Homeಮುಖಪುಟಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

- Advertisement -
- Advertisement -

ಕೊರೊನಾ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆ ಎದುರಿಸಿದ್ದ ಬಿಜೆಪಿ ಮತ್ತೆ ಹೊಸ ಯೋಜನೆಯೊಂದಿಗೆ ಮುಂದೆ ಬಂದಿದೆ. ಕೊರೊನಾ ವ್ಯಾಕ್ಸಿನೇಷನ್ ಉತ್ತೇಜಿಸಲು, ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಸೋಂಕಿನಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡಲು ದೇಶಾದ್ಯಂತ ಸ್ವಯಂಸೇವಕ ಸೇವೆಯ ಎರಡನೇ ಹಂತವನ್ನು ಪ್ರಾರಂಭಿಸಲು ಬಿಜೆಪಿ ಸಜ್ಜಾಗಿದೆ.

ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಸರ್ಕಾರ ಸಿದ್ಧವಾಗಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸದ ಬಳಿಕ, ಸೋಂಕಿನ ಎರಡನೇ ಅಲೆಯಲ್ಲಿ ತತ್ತರಿಸಿರುವ ದೇಶದಲ್ಲಿ ಜನರಿಗೆ ಸಹಾಯ ಮಾಡಲು ಕಳೆದ ತಿಂಗಳು ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿತ್ತು.

“ಸೇವೆಯೇ ಸಂಘಟನೆ” ಎಂಬ ಘೋಷವಾಕ್ಯದ ಅಡಿಯಲ್ಲಿ ಜೆಪಿ ನಡ್ಡಾ ಅವರು ಪಕ್ಷದ ಕಾರ್ಯಕರ್ತರಿಗೆ ವ್ಯಾಕ್ಸಿನೇಷನ್ ಅಭಿಯಾನ, ಪರಿಹಾರ ಕಾರ್ಯಕ್ರಮಗಳು, ಹಳ್ಳಿಗಳಲ್ಲಿ ಆರೋಗ್ಯ ಸ್ವಯಂಸೇವಕರಿಗೆ ತರಬೇತಿ ನೀಡಲು ಸಹಾಯ ಮಾಡುವಂತೆ ಸೂಚಿಸಿದ್ದರು.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

18 ರಿಂದ 44 ವರ್ಷ ವಯಸ್ಸಿನ ಡೆಲಿವರಿ ಮಾಡುವ ವ್ಯಕ್ತಿಗಳು, ಆಟೋ ರಿಕ್ಷಾ ಚಾಲಕರು, ಮನೆ ಕೆಲಸದವರು, ಪತ್ರಿಕೆ ವಿತರಕರು, ಗ್ಯಾಸ್ ಸಿಲಿಂಡರ್ ತಲುಪಿಸುವವರಿಗೆ ಲಸಿಕೆ ಪಡೆಯಲು ಪ್ರೇರೇಪಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಈ ಅಭಿಯಾನದಡಿ ಹೇಳಲಾಗಿದೆ.

ಇತರ ಕೆಲವು ಗುಂಪುಗಳು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪೋಷಕರನ್ನು ಒಳಗೊಂಡಿರುತ್ತದೆ. ಈ ಗುಂಪು ಕೊರೊನಾ ಮೂರನೇ ಹಂತವನ್ನು ತಡೆಗಟ್ಟುವ ಸರ್ಕಾರದ ಪೂರ್ವಸಿದ್ಧತಾ ಕ್ರಮಗಳ ಒಂದು ಭಾಗವಾಗಿದೆ, ಇದರಲ್ಲಿ ಒಂದು ವಿಭಾಗದ ತಜ್ಞರು ಮಕ್ಕಳಿಗೆ ಈ ಸೋಂಕು ಹೆಚ್ಚು ಅಪಾಯಕಾರಿ ಎಂದು ನಂಬುತ್ತಾರೆ.

ಅಭಿಯಾನದ ನೇತೃತ್ವ ವಹಿಸಿರುವ ಜೆಪಿ ನಡ್ಡಾ ಅವರ ಸೂಚನೆಗಳ ಜೊತೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಆದ್ಯತೆ ನೀಡಬೇಕಾದ ಕೆಲವು ಕ್ಷೇತ್ರಗಳನ್ನು ಗುರುತಿಸಿ ಪತ್ರವನ್ನು ಬರೆದಿದ್ದಾರೆ.

“ರಕ್ತದಾನ ಶಿಬಿರಗಳನ್ನು ಆಯೋಜಿಸುವುದು ಮತ್ತು ಮನವಿಗಳ ಮೇರೆಗೆ ರಕ್ತದಾನ ಮಾಡುವುದು. ಆಸ್ಪತ್ರೆಗಳು ಮತ್ತು ಇತರ ಸ್ಥಳಗಳಲ್ಲಿ ಪಡಿತರ ಕಿಟ್ ಮತ್ತು ಆಹಾರ ವಿತರಣೆಯನ್ನು ಏರ್ಪಡಿಸುವುದು ಮಾಡಬೇಕು. ವಯಸ್ಸಾದ ಜನರು ಸಮಸ್ಯೆಗಳನ್ನು ಎದುರಿಸುತ್ತಿರುವ ಅಥವಾ ಮನೆಯ ಎಲ್ಲರೂ ಸೋಂಕಿಗೆ ಒಳಗಾದ ಪ್ರತ್ಯೇಕ ಮನೆಗಳಿಗೆ ಸ್ವಯಂಸೇವಕರನ್ನು ನಿಯೋಜಿಸುವುದು ಮುಖ್ಯ” ಎಂದಿದ್ದಾರೆ.

’ದೂರವಾಣಿ ಮೂಲಕ ಮೆಡಿಸಿನ್ ಕನ್ಸಲ್ಟೆನ್ಸಿ ಮತ್ತು ವೈದ್ಯಕೀಯ ಸಹಾಯ ಕೇಂದ್ರಗಳನ್ನು ತೆರೆಯಬೇಕು. ಕೊರೊನಾ ಸೋಂಕಿತ ಜನರಿಗೆ ಸಹಾಯ ಮಾಡುವುದು ಅವರಿಗೆ ತಮ್ಮ ವಿಮಾ ಸೌಲಭ್ಯ ಶೀಘ್ರದಲ್ಲಿಯೇ ದೊರೆಯುವಂತೆ ನೋಡಿಕೊಳ್ಳಬೇಕು. ಸ್ವಯಂಸೇವಕರು ಅಗತ್ಯವಿರುವ ಕುಟುಂಬಗಳಿಗೆ ಸಹಾಯ ಮಾಡಬೇಕಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಪ್ರದೇಶದ ಕಾರ್ಯಕರ್ತರಿಗೆ ತರಬೇತಿ ನೀಡಲು ಮತ್ತು ಸ್ಥಳೀಯ ವೈದ್ಯಕೀಯ ಕಚೇರಿಗಳಲ್ಲಿ ಥರ್ಮಲ್ ಸ್ಕ್ಯಾನರ್‌ಗಳು, ಆಕ್ಸಿಮೀಟರ್‌ಗಳು, ಹೋಮ್ ಟೆಸ್ಟ್ ಕಿಟ್‌ಗಳು ಮತ್ತು ಆಮ್ಲಜನಕ ಸಿಲಿಂಡರ್‌ ಸಂಗ್ರಹಿಸಲು ರಾಜ್ಯ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗುವುದು‍ ಎಂದು ಬಿಜೆಪಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಟೀಕೆಗಳ ಮಧ್ಯೆ, ಸರ್ಕಾರ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಎನ್ನಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಳೆದ ತಿಂಗಳಿನಿಂದ ಈ ಕಾರ್ಯಕ್ರಮವನ್ನು ನಡೆಸುತ್ತಿದೆ.


ಇದನ್ನೂ ಓದಿ: ಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡಪಕ್ಷಗಳ ಕರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...