Homeಕರೋನಾ ತಲ್ಲಣಸಂಪರ್ಕದ ಮೂಲಕ ಕೊರೊನಾ : ಭಾರತದಲ್ಲೇ ಅತಿ ಹೆಚ್ಚು

ಸಂಪರ್ಕದ ಮೂಲಕ ಕೊರೊನಾ : ಭಾರತದಲ್ಲೇ ಅತಿ ಹೆಚ್ಚು

- Advertisement -
- Advertisement -

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಮಧ್ಯೆ, ಭಾರತವು ವಿಶ್ವದ ಅತ್ಯಧಿಕ ಕೊರೊನಾ ಸಂಪರ್ಕ ದರಕ್ಕೆ ಸಾಕ್ಷಿಯಾಗಿದೆ ಎಂದು ತಿಳಿದುಬಂದಿದೆ. ಆ ಮೂಲಕ ಸೋಂಕಿತ ವ್ಯಕ್ತಿಯು ಪ್ರತಿ ಎರಡು ದಿನಗಳಿಗೊಮ್ಮೆ ಇನ್ನೊಬ್ಬರಿಗೆ ಸೋಂಕು ತಗುಲಿಸುತ್ತಿದ್ದಾನೆ. ಆತಂಕಕಾರಿ ಸಂಗತಿಯೆಂದರೆ, ಈ ತಿಂಗಳ ಕೊರೊನಾ ಸಂಪರ್ಕ ದರದಲ್ಲಿ ಭಾರಿ ಏರಿಕೆಯಾಗಿದೆ.

ತಂತ್ರಜ್ಞಾನ ವಿಜ್ಞಾನ ವಿಭಾಗವು ಪ್ರಾರಂಭಿಸಿದ ಮಾದರಿಯ ಮೂಲಕ ಮಾಡಲಾಗಿರುವ ಇತ್ತೀಚಿನ ವಿಶ್ಲೇಷಣೆಯ ಪ್ರಕಾರ, “ಏಪ್ರಿಲ್ ಮಧ್ಯದ ವೇಳೆಗೆ ಭಾರತದಲ್ಲಿ ಕೊರೊನಾ ಎರಡನೇ ಅಲೆಯ ಉತ್ತುಂಗಕ್ಕೆ ಏರುತ್ತದೆ. ಈ ಸಮಯದಲ್ಲಿ ದೈನಂದಿನ ಸೋಂಕುಗಳು 70,000 ಮತ್ತು 80,000 ರ ನಡುವೆ ಇರುತ್ತದೆ”. ಮುಖ್ಯವಾಗಿ ಈ ಸಮಯದಲ್ಲಿ ಮಹಾರಾಷ್ಟ್ರದಲ್ಲೇ ಪ್ರಕರಣ ಹೆಚ್ಚಿರುತ್ತದೆ ಎಂದು ವಿಶ್ಲೇಷಣೆ ತಿಳಿಸಿದೆ.

ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೊ ಬಳಸಲು BJP ಅಭ್ಯರ್ಥಿ ಹಿಂದೇಟು!

ವಿಶ್ಲೇಷಣೆ ನಡೆಸಿರುವ ವಿಜ್ಞಾನಿಗಳ ಪ್ರಕಾರ, ಶಾಲಾ-ಕಾಲೇಜುಗಳು, ಮಾರುಕಟ್ಟೆಗಳು, ಸಾರ್ವಜನಿಕ ಸ್ಥಳಗಳು ಮತ್ತು ಸಾರ್ವಜನಿಕ ಸಾರಿಗೆಗಳು ಸಂಪರ್ಕ ದರದ ಈ ಅನಿರೀಕ್ಷಿತ ಏರಿಕೆಗೆ ಕಾರಣ ಎಂದು ಹೇಳಿದ್ದಾರೆ. ವೇಗವಾಗಿ ಹರಡುವ ರೂಪಾಂತರಿ ವೈರಸ್‌ಗಳು ಕೂಡಾ ಇದಕ್ಕೆ ಕೊಡುಗೆ ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

“ಸಂಪರ್ಕದಿಂದಾಗಿ ಕೊರೊನಾ ಹರಡುತ್ತಿರುವ ಸಂಖ್ಯೆಯು ಭಾರತದಲ್ಲಿ ಕಂಡುಬರುತ್ತಿರುವಷ್ಟು ಪ್ರಪಂಚದಲ್ಲಿ ಎಲ್ಲಿಯೂ ವರದಿಯಾಗಿಲ್ಲ. ಸಂಪರ್ಕ ದರದಲ್ಲಿನ ಭಾರಿ ಏರಿಕೆ ಎಲ್ಲೆಡೆ ಕೊರೊನಾ ಪ್ರಕರಣಗಳಲ್ಲಿ ತೀವ್ರ ಏರಿಕೆಗೆ ಕಾರಣವಾಗಿದೆ” ಎಂದು ಅವರು ತಿಳಿಸಿದ್ದಾರೆ.

ಮಾರ್ಚ್‌‌‌‌‌‌ ಆರಂಭದಲ್ಲಿ, ಒಬ್ಬ ಸೋಂಕಿತ ವ್ಯಕ್ತಿಯು ನಾಲ್ಕು ದಿನಗಳಲ್ಲಿ ಇನ್ನೊಬ್ಬರಿಗೆ ಸೋಂಕು ತಗುಲಿಸುತ್ತಿದ್ದರೆ, ಪ್ರಸ್ತುತ ಸುಮಾರು ಎರಡನೆ ದಿನದಲ್ಲಿ ಇನ್ನೊಬ್ಬರಿಗೆ ಸೋಂಕು ಹರಡುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿನ ಹೆಚ್ಚಳವು ಮುಖ್ಯವಾಗಿ ಸಂಪರ್ಕ ದರದಲ್ಲಿನ ಗಮನಾರ್ಹ ಹೆಚ್ಚಳದಿಂದ ಆಗಿದೆ ಎಂದು ಅಧ್ಯಯನದ ಭಾಗವಾಗಿರುವ ಕಾನ್ಪುರದ ಐಐಟಿಯ ಉಪನಿರ್ದೇಶಕ ಮನೀಂದ್ರ ಅಗ್ರವಾಲ್ ಹೇಳಿದ್ದಾರೆ.

ಅಗ್ರವಾಲ್‌‌‌ ‌‌‌‌‌‌ಅವರ ಪ್ರಕಾರ ಎರಡನೆ ಅಲೆಯ ಅತೀ ಹೆಚ್ಚು ಪ್ರಕರಣಗಳು ಏಪ್ರಿಲ್ 15 ರಿಂದ 25 ರ ಸುಮಾರಿಗೆ ವರದಿಯಾಗುತ್ತದೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...