Homeಕರ್ನಾಟಕಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ: ಸೆ. 21ರಿಂದ ಶಾಲಾ-ಕಾಲೇಜು ತೆರೆಯುವುದಿಲ್ಲ!

ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ: ಸೆ. 21ರಿಂದ ಶಾಲಾ-ಕಾಲೇಜು ತೆರೆಯುವುದಿಲ್ಲ!

ನಿನ್ನೆ ಕೇಂದ್ರ ಸರ್ಕಾರ ನೀಡಿದ ಸೂಚನೆಯ ಮೇರೆಗೆ ಸೆಪ್ಟಂಬರ್ 21ರಿಂದ ಶಾಲೆಗಳನ್ನು ತೆರೆಯುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿಯನ್ನು ತಡೆಹಿಡಿಯಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು

- Advertisement -
- Advertisement -

ರಾಜ್ಯದಲ್ಲಿ ಸೋಮವಾರದಿಂದ ಶಾಲಾ-ಕಾಲೇಜು ತೆರೆಯಲಿದ್ದು, ಆದರೆ ತರಗತಿಗಳು ಆರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು. ಆದರೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಹಿಂಪಡೆಯಲಾಗಿದೆ. ಕೇಂದ್ರ ಸರ್ಕಾರದಿಂದ ಮುಂದಿನ ಆದೇಶ ಬರುವವರೆಗೂ ಶಾಲೆ ತೆರೆಯುವುದಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

“ಸೆಪ್ಟೆಂಬರ್ 21 ರಿಂದ ಶಿಕ್ಷಕರು ಮತ್ತು ಪಿಯುಸಿ ಉಪನ್ಯಾಸಕರು ಶಾಲೆ, ಕಾಲೇಜುಗಳಲ್ಲಿ ಹಾಜರಿರುತ್ತಾರೆ. 9, 10 ನೇ ತರಗತಿ ವಿದ್ಯಾರ್ಥಿಗಳು, ಪಿಯುಸಿ ವಿದ್ಯಾರ್ಥಿಗಳು ಅವರ ಅಧ್ಯಯನಕ್ಕೆ ಸಂಬಂಧಿಸಿದ ಅನುಮಾನಗಳು ಇದ್ದರೆ ಶಾಲೆಗೆ ಹೋಗಿ ನಿವಾರಿಸಿಕೊಳ್ಳಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೈಸೂರಿನಲ್ಲಿ ಹೇಳಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಓಪನ್: ಆದರೆ ತರಗತಿಯಿಲ್ಲ…

ಕೇಂದ್ರದಿಂದ ಗ್ರೀನ್ ಸಿಗ್ನಲ್ ಬರುವವರೆಗೂ ರೆಗ್ಯುಲರ್ ತರಗತಿಗಳು ಪ್ರಾರಂಭವಾಗುವುದಿಲ್ಲ. ತರಗತಿಗಳಿಗೆ ಬರಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದಾರೆ. ಆದರೆ ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ. ಆನ್‌ಲೈನ್ ತರಗತಿಗಳೇ ಆರಾಮದಾಯಕವೆಂದು ಪೋಷಕರು ಹೇಳುತ್ತಾರೆ. ಇಲ್ಲಿ ಪೋಷಕರಿಗೆ ತಮ್ಮ ಮಕ್ಕಳ ಬಗ್ಗೆ ಇರುವ ಕಾಳಜಿ ಅರ್ಥ ಮಾಡಿಕೊಳ್ಳಬೇಕು ಎಂದು ಸುರೇಶ್ ಕುಮಾರ್ ಹೇಳಿದ್ದರು.

ಜೊತೆಗೆ, ಕೇಂದ್ರದಿಂದ ತರಗತಿಗಳ ಪ್ರಾರಂಭಕ್ಕೆ ಒಪ್ಪಿಗೆ ದೊರೆತ ಬಳಿಕ, ಪೋಷಕರಿಂದ ಒಪ್ಪಿಗೆ ಪತ್ರಗಳನ್ನು ಪಡೆಯುವುದನ್ನು ಕಡ್ಡಾಯಗೊಳಿಸುವ ಬಗ್ಗೆ ನಾವು ಯೋಚಿಸುತ್ತಿದ್ದೇವೆ ಎಂದಿದ್ದರು.

ಇದನ್ನೂ ಓದಿ: 59.7% ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ಶಾಲೆಗೆ ಹೋಗುತ್ತಾರೆ: NSO

ಆದರೆ, “ನಿನ್ನೆ ಕೇಂದ್ರ ಸರ್ಕಾರ ನೀಡಿದ ಸೂಚನೆಯ ಮೇರೆಗೆ, ಸೆಪ್ಟಂಬರ್ 21ರಿಂದ ಶಾಲೆಗಳನ್ನು ತೆರೆಯುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿಯನ್ನು ನಿರಾಕರಿಸಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ತಿಳಿಸಿದ್ದಾರೆ.

ಈ ಹಿಂದೆ ಕೇಂದ್ರ ಸರ್ಕಾರವೇ, 9-12ನೇ ತರಗತಿಯವರೆಗೆ ಶಾಲೆ ತೆರೆದು, ಮಾರ್ಗದರ್ಶನ ನೀಡಲು ಅವಕಾಶ ಕಲ್ಪಿಸಿಕೊಡುವಂತೆ ಸೂಚಿಸಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ತೆರೆಯಲು ಅವಕಾಶ ನೀಡಲು ಸಾಧ್ಯವಿಲ್ಲವೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ಧರಿಸಿದೆ.


ಇದನ್ನೂ ಓದಿ: ಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...