Homeಮುಖಪುಟಕೊರೊನಾ: ಏ.03ರೊಳಗೆ ಸಮಗ್ರ ಯೋಜನೆಯೊಂದಿಗೆ ಬನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು

ಕೊರೊನಾ: ಏ.03ರೊಳಗೆ ಸಮಗ್ರ ಯೋಜನೆಯೊಂದಿಗೆ ಬನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು

- Advertisement -
- Advertisement -

ಏಪ್ರಿಲ್ 3 ರೊಳಗೆ ಅಗತ್ಯವಿರುವ ಜನರು, ಬಡ ಜನರು, ದೈನಂದಿನ ಕೂಲಿ ಕಾರ್ಮಿಕರಿಗೆ ಸಮರ್ಪಕವಾಗಿ ಆಹಾರ ಧಾನ್ಯಗಳು ಮತ್ತು ಆಹಾರವನ್ನು ಪೂರೈಸಲು ಸಮಗ್ರ ಯೋಜನೆಯನ್ನು ಹೊರತರುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ ನಿರಾಶ್ರಿತ ಜನರು ಬೀದಿಗಳಲ್ಲಿ, ರೈಲ್ವೆ ಪ್ಲಾಟ್‌ಫಾರ್ಮ್‌ಗಳು, ಬಸ್ ನಿಲ್ದಾಣಗಳು ಇತ್ಯಾದಿಗಳಲ್ಲಿ ವಾಸಿಸುತ್ತಿರುವ ಜನರ ಹಿತರಕ್ಷಣೆ ಮುಖ್ಯ ಎಂಬುದನ್ನು ಹೈಕೋರ್ಟ್‌ ಒತ್ತಿ ಹೇಳಿದೆ.

ಲಾಕ್‌ಡೌನ್‌ ಸಮಯದಲ್ಲಿ ವಲಸೆ ಕಾರ್ಮಿಕರು ಮತ್ತು ನಿರಾಶ್ರಿತರು ಆಹಾರ ಸಿಗದೇ ಕಂಗಾಲಾಗಿದ್ದಾರೆ ಎಂದು ಸಂಧ್ಯಾ ಯು ಪ್ರಭು ಮತ್ತು ಇತರರು ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ವಿಭಾಗೀಯ ಪೀಠ ವಿಡಿಯೋ ಕಾನ್ಫರೆನ್ಸ್‌ ಮೂಲಕ ಆಲಿಸಿ ನಿರ್ದೇಶನಗಳನ್ನು ನೀಡಿದೆ.

ನ್ಯಾಯಾಲಯವು “ನಾವು ರಾಷ್ಟ್ರೀಯ ವಿಪತ್ತನ್ನು ಎದುರಿಸುತ್ತಿದ್ದೇವೆ. 2005ರ ವಿಪತ್ತು ನಿರ್ವಹಣಾ ಕಾಯ್ದೆಯ ನಿಬಂಧನೆಗಳನ್ನು ಆಹ್ವಾನಿಸಿದ್ದೇವೆ. ಸ್ವರಾಜ್ ಅಭಿಯಾನ್, Vs ಯೂನಿಯನ್ ಆಫ್ ಇಂಡಿಯಾ ಮತ್ತು ಇತರರು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪಿನ ಪ್ಯಾರಾಗ್ರಾಫ್ 128.4 ಒಳಗೊಂಡಿರುವ ನಿರ್ದೇಶನಗಳನ್ನು ಅನ್ವಯಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಅದರಂತೆ ಲಾಕ್‌ಡೌನ್‌ನಿಂದ ಪೀಡಿತ ವ್ಯಕ್ತಿಗಳಿಗೆ ಅವರು ಪಡಿತರ ಚೀಟಿಗಳನ್ನು ಹೊಂದಿರಲಿ ಅಥವಾ ಇಲ್ಲದಿರಲಿ ಅವರಿಗೆ ರಾಜ್ಯ ಸರ್ಕಾರವು ಆಹಾರದ ಅಗತ್ಯವನ್ನು ನೋಡಿಕೊಳ್ಳಬೇಕು” ಎಂದಿದೆ.

ನಗರ ಪ್ರದೇಶಗಳಲ್ಲಿ ಅಗತ್ಯವಿರುವವರಿಗೆ ಆಹಾರವನ್ನು ಪೂರೈಸಲು ಇರುವ ಯೋಜನೆಯನ್ನು ತಿಳಿಸುವಂತೆ ಸರ್ಕಾರವನ್ನು ನ್ಯಾಯಪೀಠ ಕೇಳಿದೆ.

ಪೌರಕರ್ಮಿಕರಿಗೆ ಸುರಕ್ಷತಾ ಸಾಧನಗಳನ್ನು ಒದಗಿಸುವುದಕ್ಕಾಗಿ ಎದ್ದಿರುವ ಸಮಸ್ಯೆಯನ್ನು ‘ಮುಖ್ಯ’ ಎಂದಿರುವ ನ್ಯಾಯಾಲಯವು, ಈ ಕುರಿತು ಬಿಬಿಎಂಪಿ ಮತ್ತು ರಾಜ್ಯ ಸರ್ಕಾರವು ಪ್ರತಿಯೊಬ್ಬ ಪೌರಕಾರ್ಮಿಕರಿಗೂ ಸುರಕ್ಷತಾ ಸಾಧನಗಳನ್ನು ಒದಗಿಸಿರುವುದರ ಬಗ್ಗೆ ಖಚಿತಪಡಿಸಿಕೊಳ್ಳಲು ನಿರ್ದೇಶಿಸಿತು. ಅಲ್ಲದೇ ತ್ಯಾಜ್ಯ / ಕಸವನ್ನು ಸಂಗ್ರಹಿಸುವಾಗ ಹೋಮ್‌ ಕ್ವಾರಂಟೈನ್‌ ಆದವರ ಮನೆಯಿಂದ ಹರಡಬಹುದಾದ ಸೋಂಕಿನ ಕುರಿತು ಆತಂಕವನ್ನು ವ್ಯಕ್ತಪಡಿಸಿದ ನಂತರ ಅದರ ಬಗ್ಗೆ ವಿಶೇಷ ಕ್ರಮಗಳನ್ನು ತೆಗೆದುಕೊಳ್ಳಲು ನ್ಯಾಯಾಲಯ ಸೂಚಿಸಿದೆ.

ಪೌರ ಕಾರ್ಮಿಕರು ಈ ಸಮಯದಲ್ಲಿ ಬಹಳ ಅನಿವಾರ್ಯವಾದ ಸೇವೆಯನ್ನು ಮಾಡುತ್ತಿದ್ದು ಅವರಿಗೆ ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಸಹ ಕೋರ್ಟ್‌ ಆದೇಶಿಸಿದೆ.


ಇದನ್ನೂ ಓದಿ: ಕೊರೋನಾ ಕಾಲವೆಂಬುದು “ಮನುಷ್ಯನ ಮೇಲಿನ ಗೂಢಚಾರಿಕೆ”ಯ ಯುಗದ ಬಹುಮುಖ್ಯ ಸಂಧಿಕಾಲ


ಎಲ್ಲಾ ಎನ್‌ಜಿಒಗಳು ಕೊರೊನಾ ವಿಚಾರಕ್ಕೆ ತಾವು ಮಾಡುತ್ತಿರುವ ಪರಿಹಾರ ಕಾರ್ಯಗಳ ಕುರಿತು ಮಾಹಿತಿ ಮತ್ತು ಅವರು ಮಾಡುತ್ತಿರುವ ಭೌಗೋಳಿಕ ಪ್ರದೇಶದ ವಿವರ ನೀಡುವಂತೆ ಮನವಿ ಮಾಡಿ ವೆಬ್‌ಸೈಟ್‌ನಲ್ಲಿ ಪೋರ್ಟಲ್ ಒದಗಿಸುವುದನ್ನು ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ. ಎಲ್ಲ ಮಾಹಿತಿಗಳು ಒಂದೆಡೆ ಸಿಕ್ಕಲ್ಲಿ ಪರಿಹಾರ ಕಾರ್ಯಚಾರಣೆ ಸುಲಭವಾಗಲಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಬಲವನ್ನು ಬಳಸುತ್ತಿದ್ದಾರೆ ಎಂಬ ಆರೋಪಗಳ ಬಗ್ಗೆ  ಬೆಂಗಳೂರು ಪೊಲೀಸ್ ಆಯುಕ್ತರು ಲಾಠಿಗಳನ್ನು ಬಳಸದಂತೆ ಸುತ್ತೋಲೆ ಹೊರಡಿಸಿದ್ದಾರೆ. ಅದೇ ರೀತಿ ಡಿಜಿ ಮತ್ತು ಐಜಿ ಪೊಲೀಸ್‌ ಅಧಿಕಾರಿಗಳು ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿಗೆ ಮಾರ್ಗಸೂಚಿಗಳು / ಸೂಚನೆಗಳನ್ನು ನೀಡಬೇಕು. ಪೊಲೀಸರ ಮೇಲೆ ಮೀತಿ ಮೀರಿ ವರ್ತಿಸುವ ಸಂಬಂಧಿಸಿದಂತೆ ಆರೋಪಗಳನ್ನು ಮಾಡುವ ಸಂದರ್ಭವಿಲ್ಲದಿರಬಹುದು. ಆದರೆ ಪೊಲೀಸರು ಲಾಠಿ ಚಾರ್ಜ್‌ ಮಾಡಬಾರದು ಎಂದು ಕೋರ್ಟ್‌ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...