Homeಆರೋಗ್ಯಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

- Advertisement -
- Advertisement -

ಕೋವಿಡ್-19 ಪಿಡುಗಿಗೆ ಉಪಶಮನವನ್ನು ಕಂಡುಹಿಡಿಯಲು ಜಗತ್ತು ಹೆಣಗಾಡುತ್ತಿರುವಂತೆಯೇ ವಿಶ್ವದಾದ್ಯಂತ ಜನರು ರೋಗ ನಿರೋಧಕತೆ ಮತ್ತು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಅದರ ಮಹತ್ವವನ್ನು ಕುರಿತು ಮಾತನಾಡುತ್ತಿದ್ದಾರೆ. ಆಹಾರ, ಗಿಡಮೂಲಿಕೆಗಳು, ಮತ್ತು ಸಸ್ಯ ಜನ್ಯವಲ್ಲದ ಉತ್ಪನ್ನಗಳು ಮತ್ತು ಔಷಧಿಗಳ ಕುರಿತ ಕುತೂಹಲ ಹೆಚ್ಚಾಗಿದೆ. ವೈದ್ಯಕೀಯದ ಬೇರೆಬೇರೆ ಪದ್ಧತಿಗಳಿಗೆ ಸೇರಿದ ಆರೋಗ್ಯ ತಜ್ಞರು ಉತ್ತಮವಾದ ರೋಗ ನಿರೋಧಕ ಶಕ್ತಿ ಹೊಂದಿರುವುವ ಅಗತ್ಯವನ್ನು ಒತ್ತಿಹೇಳಿದ್ದು, ಅದು ಈ ರೋಗದ ಪರಿಣಾಮಗಳನ್ನು ಕಡಿಮೆ ಮಾಡಬಹುದು ಮತ್ತು ಶೀಘ್ರ ಗುಣಮುಖರಾಗುವಲ್ಲಿ ನೆರವಾಗಬಹುದು.

“ಆಯುಷ್” ಸಚಿವಾಲಯವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗಬಲ್ಲ ಗಿಡಮೂಲಿಕೆಗಳು, ಮತ್ತು ಸಸ್ಯ ಜನ್ಯವಲ್ಲದ ಉತ್ಪನ್ನಗಳ ಕುರಿತು ಒಂದಕ್ಕಿಂತ ಹೆಚ್ಚು ಸಲಹೆಗಳನ್ನು ಬಿಡುಗಡೆ ಮಾಡಿದೆ. ಆಯುರ್ವೇದವು ಅನಾದಿ ಕಾಲದಿಂದಲೂ ತನ್ನದೇ ಭಾಷೆಯಲ್ಲಿ ರೋಗ ನಿರೋಧಕ ಶಕ್ತಿಯ ಕುರಿತು ಮಾತನಾಡುತ್ತಲೇ ಬಂದಿದೆ ಮತ್ತು ಈ ಕುರಿತು ಶ್ರೀಮಂತವಾದ ಪರಿಕಲ್ಪನೆಗಳನ್ನು ಹೊಂದಿದೆ. ಇದು ರೋಗ ನಿರೋಧಕ ಶಕ್ತಿಯ ಕುರಿತು ಮಾತನಾಡಲು ಸೂಕ್ತ ಸಮಯ ಎಂದು ನನ್ನ ಭಾವನೆ.

ಆಯುರ್ವೇದದಲ್ಲಿ ರೋಗ ನಿರೋಧಕ ಶಕ್ತಿಯನ್ನು ಉಲ್ಲೇಖಿಸಲು ವ್ಯಾಧಿ ಕ್ಷಮತ್ವ ಎಂಬ ಪದವನ್ನು ಬಳಸಲಾಗಿದೆ. ರೋಗ ನಿರೋಧಕ ಶಕ್ತಿ ಎಂದರೆ ದೇಹದ ಒಳಗೆ ಪ್ರವೇಶಿಸುವ ಅಪಾಯಕಾರಿ ಸೂಕ್ಷ್ಮಾಣು ಜೀವಿಗಳನ್ನು ತಡೆಗಟ್ಟಿ, ರೋಗ ಬರುವುದನ್ನು ತಡೆಗಟ್ಟುವ ಸಾಮರ್ಥ್ಯ (ವ್ಯಾಧಿ ಉತ್ಪಾದಕ ಪ್ರತಿಬಂಧಕತ್ವಂ) ಮತ್ತು ಈಗಾಗಲೇ ಇರುವ ರೋಗವನ್ನು ಎದುರಿಸಿ ಹೋಗಲಾಡಿಸುವ ಸಾಮರ್ಥ್ಯ (ವ್ಯಾಧಿಬಲ ವಿರೋಧಿತ್ವಂ). ರೋಗ ನಿರೋಧಕ ಶಕ್ತಿಯು ಮೂರು ಮಹತ್ವದ ಅಂಶಗಳನ್ನು ಒಳಗೊಂಡಿದೆ. ಅವುಗಳೆಂದರೆ, ಸಹಜ ಬಲ ಅಂದರೆ, ತನ್ನಿಂದ ತಾನಾಗಿಯೇ ದೇಹದಲ್ಲಿ ಇರುವ ಶಕ್ತಿ ‘ಸಹಜ ಬಲ’, ‘ಯುಕ್ತಿಜ ಬಲ’ ಅಂದರೆ ಹೊಂದಾಣಿಕೆ ಅಥವಾ ಪಡೆದುಕೊಂಡ ಶಕ್ತಿ ಮತ್ತು ‘ಕಾಲಜ ಬಲ’ ಅಂದರೆ ಸಮಯ, ವಯಸ್ಸು ಮತ್ತು ಋತುಮಾನಗಳಿಗೆ ನಿರ್ದಿಷ್ಟವಾದ ರೋಗ ನಿರೋಧಕ ಶಕ್ತಿ.

ಸಹಜ ಬಲವು ದೇಹದ ಮೂಲ ವಂಶವಾಹಿಯಲ್ಲಿಯೇ ಹೊಂದಿರುವ ಶಕ್ತಿಯಾಗಿದ್ದು, ರೋಗಗಳ ವಿರುದ್ಧ ಹೋರಾಡಲು ನೆರವಾಗುತ್ತದೆ. ಇದರ ಪರಿಣಾಮವಾಗಿ ನಿರ್ದಿಷ್ಟವಾಗಿ ಕೆಲವು ಭೌಗೋಳಿಕ ಪರಿಸರಗಳಲ್ಲಿ ವಾಸಿಸುವ ಕೆಲವು ಜನಾಂಗಗಳು, ಕುಟುಂಬಗಳು ಮತ್ತು ಜನರಿಗೆ ನಿರ್ದಿಷ್ಟವಾದ ಕೆಲವು ಸೋಂಕು ರೋಗಗಳು  ತಗಲುವುದಿಲ್ಲ. ಈ ರೀತಿಯಲ್ಲಿ ನೈಸರ್ಗಿಕವಾಗಿ ಅಂತರ್ಗತವಾಗಿರುವ ರೋಗ ನಿರೋಧಕ ಶಕ್ತಿಯಿಂದ ಕೆಲವು ವ್ಯಕ್ತಿಗಳಿಗೆ ಅಥವಾ ಸಮುದಾಯಗಳಿಗೆ ನಿರ್ದಿಷ್ಟವಾದ ರೋಗಾಣುಗಳನ್ನು ಎದುರಿಸುವ ಸಾಮರ್ಥ್ಯ ಇರುತ್ತದೆ. ಅನಿರ್ದಿಷ್ಟವಾದ ಅಂತರ್ಗತ ರೋಗ ನಿರೋಧಕ ಶಕ್ತಿಯು ಎಲ್ಲಾ ಸೋಂಕುಗಳ ವಿರುದ್ಧ ರಕ್ಷಣೆಯನ್ನು ಒದಗಿಸುತ್ತದೆ.

ಯುಕ್ತಿಜ ಬಲವು ಪೌಷ್ಟಿಕ ಆಹಾರ, ನಿಯಮಿತ ವ್ಯಾಯಾಮ ಮತ್ತು ಶಿಸ್ತಿನ ಜೀವನ ಶೈಲಿಯಿಂದ ಬರುತ್ತದೆ. ಈ ರೀತಿಯ ರೋಗ ನಿರೋಧಕ ಶಕ್ತಿಯನ್ನು ಎರಡು ರೀತಿಯಾಗಿ ವಿಂಗಡಿಸಬಹುದು. ಒಂದು ಯಾವುದೇ ರೋಗಾಣುವಿನ ಆಕಸ್ಮಿಕ ಸಂಪರ್ಕದಿಂದ ಸಹಜವಾಗಿ ಉಂಟಾಗುವ ರೋಗ ನಿರೋಧಕ ಶಕ್ತಿ ಮತ್ತು ಲಸಿಕೆಗಳ ಮೂಲಕ ಉದ್ದೇಶಪೂರ್ವಕವಾಗಿ ಪಡೆದುಕೊಂಡ ರೋಗ ನಿರೋಧಕ ಶಕ್ತಿ.

ಕಾಲಜ ಬಲವು ನಿರ್ದಿಷ್ಟ ವಯಸ್ಸು, ಸಮಯ ಮತ್ತು ಕಾಲಮಾನವನ್ನು ಹೊಂದಿಕೊಂಡು ಪಡೆಯುವಂತದ್ದು. ಐದು ವರ್ಷಗಳಿಗಿಂತ ಕಡಿಮೆ ವಯಸ್ಸಿನವರು ಮತ್ತು 60 ವರ್ಷಗಳಿಗಿಂತ ಹೆಚ್ಚು ವಯಸ್ಸಿನವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅವರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಆ ಕಾರಣದಿಂದಲೇ ಈ ವಯೋವರ್ಗದ ಮತ್ತು ಹೃದಯ ಖಾಯಿಲೆ, ಕಿಡ್ನಿ ಸಮಸ್ಯೆ, ಸಕ್ಕರೆ ಕಾಯಿಲೆ, ರಕ್ತದ ಅತಿಯೊತ್ತಡ ಇತ್ಯಾದಿ ಸಮಸ್ಯೆ ಇರುವವರಿಗೆ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತಾದ್ದರಿಂದ ಸುರಕ್ಷಿತತೆ ಮತ್ತು ಕಾಳಜಿಯ ಕುರಿತು ಕೊರೋನ ಸಂದರ್ಭದಲ್ಲಿ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಈಗ ನಾವು ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದಕ್ಕೆ ಕೆಲವು ಸಾಮಾನ್ಯ ಕಾರಣಗಳನ್ನು ನೋಡೋಣ.

ಅತ್ಯಲ್ಪ ನಿದ್ರಾ (ನಿದ್ರಾಹೀನತೆ): ನಿದ್ರಾಕಾಲದಲ್ಲಿ ನಮ್ಮ ರೋಗನಿರೋಧಕ ವ್ಯವಸ್ಥೆಯು ಸೈಟೋಕಿನ್ (cytokine) ಎಂಬ ಪ್ರೊಟೀನನ್ನು ಬಿಡುಗಡೆ ಮಾಡುತ್ತದೆ. ಇವುಗಳಲ್ಲಿ ಕೆಲವು ನಿದ್ದೆಯನ್ನು ಉತ್ತೇಜಿಸುತ್ತವೆ. ಅವುಗಳಲ್ಲಿ ಕೆಲವು ಸೈಟೋಕಿನ್‌ಗಳು ನಿದ್ದೆಯನ್ನು ಉತ್ತೇಜಿಸುವುದಲ್ಲದೆ, ಹೆಚ್ಚುವರಿಯಾಗಿ ಸೋಂಕು ರೋಗವನ್ನು ಉಂಟುಮಾಡುವ ರೋಗಾಣುಗಳ ವಿರುದ್ಧ ಹೋರಾಡುತ್ತವೆ. ನಿದ್ರಾಹೀನತೆಯು ಇಂತಹ ಸೈಟೋಕಿನ್‌ಗಳ ಉತ್ಪಾದನೆಯನ್ನು ಕಡಿಮೆ ಮಾಡಬಹುದು. ಆದುದರಿಂದ ನಿದ್ರೆಯನ್ನು ಆಯುರ್ವೇದದಲ್ಲಿ ಆರೋಗ್ಯದ ಮೂರು ಅತೀ ಮುಖ್ಯ ಆಧಾರ ಸ್ತಂಭಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಅತಿ ಮಧುರ ಆಹಾರ (ಶುದ್ಧೀಕೃತ ಸಕ್ಕರೆಯ ಹೆಚ್ಚು ಬಳಕೆ): ಆಹಾರದಲ್ಲಿರುವ ಶುದ್ಧೀಕೃತ ಸಕ್ಕರೆಯ ಅಂಶವು ರೋಗ ನಿರೋಧಕ ಶಕ್ತಿಯ ಮೇಲೆ ಮತ್ತು ಆರೋಗ್ಯದ ಮೇಳೆ ಪರಿಣಾಮ ಉಂಟುಮಾಡುತ್ತದೆ. ದೇಹದ ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ಬಿಳಿ ರಕ್ತಕಣಗಳ ಕಾರ್ಯಕ್ಷಮತೆಯನ್ನು ಹೆಚ್ಚುವರಿ ಸಕ್ಕರೆಯು ಕುಂಠಿತಗೊಳಿಸುತ್ತದೆ.

ಅತಿ ಮದ್ಯಪಾನ (ಆಲ್ಕೋಹಾಲ್ ಸೇವನೆ): ಮದ್ಯಪಾನ ಮತ್ತು ರೋಗ ನಿರೋಧಕ ಶಕ್ತಿಯ ಮೇಲೆ ದುಷ್ಪರಿಣಾಮದ ನಡುವೆ ವ್ಯತಿರಿಕ್ತವಾದ ಸಂಬಂಧ ಇದೆಯೆಂದು ಜಗತ್ತಿನಾದ್ಯಂತ ವೈದ್ಯರು ಗುರುತಿಸಿದ್ದಾರೆ. ನ್ಯುಮೋನಿಯಾದಂತಹ ರೋಗಗಳಿಗೆ ತುತ್ತಾಗುವುದು, ಶ್ವಾಸಕೋಶದ ತೊಂದರೆಗಳು, ಸಾಂಕ್ರಾಮಿಕ ರೋಗಗಳಿಂದ ನಿಧಾನ ಮತ್ತು ಅಪೂರ್ಣ ಚೇತರಿಕೆ, ಯಕೃತ್ತಿನ ತೊಂದರೆಗಳು ಇತ್ಯಾದಿಗಳಿಗೆ ಮದ್ಯಪಾನ ಕಾರಣವಾಗಬಹುದು ಎಂದು ಸಂಶೋಧನೆಗಳು ತೋರಿಸಿಕೊಟ್ಟಿವೆ. ಮದ್ಯಪಾನವು ಹಲವಾರು ಸಂಕೀರ್ಣ ರೀತಿಗಳಲ್ಲಿ ರೋಗಗಳನ್ನು ನಿರೋಧಿಸುವ ದೇಹದ ಸ್ಥಿರತೆಯನ್ನು ದುರ್ಬಲಗೊಳಿಸುವ ಬಗ್ಗೆ ಸಾಕ್ಷ್ಯಾಧಾರಗಳು ಇವೆ.

ಧೂಮಪಾನ (ಸಿಗರೆಟ್ ಸೇವನೆ): ಇದು ಅನೇಕ ರೋಗಗಳ ಜೊತೆ ನೇರ ಸಂಬಂಧ ಹೊಂದಿದೆ ಮತ್ತು ಅಂತರ್ಗತ ಮತ್ತು ಪಡೆದುಕೊಳ್ಳುವ ರೋಗ ನಿರೋಧಕ ಶಕ್ತಿಯ ಮೇಲೆ ನೇರ ಪರಿಣಾಮವನ್ನು ಉಂಟುಮಾಡುತ್ತದೆ. ಧೂಮಪಾನವು ಬಿಳಿ ರಕ್ತಕಣಗಳ ಕಾರ್ಯಸಾಮರ್ಥ್ಯವನ್ನು ಕುಗ್ಗಿಸುವ ಮೂಲಕ ಸಾಂಕ್ರಾಮಿಕ ರೋಗಗಳ ವಿರುದ್ಧ ರಕ್ಷಣೆಯನ್ನು ಕುಂಠಿತಗೊಳಿಸುತ್ತದೆ.

ಅತಿ ವ್ಯಾಯಾಮ: ಅತಿಯಾದ ವ್ಯಾಯಾಮವು ಕೂಡಾ ದೇಹದ ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುವ ಕುರಿತು ಸಾಕ್ಷ್ಯಾಧಾರಗಳು ಇವೆ. ಕೋರ್ಟಿಸೋಲ್ ಮತ್ತು ಅಡ್ರಿನಾಲಿನ್ (Cortisol and adrenaline) ಎಂಬ ಭಾವನೆಗಳಿಗೆ ಸಂಬಂಧಿಸಿದ ಹಾರ್ಮೋನ್‌ಗಳು ರಕ್ತದ ಒತ್ತಡ ಮತ್ತು ಕೊಲೆಸ್ಟ್ರಾಲ್ ಪ್ರಮಾಣವನ್ನು ಹೆಚ್ಚಿಸಿ ರೋಗ ನಿರೋಧಕ ಶಕ್ತಿಯನ್ನು ಕುಂದಿಸುತ್ತವೆ ಎಂಬುದಕ್ಕೂ ಸಾಕ್ಷ್ಯಾಧಾರಗಳು ಇವೆ.

ಆದುದರಿಂದಲೇ, ಅತಿ ವ್ಯಾಯಾಮ ಮಾಡುವ ಎಲ್ಲಾ ಜನರು ಮತ್ತು ಕ್ರೀಡಾಳುಗಳು ದೇಹದ ರೋಗ ನಿರೋಧಕ ಶಕ್ತಿ ಚೇತರಿಸಿಕೊಳ್ಳುವ ಸಲುವಾಗಿ ಸಾಕಷ್ಟು ವಿಶ್ರಾಂತಿ ಪಡೆಯಬೇಕು ಎಂದು ಸಲಹೆ ಮಾಡಲಾಗುತ್ತದೆ.

ಮನೋದ್ವೇಗ (ಒತ್ತಡ): ಮಾನಸಿಕ ಒತ್ತಡವೂ ಖಾಯಿಲೆ ತರುವ ರೋಗಾಣುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಒತ್ತಡದ ಹಾರ್ಮೋನ್ ಕಾರ್ಟಿಕೋಸ್ಟೆರಾಯ್ಡ್, ಲಿಂಫೋಸೈಟ್ ಗಳ ಸಂಖ್ಯೆಯನ್ನು ಕಡಿಮೆ ಮಾಡಿ ರೋಗಾಣು ನಿರೋಧಕ ಶಕ್ತಿಯನ್ನು ಕುಂದಿಸುತ್ತದೆ.

ವ್ಯಾಧಿ ಸಂಕರ (ಬೇರೆ ಇತರ ರೋಗಗಳು ಹೊಂದಿರುವುದು): ಇದೆಂದರೆ, ಒಂದು ಸ್ಥಿತಿಯಲ್ಲಿ ಆಗಲೇ ಇದ್ದು ಬೇರೆ ಕಾಯಿಲೆಯಿಂದ ಉಲ್ಬಣಗೊಳ್ಳುವ ಸಾಧ್ಯತೆ. ಇದು ದೈಹಿಕವಾಗಿಯೂ ಇರಬಹುದು, ಅಥವಾ ಮಾನಸಿಕವಾಗಿಯೂ ಇರಬಹುದು. ಇವುಗಳಲ್ಲಿ ಹೃದಯ ಖಾಯಿಲೆ, ಕಿಡ್ನಿ, ಸಕ್ಕರೆ ಕಾಯಿಲೆ, ರಕ್ತದ ಅತಿಯೊತ್ತಡ, ಕ್ಯಾನ್ಸರ್, ಎಚ್ಐವಿ/ಏಡ್ಸ್ ಮುಂತಾದ ಕಾಯಿಲೆಗಳು ಸೇರಿವೆ. ಹೆಚ್ಚು ವಯಸ್ಸಾದವರಲ್ಲಿ ಇವು ಹೆಚ್ಚಾಗಿ ಇರುವುದರಿಂದ ಸಹಜವಾಗಿಯೇ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ.

ಅನ್ಯ ಕಾರಣ: ಜನರು ಅಪೌಷ್ಟಿಕತೆ, ಅಪಾಯಕಾರಿ ರಾಸಾಯನಿಕಗಳ ಜೊತೆಗೆ ನಿರಂತರವಾಗಿ ಕೆಲಸ ಮಾಡುವುದು, ಮೂಲಭೂತ ಆರೋಗ್ಯ ಸೌಕರ್ಯಗಳು ಇಲ್ಲದಿರುವುದು ಇತ್ಯಾದಿ ಕಾರಣಗಳಿಂದ ಕೂಡಾ ಸೋಂಕು ರೋಗಗಳಿಗೆ ಸುಲಭದ ತುತ್ತಾಗಬಹುದು. ಏಕೆಂದರೆ, ಅವರ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಮತ್ತು ಅವರು ಸಾಮಾನ್ಯವಾಗಿ ಸಮಾಜದ ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲ ಮತ್ತು ಕಡೆಗಣಿಸಲ್ಪಟ್ಟ ಜಾತಿ, ವರ್ಗಗಳಿಗೆ ಸೇರಿರುತ್ತಾರೆ ಎಂಬುದು ಕೂಡಾ ನಿಜ.

ಡಾ. ಮಾನಸ ಎಸ್, ಆಯುರ್ವೇದ ವೈದ್ಯರು

– ಕನ್ನಡಕ್ಕೆ: ನಿಖಿಲ್ ಕೋಲ್ಪೆ

ಇದನ್ನೂ ಓದಿ:

ಪತಂಜಲಿ ಕೊರೊನಾ ಔಷಧಿ: ಆಯುರ್ವೇದ ವೈದ್ಯಶಾಸ್ತ್ರಕ್ಕೆ ಮಸಿ ಬಳಿಯುವ ಪ್ರಯತ್ನ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...