Homeಆರೋಗ್ಯಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

- Advertisement -
- Advertisement -

ಕೋವಿಡ್-19 ಪಿಡುಗಿಗೆ ಉಪಶಮನವನ್ನು ಕಂಡುಹಿಡಿಯಲು ಜಗತ್ತು ಹೆಣಗಾಡುತ್ತಿರುವಂತೆಯೇ ವಿಶ್ವದಾದ್ಯಂತ ಜನರು ರೋಗ ನಿರೋಧಕತೆ ಮತ್ತು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಅದರ ಮಹತ್ವವನ್ನು ಕುರಿತು ಮಾತನಾಡುತ್ತಿದ್ದಾರೆ. ಆಹಾರ, ಗಿಡಮೂಲಿಕೆಗಳು, ಮತ್ತು ಸಸ್ಯ ಜನ್ಯವಲ್ಲದ ಉತ್ಪನ್ನಗಳು ಮತ್ತು ಔಷಧಿಗಳ ಕುರಿತ ಕುತೂಹಲ ಹೆಚ್ಚಾಗಿದೆ. ವೈದ್ಯಕೀಯದ ಬೇರೆಬೇರೆ ಪದ್ಧತಿಗಳಿಗೆ ಸೇರಿದ ಆರೋಗ್ಯ ತಜ್ಞರು ಉತ್ತಮವಾದ ರೋಗ ನಿರೋಧಕ ಶಕ್ತಿ ಹೊಂದಿರುವುವ ಅಗತ್ಯವನ್ನು ಒತ್ತಿಹೇಳಿದ್ದು, ಅದು ಈ ರೋಗದ ಪರಿಣಾಮಗಳನ್ನು ಕಡಿಮೆ ಮಾಡಬಹುದು ಮತ್ತು ಶೀಘ್ರ ಗುಣಮುಖರಾಗುವಲ್ಲಿ ನೆರವಾಗಬಹುದು.

“ಆಯುಷ್” ಸಚಿವಾಲಯವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗಬಲ್ಲ ಗಿಡಮೂಲಿಕೆಗಳು, ಮತ್ತು ಸಸ್ಯ ಜನ್ಯವಲ್ಲದ ಉತ್ಪನ್ನಗಳ ಕುರಿತು ಒಂದಕ್ಕಿಂತ ಹೆಚ್ಚು ಸಲಹೆಗಳನ್ನು ಬಿಡುಗಡೆ ಮಾಡಿದೆ. ಆಯುರ್ವೇದವು ಅನಾದಿ ಕಾಲದಿಂದಲೂ ತನ್ನದೇ ಭಾಷೆಯಲ್ಲಿ ರೋಗ ನಿರೋಧಕ ಶಕ್ತಿಯ ಕುರಿತು ಮಾತನಾಡುತ್ತಲೇ ಬಂದಿದೆ ಮತ್ತು ಈ ಕುರಿತು ಶ್ರೀಮಂತವಾದ ಪರಿಕಲ್ಪನೆಗಳನ್ನು ಹೊಂದಿದೆ. ಇದು ರೋಗ ನಿರೋಧಕ ಶಕ್ತಿಯ ಕುರಿತು ಮಾತನಾಡಲು ಸೂಕ್ತ ಸಮಯ ಎಂದು ನನ್ನ ಭಾವನೆ.

ಆಯುರ್ವೇದದಲ್ಲಿ ರೋಗ ನಿರೋಧಕ ಶಕ್ತಿಯನ್ನು ಉಲ್ಲೇಖಿಸಲು ವ್ಯಾಧಿ ಕ್ಷಮತ್ವ ಎಂಬ ಪದವನ್ನು ಬಳಸಲಾಗಿದೆ. ರೋಗ ನಿರೋಧಕ ಶಕ್ತಿ ಎಂದರೆ ದೇಹದ ಒಳಗೆ ಪ್ರವೇಶಿಸುವ ಅಪಾಯಕಾರಿ ಸೂಕ್ಷ್ಮಾಣು ಜೀವಿಗಳನ್ನು ತಡೆಗಟ್ಟಿ, ರೋಗ ಬರುವುದನ್ನು ತಡೆಗಟ್ಟುವ ಸಾಮರ್ಥ್ಯ (ವ್ಯಾಧಿ ಉತ್ಪಾದಕ ಪ್ರತಿಬಂಧಕತ್ವಂ) ಮತ್ತು ಈಗಾಗಲೇ ಇರುವ ರೋಗವನ್ನು ಎದುರಿಸಿ ಹೋಗಲಾಡಿಸುವ ಸಾಮರ್ಥ್ಯ (ವ್ಯಾಧಿಬಲ ವಿರೋಧಿತ್ವಂ). ರೋಗ ನಿರೋಧಕ ಶಕ್ತಿಯು ಮೂರು ಮಹತ್ವದ ಅಂಶಗಳನ್ನು ಒಳಗೊಂಡಿದೆ. ಅವುಗಳೆಂದರೆ, ಸಹಜ ಬಲ ಅಂದರೆ, ತನ್ನಿಂದ ತಾನಾಗಿಯೇ ದೇಹದಲ್ಲಿ ಇರುವ ಶಕ್ತಿ ‘ಸಹಜ ಬಲ’, ‘ಯುಕ್ತಿಜ ಬಲ’ ಅಂದರೆ ಹೊಂದಾಣಿಕೆ ಅಥವಾ ಪಡೆದುಕೊಂಡ ಶಕ್ತಿ ಮತ್ತು ‘ಕಾಲಜ ಬಲ’ ಅಂದರೆ ಸಮಯ, ವಯಸ್ಸು ಮತ್ತು ಋತುಮಾನಗಳಿಗೆ ನಿರ್ದಿಷ್ಟವಾದ ರೋಗ ನಿರೋಧಕ ಶಕ್ತಿ.

ಸಹಜ ಬಲವು ದೇಹದ ಮೂಲ ವಂಶವಾಹಿಯಲ್ಲಿಯೇ ಹೊಂದಿರುವ ಶಕ್ತಿಯಾಗಿದ್ದು, ರೋಗಗಳ ವಿರುದ್ಧ ಹೋರಾಡಲು ನೆರವಾಗುತ್ತದೆ. ಇದರ ಪರಿಣಾಮವಾಗಿ ನಿರ್ದಿಷ್ಟವಾಗಿ ಕೆಲವು ಭೌಗೋಳಿಕ ಪರಿಸರಗಳಲ್ಲಿ ವಾಸಿಸುವ ಕೆಲವು ಜನಾಂಗಗಳು, ಕುಟುಂಬಗಳು ಮತ್ತು ಜನರಿಗೆ ನಿರ್ದಿಷ್ಟವಾದ ಕೆಲವು ಸೋಂಕು ರೋಗಗಳು  ತಗಲುವುದಿಲ್ಲ. ಈ ರೀತಿಯಲ್ಲಿ ನೈಸರ್ಗಿಕವಾಗಿ ಅಂತರ್ಗತವಾಗಿರುವ ರೋಗ ನಿರೋಧಕ ಶಕ್ತಿಯಿಂದ ಕೆಲವು ವ್ಯಕ್ತಿಗಳಿಗೆ ಅಥವಾ ಸಮುದಾಯಗಳಿಗೆ ನಿರ್ದಿಷ್ಟವಾದ ರೋಗಾಣುಗಳನ್ನು ಎದುರಿಸುವ ಸಾಮರ್ಥ್ಯ ಇರುತ್ತದೆ. ಅನಿರ್ದಿಷ್ಟವಾದ ಅಂತರ್ಗತ ರೋಗ ನಿರೋಧಕ ಶಕ್ತಿಯು ಎಲ್ಲಾ ಸೋಂಕುಗಳ ವಿರುದ್ಧ ರಕ್ಷಣೆಯನ್ನು ಒದಗಿಸುತ್ತದೆ.

ಯುಕ್ತಿಜ ಬಲವು ಪೌಷ್ಟಿಕ ಆಹಾರ, ನಿಯಮಿತ ವ್ಯಾಯಾಮ ಮತ್ತು ಶಿಸ್ತಿನ ಜೀವನ ಶೈಲಿಯಿಂದ ಬರುತ್ತದೆ. ಈ ರೀತಿಯ ರೋಗ ನಿರೋಧಕ ಶಕ್ತಿಯನ್ನು ಎರಡು ರೀತಿಯಾಗಿ ವಿಂಗಡಿಸಬಹುದು. ಒಂದು ಯಾವುದೇ ರೋಗಾಣುವಿನ ಆಕಸ್ಮಿಕ ಸಂಪರ್ಕದಿಂದ ಸಹಜವಾಗಿ ಉಂಟಾಗುವ ರೋಗ ನಿರೋಧಕ ಶಕ್ತಿ ಮತ್ತು ಲಸಿಕೆಗಳ ಮೂಲಕ ಉದ್ದೇಶಪೂರ್ವಕವಾಗಿ ಪಡೆದುಕೊಂಡ ರೋಗ ನಿರೋಧಕ ಶಕ್ತಿ.

ಕಾಲಜ ಬಲವು ನಿರ್ದಿಷ್ಟ ವಯಸ್ಸು, ಸಮಯ ಮತ್ತು ಕಾಲಮಾನವನ್ನು ಹೊಂದಿಕೊಂಡು ಪಡೆಯುವಂತದ್ದು. ಐದು ವರ್ಷಗಳಿಗಿಂತ ಕಡಿಮೆ ವಯಸ್ಸಿನವರು ಮತ್ತು 60 ವರ್ಷಗಳಿಗಿಂತ ಹೆಚ್ಚು ವಯಸ್ಸಿನವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅವರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಆ ಕಾರಣದಿಂದಲೇ ಈ ವಯೋವರ್ಗದ ಮತ್ತು ಹೃದಯ ಖಾಯಿಲೆ, ಕಿಡ್ನಿ ಸಮಸ್ಯೆ, ಸಕ್ಕರೆ ಕಾಯಿಲೆ, ರಕ್ತದ ಅತಿಯೊತ್ತಡ ಇತ್ಯಾದಿ ಸಮಸ್ಯೆ ಇರುವವರಿಗೆ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತಾದ್ದರಿಂದ ಸುರಕ್ಷಿತತೆ ಮತ್ತು ಕಾಳಜಿಯ ಕುರಿತು ಕೊರೋನ ಸಂದರ್ಭದಲ್ಲಿ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಈಗ ನಾವು ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದಕ್ಕೆ ಕೆಲವು ಸಾಮಾನ್ಯ ಕಾರಣಗಳನ್ನು ನೋಡೋಣ.

ಅತ್ಯಲ್ಪ ನಿದ್ರಾ (ನಿದ್ರಾಹೀನತೆ): ನಿದ್ರಾಕಾಲದಲ್ಲಿ ನಮ್ಮ ರೋಗನಿರೋಧಕ ವ್ಯವಸ್ಥೆಯು ಸೈಟೋಕಿನ್ (cytokine) ಎಂಬ ಪ್ರೊಟೀನನ್ನು ಬಿಡುಗಡೆ ಮಾಡುತ್ತದೆ. ಇವುಗಳಲ್ಲಿ ಕೆಲವು ನಿದ್ದೆಯನ್ನು ಉತ್ತೇಜಿಸುತ್ತವೆ. ಅವುಗಳಲ್ಲಿ ಕೆಲವು ಸೈಟೋಕಿನ್‌ಗಳು ನಿದ್ದೆಯನ್ನು ಉತ್ತೇಜಿಸುವುದಲ್ಲದೆ, ಹೆಚ್ಚುವರಿಯಾಗಿ ಸೋಂಕು ರೋಗವನ್ನು ಉಂಟುಮಾಡುವ ರೋಗಾಣುಗಳ ವಿರುದ್ಧ ಹೋರಾಡುತ್ತವೆ. ನಿದ್ರಾಹೀನತೆಯು ಇಂತಹ ಸೈಟೋಕಿನ್‌ಗಳ ಉತ್ಪಾದನೆಯನ್ನು ಕಡಿಮೆ ಮಾಡಬಹುದು. ಆದುದರಿಂದ ನಿದ್ರೆಯನ್ನು ಆಯುರ್ವೇದದಲ್ಲಿ ಆರೋಗ್ಯದ ಮೂರು ಅತೀ ಮುಖ್ಯ ಆಧಾರ ಸ್ತಂಭಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಅತಿ ಮಧುರ ಆಹಾರ (ಶುದ್ಧೀಕೃತ ಸಕ್ಕರೆಯ ಹೆಚ್ಚು ಬಳಕೆ): ಆಹಾರದಲ್ಲಿರುವ ಶುದ್ಧೀಕೃತ ಸಕ್ಕರೆಯ ಅಂಶವು ರೋಗ ನಿರೋಧಕ ಶಕ್ತಿಯ ಮೇಲೆ ಮತ್ತು ಆರೋಗ್ಯದ ಮೇಳೆ ಪರಿಣಾಮ ಉಂಟುಮಾಡುತ್ತದೆ. ದೇಹದ ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ಬಿಳಿ ರಕ್ತಕಣಗಳ ಕಾರ್ಯಕ್ಷಮತೆಯನ್ನು ಹೆಚ್ಚುವರಿ ಸಕ್ಕರೆಯು ಕುಂಠಿತಗೊಳಿಸುತ್ತದೆ.

ಅತಿ ಮದ್ಯಪಾನ (ಆಲ್ಕೋಹಾಲ್ ಸೇವನೆ): ಮದ್ಯಪಾನ ಮತ್ತು ರೋಗ ನಿರೋಧಕ ಶಕ್ತಿಯ ಮೇಲೆ ದುಷ್ಪರಿಣಾಮದ ನಡುವೆ ವ್ಯತಿರಿಕ್ತವಾದ ಸಂಬಂಧ ಇದೆಯೆಂದು ಜಗತ್ತಿನಾದ್ಯಂತ ವೈದ್ಯರು ಗುರುತಿಸಿದ್ದಾರೆ. ನ್ಯುಮೋನಿಯಾದಂತಹ ರೋಗಗಳಿಗೆ ತುತ್ತಾಗುವುದು, ಶ್ವಾಸಕೋಶದ ತೊಂದರೆಗಳು, ಸಾಂಕ್ರಾಮಿಕ ರೋಗಗಳಿಂದ ನಿಧಾನ ಮತ್ತು ಅಪೂರ್ಣ ಚೇತರಿಕೆ, ಯಕೃತ್ತಿನ ತೊಂದರೆಗಳು ಇತ್ಯಾದಿಗಳಿಗೆ ಮದ್ಯಪಾನ ಕಾರಣವಾಗಬಹುದು ಎಂದು ಸಂಶೋಧನೆಗಳು ತೋರಿಸಿಕೊಟ್ಟಿವೆ. ಮದ್ಯಪಾನವು ಹಲವಾರು ಸಂಕೀರ್ಣ ರೀತಿಗಳಲ್ಲಿ ರೋಗಗಳನ್ನು ನಿರೋಧಿಸುವ ದೇಹದ ಸ್ಥಿರತೆಯನ್ನು ದುರ್ಬಲಗೊಳಿಸುವ ಬಗ್ಗೆ ಸಾಕ್ಷ್ಯಾಧಾರಗಳು ಇವೆ.

ಧೂಮಪಾನ (ಸಿಗರೆಟ್ ಸೇವನೆ): ಇದು ಅನೇಕ ರೋಗಗಳ ಜೊತೆ ನೇರ ಸಂಬಂಧ ಹೊಂದಿದೆ ಮತ್ತು ಅಂತರ್ಗತ ಮತ್ತು ಪಡೆದುಕೊಳ್ಳುವ ರೋಗ ನಿರೋಧಕ ಶಕ್ತಿಯ ಮೇಲೆ ನೇರ ಪರಿಣಾಮವನ್ನು ಉಂಟುಮಾಡುತ್ತದೆ. ಧೂಮಪಾನವು ಬಿಳಿ ರಕ್ತಕಣಗಳ ಕಾರ್ಯಸಾಮರ್ಥ್ಯವನ್ನು ಕುಗ್ಗಿಸುವ ಮೂಲಕ ಸಾಂಕ್ರಾಮಿಕ ರೋಗಗಳ ವಿರುದ್ಧ ರಕ್ಷಣೆಯನ್ನು ಕುಂಠಿತಗೊಳಿಸುತ್ತದೆ.

ಅತಿ ವ್ಯಾಯಾಮ: ಅತಿಯಾದ ವ್ಯಾಯಾಮವು ಕೂಡಾ ದೇಹದ ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುವ ಕುರಿತು ಸಾಕ್ಷ್ಯಾಧಾರಗಳು ಇವೆ. ಕೋರ್ಟಿಸೋಲ್ ಮತ್ತು ಅಡ್ರಿನಾಲಿನ್ (Cortisol and adrenaline) ಎಂಬ ಭಾವನೆಗಳಿಗೆ ಸಂಬಂಧಿಸಿದ ಹಾರ್ಮೋನ್‌ಗಳು ರಕ್ತದ ಒತ್ತಡ ಮತ್ತು ಕೊಲೆಸ್ಟ್ರಾಲ್ ಪ್ರಮಾಣವನ್ನು ಹೆಚ್ಚಿಸಿ ರೋಗ ನಿರೋಧಕ ಶಕ್ತಿಯನ್ನು ಕುಂದಿಸುತ್ತವೆ ಎಂಬುದಕ್ಕೂ ಸಾಕ್ಷ್ಯಾಧಾರಗಳು ಇವೆ.

ಆದುದರಿಂದಲೇ, ಅತಿ ವ್ಯಾಯಾಮ ಮಾಡುವ ಎಲ್ಲಾ ಜನರು ಮತ್ತು ಕ್ರೀಡಾಳುಗಳು ದೇಹದ ರೋಗ ನಿರೋಧಕ ಶಕ್ತಿ ಚೇತರಿಸಿಕೊಳ್ಳುವ ಸಲುವಾಗಿ ಸಾಕಷ್ಟು ವಿಶ್ರಾಂತಿ ಪಡೆಯಬೇಕು ಎಂದು ಸಲಹೆ ಮಾಡಲಾಗುತ್ತದೆ.

ಮನೋದ್ವೇಗ (ಒತ್ತಡ): ಮಾನಸಿಕ ಒತ್ತಡವೂ ಖಾಯಿಲೆ ತರುವ ರೋಗಾಣುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಒತ್ತಡದ ಹಾರ್ಮೋನ್ ಕಾರ್ಟಿಕೋಸ್ಟೆರಾಯ್ಡ್, ಲಿಂಫೋಸೈಟ್ ಗಳ ಸಂಖ್ಯೆಯನ್ನು ಕಡಿಮೆ ಮಾಡಿ ರೋಗಾಣು ನಿರೋಧಕ ಶಕ್ತಿಯನ್ನು ಕುಂದಿಸುತ್ತದೆ.

ವ್ಯಾಧಿ ಸಂಕರ (ಬೇರೆ ಇತರ ರೋಗಗಳು ಹೊಂದಿರುವುದು): ಇದೆಂದರೆ, ಒಂದು ಸ್ಥಿತಿಯಲ್ಲಿ ಆಗಲೇ ಇದ್ದು ಬೇರೆ ಕಾಯಿಲೆಯಿಂದ ಉಲ್ಬಣಗೊಳ್ಳುವ ಸಾಧ್ಯತೆ. ಇದು ದೈಹಿಕವಾಗಿಯೂ ಇರಬಹುದು, ಅಥವಾ ಮಾನಸಿಕವಾಗಿಯೂ ಇರಬಹುದು. ಇವುಗಳಲ್ಲಿ ಹೃದಯ ಖಾಯಿಲೆ, ಕಿಡ್ನಿ, ಸಕ್ಕರೆ ಕಾಯಿಲೆ, ರಕ್ತದ ಅತಿಯೊತ್ತಡ, ಕ್ಯಾನ್ಸರ್, ಎಚ್ಐವಿ/ಏಡ್ಸ್ ಮುಂತಾದ ಕಾಯಿಲೆಗಳು ಸೇರಿವೆ. ಹೆಚ್ಚು ವಯಸ್ಸಾದವರಲ್ಲಿ ಇವು ಹೆಚ್ಚಾಗಿ ಇರುವುದರಿಂದ ಸಹಜವಾಗಿಯೇ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ.

ಅನ್ಯ ಕಾರಣ: ಜನರು ಅಪೌಷ್ಟಿಕತೆ, ಅಪಾಯಕಾರಿ ರಾಸಾಯನಿಕಗಳ ಜೊತೆಗೆ ನಿರಂತರವಾಗಿ ಕೆಲಸ ಮಾಡುವುದು, ಮೂಲಭೂತ ಆರೋಗ್ಯ ಸೌಕರ್ಯಗಳು ಇಲ್ಲದಿರುವುದು ಇತ್ಯಾದಿ ಕಾರಣಗಳಿಂದ ಕೂಡಾ ಸೋಂಕು ರೋಗಗಳಿಗೆ ಸುಲಭದ ತುತ್ತಾಗಬಹುದು. ಏಕೆಂದರೆ, ಅವರ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಮತ್ತು ಅವರು ಸಾಮಾನ್ಯವಾಗಿ ಸಮಾಜದ ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲ ಮತ್ತು ಕಡೆಗಣಿಸಲ್ಪಟ್ಟ ಜಾತಿ, ವರ್ಗಗಳಿಗೆ ಸೇರಿರುತ್ತಾರೆ ಎಂಬುದು ಕೂಡಾ ನಿಜ.

ಡಾ. ಮಾನಸ ಎಸ್, ಆಯುರ್ವೇದ ವೈದ್ಯರು

– ಕನ್ನಡಕ್ಕೆ: ನಿಖಿಲ್ ಕೋಲ್ಪೆ

ಇದನ್ನೂ ಓದಿ:

ಪತಂಜಲಿ ಕೊರೊನಾ ಔಷಧಿ: ಆಯುರ್ವೇದ ವೈದ್ಯಶಾಸ್ತ್ರಕ್ಕೆ ಮಸಿ ಬಳಿಯುವ ಪ್ರಯತ್ನ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...