Homeಮುಖಪುಟಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

- Advertisement -
- Advertisement -

ಕೊರೊನಾ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆ ಎದುರಿಸಿದ್ದ ಬಿಜೆಪಿ ಮತ್ತೆ ಹೊಸ ಯೋಜನೆಯೊಂದಿಗೆ ಮುಂದೆ ಬಂದಿದೆ. ಕೊರೊನಾ ವ್ಯಾಕ್ಸಿನೇಷನ್ ಉತ್ತೇಜಿಸಲು, ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಸೋಂಕಿನಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡಲು ದೇಶಾದ್ಯಂತ ಸ್ವಯಂಸೇವಕ ಸೇವೆಯ ಎರಡನೇ ಹಂತವನ್ನು ಪ್ರಾರಂಭಿಸಲು ಬಿಜೆಪಿ ಸಜ್ಜಾಗಿದೆ.

ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಸರ್ಕಾರ ಸಿದ್ಧವಾಗಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸದ ಬಳಿಕ, ಸೋಂಕಿನ ಎರಡನೇ ಅಲೆಯಲ್ಲಿ ತತ್ತರಿಸಿರುವ ದೇಶದಲ್ಲಿ ಜನರಿಗೆ ಸಹಾಯ ಮಾಡಲು ಕಳೆದ ತಿಂಗಳು ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿತ್ತು.

“ಸೇವೆಯೇ ಸಂಘಟನೆ” ಎಂಬ ಘೋಷವಾಕ್ಯದ ಅಡಿಯಲ್ಲಿ ಜೆಪಿ ನಡ್ಡಾ ಅವರು ಪಕ್ಷದ ಕಾರ್ಯಕರ್ತರಿಗೆ ವ್ಯಾಕ್ಸಿನೇಷನ್ ಅಭಿಯಾನ, ಪರಿಹಾರ ಕಾರ್ಯಕ್ರಮಗಳು, ಹಳ್ಳಿಗಳಲ್ಲಿ ಆರೋಗ್ಯ ಸ್ವಯಂಸೇವಕರಿಗೆ ತರಬೇತಿ ನೀಡಲು ಸಹಾಯ ಮಾಡುವಂತೆ ಸೂಚಿಸಿದ್ದರು.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

18 ರಿಂದ 44 ವರ್ಷ ವಯಸ್ಸಿನ ಡೆಲಿವರಿ ಮಾಡುವ ವ್ಯಕ್ತಿಗಳು, ಆಟೋ ರಿಕ್ಷಾ ಚಾಲಕರು, ಮನೆ ಕೆಲಸದವರು, ಪತ್ರಿಕೆ ವಿತರಕರು, ಗ್ಯಾಸ್ ಸಿಲಿಂಡರ್ ತಲುಪಿಸುವವರಿಗೆ ಲಸಿಕೆ ಪಡೆಯಲು ಪ್ರೇರೇಪಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಈ ಅಭಿಯಾನದಡಿ ಹೇಳಲಾಗಿದೆ.

ಇತರ ಕೆಲವು ಗುಂಪುಗಳು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪೋಷಕರನ್ನು ಒಳಗೊಂಡಿರುತ್ತದೆ. ಈ ಗುಂಪು ಕೊರೊನಾ ಮೂರನೇ ಹಂತವನ್ನು ತಡೆಗಟ್ಟುವ ಸರ್ಕಾರದ ಪೂರ್ವಸಿದ್ಧತಾ ಕ್ರಮಗಳ ಒಂದು ಭಾಗವಾಗಿದೆ, ಇದರಲ್ಲಿ ಒಂದು ವಿಭಾಗದ ತಜ್ಞರು ಮಕ್ಕಳಿಗೆ ಈ ಸೋಂಕು ಹೆಚ್ಚು ಅಪಾಯಕಾರಿ ಎಂದು ನಂಬುತ್ತಾರೆ.

ಅಭಿಯಾನದ ನೇತೃತ್ವ ವಹಿಸಿರುವ ಜೆಪಿ ನಡ್ಡಾ ಅವರ ಸೂಚನೆಗಳ ಜೊತೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಆದ್ಯತೆ ನೀಡಬೇಕಾದ ಕೆಲವು ಕ್ಷೇತ್ರಗಳನ್ನು ಗುರುತಿಸಿ ಪತ್ರವನ್ನು ಬರೆದಿದ್ದಾರೆ.

“ರಕ್ತದಾನ ಶಿಬಿರಗಳನ್ನು ಆಯೋಜಿಸುವುದು ಮತ್ತು ಮನವಿಗಳ ಮೇರೆಗೆ ರಕ್ತದಾನ ಮಾಡುವುದು. ಆಸ್ಪತ್ರೆಗಳು ಮತ್ತು ಇತರ ಸ್ಥಳಗಳಲ್ಲಿ ಪಡಿತರ ಕಿಟ್ ಮತ್ತು ಆಹಾರ ವಿತರಣೆಯನ್ನು ಏರ್ಪಡಿಸುವುದು ಮಾಡಬೇಕು. ವಯಸ್ಸಾದ ಜನರು ಸಮಸ್ಯೆಗಳನ್ನು ಎದುರಿಸುತ್ತಿರುವ ಅಥವಾ ಮನೆಯ ಎಲ್ಲರೂ ಸೋಂಕಿಗೆ ಒಳಗಾದ ಪ್ರತ್ಯೇಕ ಮನೆಗಳಿಗೆ ಸ್ವಯಂಸೇವಕರನ್ನು ನಿಯೋಜಿಸುವುದು ಮುಖ್ಯ” ಎಂದಿದ್ದಾರೆ.

’ದೂರವಾಣಿ ಮೂಲಕ ಮೆಡಿಸಿನ್ ಕನ್ಸಲ್ಟೆನ್ಸಿ ಮತ್ತು ವೈದ್ಯಕೀಯ ಸಹಾಯ ಕೇಂದ್ರಗಳನ್ನು ತೆರೆಯಬೇಕು. ಕೊರೊನಾ ಸೋಂಕಿತ ಜನರಿಗೆ ಸಹಾಯ ಮಾಡುವುದು ಅವರಿಗೆ ತಮ್ಮ ವಿಮಾ ಸೌಲಭ್ಯ ಶೀಘ್ರದಲ್ಲಿಯೇ ದೊರೆಯುವಂತೆ ನೋಡಿಕೊಳ್ಳಬೇಕು. ಸ್ವಯಂಸೇವಕರು ಅಗತ್ಯವಿರುವ ಕುಟುಂಬಗಳಿಗೆ ಸಹಾಯ ಮಾಡಬೇಕಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಪ್ರದೇಶದ ಕಾರ್ಯಕರ್ತರಿಗೆ ತರಬೇತಿ ನೀಡಲು ಮತ್ತು ಸ್ಥಳೀಯ ವೈದ್ಯಕೀಯ ಕಚೇರಿಗಳಲ್ಲಿ ಥರ್ಮಲ್ ಸ್ಕ್ಯಾನರ್‌ಗಳು, ಆಕ್ಸಿಮೀಟರ್‌ಗಳು, ಹೋಮ್ ಟೆಸ್ಟ್ ಕಿಟ್‌ಗಳು ಮತ್ತು ಆಮ್ಲಜನಕ ಸಿಲಿಂಡರ್‌ ಸಂಗ್ರಹಿಸಲು ರಾಜ್ಯ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗುವುದು‍ ಎಂದು ಬಿಜೆಪಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಟೀಕೆಗಳ ಮಧ್ಯೆ, ಸರ್ಕಾರ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಎನ್ನಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಳೆದ ತಿಂಗಳಿನಿಂದ ಈ ಕಾರ್ಯಕ್ರಮವನ್ನು ನಡೆಸುತ್ತಿದೆ.


ಇದನ್ನೂ ಓದಿ: ಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡಪಕ್ಷಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...