Homeಅಂತರಾಷ್ಟ್ರೀಯಬ್ರಿಟನ್‌ನಲ್ಲಿ ಕೊರೋನಾ ಇಳಿಮುಖ: ಜೂನ್ 1 ರಂದು ಶೂನ್ಯ ಸಾವಿನ ವರದಿ

ಬ್ರಿಟನ್‌ನಲ್ಲಿ ಕೊರೋನಾ ಇಳಿಮುಖ: ಜೂನ್ 1 ರಂದು ಶೂನ್ಯ ಸಾವಿನ ವರದಿ

- Advertisement -
- Advertisement -

ಕಳೆದು ಒಂದು ವರ್ಷದಿಂದ ಕೊರೋನಾ ಸಾಂಕ್ರಾಮಿಕವು ಯುರೋಪ್, ಅಮೆರಿಕಾ ಮತ್ತು ಬ್ರಿಟನ್‌ನಲ್ಲಿ ವ್ಯಾಪಕ ಸಾವುನೋವುಗಳಿಗೆ ಕಾರಣವಾಗಿತ್ತು. ಸದ್ಯ ಬ್ರಿಟನ್‌ ನಲ್ಲಿ ಕೊರೋನಾ ತೀವ್ರತೆ ಗಣನೀಯವಾಗಿ ಇಳಿಮುಖವಾಗಿದೆ.

ಕಳೆದ 28 ದಿನಗಳ ಅವಧಿಯಲ್ಲಿ ಜೂನ್ 1 ರ ಮಂಗಳವಾರದಂದು ಬ್ರಿಟನ್‌ನಲ್ಲಿ ಒಂದೇ ಒಂದು ಕೊರೋನಾ ಸೋಂಕಿತರ ಸಾವು ಸಂಭವಿಸಿಲ್ಲ. ಕೇವಲ 2,473 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಕಳೆದ ಒಂದು ತಿಂಗಳಿನಿಂದ ಬ್ರಿಟನ್‌ ನಲ್ಲಿ ಕೋವಿಡ್‌ ಸೋಂಕು ಮತ್ತು ಸಾವಿನ ಪ್ರಮಾಣ ಇಳಿಮುಖವಾಗುತ್ತಿದ್ದು ಕೆಲವೇ ಕೆಲವು ಸಾವಿನ ಪ್ರಕರಣಗಳು ಮಾತ್ರ ವರದಿಯಾಗುತ್ತಿದೆ. ಇದಕ್ಕು ಹಿಂದಿನ ತಿಂಗಳುಗಳಿಗೆ ಮತ್ತು ಕಳೆದ 28 ದಿನಗಳಿಗೆ ಹೋಲಿಸಿದರೆ ಸೋಂಕಿನ ತೀವ್ರತೆ ಸಾಕಷ್ಟು ಇಳಿಮುಖವಾಗಿದೆ ಎಂದು ಬ್ರಿಟನ್‌ ಸರ್ಕಾರ ತಿಳಿಸಿದೆ.

ಕಳೆದ ವರ್ಷ ಮಾರ್ಚ್‌ 2020 ರ ಅವಧಿಯಲ್ಲಿ ಬ್ರಿಟನ್‌ ನಲ್ಲಿ ಕೊರೋನಾದಿಂದ ಯಾವುದೇ ಸಾವು ಸಂಭವಿಸಿರಲಿಲ್ಲ. ಅದಾದ ಮೇಲೆ 15 ತಿಂಗಳುಗಳ ಕಾಲ್‌ ಬ್ರಿಟನ್‌ ದೇಶದಲ್ಲಿ ಕೊರೋನಾ ಸೋಂಕು ಏರುತ್ತ ಇಳಿಯುತ್ತ ಸಾಗಿತ್ತು. ಕೆಲವು ತಿಂಗಳು ಬ್ರಿಟನ್‌ ನಲ್ಲಿ ಲಾಕ್‌ ಡೌನ್‌ ಕೂಡ ಹೇರಲಾಗಿತ್ತು. ಈಗ 15 ತಿಂಗಳ ನಂತರ ಬ್ರಿಟನ್‌ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಅತ್ಯಂತ ಕನಿಷ್ಠ ಮಟ್ಟಕ್ಕೆ ಬಂದಿದೆ.

ಸಂಪೂರ್ಣ ಬ್ರಿಟನ್‌ ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಸೋಮವಾರ ದೇಶದಲ್ಲಿ ಯಾವುದೇ ಕೋವಿಡ್‌ ಸಂಬಂಧಿಸಿದ ಸಾವು ಸಂಭವಿಸಿಲ್ಲ. ವ್ಯಾಕ್ಸೀನ್‌ ಗಳು ಕೆಲಸ ಮಾಡುತ್ತಿರುವುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಬ್ರಿಟನ್‌ ನ ಆರೋಗ್ಯ ಸಚಿವ ಮ್ಯಾಟ್ ಹ್ಯಾಂಕೊಕ್‌ ತಿಳಿಸಿದ್ದಾರೆ.

ಕೊರೋನಾ ಸೋಂಕು ಬ್ರಿಟನ್‌ ನಿಂದ ಇನ್ನೂ ನಿರ್ಮೂಲನೆಯಾಗಿಲ್ಲ ಎಂಬುದನ್ನು ಜನರು ಮರೆಯಬಾರದು. ಕೈತೊಳೆಯುತ್ತಿರುವ, ಮುಖ ತೊಳೆಯುತ್ತಿರುವ, ದೈಹಿಕ ಅಂತರದ ನಿಯಮಗಳನ್ನು ಮುಂದುವರೆಸಿ. ವ್ಯಾಕ್ಸೀನ್‌ ನ ಎರಡು ಡೋಸ್‌ ಗಳನ್ನು ಕಡ್ಡಾಯವಾಗಿ ಪಡೆಯಿರಿ ಎಂದು ಬ್ರಿಟನ್‌ ನ ಆರೋಗ್ಯ ಸಚಿವ ಮ್ಯಾಟ್‌ ಹ್ಯಾಂಕೊಕ್‌ ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

ಇದುವರೆಗೆ ಬ್ರಿಟನ್‌ನಲ್ಲಿ 1,27,782 ಜನರು ಕೋವಿಡ್‌ ನಿಂದ ಮೃತಪಟ್ಟಿದ್ದಾರೆ. ಬ್ರಿಟನ್‌ ಕೋವಿಡ್‌ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಜಗತ್ತಿನಲ್ಲಿ 5 ನೇ ಸ್ಥಾನದಲ್ಲಿದೆ ಎಂದು ಜಾನ್ಸ್‌ ಹಾಪಕಿನ್ಸ್‌ ವಿಶ್ವವಿದ್ಯಾಲಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ..


ಇದನ್ನೂ ಓದಿ: ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...