮುಖಪುಟಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

- Advertisement -
- Advertisement -

ಕೊರೊನಾ ಸಾಂಕ್ರಾಮಿಕವನ್ನು ಬಿಜೆಪಿ ಸರ್ಕಾರ ಉತ್ತಮವಾಗಿ ನಿರ್ವಹಿಸಿದೆ ಎಂದು ಉತ್ತರ ಪ್ರದೇಶ ಮತ್ತು ಕರ್ನಾಟಕದ ಬಿಜೆಪಿ ಸರ್ಕಾರಗಳು ತಮ್ಮ ತಮ್ಮ ರಾಜ್ಯಗಳ ಜನರ ಮನವೊಲಿಸಲು ಎಲ್ಲಾ ರೀತಿಯಲ್ಲಿಯೂ ಪ್ರಯತ್ನಿಸುತ್ತಿದ್ದಾರೆ. ಶುಕ್ರವಾರ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಬಿ.ಎಸ್.ಯಡಿಯೂರಪ್ಪ,  ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋದೊಂದಿಗೆ ರಾಷ್ಟ್ರೀಯ ದಿನಪತ್ರಿಕೆಗಳಲ್ಲಿ ಪೂರ್ಣಪುಟದ ಜಾಹೀರಾತುಗಳಿಗಾಗಿ ಹಣ ವ್ಯಯಿಸಿದ್ದಾರೆ.

ದಿ ಹಿಂದೂ, ಎಕನಾಮಿಕ್ ಟೈಮ್ಸ್ ಮತ್ತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನಲ್ಲಿ ನೀಡಲಾಗಿರುವ ಜಾಹೀರಾತುಗಳಲ್ಲಿ ತಮ್ಮ ರಾಜ್ಯದಲ್ಲಿ ಕೊರೊನಾ ವೈರಸ್‌ ಸಾಂಕ್ರಾಮಿಕವನ್ನು ಎದುರಿಸಲು ತಾವು  ಕೈಗೊಂಡ ಪ್ರಯತ್ನಗಳ ಬಗ್ಗೆ ತಮ್ಮನ್ನು ತಾವೇ ಶ್ಲಾಘಿಸಿಕೊಂಡಿವೆ. ಜೊತೆಗೆ ಇದು ಅನೇಕರು ಹೆಮ್ಮೆ ಪಡುವಂತದ್ದು ಎಂದು ಜಾಹೀರಾತಿನಲ್ಲಿ ಹೇಳಿಕೊಂಡಿವೆ.

ಕರ್ನಾಟಕ ಸರ್ಕಾರ ದಿ ಹಿಂದೂ ಪತ್ರಿಕೆಯ 3ನೇ ಪುಟದಲ್ಲಿ ಜಾಹೀರಾತನ್ನು ನೀಡಿದೆ. ಅದು “ಚೇತರಿಕೆ ಹಾದಿಯಲ್ಲಿ ಕರ್ನಾಟಕ” ಎಂಬ ಶೀರ್ಷಿಕೆಯಲ್ಲಿ ‘ಐದು ಸ್ಟೋರಿ’ಗಳನ್ನು ನೀಡಿದೆ. ಅವುಗಳಲ್ಲಿರುವ ಆರು ಚಿತ್ರಗಳ ಪೈಕಿ ಐದರಲ್ಲಿ ಯಡಿಯೂರಪ್ಪ ಕಾಣಿಸಿಕೊಳ್ಳುತ್ತಾರೆ. ಜಾಹೀರಾತಿನ ಒಂದು ಸ್ಟೋರಿಯಲ್ಲಿ “ಕರ್ನಾಟಕದ ನೂರಾರು ಕಾರ್ಮಿಕರಿಗೆ ಸಿಎಂ ಜೊತೆ ಮುಖಾಮುಖಿಯಾಗಿ ಚರ್ಚಿಸಲು ಹೇಗೆ ಅವಕಾಶ ಸಿಕ್ಕಿದೆ” ಎಂದು ವಿವರಿಸಿದೆ. ಇದು ಕೋವಿಡ್‌ ವಿರುದ್ದದ ಹೋರಾಟದಲ್ಲಿ ಕಾರ್ಮಿಕರ ಮನೋಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಬೆಂಗಳೂರು ಆವೃತ್ತಿಯ 3ನೇ ಪುಟದಲ್ಲಿ “ಕರ್ನಾಟಕದ ಭರವಸೆಯ ಪ್ಯಾಕೇಜ್‌ಗಳು” ಮತ್ತು ಅದರ ಹುಬ್ಬಳ್ಳಿ ಆವೃತ್ತಿಯ 12ನೇ ಪುಟದಲ್ಲಿ “ಕೊರೊನಾ ಅಲೆಗಳನ್ನು ಗೆಲ್ಲುವುದು” ಕುರಿತು ಪೂರ್ಣ ಪುಟದ ಜಾಹೀರಾತನ್ನು ಪ್ರಕಟಿಸಿದೆ. ಅಮೆರಿಕನ್ ಕಾದಂಬರಿಕಾರ ಲೂಯಿಸ್ ಎಲ್’ಮೊರ್ ಅವರನ್ನು ಉಲ್ಲೇಖಿಸಿರುವ, ಯಡಿಯೂರಪ್ಪ ಸರ್ಕಾರವು ಎಲ್ಲಾ ಸಂಕಷ್ಟಗಳ ವಿರುದ್ಧ ಹೋರಾಡುತ್ತಿದೆ, ಕತ್ತಲೆಯಲ್ಲಿ ಬೆಳಕನ್ನು ಕಾಣುವಂತೆ ಮಾಡುವ ಭರವಸೆ ಇದೆ ಎಂದು ಜಾಹೀರಾತಿನಲ್ಲಿ ಹೇಳಿದೆ.

ರಾಜ್ಯದಲ್ಲಿ ಕೊರೊನಾ ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಗೆ “ಯಶಸ್ವಿಯಾಗಿದ್ದಾರೆ” ಎಂಬ ಕಥೆಗಳೊಂದಿಗೆ ಕರ್ನಾಟಕ ಸರ್ಕಾರ ಗುರುವಾರ ಡೆಕ್ಕನ್ ಹೆರಾಲ್ಡ್‌ನಲ್ಲಿ ಇದೇ ರೀತಿಯ ಜಾಹೀರಾತು ನೀಡಿದೆ.

ಇನ್ನು ಕೊರೊನಾ ನಿರ್ವಹಣೆಯಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿರುವ ಉತ್ತರ ಪ್ರದೇಶ ಸರ್ಕಾರವು ಜಾಹೀರಾತುಗಳ ಮೂಲಕ ತನ್ನ ವಿಫಲತೆಯನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದೆ. ಟೈಮ್ಸ್‌ ಆಫ್‌ ಇಂಡಿಯಾದ ಸಹೋದರಿ ಪತ್ರಿಕೆ ಎಕನಾಮಿಕ್ ಟೈಮ್ಸ್‌ನ ಮೊದಲ ಎರಡು ಪುಟಗಳಲ್ಲಿ ರಾಜ್ಯ ಸರ್ಕಾರಗ ಕೊರೊನಾ ನಿರ್ವಹಿಸಿದ ಬಗ್ಗೆ ಜಾಹೀರಾತುಗಳನ್ನು ಪ್ರಕಟಿಸಿದೆ.

ಮೊದಲ ಪುಟದಲ್ಲಿ ಕೋವಿಡ್‌ ಸೋಲಿಸಲು ಉತ್ತರ ಪ್ರದೇಶದಲ್ಲಿ ಜಾರಿಗೆ ತರಲಾಗಿದೆ ಎಂದು ಹೇಳಿಕೊಳ್ಳುವ “ಐದು-ಹಂತದ ಯೋಜನೆ”ಗಳ ಜೊತೆಗೆ ಪ್ರಧಾನಿ ಮೋದಿ ಮತ್ತು ಆದಿತ್ಯನಾಥ್ ಅವರ ಚಿತ್ರಗಳನ್ನು ಪ್ರಕಟಿಸಲಾಗಿದೆ. ಪ್ರಧಾನಿ ಮೋದಿಗೆ ದೊರೆತ ಪ್ರತಿಯೊಂದು ಅವಕಾಶವನ್ನೂ ಬಿಜೆಪಿ ಪಕ್ಷವು ಶ್ಲಾಘಿಸುವುದು ರೂಡಿಯಾಗಿರುವುದರಿಂದ,  “ಉಚಿತ ಲಸಿಕೆಗಳನ್ನು” ನೀಡಿದ್ದಕ್ಕಾಗಿ ಮೋದಿಯವರ ಸಹಾಯಕ್ಕೆ ಪ್ರತಿಯಾಗಿ ಆದಿತ್ಯನಾಥ್ ಅವರು ಜಾಹೀರಾತಿನ ಮೂಲಕ ಧನ್ಯವಾದ ಸೂಚಿಸಿದ್ದಾರೆ.

ಇದನ್ನೂ ಓದಿ: ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಇನ್ನು ಎರಡನೇ ಪುಟವು ಸುದ್ದಿಯ ರೂಪದ ಜಾಹೀರಾತನ್ನು ಹೊಂದಿದೆ. ಈ ಪುಟದ ಕೆಳಭಾಗದಲ್ಲಿ ಕಾಣಸಿಗುವ ಒಂದು ಸಣ್ಣ “ಗ್ರಾಹಕ ಸಂಪರ್ಕ”ದ ಲೇಬಲ್ ಮಾತ್ರ ಇದು ಜಾಹೀರಾತು ಎಂದು ಸೂಚಿಸುತ್ತದೆ. ಜಾಹೀರಾತುದಾರರು ಪತ್ರಿಕೆಯ ಟೈಟಲ್‌ಹೆಡ್‌ನ ಬದಲಿಗೆ “ಕೊರೊನಾ ವಿರುದ್ಧ ಯುಪಿ ಹೋರಾಟ” ಎಂದು ಬರೆಸಿದ್ದಾರೆ. ಅದರಡಿಯಲ್ಲಿ ಯೋಗಿ ಸರ್ಕಾರದ ಬಹುಸಂಖ್ಯೆಯ ಕಾರ್ಯತಂತ್ರವು ಫಲಿತಾಂಶಗಳನ್ನು ವಿವರಿಸಿದೆ. ಕೊರೊನಾ ಎರಡನೇ ಅಲೆಯಲ್ಲಿ ಉತ್ತರ ಪ್ರದೇಶವು ಹೆಚ್ಚು ಹಾನಿಗೊಳಗಾದ ರಾಜ್ಯಗಳಲ್ಲಿ ಒಂದಾಗಿದೆ. ಆದರೆ, ಜಾಹೀರಾತಿನ ಮುಖ್ಯ ಸ್ಟೋರಿಯಲ್ಲಿ “ರಾಜ್ಯದ ಸಾಂಕ್ರಾಮಿಕ ನಿಯಂತ್ರಣ ಒಂದು ಮಾದರಿ” ಎಂದು ಬರೆದುಕೊಂಡಿದೆ.

“ಉತ್ತರ ಪ್ರದೇಶವು ಎಲ್ಲಾ ರೀತಿಯಲ್ಲಿಯೂ ಸರಿಯಾದ ಕಾರಣಗಳಿಗಾಗಿ ಸುದ್ದಿಯಲ್ಲಿದೆ” ಎಂದು ಜಾಹೀರಾತಿನ ಪ್ರಮುಖ “ಸ್ಟೋರಿ” ಆರಂಭವಾಗುತ್ತದೆ. ಆದರೆ, ರಾಜ್ಯದ ವಾಸ್ತವ ಬೇರೆಯದೇ ಇದೆ. ಗಂಗೆಯಲ್ಲಿ ಶವಗಳು ತೇಲಿದ ಪ್ರಕರಣ, ಆಕ್ಸಿಜನ್ ಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿದವರ ವಿರುದ್ಧ ಪ್ರಕರಣಗಳು, ಬೆದರಿಕೆಗಳಿಂದ ರಾಜ್ಯವು ಭಾರಿ ಸುದ್ದಿಯಲ್ಲಿದೆ.

ಕೃಪೆ: ನ್ಯೂಸ್‌ ಲ್ಯಾಂಡ್ರಿ


ಇದನ್ನೂ ಓದಿ: ವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...