Homeಮುಖಪುಟಕೊರೊನಾ ಎಫೆಕ್ಟ್: ಆರು ತಿಂಗಳು ಕೇರಳದಲ್ಲಿ ಉಳಿಯಲು ಅಮೆರಿಕಾದ ಪ್ರಜೆ ಹೈಕೋರ್ಟ್‌ಗೆ ಮೊರೆ

ಕೊರೊನಾ ಎಫೆಕ್ಟ್: ಆರು ತಿಂಗಳು ಕೇರಳದಲ್ಲಿ ಉಳಿಯಲು ಅಮೆರಿಕಾದ ಪ್ರಜೆ ಹೈಕೋರ್ಟ್‌ಗೆ ಮೊರೆ

- Advertisement -
- Advertisement -

ಕೊರೊನಾ ವೈರಸಿನ ಭಯಕ್ಕೆ ಕೊರೊನಾ ವೈರಸ್ ಸುರಕ್ಷಿತ ಧಾಮವಾದ ಕೇರಳದಲ್ಲಿ ತನ್ನನ್ನು ಇರಿಸುವಂತೆ ಅಮೆರಿಕಾದ ಪ್ರಜೆ ಹೈಕೋರ್ಟಿಗೆ ಮನವಿ ಮಾಡಿದ್ದಾರೆ.

ತನ್ನನ್ನು ಇನ್ನೂ ಆರು ತಿಂಗಳು ಕೇರಳದಲ್ಲಿ ಇರಲು ಅವಕಾಶ ನೀಡುವಂತೆ ಅಮೇರಿಕಾದ ಪ್ರಜೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಕೇರಳವು ಸೋಂಕನ್ನು ಪರೀಕ್ಷಿಸಲು ತನ್ನ ದೇಶ ಅಮೆರಿಕಾಗಿಂತ ಉತ್ತಮ ಕ್ರಮಗಳನ್ನು ಅನುಸರಿಸುತ್ತಿದೆ ಹಾಗೂ ಅಮೆರಿಕಾಗಿಂತ ಕೇರಳ ಹೆಚ್ಚು ಸುರಕ್ಷಿತವೆಂದು ಅವರು ಹೇಳಿದ್ದಾರೆ.

74 ವರ್ಷದ ರಂಗಭೂಮಿ ಬರಹಗಾರ ಮತ್ತು ನಿರ್ದೇಶಕ ಟೆರ್‍ರಿ ಜಾನ್ ಕಾನ್ವರ್ಸ್, ತಮ್ಮ ವೀಸಾ ಅವಧಿ ಮೇ 17 ಕ್ಕೆ ಮುಕ್ತಾಯವಾಗುವುದರಿಂದ, ಅದನ್ನು ಇನ್ನೂ ಆರು ತಿಂಗಳು ಮುಂದೂಡುವಂತೆ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ.

“ನ್ಯಾಯಾಲಯವನ್ನು ಸಂಪರ್ಕಿಸುವುದನ್ನು ಬಿಟ್ಟು ನನಗೆ ಬೇರೆ ಆಯ್ಕೆ ಇರಲಿಲ್ಲ. ಅಮೆರಿಕಾದಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ. ಭಾರತ ಅದರಲ್ಲೂ ಮುಖ್ಯವಾಗಿ ಕೇರಳ ಅಮೆರಿಕಾಗಿಂತ ವೈರಸ್ ವಿರುದ್ದ ಉತ್ತಮ ಕೆಲಸ ಮಾಡುತ್ತಿದೆ” ಎಂದು ಟೆರ್‍ರಿ ಹೇಳುತ್ತಾರೆ


ಇದನ್ನೂ ಓದಿ: ಲಾಕ್‌ಡೌನ್ ವಿಷಯದಲ್ಲಿ ಕರ್ನಾಟಕಕ್ಕೆ ಕೇರಳ ಮಾದರಿಯಾಗಬಾರದೇಕೆ?


ವಾಷಿಂಗ್ಟನ್ ಸ್ಟೇಟ್ ಯೂನಿವರ್ಸಿಟಿಯ ರಂಗಭೂಮಿ ಪ್ರಾಧ್ಯಾಪಕರಾದ ಟೆರ್‍ರಿ, ಸೆಪ್ಟೆಂಬರ್ 28, 2019 ರಂದು ಕೇರಳದ ಕೊಚ್ಚಿಗೆ ಬಂದಿದ್ದರು. ಅಂದಿನಿಂದ ಅವರು ಹಲವಾರು ನಾಟಕ ಕಾರ್ಯಾಗಾರಗಳನ್ನು ನಡೆಸಿದ್ದರು.

ಟೆರ್‍ರಿ ಮಾರ್ಚ್ 27 ರೊಳಗೆ ಮರಳಬೇಕಾಗಿದ್ದರೂ, ಲಾಕ್‌ಡೌನ್ ಆಗಿದ್ದರಿಂದ ಅವರ ವೀಸಾವನ್ನು ಏಪ್ರಿಲ್ 25 ವರೆಗೆ ವಿಸ್ತರಿಸಲಾಗಿತ್ತು. ನಂತರ ಮತ್ತೇ ಲಾಕ್‌ಡೌನ್ ಅನ್ನು ಮೇ 3 ಕ್ಕೆ ವಿಸ್ತರಿಸಿದ್ದರಿಂದ ವೀಸಾವನ್ನು ಮತ್ತೊಮ್ಮೆ ಮೇ 17 ಕ್ಕೆ ವಿಸ್ತರಿಸಲಾಯಿತು. ಈಗ ಅವರು ಅಮೆರಿಕಾದಲ್ಲಿ ಸಾಂಕ್ರಾಮಿಕದಿಂದ ಉಂಟಾಗಿರುವ ಬೆದರಿಕೆಯಿಂದಾಗಿ ಅಮೆರಿಕಾಗೆ ಹಿಂತಿರುಗುವುದು ಸುರಕ್ಷಿತವಲ್ಲ ಎಂದು ಭಾವಿಸಿದ್ದಾರೆ.

ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿ, ಅಂತಾರಾಷ್ಟ್ರೀಯ ವಿಮಾನಗಳು ಪ್ರಾರಂಭಿಸದಿದ್ದರೆ ವೀಸಾವನ್ನು ವಿಸ್ತರಿಸಬೇಕಾಗುತ್ತದೆ ಎಂದಿದೆ.

ಟೆರ್‍ರಿ ಈ ಹಿಂದೆ ಮಲಯಾಳಂನ ಪ್ರಸಿದ್ದ ಬರಹಗಾರ ವೈಕಂ ಮುಹಮ್ಮದ್ ಬಶೀರ್ ಅವರ “ವಿಶ್ವವಿಕ್ಯಾತಮಾಯ ಮೂಕ್ಕ್”(ವಿಶ್ವಪ್ರಸಿದ್ಧ ಮೂಗು) ಎಂಬ ಸಣ್ಣ ಕಥೆಯ ನಾಟಕೀಯ ರೂಪಾಂತರವನ್ನು ನಿರ್ದೇಶಿಸಿದ್ದರು.

ಕೃಪೆ: ಮಲಯಾಳಂ ಮನೋರಮ


ಇದನ್ನೂ ಓದಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇರಳ ಸರ್ಕಾರ ಮತ್ತು ಜನತೆಯ ಪ್ರಬುದ್ಧತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊರೋನ ನಿಯಂತ್ರಣ ಮಾಡುವಲ್ಲಿ ಕೇರಳದ ಸಾದನೆ ಶ್ಲಾಘನೀಯ ಮತ್ತು ಅನುಕರಣನೀಯ.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...