Homeಕರ್ನಾಟಕಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ: ಸೆ. 21ರಿಂದ ಶಾಲಾ-ಕಾಲೇಜು ತೆರೆಯುವುದಿಲ್ಲ!

ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ: ಸೆ. 21ರಿಂದ ಶಾಲಾ-ಕಾಲೇಜು ತೆರೆಯುವುದಿಲ್ಲ!

ನಿನ್ನೆ ಕೇಂದ್ರ ಸರ್ಕಾರ ನೀಡಿದ ಸೂಚನೆಯ ಮೇರೆಗೆ ಸೆಪ್ಟಂಬರ್ 21ರಿಂದ ಶಾಲೆಗಳನ್ನು ತೆರೆಯುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿಯನ್ನು ತಡೆಹಿಡಿಯಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು

- Advertisement -
- Advertisement -

ರಾಜ್ಯದಲ್ಲಿ ಸೋಮವಾರದಿಂದ ಶಾಲಾ-ಕಾಲೇಜು ತೆರೆಯಲಿದ್ದು, ಆದರೆ ತರಗತಿಗಳು ಆರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು. ಆದರೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಹಿಂಪಡೆಯಲಾಗಿದೆ. ಕೇಂದ್ರ ಸರ್ಕಾರದಿಂದ ಮುಂದಿನ ಆದೇಶ ಬರುವವರೆಗೂ ಶಾಲೆ ತೆರೆಯುವುದಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

“ಸೆಪ್ಟೆಂಬರ್ 21 ರಿಂದ ಶಿಕ್ಷಕರು ಮತ್ತು ಪಿಯುಸಿ ಉಪನ್ಯಾಸಕರು ಶಾಲೆ, ಕಾಲೇಜುಗಳಲ್ಲಿ ಹಾಜರಿರುತ್ತಾರೆ. 9, 10 ನೇ ತರಗತಿ ವಿದ್ಯಾರ್ಥಿಗಳು, ಪಿಯುಸಿ ವಿದ್ಯಾರ್ಥಿಗಳು ಅವರ ಅಧ್ಯಯನಕ್ಕೆ ಸಂಬಂಧಿಸಿದ ಅನುಮಾನಗಳು ಇದ್ದರೆ ಶಾಲೆಗೆ ಹೋಗಿ ನಿವಾರಿಸಿಕೊಳ್ಳಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೈಸೂರಿನಲ್ಲಿ ಹೇಳಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಓಪನ್: ಆದರೆ ತರಗತಿಯಿಲ್ಲ…

ಕೇಂದ್ರದಿಂದ ಗ್ರೀನ್ ಸಿಗ್ನಲ್ ಬರುವವರೆಗೂ ರೆಗ್ಯುಲರ್ ತರಗತಿಗಳು ಪ್ರಾರಂಭವಾಗುವುದಿಲ್ಲ. ತರಗತಿಗಳಿಗೆ ಬರಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದಾರೆ. ಆದರೆ ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ. ಆನ್‌ಲೈನ್ ತರಗತಿಗಳೇ ಆರಾಮದಾಯಕವೆಂದು ಪೋಷಕರು ಹೇಳುತ್ತಾರೆ. ಇಲ್ಲಿ ಪೋಷಕರಿಗೆ ತಮ್ಮ ಮಕ್ಕಳ ಬಗ್ಗೆ ಇರುವ ಕಾಳಜಿ ಅರ್ಥ ಮಾಡಿಕೊಳ್ಳಬೇಕು ಎಂದು ಸುರೇಶ್ ಕುಮಾರ್ ಹೇಳಿದ್ದರು.

ಜೊತೆಗೆ, ಕೇಂದ್ರದಿಂದ ತರಗತಿಗಳ ಪ್ರಾರಂಭಕ್ಕೆ ಒಪ್ಪಿಗೆ ದೊರೆತ ಬಳಿಕ, ಪೋಷಕರಿಂದ ಒಪ್ಪಿಗೆ ಪತ್ರಗಳನ್ನು ಪಡೆಯುವುದನ್ನು ಕಡ್ಡಾಯಗೊಳಿಸುವ ಬಗ್ಗೆ ನಾವು ಯೋಚಿಸುತ್ತಿದ್ದೇವೆ ಎಂದಿದ್ದರು.

ಇದನ್ನೂ ಓದಿ: 59.7% ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ಶಾಲೆಗೆ ಹೋಗುತ್ತಾರೆ: NSO

ಆದರೆ, “ನಿನ್ನೆ ಕೇಂದ್ರ ಸರ್ಕಾರ ನೀಡಿದ ಸೂಚನೆಯ ಮೇರೆಗೆ, ಸೆಪ್ಟಂಬರ್ 21ರಿಂದ ಶಾಲೆಗಳನ್ನು ತೆರೆಯುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿಯನ್ನು ನಿರಾಕರಿಸಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ತಿಳಿಸಿದ್ದಾರೆ.

ಈ ಹಿಂದೆ ಕೇಂದ್ರ ಸರ್ಕಾರವೇ, 9-12ನೇ ತರಗತಿಯವರೆಗೆ ಶಾಲೆ ತೆರೆದು, ಮಾರ್ಗದರ್ಶನ ನೀಡಲು ಅವಕಾಶ ಕಲ್ಪಿಸಿಕೊಡುವಂತೆ ಸೂಚಿಸಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ತೆರೆಯಲು ಅವಕಾಶ ನೀಡಲು ಸಾಧ್ಯವಿಲ್ಲವೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ಧರಿಸಿದೆ.


ಇದನ್ನೂ ಓದಿ: ಮಕ್ಕಳಿರುವಲ್ಲೇ ಶಾಲೆ!: ಛತ್ತಿಸ್‌ಘಡ ಶಿಕ್ಷಕನ ಮನಮೆಚ್ಚುವ ಕಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...