Homeಮುಖಪುಟಕೊರೊನಾ: ಏ.03ರೊಳಗೆ ಸಮಗ್ರ ಯೋಜನೆಯೊಂದಿಗೆ ಬನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು

ಕೊರೊನಾ: ಏ.03ರೊಳಗೆ ಸಮಗ್ರ ಯೋಜನೆಯೊಂದಿಗೆ ಬನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು

- Advertisement -
- Advertisement -

ಏಪ್ರಿಲ್ 3 ರೊಳಗೆ ಅಗತ್ಯವಿರುವ ಜನರು, ಬಡ ಜನರು, ದೈನಂದಿನ ಕೂಲಿ ಕಾರ್ಮಿಕರಿಗೆ ಸಮರ್ಪಕವಾಗಿ ಆಹಾರ ಧಾನ್ಯಗಳು ಮತ್ತು ಆಹಾರವನ್ನು ಪೂರೈಸಲು ಸಮಗ್ರ ಯೋಜನೆಯನ್ನು ಹೊರತರುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ ನಿರಾಶ್ರಿತ ಜನರು ಬೀದಿಗಳಲ್ಲಿ, ರೈಲ್ವೆ ಪ್ಲಾಟ್‌ಫಾರ್ಮ್‌ಗಳು, ಬಸ್ ನಿಲ್ದಾಣಗಳು ಇತ್ಯಾದಿಗಳಲ್ಲಿ ವಾಸಿಸುತ್ತಿರುವ ಜನರ ಹಿತರಕ್ಷಣೆ ಮುಖ್ಯ ಎಂಬುದನ್ನು ಹೈಕೋರ್ಟ್‌ ಒತ್ತಿ ಹೇಳಿದೆ.

ಲಾಕ್‌ಡೌನ್‌ ಸಮಯದಲ್ಲಿ ವಲಸೆ ಕಾರ್ಮಿಕರು ಮತ್ತು ನಿರಾಶ್ರಿತರು ಆಹಾರ ಸಿಗದೇ ಕಂಗಾಲಾಗಿದ್ದಾರೆ ಎಂದು ಸಂಧ್ಯಾ ಯು ಪ್ರಭು ಮತ್ತು ಇತರರು ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ವಿಭಾಗೀಯ ಪೀಠ ವಿಡಿಯೋ ಕಾನ್ಫರೆನ್ಸ್‌ ಮೂಲಕ ಆಲಿಸಿ ನಿರ್ದೇಶನಗಳನ್ನು ನೀಡಿದೆ.

ನ್ಯಾಯಾಲಯವು “ನಾವು ರಾಷ್ಟ್ರೀಯ ವಿಪತ್ತನ್ನು ಎದುರಿಸುತ್ತಿದ್ದೇವೆ. 2005ರ ವಿಪತ್ತು ನಿರ್ವಹಣಾ ಕಾಯ್ದೆಯ ನಿಬಂಧನೆಗಳನ್ನು ಆಹ್ವಾನಿಸಿದ್ದೇವೆ. ಸ್ವರಾಜ್ ಅಭಿಯಾನ್, Vs ಯೂನಿಯನ್ ಆಫ್ ಇಂಡಿಯಾ ಮತ್ತು ಇತರರು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪಿನ ಪ್ಯಾರಾಗ್ರಾಫ್ 128.4 ಒಳಗೊಂಡಿರುವ ನಿರ್ದೇಶನಗಳನ್ನು ಅನ್ವಯಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಅದರಂತೆ ಲಾಕ್‌ಡೌನ್‌ನಿಂದ ಪೀಡಿತ ವ್ಯಕ್ತಿಗಳಿಗೆ ಅವರು ಪಡಿತರ ಚೀಟಿಗಳನ್ನು ಹೊಂದಿರಲಿ ಅಥವಾ ಇಲ್ಲದಿರಲಿ ಅವರಿಗೆ ರಾಜ್ಯ ಸರ್ಕಾರವು ಆಹಾರದ ಅಗತ್ಯವನ್ನು ನೋಡಿಕೊಳ್ಳಬೇಕು” ಎಂದಿದೆ.

ನಗರ ಪ್ರದೇಶಗಳಲ್ಲಿ ಅಗತ್ಯವಿರುವವರಿಗೆ ಆಹಾರವನ್ನು ಪೂರೈಸಲು ಇರುವ ಯೋಜನೆಯನ್ನು ತಿಳಿಸುವಂತೆ ಸರ್ಕಾರವನ್ನು ನ್ಯಾಯಪೀಠ ಕೇಳಿದೆ.

ಪೌರಕರ್ಮಿಕರಿಗೆ ಸುರಕ್ಷತಾ ಸಾಧನಗಳನ್ನು ಒದಗಿಸುವುದಕ್ಕಾಗಿ ಎದ್ದಿರುವ ಸಮಸ್ಯೆಯನ್ನು ‘ಮುಖ್ಯ’ ಎಂದಿರುವ ನ್ಯಾಯಾಲಯವು, ಈ ಕುರಿತು ಬಿಬಿಎಂಪಿ ಮತ್ತು ರಾಜ್ಯ ಸರ್ಕಾರವು ಪ್ರತಿಯೊಬ್ಬ ಪೌರಕಾರ್ಮಿಕರಿಗೂ ಸುರಕ್ಷತಾ ಸಾಧನಗಳನ್ನು ಒದಗಿಸಿರುವುದರ ಬಗ್ಗೆ ಖಚಿತಪಡಿಸಿಕೊಳ್ಳಲು ನಿರ್ದೇಶಿಸಿತು. ಅಲ್ಲದೇ ತ್ಯಾಜ್ಯ / ಕಸವನ್ನು ಸಂಗ್ರಹಿಸುವಾಗ ಹೋಮ್‌ ಕ್ವಾರಂಟೈನ್‌ ಆದವರ ಮನೆಯಿಂದ ಹರಡಬಹುದಾದ ಸೋಂಕಿನ ಕುರಿತು ಆತಂಕವನ್ನು ವ್ಯಕ್ತಪಡಿಸಿದ ನಂತರ ಅದರ ಬಗ್ಗೆ ವಿಶೇಷ ಕ್ರಮಗಳನ್ನು ತೆಗೆದುಕೊಳ್ಳಲು ನ್ಯಾಯಾಲಯ ಸೂಚಿಸಿದೆ.

ಪೌರ ಕಾರ್ಮಿಕರು ಈ ಸಮಯದಲ್ಲಿ ಬಹಳ ಅನಿವಾರ್ಯವಾದ ಸೇವೆಯನ್ನು ಮಾಡುತ್ತಿದ್ದು ಅವರಿಗೆ ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಸಹ ಕೋರ್ಟ್‌ ಆದೇಶಿಸಿದೆ.


ಇದನ್ನೂ ಓದಿ: ಕೊರೋನಾ ಕಾಲವೆಂಬುದು “ಮನುಷ್ಯನ ಮೇಲಿನ ಗೂಢಚಾರಿಕೆ”ಯ ಯುಗದ ಬಹುಮುಖ್ಯ ಸಂಧಿಕಾಲ


ಎಲ್ಲಾ ಎನ್‌ಜಿಒಗಳು ಕೊರೊನಾ ವಿಚಾರಕ್ಕೆ ತಾವು ಮಾಡುತ್ತಿರುವ ಪರಿಹಾರ ಕಾರ್ಯಗಳ ಕುರಿತು ಮಾಹಿತಿ ಮತ್ತು ಅವರು ಮಾಡುತ್ತಿರುವ ಭೌಗೋಳಿಕ ಪ್ರದೇಶದ ವಿವರ ನೀಡುವಂತೆ ಮನವಿ ಮಾಡಿ ವೆಬ್‌ಸೈಟ್‌ನಲ್ಲಿ ಪೋರ್ಟಲ್ ಒದಗಿಸುವುದನ್ನು ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ. ಎಲ್ಲ ಮಾಹಿತಿಗಳು ಒಂದೆಡೆ ಸಿಕ್ಕಲ್ಲಿ ಪರಿಹಾರ ಕಾರ್ಯಚಾರಣೆ ಸುಲಭವಾಗಲಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಬಲವನ್ನು ಬಳಸುತ್ತಿದ್ದಾರೆ ಎಂಬ ಆರೋಪಗಳ ಬಗ್ಗೆ  ಬೆಂಗಳೂರು ಪೊಲೀಸ್ ಆಯುಕ್ತರು ಲಾಠಿಗಳನ್ನು ಬಳಸದಂತೆ ಸುತ್ತೋಲೆ ಹೊರಡಿಸಿದ್ದಾರೆ. ಅದೇ ರೀತಿ ಡಿಜಿ ಮತ್ತು ಐಜಿ ಪೊಲೀಸ್‌ ಅಧಿಕಾರಿಗಳು ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿಗೆ ಮಾರ್ಗಸೂಚಿಗಳು / ಸೂಚನೆಗಳನ್ನು ನೀಡಬೇಕು. ಪೊಲೀಸರ ಮೇಲೆ ಮೀತಿ ಮೀರಿ ವರ್ತಿಸುವ ಸಂಬಂಧಿಸಿದಂತೆ ಆರೋಪಗಳನ್ನು ಮಾಡುವ ಸಂದರ್ಭವಿಲ್ಲದಿರಬಹುದು. ಆದರೆ ಪೊಲೀಸರು ಲಾಠಿ ಚಾರ್ಜ್‌ ಮಾಡಬಾರದು ಎಂದು ಕೋರ್ಟ್‌ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...