Homeಮುಖಪುಟಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

- Advertisement -
- Advertisement -

ಕೊರೊನಾ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆ ಎದುರಿಸಿದ್ದ ಬಿಜೆಪಿ ಮತ್ತೆ ಹೊಸ ಯೋಜನೆಯೊಂದಿಗೆ ಮುಂದೆ ಬಂದಿದೆ. ಕೊರೊನಾ ವ್ಯಾಕ್ಸಿನೇಷನ್ ಉತ್ತೇಜಿಸಲು, ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಸೋಂಕಿನಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡಲು ದೇಶಾದ್ಯಂತ ಸ್ವಯಂಸೇವಕ ಸೇವೆಯ ಎರಡನೇ ಹಂತವನ್ನು ಪ್ರಾರಂಭಿಸಲು ಬಿಜೆಪಿ ಸಜ್ಜಾಗಿದೆ.

ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಸರ್ಕಾರ ಸಿದ್ಧವಾಗಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸದ ಬಳಿಕ, ಸೋಂಕಿನ ಎರಡನೇ ಅಲೆಯಲ್ಲಿ ತತ್ತರಿಸಿರುವ ದೇಶದಲ್ಲಿ ಜನರಿಗೆ ಸಹಾಯ ಮಾಡಲು ಕಳೆದ ತಿಂಗಳು ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿತ್ತು.

“ಸೇವೆಯೇ ಸಂಘಟನೆ” ಎಂಬ ಘೋಷವಾಕ್ಯದ ಅಡಿಯಲ್ಲಿ ಜೆಪಿ ನಡ್ಡಾ ಅವರು ಪಕ್ಷದ ಕಾರ್ಯಕರ್ತರಿಗೆ ವ್ಯಾಕ್ಸಿನೇಷನ್ ಅಭಿಯಾನ, ಪರಿಹಾರ ಕಾರ್ಯಕ್ರಮಗಳು, ಹಳ್ಳಿಗಳಲ್ಲಿ ಆರೋಗ್ಯ ಸ್ವಯಂಸೇವಕರಿಗೆ ತರಬೇತಿ ನೀಡಲು ಸಹಾಯ ಮಾಡುವಂತೆ ಸೂಚಿಸಿದ್ದರು.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

18 ರಿಂದ 44 ವರ್ಷ ವಯಸ್ಸಿನ ಡೆಲಿವರಿ ಮಾಡುವ ವ್ಯಕ್ತಿಗಳು, ಆಟೋ ರಿಕ್ಷಾ ಚಾಲಕರು, ಮನೆ ಕೆಲಸದವರು, ಪತ್ರಿಕೆ ವಿತರಕರು, ಗ್ಯಾಸ್ ಸಿಲಿಂಡರ್ ತಲುಪಿಸುವವರಿಗೆ ಲಸಿಕೆ ಪಡೆಯಲು ಪ್ರೇರೇಪಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಈ ಅಭಿಯಾನದಡಿ ಹೇಳಲಾಗಿದೆ.

ಇತರ ಕೆಲವು ಗುಂಪುಗಳು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪೋಷಕರನ್ನು ಒಳಗೊಂಡಿರುತ್ತದೆ. ಈ ಗುಂಪು ಕೊರೊನಾ ಮೂರನೇ ಹಂತವನ್ನು ತಡೆಗಟ್ಟುವ ಸರ್ಕಾರದ ಪೂರ್ವಸಿದ್ಧತಾ ಕ್ರಮಗಳ ಒಂದು ಭಾಗವಾಗಿದೆ, ಇದರಲ್ಲಿ ಒಂದು ವಿಭಾಗದ ತಜ್ಞರು ಮಕ್ಕಳಿಗೆ ಈ ಸೋಂಕು ಹೆಚ್ಚು ಅಪಾಯಕಾರಿ ಎಂದು ನಂಬುತ್ತಾರೆ.

ಅಭಿಯಾನದ ನೇತೃತ್ವ ವಹಿಸಿರುವ ಜೆಪಿ ನಡ್ಡಾ ಅವರ ಸೂಚನೆಗಳ ಜೊತೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಆದ್ಯತೆ ನೀಡಬೇಕಾದ ಕೆಲವು ಕ್ಷೇತ್ರಗಳನ್ನು ಗುರುತಿಸಿ ಪತ್ರವನ್ನು ಬರೆದಿದ್ದಾರೆ.

“ರಕ್ತದಾನ ಶಿಬಿರಗಳನ್ನು ಆಯೋಜಿಸುವುದು ಮತ್ತು ಮನವಿಗಳ ಮೇರೆಗೆ ರಕ್ತದಾನ ಮಾಡುವುದು. ಆಸ್ಪತ್ರೆಗಳು ಮತ್ತು ಇತರ ಸ್ಥಳಗಳಲ್ಲಿ ಪಡಿತರ ಕಿಟ್ ಮತ್ತು ಆಹಾರ ವಿತರಣೆಯನ್ನು ಏರ್ಪಡಿಸುವುದು ಮಾಡಬೇಕು. ವಯಸ್ಸಾದ ಜನರು ಸಮಸ್ಯೆಗಳನ್ನು ಎದುರಿಸುತ್ತಿರುವ ಅಥವಾ ಮನೆಯ ಎಲ್ಲರೂ ಸೋಂಕಿಗೆ ಒಳಗಾದ ಪ್ರತ್ಯೇಕ ಮನೆಗಳಿಗೆ ಸ್ವಯಂಸೇವಕರನ್ನು ನಿಯೋಜಿಸುವುದು ಮುಖ್ಯ” ಎಂದಿದ್ದಾರೆ.

’ದೂರವಾಣಿ ಮೂಲಕ ಮೆಡಿಸಿನ್ ಕನ್ಸಲ್ಟೆನ್ಸಿ ಮತ್ತು ವೈದ್ಯಕೀಯ ಸಹಾಯ ಕೇಂದ್ರಗಳನ್ನು ತೆರೆಯಬೇಕು. ಕೊರೊನಾ ಸೋಂಕಿತ ಜನರಿಗೆ ಸಹಾಯ ಮಾಡುವುದು ಅವರಿಗೆ ತಮ್ಮ ವಿಮಾ ಸೌಲಭ್ಯ ಶೀಘ್ರದಲ್ಲಿಯೇ ದೊರೆಯುವಂತೆ ನೋಡಿಕೊಳ್ಳಬೇಕು. ಸ್ವಯಂಸೇವಕರು ಅಗತ್ಯವಿರುವ ಕುಟುಂಬಗಳಿಗೆ ಸಹಾಯ ಮಾಡಬೇಕಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಪ್ರದೇಶದ ಕಾರ್ಯಕರ್ತರಿಗೆ ತರಬೇತಿ ನೀಡಲು ಮತ್ತು ಸ್ಥಳೀಯ ವೈದ್ಯಕೀಯ ಕಚೇರಿಗಳಲ್ಲಿ ಥರ್ಮಲ್ ಸ್ಕ್ಯಾನರ್‌ಗಳು, ಆಕ್ಸಿಮೀಟರ್‌ಗಳು, ಹೋಮ್ ಟೆಸ್ಟ್ ಕಿಟ್‌ಗಳು ಮತ್ತು ಆಮ್ಲಜನಕ ಸಿಲಿಂಡರ್‌ ಸಂಗ್ರಹಿಸಲು ರಾಜ್ಯ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗುವುದು‍ ಎಂದು ಬಿಜೆಪಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಟೀಕೆಗಳ ಮಧ್ಯೆ, ಸರ್ಕಾರ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಎನ್ನಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಳೆದ ತಿಂಗಳಿನಿಂದ ಈ ಕಾರ್ಯಕ್ರಮವನ್ನು ನಡೆಸುತ್ತಿದೆ.


ಇದನ್ನೂ ಓದಿ: ಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡಪಕ್ಷಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...