Homeಮುಖಪುಟಕೊರೊನಾ ಸಮಯದಲ್ಲಿ ಪ್ರೈಡ್ ತಿಂಗಳು; ಸಮಸ್ಯೆಗಳ ಸಾಗರಕ್ಕೆ ಆತ್ಮಗೌರವವೇ ಸಮಾಧಾನ

ಕೊರೊನಾ ಸಮಯದಲ್ಲಿ ಪ್ರೈಡ್ ತಿಂಗಳು; ಸಮಸ್ಯೆಗಳ ಸಾಗರಕ್ಕೆ ಆತ್ಮಗೌರವವೇ ಸಮಾಧಾನ

- Advertisement -
- Advertisement -

ಜೂನ್ ತಿಂಗಳನ್ನು ಪ್ರೈಡ್ (ಲೈಂಗಿಕ ಅಲ್ಪಸಂಖ್ಯಾತರ ಸಂಭ್ರಮ) ತಿಂಗಳಾಗಿ ಆಚರಿಸಲಾಗುತ್ತದೆ. ಹಾಗಾಗಿ, ಹಲವಾರು ಮಾಧ್ಯಮದ ಜನರು ಎಲ್‌ಜಿಬಿಟಿಕ್ಯುಕ್ಯುಐಎ (lesbian, gay, bisexual, transgender, queer, questioning, intersex and allies) ಸಮುದಾಯದ ವ್ಯಕ್ತಿಗಳನ್ನು ಸಂಪರ್ಕಿಸಿ, ಲೈಂಗಿಕ ಅಲ್ಪಸಂಖ್ಯಾತರ ಮತ್ತು ಅಂತರಲಿಂಗಿ (ಟ್ರಾನ್ಸ್) ವ್ಯಕ್ತಿಗಳ ಸ್ಥಿತಿಗತಿಗಳನ್ನು ಅರಿಯಲು ನಮ್ಮನ್ನು ಸಂಪರ್ಕಿಸಿದರು. ಗೌರಿ ಲಂಕೇಶ್ ಮಾಧ್ಯಮವು ಒಂದು ಟಿಪಿಕಲ್ ಹಣದಾಸೆಯಲ್ಲಿರುವ, ಕೃತಕ ಪ್ರಕಟಣಾ ಸಂಸ್ಥೆಯಾಗಿರದೇ, ಪ್ರಾಮಾಣಿಕ ಓದುಗರಿಗೆ ತಳಮಟ್ಟದಲ್ಲಿಯ ಸ್ಥಿತಿಗತಿಯ ವಾಸ್ತವವನ್ನು ತಲುಪಿಸಲು ಪ್ರಯತ್ನಿಸುತ್ತಿರುವ ಸಂಸ್ಥೆಯಾಗಿರುವುದರಿಂದ ಈಗ ನಾನು ಈ ಸಮುದಾಯದ ಸ್ಥಿತಿಯ ವಾಸ್ತವ ಚಿತ್ರಣವನ್ನು ಬರೆಯಲು ಪ್ರಯತ್ನಿಸುವೆ. ಸಾಮಾನ್ಯವಾಗಿ ಎಲ್‌ಜಿಬಿಟಿಕ್ಯುಕ್ಯುಐಎ ಸಮುದಾಯದ ಬಗ್ಗೆ ಎಲ್ಲವನ್ನೂ ರೋಚಕಗೊಳಿಸಲಾಗುತ್ತದೆ, ಆದರೆ, ವಾಸ್ತವದಲ್ಲಿ ಈ ಸಮುದಾಯದ ಸ್ಥಿತಿಯು ಕಿಂಚಿತ್ತೂ ಬದಲಾಗಿಲ್ಲ.

ಕೊರೊನಾ ಕಾರಣದಿಂದ ವಿಧಿಸಲಾದ ಲಾಕ್‌ಡೌನ್‌ದಿಂದ ಇನ್ನಷ್ಟು ಸಂಕಷ್ಟಕ್ಕೊಳಗಾದ ಸಮುದಾಯದ ಚಿತ್ರಣ ಹೊರಬಂದಿದೆ. ಅಂತರಲಿಂಗಿ ಸಮುದಾಯದ ಜನರು ಜೀವನೋಪಾಯ ಕಳೆದುಕೊಂಡಿರುವುದು ವ್ಯಾಪಕವಾಗಿದೆ. ಸಾಂಪ್ರದಾಯಿಕ ಅಂತರಲಿಂಗಿಗಳಾದ ಹಿಜಡಾ ಮತ್ತು ಕಿನ್ನರ ಸಮುದಾಯದವರಿಗೆ ನಮ್ಮ ಬ್ರಾಹ್ಮಣ್ಯದ ಪಿತೃಪ್ರಧಾನ ವ್ಯವಸ್ಥೆಯಲ್ಲಿ ವಹಿಸಲಾದ ಕೆಲಸಗಳು ಈಗಾಗಲೇ ಮುಖ್ಯವಾಹಿನಿಯ ಸಮಾಜದಲ್ಲಿ ಅತ್ಯಂತ ಕಳಂಕಿತವಾದ ಕೆಲಸಗಳಾಗಿವೆ ಹಾಗೂ ಲಾಕ್‌ಡೌನ್ ಅವಧಿಯಲ್ಲಿ ಬಧಾಯಿ ಟೋಲಿ/ಮಾಂಗ್ತಿ ಮತ್ತು ಲೈಂಗಿಕ ವೃತ್ತಿಗಾಗಿ ನೃತ್ಯ ಮುಂತಾದ ಕೆಲಸಗಳು ಸಂಪೂರ್ಣವಾಗಿ ನಿಂತುಹೋಗಿವೆ.

ನಮ್ಮ ದೇಶದ ಪೊಲೀಸರು ಅಂತರಲಿಂಗಿ ಸಮುದಾಯದ ಶತ್ರುಗಳಂತೆ ವರ್ತಿಸಿದ್ದು, ಲಾಕ್‌ಡೌನ್‌ಅನ್ನು ಒಂದು ಸಾರ್ವಜನಿಕ ಆರೋಗ್ಯದ ವಿಷಯವಾಗಿ ಜಾರಿಗೊಳಿಸದೇ ಅದನ್ನು ದುಡಿಯುವ ವರ್ಗಕ್ಕೆ ಮತ್ತು ಅಂಚಿನಲ್ಲಿರುವ ಸಮುದಾಯಗಳನ್ನು ಹಿಂಸಿಸಲು ಒಂದು ನೆಪ ಮಾಡಿಕೊಂಡ ಹಾಗೆ ಕಾಣಿಸುತ್ತಿದೆ; ಈ ಸಮುದಾಯದವರು ತಮ್ಮ ಹೊಟ್ಟೆಪಾಡಿಗಾಗಿ ಹೊರಗೆ, ರಸ್ತೆಗೆ ಬರಲೇಬೇಕು. ಲೈಂಗಿಕ ವೃತ್ತಿ ಮತ್ತು ಭಿಕ್ಷಾಟನೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಈ ಲಾಕ್‌ಡೌನ್‌ಅನ್ನು ಒಂದು ಅಸ್ತ್ರವನ್ನಾಗಿ ಬಳಸಿದ್ದಾರೆ; ಹಾಗಾಗಿ ಈ ಸಮುದಾಯದವರನ್ನು ತಮ್ಮ ಜೀವನೋಪಾಯದಿಂದ ವಂಚಿತಗೊಳಿಸಿದ್ದಾರೆ ಹಾಗೂ ಅಂತರಲಿಂಗಿಗಳನ್ನು ಗುರಿಯಾಗಿಸಿ ಮಾಡಿದ ಹಿಂಸೆಯ ಪ್ರಮಾಣವು ಹೆಚ್ಚಾಗಿರುವುದು ಕಂಡುಬಂದಿದೆ.

ಮದುವೆ ಸಮಾರಂಭಗಳನ್ನು ಮತ್ತು ಬಾರ್‌ಗಳನ್ನು ನಿರ್ಬಂಧಿಸಿರುವುದರಿಂದ, ಅಲ್ಲಿಯ ಕೆಲಸವೂ ಇಲ್ಲವಾಗಿದೆ. ಆಹಾರ ಸಾಗಿಸುವ ಲಾರಿಗಳಲ್ಲಿ ಕೆಲಸ ಮಾಡುವ ಅಥವಾ ಟ್ಯಾಕ್ಸಿ ಚಾಲನೆ ಮಾಡುವ ಟ್ರಾನ್ಸ್‌ಪುರುಷರೂ ಅತ್ಯಂತ ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದರಿಸಬೇಕಾಗಿದೆ. ಹಾಗಾಗಿ ಸಂಕಷ್ಟದ ಸಮಯದಲ್ಲಿ ಮಾಡುವ ಸ್ವ ಉದ್ಯೋಗಕ್ಕೂ ಕುತ್ತು ಬಂದಿದೆ. ಔಪಚಾರಿಕ ಮತ್ತು ಅನೌಪಚಾರಿಕ ಈ ಎರಡೂ ವಲಯಗಳಲ್ಲಿ ವ್ಯಾಪಕ ತಾರತಮ್ಯ ಎದುರಿಸುವ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಸಂಕಷ್ಟದ ಸ್ವಉದ್ಯೋಗವೊಂದೇ ಹೊಟ್ಟೆ ತುಂಬಿಸುವ
ದಾರಿಯಾಗಿತ್ತು, ಅದರಿಂದಲೇ ಈ ಸಮುದಾಯ ಜೀವನ ಸಾಗಿಸುತ್ತಿದ್ದವು. ಈಗ ಅದಕ್ಕೂ ಕುತ್ತು ಬಂದಿದೆ.

PC : Gay Star News

ಈ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದ ಬಹಳಷ್ಟು ಟ್ರಾನ್ಸ್‌ಜೆಂಡರ್ ಮತ್ತು ಲೈಂಗಿಕ ಅಲ್ಪಸಂಖ್ಯಾತರು ಒಂದೋ ತಮ್ಮ ಜೈವಿಕ ಕುಟುಂಬಗಳೊಂದಿಗೆ ಅಥವಾ ತಮ್ಮ ಹಿಂಸಾತ್ಮಕ ಸಂಗಾತಿಗಳೊಂದಿಗೆ ಜೀವಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಹಾಗೂ ಅದರಿಂದಾಗಿ ಅನೇಕರು ಈ ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚಿನ ನಿಂದನೆ ಮತ್ತು ಹಿಂಸೆಯನ್ನು ಅನುಭವಿಸಿದ್ದಾರೆ. ಅನೇಕ ಲೈಂಗಿಕ ಅಲ್ಪಸಂಖ್ಯಾತ ಕುಟುಂಬಗಳು ಪರಸ್ಪರ ಪ್ರತ್ಯೇಕಗೊಂಡು, ತಮ್ಮ ಲಿಂಗ ಮತ್ತು ಲೈಂಗಿಕತೆಯನ್ನು ಒಪ್ಪಿಕೊಳ್ಳದ ಸ್ಥಳಗಳಲ್ಲಿ ವಾಸಿಸುವ ಪರಿಸ್ಥಿತಿ ಬಂದಿದೆ.

ಇದರೊಂದಿಗೆ ಅನೇಕ ಟ್ರಾನ್ಸ್‌ಜೆಂಡರ್ ಮತ್ತು ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಗಳಿಗೆ ದೈಹಿಕ ಡಿಸ್‌ಫೊರಿಯ ಹೆಚ್ಚಿರುವುದನ್ನು ಅನುಭವಿಸಿದ್ದಾರೆ- ಫಿಸಿಕಲ್ ಡಿಸ್‌ಫೊರಿಯ ಎಂದರೆ ಸ್ವಂತ ತನ್ನದೇ ದೇಹದೊಂದಿಗೆ ಗುರುತಿಸಿಕೊಳ್ಳುವದು ಕಷ್ಟ ಆಗುವುದು ಅಥವಾ ತುಂಬಾ ಅಂತರ ಅನುಭವಿಸುವುದು ಎನ್ನಬಹುದು. ಲಾಕ್‌ಡೌನ್‌ನಿಂದಾದ ಪ್ರತ್ಯೇಕಿಸುವಿಕೆ ಮತ್ತು ಗಮನವನ್ನು ಬೇರೆಡೆ ಹರಿಸಲು ದಾರಿ ಇಲ್ಲದ ಕಾರಣದಿಂದ ಹಲವಾರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ತಮ್ಮ ಲಿಂಗವನ್ನು ದೃಢೀಕರಿಸುವ ಆಪ್ತಸಮಾಲೋಚನೆಯ ಅಗತ್ಯ ಕಂಡುಬಂದಿತು ಹಾಗೂ ಹಾರ್ಮೋನ್ ಥೆರಪಿ ಮತ್ತು ಸರ್ಜರಿಗಳ ಅಗತ್ಯವೂ ಕಂಡುಬಂದಿದೆ. ಆದರೆ, ಕೋವಿಡ್ ಸಂಬಂಧಿತ ಆಸ್ಪತ್ರೆಗಳ ನಿಯಮಾವಳಿಗಳ ಕಾರಣದಿಂದ ಹೆಚ್ಚಿನ ಟ್ರಾನ್ಸ್ ವ್ಯಕ್ತಿಗಳಿಗೆ ಅತ್ಯಂತ ಅಗತ್ಯವಿರುವ ಸಮಯದಲ್ಲಿ, ಅವರ ಮಾನಸಿಕ ಆರೋಗ್ಯ ವ್ಯಾಪಕವಾಗಿ ಕುಸಿಯುತ್ತಿರುವ ಸಂದರ್ಭದಲ್ಲಿ ಲಿಂಗ ಸಂಬಂಧಿತ ಆರೈಕೆ ಸಿಗಲಿಲ್ಲ. ಅದಕ್ಕಿಂತ ದುಃಖದ ಸಂಗತಿಯೆಂದರೆ, ಎಚ್‌ಐವಿ ಸೋಂಕು ಹೊಂದಿರುವ ಲೈಂಗಿಕ ಅಲ್ಪಸಂಖ್ಯಾತರಿಗೆ ಕೋವಿಡ್ ಸೋಂಕು ತಗುಲಿದಾಗ ಅವರು ಪಟ್ಟ ಪಾಡು ಶೋಚನೀಯವಾಗಿತ್ತು. ಯಾವ ಆಸ್ಪತ್ರೆಗೆ ಹೋದರೂ ಅವರನ್ನು ಸೇರಿಸಿಕೊಳ್ಳಲಿಲ್ಲ ಹಾಗೂ ಅವರಲ್ಲಿ ಸಾವಿನ ಸಂಖ್ಯೆಯೂ ಗಣನೀಯವಾಗಿ ಹೆಚ್ಚಿತ್ತು.

ಜೂನ್ ತಿಂಗಳಲ್ಲಿ ಕಾರ್ಪೊರೇಟ್ ಜಗತ್ತು ಕೂಡ ಎಲ್‌ಜಿಬಿಟಿಕ್ಯುಕ್ಯುಐಎ ಸಮುದಾಯದ ಬಗ್ಗೆ ಸಾಂಸ್ಥಿಕ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತದೆ. ಆಗ ಆ ಕಾರ್ಯಕ್ರಮಗಳಲ್ಲಿ ಮಾತನಾಡಲು ಸಮುದಾಯದ ಭಾಷಣಕಾರರನ್ನು ಸಂಪರ್ಕಿಸಲಾಗುತ್ತದೆ. ಈ ವರ್ಷ ಲಾಕ್‌ಡೌನ್ ಕಾರಣದಿಂದ ಪ್ರೈಡ್ ತಿಂಗಳನ್ನು ಆಚರಿಸುವುದು ಕಷ್ಟವಾಗಿತ್ತು, ಆದರೆ ಸಾಮಾನ್ಯವಾಗಿ ಪ್ರೈಡ್‌ನ ಪರಿಕಲ್ಪನೆ ಏನು ಎಂದು ಎಲ್ಲರಿಗೆ ತಿಳಿಸಲು ಮಾಧ್ಯಮಗಳು ಮತ್ತು ಕಾರ್ಪೊರೇಟ್ ಜಗತ್ತು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಂದ ಉಚಿತ ದುಡಿಮೆಯನ್ನು ಬಳಸಿಕೊಳ್ಳುತ್ತಾರೆ, ಆದರೆ ಟ್ರಾನ್ಸ್ ವ್ಯಕ್ತಿಗಳ ಜೀವನದಲ್ಲಿ ಯಾವುದೇ ರಚನಾತ್ಮಕ ಬದಲಾವಣೆಗಳು ಆಗದೇ, ಅವರ ಜಗತ್ತು ಹಾಗೆಯೇ ಮುಂದುವರೆಯುತ್ತದೆ.

ತಾರತಮ್ಯ ವಿರೋಧಿ ಕಾನೂನುಗಳಿಲ್ಲದೆ, ಯಾವುದೇ ಸಾಮಾಜಿಕ ಸುರಕ್ಷತೆ ಮತ್ತು ಜೀವನೋಪಾಯದ ಖಾತ್ರಿ ಇಲ್ಲದೆ, ಆರೋಗ್ಯ ಸೇವೆ ಇಲ್ಲದೇ, ನಾಗರಿಕ ಹಕ್ಕುಗಳಿಲ್ಲದೆ ಹಾಗೂ ಎಲ್‌ಜಿಬಿಟಿಕ್ಯುಕ್ಯುಐಎ ವಿರೋಧಿ ಶಾಸನಾತ್ಮಕ ಕ್ರಮಗಳು ಹೆಚ್ಚುತ್ತಿರುವ ಸಮಯದಲ್ಲಿ ಎಲ್‌ಜಿಬಿಟಿಕ್ಯುಕ್ಯುಐಎ ಸಮುದಾಯಗಳಾದ ನಾವು ಆತ್ಮಗೌರವದಿಂದಲೇ ನಮ್ಮ ಮೇಲೆ ಎಸೆಯಲಾಗುತ್ತಿರುವ ಸಾಮಾಜಿಕ ಕಳಂಕವನ್ನು ಎದುರಿಸಬಲ್ಲೆವು ಎಂಬ ಆಸೆಯೊಂದಿಗೆ ಹೆಜ್ಜೆಗಳನ್ನು ಮುಂದಿಡುತ್ತಿದ್ದೇವೆ.

ಕಾರ್ತಿಕ್ ಬಿಟ್ಟು

ಕಾರ್ತಿಕ್ ಬಿಟ್ಟು
ಕರ್ನಾಟಕದ ಒಂದು ತಮಿಳು ಕುಟುಂಬದಲ್ಲಿ ಹುಟ್ಟಿ, ಬೆಂಗಳೂರು, ಹೈದರಾಬಾದ್ ಮತ್ತು ಹರಿಯಾಣದಲ್ಲಿ ಕೆಲಸ ಮಾಡಿದ್ದಾರೆ. ಅನೇಕ ಸಮುದಾಯಗಳ ಚಳವಳಿಗಳಲ್ಲಿ ತೊಡಗಿಸಿಕೊಂಡಿರುವ ಬಿಟ್ಟು ನಮ್ಮ ಸಮಯದ ಒಬ್ಬ ಇಂಟಲೆಕ್ಚುವಲ್ ಆಕ್ಟಿವಿಸ್ಟ್.

ಕನ್ನಡಕ್ಕೆ: ರಾಜಶೇಖರ್ ಅಕ್ಕಿ


ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ ನರ್ತಕಿ… 

ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...