Homeಮುಖಪುಟಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

- Advertisement -
- Advertisement -

ಕೊರೊನಾ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆ ಎದುರಿಸಿದ್ದ ಬಿಜೆಪಿ ಮತ್ತೆ ಹೊಸ ಯೋಜನೆಯೊಂದಿಗೆ ಮುಂದೆ ಬಂದಿದೆ. ಕೊರೊನಾ ವ್ಯಾಕ್ಸಿನೇಷನ್ ಉತ್ತೇಜಿಸಲು, ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಸೋಂಕಿನಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡಲು ದೇಶಾದ್ಯಂತ ಸ್ವಯಂಸೇವಕ ಸೇವೆಯ ಎರಡನೇ ಹಂತವನ್ನು ಪ್ರಾರಂಭಿಸಲು ಬಿಜೆಪಿ ಸಜ್ಜಾಗಿದೆ.

ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಸರ್ಕಾರ ಸಿದ್ಧವಾಗಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸದ ಬಳಿಕ, ಸೋಂಕಿನ ಎರಡನೇ ಅಲೆಯಲ್ಲಿ ತತ್ತರಿಸಿರುವ ದೇಶದಲ್ಲಿ ಜನರಿಗೆ ಸಹಾಯ ಮಾಡಲು ಕಳೆದ ತಿಂಗಳು ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿತ್ತು.

“ಸೇವೆಯೇ ಸಂಘಟನೆ” ಎಂಬ ಘೋಷವಾಕ್ಯದ ಅಡಿಯಲ್ಲಿ ಜೆಪಿ ನಡ್ಡಾ ಅವರು ಪಕ್ಷದ ಕಾರ್ಯಕರ್ತರಿಗೆ ವ್ಯಾಕ್ಸಿನೇಷನ್ ಅಭಿಯಾನ, ಪರಿಹಾರ ಕಾರ್ಯಕ್ರಮಗಳು, ಹಳ್ಳಿಗಳಲ್ಲಿ ಆರೋಗ್ಯ ಸ್ವಯಂಸೇವಕರಿಗೆ ತರಬೇತಿ ನೀಡಲು ಸಹಾಯ ಮಾಡುವಂತೆ ಸೂಚಿಸಿದ್ದರು.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

18 ರಿಂದ 44 ವರ್ಷ ವಯಸ್ಸಿನ ಡೆಲಿವರಿ ಮಾಡುವ ವ್ಯಕ್ತಿಗಳು, ಆಟೋ ರಿಕ್ಷಾ ಚಾಲಕರು, ಮನೆ ಕೆಲಸದವರು, ಪತ್ರಿಕೆ ವಿತರಕರು, ಗ್ಯಾಸ್ ಸಿಲಿಂಡರ್ ತಲುಪಿಸುವವರಿಗೆ ಲಸಿಕೆ ಪಡೆಯಲು ಪ್ರೇರೇಪಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಈ ಅಭಿಯಾನದಡಿ ಹೇಳಲಾಗಿದೆ.

ಇತರ ಕೆಲವು ಗುಂಪುಗಳು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪೋಷಕರನ್ನು ಒಳಗೊಂಡಿರುತ್ತದೆ. ಈ ಗುಂಪು ಕೊರೊನಾ ಮೂರನೇ ಹಂತವನ್ನು ತಡೆಗಟ್ಟುವ ಸರ್ಕಾರದ ಪೂರ್ವಸಿದ್ಧತಾ ಕ್ರಮಗಳ ಒಂದು ಭಾಗವಾಗಿದೆ, ಇದರಲ್ಲಿ ಒಂದು ವಿಭಾಗದ ತಜ್ಞರು ಮಕ್ಕಳಿಗೆ ಈ ಸೋಂಕು ಹೆಚ್ಚು ಅಪಾಯಕಾರಿ ಎಂದು ನಂಬುತ್ತಾರೆ.

ಅಭಿಯಾನದ ನೇತೃತ್ವ ವಹಿಸಿರುವ ಜೆಪಿ ನಡ್ಡಾ ಅವರ ಸೂಚನೆಗಳ ಜೊತೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಆದ್ಯತೆ ನೀಡಬೇಕಾದ ಕೆಲವು ಕ್ಷೇತ್ರಗಳನ್ನು ಗುರುತಿಸಿ ಪತ್ರವನ್ನು ಬರೆದಿದ್ದಾರೆ.

“ರಕ್ತದಾನ ಶಿಬಿರಗಳನ್ನು ಆಯೋಜಿಸುವುದು ಮತ್ತು ಮನವಿಗಳ ಮೇರೆಗೆ ರಕ್ತದಾನ ಮಾಡುವುದು. ಆಸ್ಪತ್ರೆಗಳು ಮತ್ತು ಇತರ ಸ್ಥಳಗಳಲ್ಲಿ ಪಡಿತರ ಕಿಟ್ ಮತ್ತು ಆಹಾರ ವಿತರಣೆಯನ್ನು ಏರ್ಪಡಿಸುವುದು ಮಾಡಬೇಕು. ವಯಸ್ಸಾದ ಜನರು ಸಮಸ್ಯೆಗಳನ್ನು ಎದುರಿಸುತ್ತಿರುವ ಅಥವಾ ಮನೆಯ ಎಲ್ಲರೂ ಸೋಂಕಿಗೆ ಒಳಗಾದ ಪ್ರತ್ಯೇಕ ಮನೆಗಳಿಗೆ ಸ್ವಯಂಸೇವಕರನ್ನು ನಿಯೋಜಿಸುವುದು ಮುಖ್ಯ” ಎಂದಿದ್ದಾರೆ.

’ದೂರವಾಣಿ ಮೂಲಕ ಮೆಡಿಸಿನ್ ಕನ್ಸಲ್ಟೆನ್ಸಿ ಮತ್ತು ವೈದ್ಯಕೀಯ ಸಹಾಯ ಕೇಂದ್ರಗಳನ್ನು ತೆರೆಯಬೇಕು. ಕೊರೊನಾ ಸೋಂಕಿತ ಜನರಿಗೆ ಸಹಾಯ ಮಾಡುವುದು ಅವರಿಗೆ ತಮ್ಮ ವಿಮಾ ಸೌಲಭ್ಯ ಶೀಘ್ರದಲ್ಲಿಯೇ ದೊರೆಯುವಂತೆ ನೋಡಿಕೊಳ್ಳಬೇಕು. ಸ್ವಯಂಸೇವಕರು ಅಗತ್ಯವಿರುವ ಕುಟುಂಬಗಳಿಗೆ ಸಹಾಯ ಮಾಡಬೇಕಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಪ್ರದೇಶದ ಕಾರ್ಯಕರ್ತರಿಗೆ ತರಬೇತಿ ನೀಡಲು ಮತ್ತು ಸ್ಥಳೀಯ ವೈದ್ಯಕೀಯ ಕಚೇರಿಗಳಲ್ಲಿ ಥರ್ಮಲ್ ಸ್ಕ್ಯಾನರ್‌ಗಳು, ಆಕ್ಸಿಮೀಟರ್‌ಗಳು, ಹೋಮ್ ಟೆಸ್ಟ್ ಕಿಟ್‌ಗಳು ಮತ್ತು ಆಮ್ಲಜನಕ ಸಿಲಿಂಡರ್‌ ಸಂಗ್ರಹಿಸಲು ರಾಜ್ಯ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗುವುದು‍ ಎಂದು ಬಿಜೆಪಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಟೀಕೆಗಳ ಮಧ್ಯೆ, ಸರ್ಕಾರ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಎನ್ನಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಳೆದ ತಿಂಗಳಿನಿಂದ ಈ ಕಾರ್ಯಕ್ರಮವನ್ನು ನಡೆಸುತ್ತಿದೆ.


ಇದನ್ನೂ ಓದಿ: ಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡಪಕ್ಷಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...