Homeಕರೋನಾ ತಲ್ಲಣಲಾಕ್‌ಡೌನ್‌ ಬೇಡವೆಂದರೆ ಸರ್ಕಾರದೊಂದಿಗೆ ಕೊರೊನಾ ನಿಯಂತ್ರಿಸಲು ಸಹಕರಿಸಿ: ಯಡಿಯೂರಪ್ಪ

ಲಾಕ್‌ಡೌನ್‌ ಬೇಡವೆಂದರೆ ಸರ್ಕಾರದೊಂದಿಗೆ ಕೊರೊನಾ ನಿಯಂತ್ರಿಸಲು ಸಹಕರಿಸಿ: ಯಡಿಯೂರಪ್ಪ

- Advertisement -
- Advertisement -

ರಾಜ್ಯದಲ್ಲಿಯೂ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ನಿಯಂತ್ರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ನಾಳೆ (ಸೋಮವಾರ) ತಜ್ಞರ ಮತ್ತು ಅಧಿಕಾರಿಗಳ ಸಭೆ ಕರೆದಿದ್ದಾರೆ.

ಈ ಕುರಿತು ಮಾತನಾಡಿರುವ ಅವರು “ಸಾಂಕ್ರಾಮಿಕ ರೋಗವು ನಿಯಂತ್ರಣದಲ್ಲಿಲ್ಲ ಎಂದು ತೋರುತ್ತಿದೆ. ಜನರು ಮತ್ತೊಂದು ಲಾಕ್‌ಡೌನ್‌ ಬೇಡ ಎಂದು ಅಂದುಕೊಂಡಿದ್ದರೆ, ಕೊರೊನಾ ನಿಯಮಗಳನ್ನು ಪಾಲಿಸಿ ಸರ್ಕಾರದ ಜೊತೆಗೆ ಸಹಕರಿಸಬೇಕು” ಎಂದಿದ್ದಾರೆ.

ಈಗಾಗಲೇ ರಾಜ್ಯದ ಸುತ್ತಲಿನ ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ರಾಜ್ಯದಲ್ಲಿಯೂ ಕೊರೊನಾ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

“ನಾನು ಜನರಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಸರ್ಕಾರದೊಂದಿಗೆ ಕೊರೊನಾ ತಡೆಗೆ ಸಹಕಾರ ನೀಡಿ ಎಂದು. ಜನರು ಸಹಕರಿಸಿದರೆ ಲಾಕ್ ಡೌನ್ ಇಲ್ಲದೆ ನಾವು ಕೊರೊನಾ ನಿಯಂತ್ರಿಸಬಹುದು ಎಂಬ ವಿಶ್ವಾಸವಿದೆ” ಎಂದು ಬಿಎಸ್‌ವೈ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಹೊಸ ಕೊರೊನಾ ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ.

ಕಳೆದ ವರ್ಷ ಮಾರ್ಚ್‌ನಲ್ಲಿ ವಿಧಿಸಲಾಗಿದ್ದ ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿವಿಧ ಹಂತಗಳಲ್ಲಿ, ಹಲವು ಮಾರ್ಗಸೂಚಿಗಳನ್ನು ಅನುಸರಿಸಲು ತಿಳಿಸಿ ಲಾಕ್‌ಡೌನ್‌ ಸಡಿಲಿಸಲಾಯಿತು. ಪ್ರಸ್ತುತ ರಾಜ್ಯದಲ್ಲಿ ಬಹುತೇಕ ಎಲ್ಲಾ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಟ್ಟಿದೆ.

ಜನವರಿ 22 ರ ನಂತರ ಮೊದಲ ಬಾರಿಗೆ ಕರ್ನಾಟಕದಲ್ಲಿ ದೈನಂದಿನ ಕೊರೊನಾ ಪ್ರಕರಣಗಳು ಕಳೆದ ಶನಿವಾರ 900 ಪ್ರಕರಣ ದಾಟಿದೆ. ಇದರಲ್ಲಿ 630 ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯಲ್ಲಿಯೇ ಕಂಡು ಬಂದಿವೆ.

ʼಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ನಿಯಂತ್ರಣಕ್ಕೆ ಬರದಂತೆ ತೋರುತ್ತಿದೆ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಹಾಗಾಗಿ ನಾಳೆ ತಜ್ಞರ ಸಭೆ ಕರೆದಿದ್ದೇನೆʼ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋರೋನ ನಿಯಂತ್ರಿಸಲು ಸಾಧ್ಯವಾಗದಿದ್ದಲ್ಲಿ ಯಡೀಯೂರಪ್ಪನವರೇ ಕುರ್ಚಿ ಬಿಟ್ಟು ಮನೆಗೆ ಹೋಗಿ ಅದಲ್ಲದೆ ಸಾರ್ವಜನಿಕರನ್ನು ಬೆದರಿಸುವ ನಿಮ್ಮ ನಡತೆ ನಿಮ್ಮ ಅಧಿಕಾರಿಗಳು ಮತ್ತು ನಿಮ್ಮ ಮನೆಯಯವರಲ್ಲಿ ತೋರಿಸಿದರೆ ಸಾಕು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...