Homeಮುಖಪುಟಕೊರೊನಾ: ಏ.03ರೊಳಗೆ ಸಮಗ್ರ ಯೋಜನೆಯೊಂದಿಗೆ ಬನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು

ಕೊರೊನಾ: ಏ.03ರೊಳಗೆ ಸಮಗ್ರ ಯೋಜನೆಯೊಂದಿಗೆ ಬನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು

- Advertisement -
- Advertisement -

ಏಪ್ರಿಲ್ 3 ರೊಳಗೆ ಅಗತ್ಯವಿರುವ ಜನರು, ಬಡ ಜನರು, ದೈನಂದಿನ ಕೂಲಿ ಕಾರ್ಮಿಕರಿಗೆ ಸಮರ್ಪಕವಾಗಿ ಆಹಾರ ಧಾನ್ಯಗಳು ಮತ್ತು ಆಹಾರವನ್ನು ಪೂರೈಸಲು ಸಮಗ್ರ ಯೋಜನೆಯನ್ನು ಹೊರತರುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ ನಿರಾಶ್ರಿತ ಜನರು ಬೀದಿಗಳಲ್ಲಿ, ರೈಲ್ವೆ ಪ್ಲಾಟ್‌ಫಾರ್ಮ್‌ಗಳು, ಬಸ್ ನಿಲ್ದಾಣಗಳು ಇತ್ಯಾದಿಗಳಲ್ಲಿ ವಾಸಿಸುತ್ತಿರುವ ಜನರ ಹಿತರಕ್ಷಣೆ ಮುಖ್ಯ ಎಂಬುದನ್ನು ಹೈಕೋರ್ಟ್‌ ಒತ್ತಿ ಹೇಳಿದೆ.

ಲಾಕ್‌ಡೌನ್‌ ಸಮಯದಲ್ಲಿ ವಲಸೆ ಕಾರ್ಮಿಕರು ಮತ್ತು ನಿರಾಶ್ರಿತರು ಆಹಾರ ಸಿಗದೇ ಕಂಗಾಲಾಗಿದ್ದಾರೆ ಎಂದು ಸಂಧ್ಯಾ ಯು ಪ್ರಭು ಮತ್ತು ಇತರರು ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ವಿಭಾಗೀಯ ಪೀಠ ವಿಡಿಯೋ ಕಾನ್ಫರೆನ್ಸ್‌ ಮೂಲಕ ಆಲಿಸಿ ನಿರ್ದೇಶನಗಳನ್ನು ನೀಡಿದೆ.

ನ್ಯಾಯಾಲಯವು “ನಾವು ರಾಷ್ಟ್ರೀಯ ವಿಪತ್ತನ್ನು ಎದುರಿಸುತ್ತಿದ್ದೇವೆ. 2005ರ ವಿಪತ್ತು ನಿರ್ವಹಣಾ ಕಾಯ್ದೆಯ ನಿಬಂಧನೆಗಳನ್ನು ಆಹ್ವಾನಿಸಿದ್ದೇವೆ. ಸ್ವರಾಜ್ ಅಭಿಯಾನ್, Vs ಯೂನಿಯನ್ ಆಫ್ ಇಂಡಿಯಾ ಮತ್ತು ಇತರರು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪಿನ ಪ್ಯಾರಾಗ್ರಾಫ್ 128.4 ಒಳಗೊಂಡಿರುವ ನಿರ್ದೇಶನಗಳನ್ನು ಅನ್ವಯಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಅದರಂತೆ ಲಾಕ್‌ಡೌನ್‌ನಿಂದ ಪೀಡಿತ ವ್ಯಕ್ತಿಗಳಿಗೆ ಅವರು ಪಡಿತರ ಚೀಟಿಗಳನ್ನು ಹೊಂದಿರಲಿ ಅಥವಾ ಇಲ್ಲದಿರಲಿ ಅವರಿಗೆ ರಾಜ್ಯ ಸರ್ಕಾರವು ಆಹಾರದ ಅಗತ್ಯವನ್ನು ನೋಡಿಕೊಳ್ಳಬೇಕು” ಎಂದಿದೆ.

ನಗರ ಪ್ರದೇಶಗಳಲ್ಲಿ ಅಗತ್ಯವಿರುವವರಿಗೆ ಆಹಾರವನ್ನು ಪೂರೈಸಲು ಇರುವ ಯೋಜನೆಯನ್ನು ತಿಳಿಸುವಂತೆ ಸರ್ಕಾರವನ್ನು ನ್ಯಾಯಪೀಠ ಕೇಳಿದೆ.

ಪೌರಕರ್ಮಿಕರಿಗೆ ಸುರಕ್ಷತಾ ಸಾಧನಗಳನ್ನು ಒದಗಿಸುವುದಕ್ಕಾಗಿ ಎದ್ದಿರುವ ಸಮಸ್ಯೆಯನ್ನು ‘ಮುಖ್ಯ’ ಎಂದಿರುವ ನ್ಯಾಯಾಲಯವು, ಈ ಕುರಿತು ಬಿಬಿಎಂಪಿ ಮತ್ತು ರಾಜ್ಯ ಸರ್ಕಾರವು ಪ್ರತಿಯೊಬ್ಬ ಪೌರಕಾರ್ಮಿಕರಿಗೂ ಸುರಕ್ಷತಾ ಸಾಧನಗಳನ್ನು ಒದಗಿಸಿರುವುದರ ಬಗ್ಗೆ ಖಚಿತಪಡಿಸಿಕೊಳ್ಳಲು ನಿರ್ದೇಶಿಸಿತು. ಅಲ್ಲದೇ ತ್ಯಾಜ್ಯ / ಕಸವನ್ನು ಸಂಗ್ರಹಿಸುವಾಗ ಹೋಮ್‌ ಕ್ವಾರಂಟೈನ್‌ ಆದವರ ಮನೆಯಿಂದ ಹರಡಬಹುದಾದ ಸೋಂಕಿನ ಕುರಿತು ಆತಂಕವನ್ನು ವ್ಯಕ್ತಪಡಿಸಿದ ನಂತರ ಅದರ ಬಗ್ಗೆ ವಿಶೇಷ ಕ್ರಮಗಳನ್ನು ತೆಗೆದುಕೊಳ್ಳಲು ನ್ಯಾಯಾಲಯ ಸೂಚಿಸಿದೆ.

ಪೌರ ಕಾರ್ಮಿಕರು ಈ ಸಮಯದಲ್ಲಿ ಬಹಳ ಅನಿವಾರ್ಯವಾದ ಸೇವೆಯನ್ನು ಮಾಡುತ್ತಿದ್ದು ಅವರಿಗೆ ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಸಹ ಕೋರ್ಟ್‌ ಆದೇಶಿಸಿದೆ.


ಇದನ್ನೂ ಓದಿ: ಕೊರೋನಾ ಕಾಲವೆಂಬುದು “ಮನುಷ್ಯನ ಮೇಲಿನ ಗೂಢಚಾರಿಕೆ”ಯ ಯುಗದ ಬಹುಮುಖ್ಯ ಸಂಧಿಕಾಲ


ಎಲ್ಲಾ ಎನ್‌ಜಿಒಗಳು ಕೊರೊನಾ ವಿಚಾರಕ್ಕೆ ತಾವು ಮಾಡುತ್ತಿರುವ ಪರಿಹಾರ ಕಾರ್ಯಗಳ ಕುರಿತು ಮಾಹಿತಿ ಮತ್ತು ಅವರು ಮಾಡುತ್ತಿರುವ ಭೌಗೋಳಿಕ ಪ್ರದೇಶದ ವಿವರ ನೀಡುವಂತೆ ಮನವಿ ಮಾಡಿ ವೆಬ್‌ಸೈಟ್‌ನಲ್ಲಿ ಪೋರ್ಟಲ್ ಒದಗಿಸುವುದನ್ನು ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ. ಎಲ್ಲ ಮಾಹಿತಿಗಳು ಒಂದೆಡೆ ಸಿಕ್ಕಲ್ಲಿ ಪರಿಹಾರ ಕಾರ್ಯಚಾರಣೆ ಸುಲಭವಾಗಲಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಬಲವನ್ನು ಬಳಸುತ್ತಿದ್ದಾರೆ ಎಂಬ ಆರೋಪಗಳ ಬಗ್ಗೆ  ಬೆಂಗಳೂರು ಪೊಲೀಸ್ ಆಯುಕ್ತರು ಲಾಠಿಗಳನ್ನು ಬಳಸದಂತೆ ಸುತ್ತೋಲೆ ಹೊರಡಿಸಿದ್ದಾರೆ. ಅದೇ ರೀತಿ ಡಿಜಿ ಮತ್ತು ಐಜಿ ಪೊಲೀಸ್‌ ಅಧಿಕಾರಿಗಳು ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿಗೆ ಮಾರ್ಗಸೂಚಿಗಳು / ಸೂಚನೆಗಳನ್ನು ನೀಡಬೇಕು. ಪೊಲೀಸರ ಮೇಲೆ ಮೀತಿ ಮೀರಿ ವರ್ತಿಸುವ ಸಂಬಂಧಿಸಿದಂತೆ ಆರೋಪಗಳನ್ನು ಮಾಡುವ ಸಂದರ್ಭವಿಲ್ಲದಿರಬಹುದು. ಆದರೆ ಪೊಲೀಸರು ಲಾಠಿ ಚಾರ್ಜ್‌ ಮಾಡಬಾರದು ಎಂದು ಕೋರ್ಟ್‌ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...