Homeಅಂತರಾಷ್ಟ್ರೀಯಬ್ರಿಟನ್‌ನಲ್ಲಿ ಕೊರೋನಾ ಇಳಿಮುಖ: ಜೂನ್ 1 ರಂದು ಶೂನ್ಯ ಸಾವಿನ ವರದಿ

ಬ್ರಿಟನ್‌ನಲ್ಲಿ ಕೊರೋನಾ ಇಳಿಮುಖ: ಜೂನ್ 1 ರಂದು ಶೂನ್ಯ ಸಾವಿನ ವರದಿ

- Advertisement -
- Advertisement -

ಕಳೆದು ಒಂದು ವರ್ಷದಿಂದ ಕೊರೋನಾ ಸಾಂಕ್ರಾಮಿಕವು ಯುರೋಪ್, ಅಮೆರಿಕಾ ಮತ್ತು ಬ್ರಿಟನ್‌ನಲ್ಲಿ ವ್ಯಾಪಕ ಸಾವುನೋವುಗಳಿಗೆ ಕಾರಣವಾಗಿತ್ತು. ಸದ್ಯ ಬ್ರಿಟನ್‌ ನಲ್ಲಿ ಕೊರೋನಾ ತೀವ್ರತೆ ಗಣನೀಯವಾಗಿ ಇಳಿಮುಖವಾಗಿದೆ.

ಕಳೆದ 28 ದಿನಗಳ ಅವಧಿಯಲ್ಲಿ ಜೂನ್ 1 ರ ಮಂಗಳವಾರದಂದು ಬ್ರಿಟನ್‌ನಲ್ಲಿ ಒಂದೇ ಒಂದು ಕೊರೋನಾ ಸೋಂಕಿತರ ಸಾವು ಸಂಭವಿಸಿಲ್ಲ. ಕೇವಲ 2,473 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಕಳೆದ ಒಂದು ತಿಂಗಳಿನಿಂದ ಬ್ರಿಟನ್‌ ನಲ್ಲಿ ಕೋವಿಡ್‌ ಸೋಂಕು ಮತ್ತು ಸಾವಿನ ಪ್ರಮಾಣ ಇಳಿಮುಖವಾಗುತ್ತಿದ್ದು ಕೆಲವೇ ಕೆಲವು ಸಾವಿನ ಪ್ರಕರಣಗಳು ಮಾತ್ರ ವರದಿಯಾಗುತ್ತಿದೆ. ಇದಕ್ಕು ಹಿಂದಿನ ತಿಂಗಳುಗಳಿಗೆ ಮತ್ತು ಕಳೆದ 28 ದಿನಗಳಿಗೆ ಹೋಲಿಸಿದರೆ ಸೋಂಕಿನ ತೀವ್ರತೆ ಸಾಕಷ್ಟು ಇಳಿಮುಖವಾಗಿದೆ ಎಂದು ಬ್ರಿಟನ್‌ ಸರ್ಕಾರ ತಿಳಿಸಿದೆ.

ಕಳೆದ ವರ್ಷ ಮಾರ್ಚ್‌ 2020 ರ ಅವಧಿಯಲ್ಲಿ ಬ್ರಿಟನ್‌ ನಲ್ಲಿ ಕೊರೋನಾದಿಂದ ಯಾವುದೇ ಸಾವು ಸಂಭವಿಸಿರಲಿಲ್ಲ. ಅದಾದ ಮೇಲೆ 15 ತಿಂಗಳುಗಳ ಕಾಲ್‌ ಬ್ರಿಟನ್‌ ದೇಶದಲ್ಲಿ ಕೊರೋನಾ ಸೋಂಕು ಏರುತ್ತ ಇಳಿಯುತ್ತ ಸಾಗಿತ್ತು. ಕೆಲವು ತಿಂಗಳು ಬ್ರಿಟನ್‌ ನಲ್ಲಿ ಲಾಕ್‌ ಡೌನ್‌ ಕೂಡ ಹೇರಲಾಗಿತ್ತು. ಈಗ 15 ತಿಂಗಳ ನಂತರ ಬ್ರಿಟನ್‌ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಅತ್ಯಂತ ಕನಿಷ್ಠ ಮಟ್ಟಕ್ಕೆ ಬಂದಿದೆ.

ಸಂಪೂರ್ಣ ಬ್ರಿಟನ್‌ ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಸೋಮವಾರ ದೇಶದಲ್ಲಿ ಯಾವುದೇ ಕೋವಿಡ್‌ ಸಂಬಂಧಿಸಿದ ಸಾವು ಸಂಭವಿಸಿಲ್ಲ. ವ್ಯಾಕ್ಸೀನ್‌ ಗಳು ಕೆಲಸ ಮಾಡುತ್ತಿರುವುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಬ್ರಿಟನ್‌ ನ ಆರೋಗ್ಯ ಸಚಿವ ಮ್ಯಾಟ್ ಹ್ಯಾಂಕೊಕ್‌ ತಿಳಿಸಿದ್ದಾರೆ.

ಕೊರೋನಾ ಸೋಂಕು ಬ್ರಿಟನ್‌ ನಿಂದ ಇನ್ನೂ ನಿರ್ಮೂಲನೆಯಾಗಿಲ್ಲ ಎಂಬುದನ್ನು ಜನರು ಮರೆಯಬಾರದು. ಕೈತೊಳೆಯುತ್ತಿರುವ, ಮುಖ ತೊಳೆಯುತ್ತಿರುವ, ದೈಹಿಕ ಅಂತರದ ನಿಯಮಗಳನ್ನು ಮುಂದುವರೆಸಿ. ವ್ಯಾಕ್ಸೀನ್‌ ನ ಎರಡು ಡೋಸ್‌ ಗಳನ್ನು ಕಡ್ಡಾಯವಾಗಿ ಪಡೆಯಿರಿ ಎಂದು ಬ್ರಿಟನ್‌ ನ ಆರೋಗ್ಯ ಸಚಿವ ಮ್ಯಾಟ್‌ ಹ್ಯಾಂಕೊಕ್‌ ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

ಇದುವರೆಗೆ ಬ್ರಿಟನ್‌ನಲ್ಲಿ 1,27,782 ಜನರು ಕೋವಿಡ್‌ ನಿಂದ ಮೃತಪಟ್ಟಿದ್ದಾರೆ. ಬ್ರಿಟನ್‌ ಕೋವಿಡ್‌ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಜಗತ್ತಿನಲ್ಲಿ 5 ನೇ ಸ್ಥಾನದಲ್ಲಿದೆ ಎಂದು ಜಾನ್ಸ್‌ ಹಾಪಕಿನ್ಸ್‌ ವಿಶ್ವವಿದ್ಯಾಲಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ..


ಇದನ್ನೂ ಓದಿ: ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...