Homeಕರೋನಾ ತಲ್ಲಣಆರೋಗ್ಯ ಕಾರ್ಯಕರ್ತರ ಸಾವಿನ ವಿಂಗಡಣೆಯ ಡೇಟಾವಿಲ್ಲ ಎಂದ ಒಕ್ಕೂಟ ಸರ್ಕಾರ

ಆರೋಗ್ಯ ಕಾರ್ಯಕರ್ತರ ಸಾವಿನ ವಿಂಗಡಣೆಯ ಡೇಟಾವಿಲ್ಲ ಎಂದ ಒಕ್ಕೂಟ ಸರ್ಕಾರ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮಾರ್ಚ್ 2020 ರಿಂದ ಏಕಾಏಕಿ ಏರಿಕೆಯಾದಾಗಿನಿಂದ ಉಂಟಾದ ಸರ್ಕಾರಿ ಮತ್ತು ಖಾಸಗಿ ವೈದ್ಯರು ಸೇರಿದಂತೆ ಆರೋಗ್ಯ ಕಾರ್ಯಕರ್ತರ ಸಾವಿನ ಕುರಿತು ವಿಂಗಡಣೆಯ ಡೇಟಾವನ್ನು ಹೊಂದಿಲ್ಲ ಎಂದು ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಒಪ್ಪಿಕೊಂಡಿದೆ.

ಸಾಂಕ್ರಾಮಿಕ ಸಮಯದಲ್ಲಿ ಉಂಟಾದ ಆರೋಗ್ಯ ಕಾರ್ಯಕರ್ತರ ಒಟ್ಟು ಸಾವಿನ ಕುರಿತು ವಿಂಗಡಣೆಯ ಡೇಟಾವನ್ನು ನೀಡುವಂತೆ ಒತ್ತಾಯಿಸಿ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒಬ್ರಿಯನ್ ಅವರ ಪ್ರಶ್ನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಲಿಖಿತ ಉತ್ತರ ನೀಡಿದೆ.

ಈ ಅತೃಪ್ತಿಕರ ಉತ್ತರದ ಬಗ್ಗೆ ವಿಷಾದಿಸುತ್ತಾ, ಟಿಎಂಸಿ ಸಂಸದ, ಎನ್‌ಡಿಎ ಸರ್ಕಾರ ಈಗ ‘ಡೇಟಾ ಲಭ್ಯವಿಲ್ಲ’ ಎಂಬ ಕ್ಲೀಷೆಗೆ ಬಂದು ನಿಂತಿದೆ ಎಂದು ಲೇವಡಿ ಮಾಡಿದ್ದಾರೆ. ’ಆರೋಗ್ಯವು ರಾಜ್ಯಗಳ ವಿಷಯವಾಗಿರುವುದರಿಂದ, ಭಾರತ ಸರ್ಕಾರವು ಕೊರೊನಾ ಒಟ್ಟು ಪ್ರಕರಣಗಳು ಮತ್ತು ರಾಜ್ಯಗಳು ವರದಿ ಮಾಡಿದ ಸಾವುಗಳ ಡೇಟಾವನ್ನು ನಿಯಮಿತವಾಗಿ ನಿರ್ವಹಿಸುತ್ತಿದೆ’ ಎಂದು ಸಚಿವಾಲಯ ಉತ್ತರ ನೀಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಶಾ ಹೇಳಿಕೆ ನಿಜವೇ?

“ವಿಂಗಡಣೆಯ ಡೇಟಾವನ್ನು ರಾಜ್ಯ ಸರ್ಕಾರ ನಿರ್ವಹಿಸುವ ಅಗತ್ಯವಿದೆ. ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿವರಗಳನ್ನು ಒದಗಿಸುವಂತೆ ವಿನಂತಿಸಿದೆ. ಆದರೆ, ಇದುವರೆಗೆ ಮಹಾರಾಷ್ಟ್ರ ಸೇರಿದಂತೆ ಆರು ರಾಜ್ಯಗಳು ಮಾತ್ರ ವಿವರಗಳನ್ನು ಒದಗಿಸಿವೆ” ಎಂದು ತಿಳಿಸಿದೆ.

ರಾಜ್ಯಸಭೆಯಲ್ಲಿ ಟಿಎಂಸಿ ಸಂಸದ ಡೆರೆಕ್ ಒಬ್ರಿಯನ್‌ಗೆ ಲಭ್ಯವಾದ ಮಾಹಿತಿಯ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 67 ವೈದ್ಯರು ಮತ್ತು 19 ದಾದಿಯರು ಸೇರಿದಂತೆ ಒಟ್ಟು 217 ಆರೋಗ್ಯ ಕಾರ್ಯಕರ್ತರು ಪ್ರಾಣ ಕಳೆದುಕೊಂಡಿದ್ದಾರೆ.

ಗುಜರಾತ್‌ನಲ್ಲಿ 20 ವೈದ್ಯರು, 20 ದಾದಿಯರು, 6 ಆಂಬ್ಯುಲೆನ್ಸ್ ಚಾಲಕರು ಮತ್ತು 128 ಅರೆವೈದ್ಯರು ಕೊರೊನಾ ಸಮಯದಲ್ಲಿ ಕೋವಿಡ್ ರೋಗಿಗಳಿಗೆ ಸೇವೆ ಸಲ್ಲಿಸುವ ಮೂಲಕ ಪ್ರಾಣ ಕಳೆದುಕೊಂಡಿದ್ದಾರೆ.

’ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 2022 ರ ಜನವರಿ 31 ರವರೆಗೆ ಒಟ್ಟು 808 ಕೋಟಿ ರೂಪಾಯಿಗಳನ್ನು ಮೃತ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರ ಕುಟುಂಬದ ಸದಸ್ಯರಿಗೆ ಪಾವತಿಸಲಾಗಿದೆ.

ಸಾಂಕ್ರಾಮಿಕ ಸಮಯದಲ್ಲಿ ಕರ್ತವ್ಯದಲ್ಲಿರುವ ಸುಮಾರು 22.12 ಲಕ್ಷ ಸರ್ಕಾರಿ ಮತ್ತು ಖಾಸಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು 2020 ರಲ್ಲಿ ಪ್ರಾರಂಭಿಸಲಾಯಿತು.


ಇದನ್ನೂ ಓದಿ: ಕಾಂಗ್ರೆಸ್ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸುವ ಮೂಲಕ ದೇಶಾದ್ಯಂತ ಕೊರೊನಾ ಹರಡಿತು: ಪಿಎಂ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...