Homeಕರೋನಾ ತಲ್ಲಣಆರೋಗ್ಯ ಕಾರ್ಯಕರ್ತರ ಸಾವಿನ ವಿಂಗಡಣೆಯ ಡೇಟಾವಿಲ್ಲ ಎಂದ ಒಕ್ಕೂಟ ಸರ್ಕಾರ

ಆರೋಗ್ಯ ಕಾರ್ಯಕರ್ತರ ಸಾವಿನ ವಿಂಗಡಣೆಯ ಡೇಟಾವಿಲ್ಲ ಎಂದ ಒಕ್ಕೂಟ ಸರ್ಕಾರ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮಾರ್ಚ್ 2020 ರಿಂದ ಏಕಾಏಕಿ ಏರಿಕೆಯಾದಾಗಿನಿಂದ ಉಂಟಾದ ಸರ್ಕಾರಿ ಮತ್ತು ಖಾಸಗಿ ವೈದ್ಯರು ಸೇರಿದಂತೆ ಆರೋಗ್ಯ ಕಾರ್ಯಕರ್ತರ ಸಾವಿನ ಕುರಿತು ವಿಂಗಡಣೆಯ ಡೇಟಾವನ್ನು ಹೊಂದಿಲ್ಲ ಎಂದು ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಒಪ್ಪಿಕೊಂಡಿದೆ.

ಸಾಂಕ್ರಾಮಿಕ ಸಮಯದಲ್ಲಿ ಉಂಟಾದ ಆರೋಗ್ಯ ಕಾರ್ಯಕರ್ತರ ಒಟ್ಟು ಸಾವಿನ ಕುರಿತು ವಿಂಗಡಣೆಯ ಡೇಟಾವನ್ನು ನೀಡುವಂತೆ ಒತ್ತಾಯಿಸಿ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒಬ್ರಿಯನ್ ಅವರ ಪ್ರಶ್ನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಲಿಖಿತ ಉತ್ತರ ನೀಡಿದೆ.

ಈ ಅತೃಪ್ತಿಕರ ಉತ್ತರದ ಬಗ್ಗೆ ವಿಷಾದಿಸುತ್ತಾ, ಟಿಎಂಸಿ ಸಂಸದ, ಎನ್‌ಡಿಎ ಸರ್ಕಾರ ಈಗ ‘ಡೇಟಾ ಲಭ್ಯವಿಲ್ಲ’ ಎಂಬ ಕ್ಲೀಷೆಗೆ ಬಂದು ನಿಂತಿದೆ ಎಂದು ಲೇವಡಿ ಮಾಡಿದ್ದಾರೆ. ’ಆರೋಗ್ಯವು ರಾಜ್ಯಗಳ ವಿಷಯವಾಗಿರುವುದರಿಂದ, ಭಾರತ ಸರ್ಕಾರವು ಕೊರೊನಾ ಒಟ್ಟು ಪ್ರಕರಣಗಳು ಮತ್ತು ರಾಜ್ಯಗಳು ವರದಿ ಮಾಡಿದ ಸಾವುಗಳ ಡೇಟಾವನ್ನು ನಿಯಮಿತವಾಗಿ ನಿರ್ವಹಿಸುತ್ತಿದೆ’ ಎಂದು ಸಚಿವಾಲಯ ಉತ್ತರ ನೀಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಶಾ ಹೇಳಿಕೆ ನಿಜವೇ?

“ವಿಂಗಡಣೆಯ ಡೇಟಾವನ್ನು ರಾಜ್ಯ ಸರ್ಕಾರ ನಿರ್ವಹಿಸುವ ಅಗತ್ಯವಿದೆ. ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿವರಗಳನ್ನು ಒದಗಿಸುವಂತೆ ವಿನಂತಿಸಿದೆ. ಆದರೆ, ಇದುವರೆಗೆ ಮಹಾರಾಷ್ಟ್ರ ಸೇರಿದಂತೆ ಆರು ರಾಜ್ಯಗಳು ಮಾತ್ರ ವಿವರಗಳನ್ನು ಒದಗಿಸಿವೆ” ಎಂದು ತಿಳಿಸಿದೆ.

ರಾಜ್ಯಸಭೆಯಲ್ಲಿ ಟಿಎಂಸಿ ಸಂಸದ ಡೆರೆಕ್ ಒಬ್ರಿಯನ್‌ಗೆ ಲಭ್ಯವಾದ ಮಾಹಿತಿಯ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 67 ವೈದ್ಯರು ಮತ್ತು 19 ದಾದಿಯರು ಸೇರಿದಂತೆ ಒಟ್ಟು 217 ಆರೋಗ್ಯ ಕಾರ್ಯಕರ್ತರು ಪ್ರಾಣ ಕಳೆದುಕೊಂಡಿದ್ದಾರೆ.

ಗುಜರಾತ್‌ನಲ್ಲಿ 20 ವೈದ್ಯರು, 20 ದಾದಿಯರು, 6 ಆಂಬ್ಯುಲೆನ್ಸ್ ಚಾಲಕರು ಮತ್ತು 128 ಅರೆವೈದ್ಯರು ಕೊರೊನಾ ಸಮಯದಲ್ಲಿ ಕೋವಿಡ್ ರೋಗಿಗಳಿಗೆ ಸೇವೆ ಸಲ್ಲಿಸುವ ಮೂಲಕ ಪ್ರಾಣ ಕಳೆದುಕೊಂಡಿದ್ದಾರೆ.

’ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 2022 ರ ಜನವರಿ 31 ರವರೆಗೆ ಒಟ್ಟು 808 ಕೋಟಿ ರೂಪಾಯಿಗಳನ್ನು ಮೃತ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರ ಕುಟುಂಬದ ಸದಸ್ಯರಿಗೆ ಪಾವತಿಸಲಾಗಿದೆ.

ಸಾಂಕ್ರಾಮಿಕ ಸಮಯದಲ್ಲಿ ಕರ್ತವ್ಯದಲ್ಲಿರುವ ಸುಮಾರು 22.12 ಲಕ್ಷ ಸರ್ಕಾರಿ ಮತ್ತು ಖಾಸಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು 2020 ರಲ್ಲಿ ಪ್ರಾರಂಭಿಸಲಾಯಿತು.


ಇದನ್ನೂ ಓದಿ: ಕಾಂಗ್ರೆಸ್ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸುವ ಮೂಲಕ ದೇಶಾದ್ಯಂತ ಕೊರೊನಾ ಹರಡಿತು: ಪಿಎಂ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...