Homeಮುಖಪುಟಕೊರೊನಾ: ಧರಿಸುವವರ ಮುಖ ಮಾಸ್ಕ್‌ನಲ್ಲೇ ಪ್ರಿಂಟ್; ಕೇರಳದಲ್ಲಿ ವಿಭಿನ್ನ ಪ್ರಯತ್ನ...!!

ಕೊರೊನಾ: ಧರಿಸುವವರ ಮುಖ ಮಾಸ್ಕ್‌ನಲ್ಲೇ ಪ್ರಿಂಟ್; ಕೇರಳದಲ್ಲಿ ವಿಭಿನ್ನ ಪ್ರಯತ್ನ…!!

- Advertisement -
- Advertisement -

ಕೊರೊನಾ ವೈರಸ್ ಎಲ್ಲರನ್ನೂ ಮಾಸ್ಕ್ ಹಾಕಿ ಓಡಾಡುವಂತೆ ಮಾಡಿದೆ. ಇದರಿಂದಾಗಿ ನಮ್ಮ ಸ್ನೇಹಿತರನ್ನೂ ಪರಸ್ಪರ ಗುರುತು ಹಿಡಿಯುವುದೆ ಕಷ್ಟಕರವಾಗಿದೆ. ಆದರೆ ಕೇರಳದ ಕೋಟಯಂ ನ ‘ಬೀನಾ ಸ್ಟುಡಿಯೋ’ ವಿಭಿನ್ನ ಪ್ರಯತ್ನ ಮಾಡಿರುವುದನ್ನು ಮೀಡಿಯಾ ಒನ್ ವರದಿ ಮಾಡಿದೆ.

ಸಾಂಕ್ರಮಿಕ ರೋಗಗಳನ್ನು ಪರಿಣಾಮಕಾರಿಯಾಗಿ ತೆಡೆದು ಮಾದರಿಯಾದ ಕೇರಳದಲ್ಲೇ ಮಾಸ್ಕ್ ನಲ್ಲಿಯೂ ವಿಭಿನ್ನ ಪ್ರಯೋಗ ನಡೆದಿದೆ. ಮಾಸ್ಕ್ ಹಾಕಿರುವುದರಿಮದ ಪರಸದ್ಪರ ಪರಿಚಯ ಸಿಗುವುದು ಕಷ್ಟವಾಗಿರುವುದರಿಂದ ಕೋಟಯಂ ನ “ಬೀನಾ ಲೇಸರ್ ಟೆಕ್” ಸ್ಟುಡಿಯೊ ಮಾಸ್ಕ್ ನಲ್ಲಿಯೆ ಮಾಸ್ಕ್ ಧರಿಸುವವರ ನಗುವ ಮುಖದ ಅರ್ಧ ಭಾಗವನ್ನು ಪ್ರಿಂಟ್ ಮಾಡಿ ಕೊಡುತ್ತಿದೆ. ಇದರಿಂದ ಎದುರಿಗೆ ಇರುವವರು ಮಾಸ್ಕ್ ಧರಿಸುವವರನ್ನು ಗುರುತಿಸಲು ಸಾಧ್ಯವಾಗುತ್ತದೆ.

ಕೇರಳದಲ್ಲಿ ವಿಶೇಷ ಮಾಸ್ಕ್ ಕಂಡುಹಿಡಿದಿದ್ದಾರೆ. ಇಲ್ಲಿ ಮುಖವನ್ನೇ ಹೋಲುವ ಮಾಸ್ಕ್ ಪ್ರಿಂಟ್ ಮಾಡಿಕೊಡಲಾಗುತ್ತದೆ.#NaanuGauri #facemask #corona

Posted by Naanu Gauri on Saturday, May 23, 2020

ಬೀನಾ ಸ್ಟುಡಿಯೋ ಕೇವಲ ಹದಿನೈದು ನಿಮಿಷದಲ್ಲಿ ಮುಖವನ್ನು ಮಾಸ್ಕ್ ನಲ್ಲಿ ಪ್ರಿಂಟ್ ಮಾಡಿ ಕೊಡುತ್ತದೆ. ಇಂತಹಾ ಮಾಸ್ಕಿಗೆ ಬೀನಾ ಸ್ಟುಡಿಯೋ ಕೇವಲ 60 ರೂ. ಗಳನ್ನು ಚಾರ್ಜ್ ಮಾಡುತ್ತಿದೆ.

“ಮಾಸ್ಕ್ ಹಾಕಿರುವುದರಿಂದ ಹೆಸರು ಹೇಳಿದರಷ್ಟೇ ಜನರು ಗುರುತಿಸುತ್ತಿದ್ದರು. ಟೀ ಷರ್ಟುಗಳಿಗೆ ಪ್ರಿಂಟ್ ಮಾಡುವ ನಾವು ಮಾಸ್ಕ್ ನಲ್ಲಿಯೂ ಯಾಕೆ ಪ್ರಿಂಟ್ ಮಾಡಬಾರದು ಎಂದು ಅನಿಸಿತು. ಇದರಿಂದಾಗಿ ಈಗ ಜನರಿಗೆ ಪ್ರಯೋಜನವಾಗುತ್ತಿದೆ, ಯಾಕೆಂದರೆ ಮಾಸ್ಕ್ ಹಾಕಿದ್ದರು ಯಾರು ಎಂದು ಗುರುತಿಸಲು ಸಾಧ್ಯವಾಗುತ್ತಿದೆ.” ಎಂದು ಅಲ್ಲಿನ ಸಿಬ್ಬಂದಿ ಹೇಳುತ್ತಾರೆ.

ಮಾಹಿತಿಯೂ ಎಲ್ಲಡೆ ಹರಡುತ್ತಿದ್ದಂತೆ ಹಲವಾರು ಜನರು ಬೀನಾ ಸ್ಟುಡಿಯೋದತ್ತ ಜನರು ದೌಡಾಯಿಸುತ್ತಿದ್ದಾರೆ ಎನ್ನಲಾಗಿದೆ.


ಓದಿ: ಕೊರೊನಾ ವಿರುದ್ದ ಕೇರಳದ ಹೋರಾಟ: ಅಮೆರಿಕಾದಿಂದ ನೈಜೀರಿಯಾವರೆಗಿನ ಮಾಧ್ಯಮಗಳಲ್ಲಿ ಮೆಚ್ಚುಗೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...