Homeಮುಖಪುಟಕೊರೊನಾ ಎಫೆಕ್ಟ್: ಆರು ತಿಂಗಳು ಕೇರಳದಲ್ಲಿ ಉಳಿಯಲು ಅಮೆರಿಕಾದ ಪ್ರಜೆ ಹೈಕೋರ್ಟ್‌ಗೆ ಮೊರೆ

ಕೊರೊನಾ ಎಫೆಕ್ಟ್: ಆರು ತಿಂಗಳು ಕೇರಳದಲ್ಲಿ ಉಳಿಯಲು ಅಮೆರಿಕಾದ ಪ್ರಜೆ ಹೈಕೋರ್ಟ್‌ಗೆ ಮೊರೆ

- Advertisement -
- Advertisement -

ಕೊರೊನಾ ವೈರಸಿನ ಭಯಕ್ಕೆ ಕೊರೊನಾ ವೈರಸ್ ಸುರಕ್ಷಿತ ಧಾಮವಾದ ಕೇರಳದಲ್ಲಿ ತನ್ನನ್ನು ಇರಿಸುವಂತೆ ಅಮೆರಿಕಾದ ಪ್ರಜೆ ಹೈಕೋರ್ಟಿಗೆ ಮನವಿ ಮಾಡಿದ್ದಾರೆ.

ತನ್ನನ್ನು ಇನ್ನೂ ಆರು ತಿಂಗಳು ಕೇರಳದಲ್ಲಿ ಇರಲು ಅವಕಾಶ ನೀಡುವಂತೆ ಅಮೇರಿಕಾದ ಪ್ರಜೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಕೇರಳವು ಸೋಂಕನ್ನು ಪರೀಕ್ಷಿಸಲು ತನ್ನ ದೇಶ ಅಮೆರಿಕಾಗಿಂತ ಉತ್ತಮ ಕ್ರಮಗಳನ್ನು ಅನುಸರಿಸುತ್ತಿದೆ ಹಾಗೂ ಅಮೆರಿಕಾಗಿಂತ ಕೇರಳ ಹೆಚ್ಚು ಸುರಕ್ಷಿತವೆಂದು ಅವರು ಹೇಳಿದ್ದಾರೆ.

74 ವರ್ಷದ ರಂಗಭೂಮಿ ಬರಹಗಾರ ಮತ್ತು ನಿರ್ದೇಶಕ ಟೆರ್‍ರಿ ಜಾನ್ ಕಾನ್ವರ್ಸ್, ತಮ್ಮ ವೀಸಾ ಅವಧಿ ಮೇ 17 ಕ್ಕೆ ಮುಕ್ತಾಯವಾಗುವುದರಿಂದ, ಅದನ್ನು ಇನ್ನೂ ಆರು ತಿಂಗಳು ಮುಂದೂಡುವಂತೆ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ.

“ನ್ಯಾಯಾಲಯವನ್ನು ಸಂಪರ್ಕಿಸುವುದನ್ನು ಬಿಟ್ಟು ನನಗೆ ಬೇರೆ ಆಯ್ಕೆ ಇರಲಿಲ್ಲ. ಅಮೆರಿಕಾದಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ. ಭಾರತ ಅದರಲ್ಲೂ ಮುಖ್ಯವಾಗಿ ಕೇರಳ ಅಮೆರಿಕಾಗಿಂತ ವೈರಸ್ ವಿರುದ್ದ ಉತ್ತಮ ಕೆಲಸ ಮಾಡುತ್ತಿದೆ” ಎಂದು ಟೆರ್‍ರಿ ಹೇಳುತ್ತಾರೆ


ಇದನ್ನೂ ಓದಿ: ಲಾಕ್‌ಡೌನ್ ವಿಷಯದಲ್ಲಿ ಕರ್ನಾಟಕಕ್ಕೆ ಕೇರಳ ಮಾದರಿಯಾಗಬಾರದೇಕೆ?


ವಾಷಿಂಗ್ಟನ್ ಸ್ಟೇಟ್ ಯೂನಿವರ್ಸಿಟಿಯ ರಂಗಭೂಮಿ ಪ್ರಾಧ್ಯಾಪಕರಾದ ಟೆರ್‍ರಿ, ಸೆಪ್ಟೆಂಬರ್ 28, 2019 ರಂದು ಕೇರಳದ ಕೊಚ್ಚಿಗೆ ಬಂದಿದ್ದರು. ಅಂದಿನಿಂದ ಅವರು ಹಲವಾರು ನಾಟಕ ಕಾರ್ಯಾಗಾರಗಳನ್ನು ನಡೆಸಿದ್ದರು.

ಟೆರ್‍ರಿ ಮಾರ್ಚ್ 27 ರೊಳಗೆ ಮರಳಬೇಕಾಗಿದ್ದರೂ, ಲಾಕ್‌ಡೌನ್ ಆಗಿದ್ದರಿಂದ ಅವರ ವೀಸಾವನ್ನು ಏಪ್ರಿಲ್ 25 ವರೆಗೆ ವಿಸ್ತರಿಸಲಾಗಿತ್ತು. ನಂತರ ಮತ್ತೇ ಲಾಕ್‌ಡೌನ್ ಅನ್ನು ಮೇ 3 ಕ್ಕೆ ವಿಸ್ತರಿಸಿದ್ದರಿಂದ ವೀಸಾವನ್ನು ಮತ್ತೊಮ್ಮೆ ಮೇ 17 ಕ್ಕೆ ವಿಸ್ತರಿಸಲಾಯಿತು. ಈಗ ಅವರು ಅಮೆರಿಕಾದಲ್ಲಿ ಸಾಂಕ್ರಾಮಿಕದಿಂದ ಉಂಟಾಗಿರುವ ಬೆದರಿಕೆಯಿಂದಾಗಿ ಅಮೆರಿಕಾಗೆ ಹಿಂತಿರುಗುವುದು ಸುರಕ್ಷಿತವಲ್ಲ ಎಂದು ಭಾವಿಸಿದ್ದಾರೆ.

ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿ, ಅಂತಾರಾಷ್ಟ್ರೀಯ ವಿಮಾನಗಳು ಪ್ರಾರಂಭಿಸದಿದ್ದರೆ ವೀಸಾವನ್ನು ವಿಸ್ತರಿಸಬೇಕಾಗುತ್ತದೆ ಎಂದಿದೆ.

ಟೆರ್‍ರಿ ಈ ಹಿಂದೆ ಮಲಯಾಳಂನ ಪ್ರಸಿದ್ದ ಬರಹಗಾರ ವೈಕಂ ಮುಹಮ್ಮದ್ ಬಶೀರ್ ಅವರ “ವಿಶ್ವವಿಕ್ಯಾತಮಾಯ ಮೂಕ್ಕ್”(ವಿಶ್ವಪ್ರಸಿದ್ಧ ಮೂಗು) ಎಂಬ ಸಣ್ಣ ಕಥೆಯ ನಾಟಕೀಯ ರೂಪಾಂತರವನ್ನು ನಿರ್ದೇಶಿಸಿದ್ದರು.

ಕೃಪೆ: ಮಲಯಾಳಂ ಮನೋರಮ


ಇದನ್ನೂ ಓದಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇರಳ ಸರ್ಕಾರ ಮತ್ತು ಜನತೆಯ ಪ್ರಬುದ್ಧತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊರೋನ ನಿಯಂತ್ರಣ ಮಾಡುವಲ್ಲಿ ಕೇರಳದ ಸಾದನೆ ಶ್ಲಾಘನೀಯ ಮತ್ತು ಅನುಕರಣನೀಯ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...