Homeಕರೋನಾ ತಲ್ಲಣತನ್ನ ಬದಲಿಗೆ ಜಿಲ್ಲಾಧಿಕಾರಿ ನಂಬರ್ ನೀಡಿದ್ದ ಕೊರೊನಾ ಸೋಂಕಿತ ವ್ಯಕ್ತಿ!

ತನ್ನ ಬದಲಿಗೆ ಜಿಲ್ಲಾಧಿಕಾರಿ ನಂಬರ್ ನೀಡಿದ್ದ ಕೊರೊನಾ ಸೋಂಕಿತ ವ್ಯಕ್ತಿ!

ಕರೆ ಬಂದ ನಂತರ ಆಶ್ಚರ್ಯಗೊಂಡ ಶಂಕರ್ ತಾನು ಜಿಲ್ಲಾಧಿಕಾರಿ ಎಂದು ಹೇಳಿದ್ದಾರೆ. ಇದರ ಕುರಿತು ಹೆಚ್ಚಿನ ವಿವರಗಳಿಗಾಗಿ ನಿಯಂತ್ರಣ ಕೊಠಡಿ ಸಿಬ್ಬಂದಿಯನ್ನು ವಿಚಾರಿಸಿದಾಗ ಕೊರೊನಾ ಸೋಂಕಿತ ವ್ಯಕ್ತಿಯು ತಪಾಸಣೆ ವೇಳೆ ತಮ್ಮ ನಂಬರ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -
- Advertisement -

ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರಿಗೆ ಜಿಲ್ಲಾ ಕೊರೊನಾ ನಿಯಂತ್ರಣ ವಿಭಾಗದಿಂದ ಶನಿವಾರ ಕರೆ ಬಂದಿದ್ದು, ತಮಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು ಕ್ವಾರಂಟೈನ್ ನಲ್ಲಿರುವಂತೆ ಹೇಳಲಾಗಿದೆ. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದ ವ್ಯಕ್ತಿಯೊಬ್ಬರು ಕೊರೊನಾ ಪರೀಕ್ಷೆ ವೇಳೆ ತಮ್ಮ ನಂಬರ್ ಬದಲಿಗೆ ಜಿಲ್ಲಾಧಿಕಾರಿ ನಂಬರ್ ನೀಡಿದ್ದಾರೆ ಎಂಬುದು ತದನಂತರ ತಿಳಿದುಬಂದಿದೆ.

ಕರೆ ಬಂದ ನಂತರ ಆಶ್ಚರ್ಯಗೊಂಡ ಶಂಕರ್ ತಾನು ಜಿಲ್ಲಾಧಿಕಾರಿ ಎಂದು ಹೇಳಿದ್ದಾರೆ. ಇದರ ಕುರಿತು ಹೆಚ್ಚಿನ ವಿವರಗಳಿಗಾಗಿ ನಿಯಂತ್ರಣ ಕೊಠಡಿ ಸಿಬ್ಬಂದಿಯನ್ನು ವಿಚಾರಿಸಿದಾಗ ಕೊರೊನಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದಾತ ಪರೀಕ್ಷೆ ವೇಳೆ ತಮ್ಮ ನಂಬರ್ ನೀಡಿದ್ದಾನೆ ಎಂದು ತಿಳಿಸಿದ್ದಾರೆ.

ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ ವ್ಯಕ್ತಿಗಳು ತಪಾಸಣೆ ವೇಳೆ ತಪ್ಪು ನಂಬರ್ ನೀಡಿದ್ದಾರೆ. ಒಂದು ವೇಳೆ ಪಾಸಿಟಿವ್ ಬಂದರೆ ಕ್ವಾರಂಟೈನ್‌ಗೆ ಒಳಗಾಗಲು, ಅಥವಾ ಆಸ್ಪತ್ರೆಗೆ ದಾಖಲಾಗಲು ಹಿಂಜರಿಯುವವರು ಮಾಡಿರುವ ಕೆಲಸ ಇದು. ಈ ಕುರಿತು ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಅಭಿರಾಮ್ ಜಿ ಶಂಕರ್ ತಿಳಿಸಿದ್ದಾರೆ.

“ನಾವು  ಆ ವ್ಯಕ್ತಿಗೆ ಎಚ್ಚರಿಕೆ ನೀಡಿದ್ದೇವೆ. ಇದು ಮತ್ತೆ ಸಂಭವಿಸದಂತೆ ನಾವು ಜಾಗರೂಕತೆ ವಹಿಸಬೇಕು. ಜನರಿಂದ ಮಾಹಿತಿ ಸಂಗ್ರಹಿಸುವುದು ರೋಗಿಗಳಿಗೆ ತೊಂದರೆ ಅಥವಾ ಶಿಕ್ಷೆ ನೀಡುವುದಕ್ಕಲ್ಲ. ಹಾಗಾಗಿ ಜನರು ಸರಿಯಾದ ಡೇಟಾವನ್ನು ನೀಡಬೇಕು” ಎಂದು ಜಿಲ್ಲಾದಿಕಾರಿ ತಿಳಿಸಿದರು.

“ಕೆಲವೊಮ್ಮೆ ಅವರು ತಪ್ಪು ನಂಬರ್ ಗಳನ್ನು ನೀಡುತ್ತಿರುವುದರಿಂದ ಅಥವಾ ಅವರ ಫೋನ್‌ಗಳನ್ನು ರಿಸೀವ್ ಮಾಡದ ಕಾರಣ ಸೋಂಕು ದೃಡಪಟ್ಟಿರುವವರೊಂದಿಗೆ ಸಂಪರ್ಕ ಹೊಂದಿರುವವರನ್ನು ಸಹ ತಲುಪಲು ನಮಗೆ ಸಾಧ್ಯವಾಗುವುದಿಲ್ಲ. ಹೀಗೆ ತಪ್ಪಿಸಿಕೊಳ್ಳುವುದರಿಂದ ಅವರಿಗೆ ಏನು ಲಾಭ ಎಂದು ನಮಗೆ ತಿಳಿದಿಲ್ಲ. ಅವರಿಗೆ ಸೋಂಕು ತಗುಲಿದ್ದರೆ ಅದು ಅವರಿಗೆ ತಿಳಿದಿರುವುದಿಲ್ಲ” ಎಂದು ಅವರು ಹೇಳಿದರು.

ಬಹುಶಃ ಜನರು ಸಾಮಾಜಿಕವಾಗಿ ಕಳಂಕಿತರಾಗುವರೆನೋ ಎಂಬ ಭಯಕ್ಕೆ ಹೀಗೆ ಮಾಡುತ್ತಿರಬಹುದು. ಆದರೆ, ತಮ್ಮ ಬಗ್ಗೆ ಸರಿಯಾದ ಸಂಪರ್ಕ ವಿವರಗಳನ್ನು ಮತ್ತು ಇತರ ಸಂಬಂಧಿತ ಸಂಪರ್ಕವನ್ನು ಪತ್ತೆಹಚ್ಚುವ ಮಾಹಿತಿಯನ್ನು ನೀಡುವಂತೆ ಮತ್ತು ಇದು ಸೋಂಕು ಹರಡುವ ಪ್ರಮಾಣವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಅತಿ ಹೆಚ್ಚು ಅಂಕ ಗಳಿಸಿದ 12 ನೇ ತರಗತಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಘೋಷಿಸಿದ ಪಂಜಾಬ್ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...