Homeಅಂತರಾಷ್ಟ್ರೀಯಬ್ರಿಟನ್‌ನಲ್ಲಿ ಕೊರೋನಾ ಇಳಿಮುಖ: ಜೂನ್ 1 ರಂದು ಶೂನ್ಯ ಸಾವಿನ ವರದಿ

ಬ್ರಿಟನ್‌ನಲ್ಲಿ ಕೊರೋನಾ ಇಳಿಮುಖ: ಜೂನ್ 1 ರಂದು ಶೂನ್ಯ ಸಾವಿನ ವರದಿ

- Advertisement -
- Advertisement -

ಕಳೆದು ಒಂದು ವರ್ಷದಿಂದ ಕೊರೋನಾ ಸಾಂಕ್ರಾಮಿಕವು ಯುರೋಪ್, ಅಮೆರಿಕಾ ಮತ್ತು ಬ್ರಿಟನ್‌ನಲ್ಲಿ ವ್ಯಾಪಕ ಸಾವುನೋವುಗಳಿಗೆ ಕಾರಣವಾಗಿತ್ತು. ಸದ್ಯ ಬ್ರಿಟನ್‌ ನಲ್ಲಿ ಕೊರೋನಾ ತೀವ್ರತೆ ಗಣನೀಯವಾಗಿ ಇಳಿಮುಖವಾಗಿದೆ.

ಕಳೆದ 28 ದಿನಗಳ ಅವಧಿಯಲ್ಲಿ ಜೂನ್ 1 ರ ಮಂಗಳವಾರದಂದು ಬ್ರಿಟನ್‌ನಲ್ಲಿ ಒಂದೇ ಒಂದು ಕೊರೋನಾ ಸೋಂಕಿತರ ಸಾವು ಸಂಭವಿಸಿಲ್ಲ. ಕೇವಲ 2,473 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಕಳೆದ ಒಂದು ತಿಂಗಳಿನಿಂದ ಬ್ರಿಟನ್‌ ನಲ್ಲಿ ಕೋವಿಡ್‌ ಸೋಂಕು ಮತ್ತು ಸಾವಿನ ಪ್ರಮಾಣ ಇಳಿಮುಖವಾಗುತ್ತಿದ್ದು ಕೆಲವೇ ಕೆಲವು ಸಾವಿನ ಪ್ರಕರಣಗಳು ಮಾತ್ರ ವರದಿಯಾಗುತ್ತಿದೆ. ಇದಕ್ಕು ಹಿಂದಿನ ತಿಂಗಳುಗಳಿಗೆ ಮತ್ತು ಕಳೆದ 28 ದಿನಗಳಿಗೆ ಹೋಲಿಸಿದರೆ ಸೋಂಕಿನ ತೀವ್ರತೆ ಸಾಕಷ್ಟು ಇಳಿಮುಖವಾಗಿದೆ ಎಂದು ಬ್ರಿಟನ್‌ ಸರ್ಕಾರ ತಿಳಿಸಿದೆ.

ಕಳೆದ ವರ್ಷ ಮಾರ್ಚ್‌ 2020 ರ ಅವಧಿಯಲ್ಲಿ ಬ್ರಿಟನ್‌ ನಲ್ಲಿ ಕೊರೋನಾದಿಂದ ಯಾವುದೇ ಸಾವು ಸಂಭವಿಸಿರಲಿಲ್ಲ. ಅದಾದ ಮೇಲೆ 15 ತಿಂಗಳುಗಳ ಕಾಲ್‌ ಬ್ರಿಟನ್‌ ದೇಶದಲ್ಲಿ ಕೊರೋನಾ ಸೋಂಕು ಏರುತ್ತ ಇಳಿಯುತ್ತ ಸಾಗಿತ್ತು. ಕೆಲವು ತಿಂಗಳು ಬ್ರಿಟನ್‌ ನಲ್ಲಿ ಲಾಕ್‌ ಡೌನ್‌ ಕೂಡ ಹೇರಲಾಗಿತ್ತು. ಈಗ 15 ತಿಂಗಳ ನಂತರ ಬ್ರಿಟನ್‌ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಅತ್ಯಂತ ಕನಿಷ್ಠ ಮಟ್ಟಕ್ಕೆ ಬಂದಿದೆ.

ಸಂಪೂರ್ಣ ಬ್ರಿಟನ್‌ ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಸೋಮವಾರ ದೇಶದಲ್ಲಿ ಯಾವುದೇ ಕೋವಿಡ್‌ ಸಂಬಂಧಿಸಿದ ಸಾವು ಸಂಭವಿಸಿಲ್ಲ. ವ್ಯಾಕ್ಸೀನ್‌ ಗಳು ಕೆಲಸ ಮಾಡುತ್ತಿರುವುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಬ್ರಿಟನ್‌ ನ ಆರೋಗ್ಯ ಸಚಿವ ಮ್ಯಾಟ್ ಹ್ಯಾಂಕೊಕ್‌ ತಿಳಿಸಿದ್ದಾರೆ.

ಕೊರೋನಾ ಸೋಂಕು ಬ್ರಿಟನ್‌ ನಿಂದ ಇನ್ನೂ ನಿರ್ಮೂಲನೆಯಾಗಿಲ್ಲ ಎಂಬುದನ್ನು ಜನರು ಮರೆಯಬಾರದು. ಕೈತೊಳೆಯುತ್ತಿರುವ, ಮುಖ ತೊಳೆಯುತ್ತಿರುವ, ದೈಹಿಕ ಅಂತರದ ನಿಯಮಗಳನ್ನು ಮುಂದುವರೆಸಿ. ವ್ಯಾಕ್ಸೀನ್‌ ನ ಎರಡು ಡೋಸ್‌ ಗಳನ್ನು ಕಡ್ಡಾಯವಾಗಿ ಪಡೆಯಿರಿ ಎಂದು ಬ್ರಿಟನ್‌ ನ ಆರೋಗ್ಯ ಸಚಿವ ಮ್ಯಾಟ್‌ ಹ್ಯಾಂಕೊಕ್‌ ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

ಇದುವರೆಗೆ ಬ್ರಿಟನ್‌ನಲ್ಲಿ 1,27,782 ಜನರು ಕೋವಿಡ್‌ ನಿಂದ ಮೃತಪಟ್ಟಿದ್ದಾರೆ. ಬ್ರಿಟನ್‌ ಕೋವಿಡ್‌ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಜಗತ್ತಿನಲ್ಲಿ 5 ನೇ ಸ್ಥಾನದಲ್ಲಿದೆ ಎಂದು ಜಾನ್ಸ್‌ ಹಾಪಕಿನ್ಸ್‌ ವಿಶ್ವವಿದ್ಯಾಲಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ..


ಇದನ್ನೂ ಓದಿ: ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...