Homeಮುಖಪುಟಕೊರೊನಾ ಎಫೆಕ್ಟ್: ಆರು ತಿಂಗಳು ಕೇರಳದಲ್ಲಿ ಉಳಿಯಲು ಅಮೆರಿಕಾದ ಪ್ರಜೆ ಹೈಕೋರ್ಟ್‌ಗೆ ಮೊರೆ

ಕೊರೊನಾ ಎಫೆಕ್ಟ್: ಆರು ತಿಂಗಳು ಕೇರಳದಲ್ಲಿ ಉಳಿಯಲು ಅಮೆರಿಕಾದ ಪ್ರಜೆ ಹೈಕೋರ್ಟ್‌ಗೆ ಮೊರೆ

- Advertisement -
- Advertisement -

ಕೊರೊನಾ ವೈರಸಿನ ಭಯಕ್ಕೆ ಕೊರೊನಾ ವೈರಸ್ ಸುರಕ್ಷಿತ ಧಾಮವಾದ ಕೇರಳದಲ್ಲಿ ತನ್ನನ್ನು ಇರಿಸುವಂತೆ ಅಮೆರಿಕಾದ ಪ್ರಜೆ ಹೈಕೋರ್ಟಿಗೆ ಮನವಿ ಮಾಡಿದ್ದಾರೆ.

ತನ್ನನ್ನು ಇನ್ನೂ ಆರು ತಿಂಗಳು ಕೇರಳದಲ್ಲಿ ಇರಲು ಅವಕಾಶ ನೀಡುವಂತೆ ಅಮೇರಿಕಾದ ಪ್ರಜೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಕೇರಳವು ಸೋಂಕನ್ನು ಪರೀಕ್ಷಿಸಲು ತನ್ನ ದೇಶ ಅಮೆರಿಕಾಗಿಂತ ಉತ್ತಮ ಕ್ರಮಗಳನ್ನು ಅನುಸರಿಸುತ್ತಿದೆ ಹಾಗೂ ಅಮೆರಿಕಾಗಿಂತ ಕೇರಳ ಹೆಚ್ಚು ಸುರಕ್ಷಿತವೆಂದು ಅವರು ಹೇಳಿದ್ದಾರೆ.

74 ವರ್ಷದ ರಂಗಭೂಮಿ ಬರಹಗಾರ ಮತ್ತು ನಿರ್ದೇಶಕ ಟೆರ್‍ರಿ ಜಾನ್ ಕಾನ್ವರ್ಸ್, ತಮ್ಮ ವೀಸಾ ಅವಧಿ ಮೇ 17 ಕ್ಕೆ ಮುಕ್ತಾಯವಾಗುವುದರಿಂದ, ಅದನ್ನು ಇನ್ನೂ ಆರು ತಿಂಗಳು ಮುಂದೂಡುವಂತೆ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ.

“ನ್ಯಾಯಾಲಯವನ್ನು ಸಂಪರ್ಕಿಸುವುದನ್ನು ಬಿಟ್ಟು ನನಗೆ ಬೇರೆ ಆಯ್ಕೆ ಇರಲಿಲ್ಲ. ಅಮೆರಿಕಾದಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ. ಭಾರತ ಅದರಲ್ಲೂ ಮುಖ್ಯವಾಗಿ ಕೇರಳ ಅಮೆರಿಕಾಗಿಂತ ವೈರಸ್ ವಿರುದ್ದ ಉತ್ತಮ ಕೆಲಸ ಮಾಡುತ್ತಿದೆ” ಎಂದು ಟೆರ್‍ರಿ ಹೇಳುತ್ತಾರೆ


ಇದನ್ನೂ ಓದಿ: ಲಾಕ್‌ಡೌನ್ ವಿಷಯದಲ್ಲಿ ಕರ್ನಾಟಕಕ್ಕೆ ಕೇರಳ ಮಾದರಿಯಾಗಬಾರದೇಕೆ?


ವಾಷಿಂಗ್ಟನ್ ಸ್ಟೇಟ್ ಯೂನಿವರ್ಸಿಟಿಯ ರಂಗಭೂಮಿ ಪ್ರಾಧ್ಯಾಪಕರಾದ ಟೆರ್‍ರಿ, ಸೆಪ್ಟೆಂಬರ್ 28, 2019 ರಂದು ಕೇರಳದ ಕೊಚ್ಚಿಗೆ ಬಂದಿದ್ದರು. ಅಂದಿನಿಂದ ಅವರು ಹಲವಾರು ನಾಟಕ ಕಾರ್ಯಾಗಾರಗಳನ್ನು ನಡೆಸಿದ್ದರು.

ಟೆರ್‍ರಿ ಮಾರ್ಚ್ 27 ರೊಳಗೆ ಮರಳಬೇಕಾಗಿದ್ದರೂ, ಲಾಕ್‌ಡೌನ್ ಆಗಿದ್ದರಿಂದ ಅವರ ವೀಸಾವನ್ನು ಏಪ್ರಿಲ್ 25 ವರೆಗೆ ವಿಸ್ತರಿಸಲಾಗಿತ್ತು. ನಂತರ ಮತ್ತೇ ಲಾಕ್‌ಡೌನ್ ಅನ್ನು ಮೇ 3 ಕ್ಕೆ ವಿಸ್ತರಿಸಿದ್ದರಿಂದ ವೀಸಾವನ್ನು ಮತ್ತೊಮ್ಮೆ ಮೇ 17 ಕ್ಕೆ ವಿಸ್ತರಿಸಲಾಯಿತು. ಈಗ ಅವರು ಅಮೆರಿಕಾದಲ್ಲಿ ಸಾಂಕ್ರಾಮಿಕದಿಂದ ಉಂಟಾಗಿರುವ ಬೆದರಿಕೆಯಿಂದಾಗಿ ಅಮೆರಿಕಾಗೆ ಹಿಂತಿರುಗುವುದು ಸುರಕ್ಷಿತವಲ್ಲ ಎಂದು ಭಾವಿಸಿದ್ದಾರೆ.

ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿ, ಅಂತಾರಾಷ್ಟ್ರೀಯ ವಿಮಾನಗಳು ಪ್ರಾರಂಭಿಸದಿದ್ದರೆ ವೀಸಾವನ್ನು ವಿಸ್ತರಿಸಬೇಕಾಗುತ್ತದೆ ಎಂದಿದೆ.

ಟೆರ್‍ರಿ ಈ ಹಿಂದೆ ಮಲಯಾಳಂನ ಪ್ರಸಿದ್ದ ಬರಹಗಾರ ವೈಕಂ ಮುಹಮ್ಮದ್ ಬಶೀರ್ ಅವರ “ವಿಶ್ವವಿಕ್ಯಾತಮಾಯ ಮೂಕ್ಕ್”(ವಿಶ್ವಪ್ರಸಿದ್ಧ ಮೂಗು) ಎಂಬ ಸಣ್ಣ ಕಥೆಯ ನಾಟಕೀಯ ರೂಪಾಂತರವನ್ನು ನಿರ್ದೇಶಿಸಿದ್ದರು.

ಕೃಪೆ: ಮಲಯಾಳಂ ಮನೋರಮ


ಇದನ್ನೂ ಓದಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇರಳ ಸರ್ಕಾರ ಮತ್ತು ಜನತೆಯ ಪ್ರಬುದ್ಧತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊರೋನ ನಿಯಂತ್ರಣ ಮಾಡುವಲ್ಲಿ ಕೇರಳದ ಸಾದನೆ ಶ್ಲಾಘನೀಯ ಮತ್ತು ಅನುಕರಣನೀಯ.

LEAVE A REPLY

Please enter your comment!
Please enter your name here

- Advertisment -

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...