Homeಮುಖಪುಟಕೊರೊನಾ: ಏ.03ರೊಳಗೆ ಸಮಗ್ರ ಯೋಜನೆಯೊಂದಿಗೆ ಬನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು

ಕೊರೊನಾ: ಏ.03ರೊಳಗೆ ಸಮಗ್ರ ಯೋಜನೆಯೊಂದಿಗೆ ಬನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು

- Advertisement -
- Advertisement -

ಏಪ್ರಿಲ್ 3 ರೊಳಗೆ ಅಗತ್ಯವಿರುವ ಜನರು, ಬಡ ಜನರು, ದೈನಂದಿನ ಕೂಲಿ ಕಾರ್ಮಿಕರಿಗೆ ಸಮರ್ಪಕವಾಗಿ ಆಹಾರ ಧಾನ್ಯಗಳು ಮತ್ತು ಆಹಾರವನ್ನು ಪೂರೈಸಲು ಸಮಗ್ರ ಯೋಜನೆಯನ್ನು ಹೊರತರುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ ನಿರಾಶ್ರಿತ ಜನರು ಬೀದಿಗಳಲ್ಲಿ, ರೈಲ್ವೆ ಪ್ಲಾಟ್‌ಫಾರ್ಮ್‌ಗಳು, ಬಸ್ ನಿಲ್ದಾಣಗಳು ಇತ್ಯಾದಿಗಳಲ್ಲಿ ವಾಸಿಸುತ್ತಿರುವ ಜನರ ಹಿತರಕ್ಷಣೆ ಮುಖ್ಯ ಎಂಬುದನ್ನು ಹೈಕೋರ್ಟ್‌ ಒತ್ತಿ ಹೇಳಿದೆ.

ಲಾಕ್‌ಡೌನ್‌ ಸಮಯದಲ್ಲಿ ವಲಸೆ ಕಾರ್ಮಿಕರು ಮತ್ತು ನಿರಾಶ್ರಿತರು ಆಹಾರ ಸಿಗದೇ ಕಂಗಾಲಾಗಿದ್ದಾರೆ ಎಂದು ಸಂಧ್ಯಾ ಯು ಪ್ರಭು ಮತ್ತು ಇತರರು ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ವಿಭಾಗೀಯ ಪೀಠ ವಿಡಿಯೋ ಕಾನ್ಫರೆನ್ಸ್‌ ಮೂಲಕ ಆಲಿಸಿ ನಿರ್ದೇಶನಗಳನ್ನು ನೀಡಿದೆ.

ನ್ಯಾಯಾಲಯವು “ನಾವು ರಾಷ್ಟ್ರೀಯ ವಿಪತ್ತನ್ನು ಎದುರಿಸುತ್ತಿದ್ದೇವೆ. 2005ರ ವಿಪತ್ತು ನಿರ್ವಹಣಾ ಕಾಯ್ದೆಯ ನಿಬಂಧನೆಗಳನ್ನು ಆಹ್ವಾನಿಸಿದ್ದೇವೆ. ಸ್ವರಾಜ್ ಅಭಿಯಾನ್, Vs ಯೂನಿಯನ್ ಆಫ್ ಇಂಡಿಯಾ ಮತ್ತು ಇತರರು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪಿನ ಪ್ಯಾರಾಗ್ರಾಫ್ 128.4 ಒಳಗೊಂಡಿರುವ ನಿರ್ದೇಶನಗಳನ್ನು ಅನ್ವಯಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಅದರಂತೆ ಲಾಕ್‌ಡೌನ್‌ನಿಂದ ಪೀಡಿತ ವ್ಯಕ್ತಿಗಳಿಗೆ ಅವರು ಪಡಿತರ ಚೀಟಿಗಳನ್ನು ಹೊಂದಿರಲಿ ಅಥವಾ ಇಲ್ಲದಿರಲಿ ಅವರಿಗೆ ರಾಜ್ಯ ಸರ್ಕಾರವು ಆಹಾರದ ಅಗತ್ಯವನ್ನು ನೋಡಿಕೊಳ್ಳಬೇಕು” ಎಂದಿದೆ.

ನಗರ ಪ್ರದೇಶಗಳಲ್ಲಿ ಅಗತ್ಯವಿರುವವರಿಗೆ ಆಹಾರವನ್ನು ಪೂರೈಸಲು ಇರುವ ಯೋಜನೆಯನ್ನು ತಿಳಿಸುವಂತೆ ಸರ್ಕಾರವನ್ನು ನ್ಯಾಯಪೀಠ ಕೇಳಿದೆ.

ಪೌರಕರ್ಮಿಕರಿಗೆ ಸುರಕ್ಷತಾ ಸಾಧನಗಳನ್ನು ಒದಗಿಸುವುದಕ್ಕಾಗಿ ಎದ್ದಿರುವ ಸಮಸ್ಯೆಯನ್ನು ‘ಮುಖ್ಯ’ ಎಂದಿರುವ ನ್ಯಾಯಾಲಯವು, ಈ ಕುರಿತು ಬಿಬಿಎಂಪಿ ಮತ್ತು ರಾಜ್ಯ ಸರ್ಕಾರವು ಪ್ರತಿಯೊಬ್ಬ ಪೌರಕಾರ್ಮಿಕರಿಗೂ ಸುರಕ್ಷತಾ ಸಾಧನಗಳನ್ನು ಒದಗಿಸಿರುವುದರ ಬಗ್ಗೆ ಖಚಿತಪಡಿಸಿಕೊಳ್ಳಲು ನಿರ್ದೇಶಿಸಿತು. ಅಲ್ಲದೇ ತ್ಯಾಜ್ಯ / ಕಸವನ್ನು ಸಂಗ್ರಹಿಸುವಾಗ ಹೋಮ್‌ ಕ್ವಾರಂಟೈನ್‌ ಆದವರ ಮನೆಯಿಂದ ಹರಡಬಹುದಾದ ಸೋಂಕಿನ ಕುರಿತು ಆತಂಕವನ್ನು ವ್ಯಕ್ತಪಡಿಸಿದ ನಂತರ ಅದರ ಬಗ್ಗೆ ವಿಶೇಷ ಕ್ರಮಗಳನ್ನು ತೆಗೆದುಕೊಳ್ಳಲು ನ್ಯಾಯಾಲಯ ಸೂಚಿಸಿದೆ.

ಪೌರ ಕಾರ್ಮಿಕರು ಈ ಸಮಯದಲ್ಲಿ ಬಹಳ ಅನಿವಾರ್ಯವಾದ ಸೇವೆಯನ್ನು ಮಾಡುತ್ತಿದ್ದು ಅವರಿಗೆ ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಸಹ ಕೋರ್ಟ್‌ ಆದೇಶಿಸಿದೆ.


ಇದನ್ನೂ ಓದಿ: ಕೊರೋನಾ ಕಾಲವೆಂಬುದು “ಮನುಷ್ಯನ ಮೇಲಿನ ಗೂಢಚಾರಿಕೆ”ಯ ಯುಗದ ಬಹುಮುಖ್ಯ ಸಂಧಿಕಾಲ


ಎಲ್ಲಾ ಎನ್‌ಜಿಒಗಳು ಕೊರೊನಾ ವಿಚಾರಕ್ಕೆ ತಾವು ಮಾಡುತ್ತಿರುವ ಪರಿಹಾರ ಕಾರ್ಯಗಳ ಕುರಿತು ಮಾಹಿತಿ ಮತ್ತು ಅವರು ಮಾಡುತ್ತಿರುವ ಭೌಗೋಳಿಕ ಪ್ರದೇಶದ ವಿವರ ನೀಡುವಂತೆ ಮನವಿ ಮಾಡಿ ವೆಬ್‌ಸೈಟ್‌ನಲ್ಲಿ ಪೋರ್ಟಲ್ ಒದಗಿಸುವುದನ್ನು ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ. ಎಲ್ಲ ಮಾಹಿತಿಗಳು ಒಂದೆಡೆ ಸಿಕ್ಕಲ್ಲಿ ಪರಿಹಾರ ಕಾರ್ಯಚಾರಣೆ ಸುಲಭವಾಗಲಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಬಲವನ್ನು ಬಳಸುತ್ತಿದ್ದಾರೆ ಎಂಬ ಆರೋಪಗಳ ಬಗ್ಗೆ  ಬೆಂಗಳೂರು ಪೊಲೀಸ್ ಆಯುಕ್ತರು ಲಾಠಿಗಳನ್ನು ಬಳಸದಂತೆ ಸುತ್ತೋಲೆ ಹೊರಡಿಸಿದ್ದಾರೆ. ಅದೇ ರೀತಿ ಡಿಜಿ ಮತ್ತು ಐಜಿ ಪೊಲೀಸ್‌ ಅಧಿಕಾರಿಗಳು ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿಗೆ ಮಾರ್ಗಸೂಚಿಗಳು / ಸೂಚನೆಗಳನ್ನು ನೀಡಬೇಕು. ಪೊಲೀಸರ ಮೇಲೆ ಮೀತಿ ಮೀರಿ ವರ್ತಿಸುವ ಸಂಬಂಧಿಸಿದಂತೆ ಆರೋಪಗಳನ್ನು ಮಾಡುವ ಸಂದರ್ಭವಿಲ್ಲದಿರಬಹುದು. ಆದರೆ ಪೊಲೀಸರು ಲಾಠಿ ಚಾರ್ಜ್‌ ಮಾಡಬಾರದು ಎಂದು ಕೋರ್ಟ್‌ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...