Homeಮುಖಪುಟಕೊರೊನಾ ಎಫೆಕ್ಟ್: ಆರು ತಿಂಗಳು ಕೇರಳದಲ್ಲಿ ಉಳಿಯಲು ಅಮೆರಿಕಾದ ಪ್ರಜೆ ಹೈಕೋರ್ಟ್‌ಗೆ ಮೊರೆ

ಕೊರೊನಾ ಎಫೆಕ್ಟ್: ಆರು ತಿಂಗಳು ಕೇರಳದಲ್ಲಿ ಉಳಿಯಲು ಅಮೆರಿಕಾದ ಪ್ರಜೆ ಹೈಕೋರ್ಟ್‌ಗೆ ಮೊರೆ

- Advertisement -
- Advertisement -

ಕೊರೊನಾ ವೈರಸಿನ ಭಯಕ್ಕೆ ಕೊರೊನಾ ವೈರಸ್ ಸುರಕ್ಷಿತ ಧಾಮವಾದ ಕೇರಳದಲ್ಲಿ ತನ್ನನ್ನು ಇರಿಸುವಂತೆ ಅಮೆರಿಕಾದ ಪ್ರಜೆ ಹೈಕೋರ್ಟಿಗೆ ಮನವಿ ಮಾಡಿದ್ದಾರೆ.

ತನ್ನನ್ನು ಇನ್ನೂ ಆರು ತಿಂಗಳು ಕೇರಳದಲ್ಲಿ ಇರಲು ಅವಕಾಶ ನೀಡುವಂತೆ ಅಮೇರಿಕಾದ ಪ್ರಜೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಕೇರಳವು ಸೋಂಕನ್ನು ಪರೀಕ್ಷಿಸಲು ತನ್ನ ದೇಶ ಅಮೆರಿಕಾಗಿಂತ ಉತ್ತಮ ಕ್ರಮಗಳನ್ನು ಅನುಸರಿಸುತ್ತಿದೆ ಹಾಗೂ ಅಮೆರಿಕಾಗಿಂತ ಕೇರಳ ಹೆಚ್ಚು ಸುರಕ್ಷಿತವೆಂದು ಅವರು ಹೇಳಿದ್ದಾರೆ.

74 ವರ್ಷದ ರಂಗಭೂಮಿ ಬರಹಗಾರ ಮತ್ತು ನಿರ್ದೇಶಕ ಟೆರ್‍ರಿ ಜಾನ್ ಕಾನ್ವರ್ಸ್, ತಮ್ಮ ವೀಸಾ ಅವಧಿ ಮೇ 17 ಕ್ಕೆ ಮುಕ್ತಾಯವಾಗುವುದರಿಂದ, ಅದನ್ನು ಇನ್ನೂ ಆರು ತಿಂಗಳು ಮುಂದೂಡುವಂತೆ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ.

“ನ್ಯಾಯಾಲಯವನ್ನು ಸಂಪರ್ಕಿಸುವುದನ್ನು ಬಿಟ್ಟು ನನಗೆ ಬೇರೆ ಆಯ್ಕೆ ಇರಲಿಲ್ಲ. ಅಮೆರಿಕಾದಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ. ಭಾರತ ಅದರಲ್ಲೂ ಮುಖ್ಯವಾಗಿ ಕೇರಳ ಅಮೆರಿಕಾಗಿಂತ ವೈರಸ್ ವಿರುದ್ದ ಉತ್ತಮ ಕೆಲಸ ಮಾಡುತ್ತಿದೆ” ಎಂದು ಟೆರ್‍ರಿ ಹೇಳುತ್ತಾರೆ


ಇದನ್ನೂ ಓದಿ: ಲಾಕ್‌ಡೌನ್ ವಿಷಯದಲ್ಲಿ ಕರ್ನಾಟಕಕ್ಕೆ ಕೇರಳ ಮಾದರಿಯಾಗಬಾರದೇಕೆ?


ವಾಷಿಂಗ್ಟನ್ ಸ್ಟೇಟ್ ಯೂನಿವರ್ಸಿಟಿಯ ರಂಗಭೂಮಿ ಪ್ರಾಧ್ಯಾಪಕರಾದ ಟೆರ್‍ರಿ, ಸೆಪ್ಟೆಂಬರ್ 28, 2019 ರಂದು ಕೇರಳದ ಕೊಚ್ಚಿಗೆ ಬಂದಿದ್ದರು. ಅಂದಿನಿಂದ ಅವರು ಹಲವಾರು ನಾಟಕ ಕಾರ್ಯಾಗಾರಗಳನ್ನು ನಡೆಸಿದ್ದರು.

ಟೆರ್‍ರಿ ಮಾರ್ಚ್ 27 ರೊಳಗೆ ಮರಳಬೇಕಾಗಿದ್ದರೂ, ಲಾಕ್‌ಡೌನ್ ಆಗಿದ್ದರಿಂದ ಅವರ ವೀಸಾವನ್ನು ಏಪ್ರಿಲ್ 25 ವರೆಗೆ ವಿಸ್ತರಿಸಲಾಗಿತ್ತು. ನಂತರ ಮತ್ತೇ ಲಾಕ್‌ಡೌನ್ ಅನ್ನು ಮೇ 3 ಕ್ಕೆ ವಿಸ್ತರಿಸಿದ್ದರಿಂದ ವೀಸಾವನ್ನು ಮತ್ತೊಮ್ಮೆ ಮೇ 17 ಕ್ಕೆ ವಿಸ್ತರಿಸಲಾಯಿತು. ಈಗ ಅವರು ಅಮೆರಿಕಾದಲ್ಲಿ ಸಾಂಕ್ರಾಮಿಕದಿಂದ ಉಂಟಾಗಿರುವ ಬೆದರಿಕೆಯಿಂದಾಗಿ ಅಮೆರಿಕಾಗೆ ಹಿಂತಿರುಗುವುದು ಸುರಕ್ಷಿತವಲ್ಲ ಎಂದು ಭಾವಿಸಿದ್ದಾರೆ.

ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿ, ಅಂತಾರಾಷ್ಟ್ರೀಯ ವಿಮಾನಗಳು ಪ್ರಾರಂಭಿಸದಿದ್ದರೆ ವೀಸಾವನ್ನು ವಿಸ್ತರಿಸಬೇಕಾಗುತ್ತದೆ ಎಂದಿದೆ.

ಟೆರ್‍ರಿ ಈ ಹಿಂದೆ ಮಲಯಾಳಂನ ಪ್ರಸಿದ್ದ ಬರಹಗಾರ ವೈಕಂ ಮುಹಮ್ಮದ್ ಬಶೀರ್ ಅವರ “ವಿಶ್ವವಿಕ್ಯಾತಮಾಯ ಮೂಕ್ಕ್”(ವಿಶ್ವಪ್ರಸಿದ್ಧ ಮೂಗು) ಎಂಬ ಸಣ್ಣ ಕಥೆಯ ನಾಟಕೀಯ ರೂಪಾಂತರವನ್ನು ನಿರ್ದೇಶಿಸಿದ್ದರು.

ಕೃಪೆ: ಮಲಯಾಳಂ ಮನೋರಮ


ಇದನ್ನೂ ಓದಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇರಳ ಸರ್ಕಾರ ಮತ್ತು ಜನತೆಯ ಪ್ರಬುದ್ಧತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊರೋನ ನಿಯಂತ್ರಣ ಮಾಡುವಲ್ಲಿ ಕೇರಳದ ಸಾದನೆ ಶ್ಲಾಘನೀಯ ಮತ್ತು ಅನುಕರಣನೀಯ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...