Homeಕರೋನಾ ತಲ್ಲಣತನ್ನ ಬದಲಿಗೆ ಜಿಲ್ಲಾಧಿಕಾರಿ ನಂಬರ್ ನೀಡಿದ್ದ ಕೊರೊನಾ ಸೋಂಕಿತ ವ್ಯಕ್ತಿ!

ತನ್ನ ಬದಲಿಗೆ ಜಿಲ್ಲಾಧಿಕಾರಿ ನಂಬರ್ ನೀಡಿದ್ದ ಕೊರೊನಾ ಸೋಂಕಿತ ವ್ಯಕ್ತಿ!

ಕರೆ ಬಂದ ನಂತರ ಆಶ್ಚರ್ಯಗೊಂಡ ಶಂಕರ್ ತಾನು ಜಿಲ್ಲಾಧಿಕಾರಿ ಎಂದು ಹೇಳಿದ್ದಾರೆ. ಇದರ ಕುರಿತು ಹೆಚ್ಚಿನ ವಿವರಗಳಿಗಾಗಿ ನಿಯಂತ್ರಣ ಕೊಠಡಿ ಸಿಬ್ಬಂದಿಯನ್ನು ವಿಚಾರಿಸಿದಾಗ ಕೊರೊನಾ ಸೋಂಕಿತ ವ್ಯಕ್ತಿಯು ತಪಾಸಣೆ ವೇಳೆ ತಮ್ಮ ನಂಬರ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -
- Advertisement -

ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರಿಗೆ ಜಿಲ್ಲಾ ಕೊರೊನಾ ನಿಯಂತ್ರಣ ವಿಭಾಗದಿಂದ ಶನಿವಾರ ಕರೆ ಬಂದಿದ್ದು, ತಮಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು ಕ್ವಾರಂಟೈನ್ ನಲ್ಲಿರುವಂತೆ ಹೇಳಲಾಗಿದೆ. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದ ವ್ಯಕ್ತಿಯೊಬ್ಬರು ಕೊರೊನಾ ಪರೀಕ್ಷೆ ವೇಳೆ ತಮ್ಮ ನಂಬರ್ ಬದಲಿಗೆ ಜಿಲ್ಲಾಧಿಕಾರಿ ನಂಬರ್ ನೀಡಿದ್ದಾರೆ ಎಂಬುದು ತದನಂತರ ತಿಳಿದುಬಂದಿದೆ.

ಕರೆ ಬಂದ ನಂತರ ಆಶ್ಚರ್ಯಗೊಂಡ ಶಂಕರ್ ತಾನು ಜಿಲ್ಲಾಧಿಕಾರಿ ಎಂದು ಹೇಳಿದ್ದಾರೆ. ಇದರ ಕುರಿತು ಹೆಚ್ಚಿನ ವಿವರಗಳಿಗಾಗಿ ನಿಯಂತ್ರಣ ಕೊಠಡಿ ಸಿಬ್ಬಂದಿಯನ್ನು ವಿಚಾರಿಸಿದಾಗ ಕೊರೊನಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದಾತ ಪರೀಕ್ಷೆ ವೇಳೆ ತಮ್ಮ ನಂಬರ್ ನೀಡಿದ್ದಾನೆ ಎಂದು ತಿಳಿಸಿದ್ದಾರೆ.

ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ ವ್ಯಕ್ತಿಗಳು ತಪಾಸಣೆ ವೇಳೆ ತಪ್ಪು ನಂಬರ್ ನೀಡಿದ್ದಾರೆ. ಒಂದು ವೇಳೆ ಪಾಸಿಟಿವ್ ಬಂದರೆ ಕ್ವಾರಂಟೈನ್‌ಗೆ ಒಳಗಾಗಲು, ಅಥವಾ ಆಸ್ಪತ್ರೆಗೆ ದಾಖಲಾಗಲು ಹಿಂಜರಿಯುವವರು ಮಾಡಿರುವ ಕೆಲಸ ಇದು. ಈ ಕುರಿತು ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಅಭಿರಾಮ್ ಜಿ ಶಂಕರ್ ತಿಳಿಸಿದ್ದಾರೆ.

“ನಾವು  ಆ ವ್ಯಕ್ತಿಗೆ ಎಚ್ಚರಿಕೆ ನೀಡಿದ್ದೇವೆ. ಇದು ಮತ್ತೆ ಸಂಭವಿಸದಂತೆ ನಾವು ಜಾಗರೂಕತೆ ವಹಿಸಬೇಕು. ಜನರಿಂದ ಮಾಹಿತಿ ಸಂಗ್ರಹಿಸುವುದು ರೋಗಿಗಳಿಗೆ ತೊಂದರೆ ಅಥವಾ ಶಿಕ್ಷೆ ನೀಡುವುದಕ್ಕಲ್ಲ. ಹಾಗಾಗಿ ಜನರು ಸರಿಯಾದ ಡೇಟಾವನ್ನು ನೀಡಬೇಕು” ಎಂದು ಜಿಲ್ಲಾದಿಕಾರಿ ತಿಳಿಸಿದರು.

“ಕೆಲವೊಮ್ಮೆ ಅವರು ತಪ್ಪು ನಂಬರ್ ಗಳನ್ನು ನೀಡುತ್ತಿರುವುದರಿಂದ ಅಥವಾ ಅವರ ಫೋನ್‌ಗಳನ್ನು ರಿಸೀವ್ ಮಾಡದ ಕಾರಣ ಸೋಂಕು ದೃಡಪಟ್ಟಿರುವವರೊಂದಿಗೆ ಸಂಪರ್ಕ ಹೊಂದಿರುವವರನ್ನು ಸಹ ತಲುಪಲು ನಮಗೆ ಸಾಧ್ಯವಾಗುವುದಿಲ್ಲ. ಹೀಗೆ ತಪ್ಪಿಸಿಕೊಳ್ಳುವುದರಿಂದ ಅವರಿಗೆ ಏನು ಲಾಭ ಎಂದು ನಮಗೆ ತಿಳಿದಿಲ್ಲ. ಅವರಿಗೆ ಸೋಂಕು ತಗುಲಿದ್ದರೆ ಅದು ಅವರಿಗೆ ತಿಳಿದಿರುವುದಿಲ್ಲ” ಎಂದು ಅವರು ಹೇಳಿದರು.

ಬಹುಶಃ ಜನರು ಸಾಮಾಜಿಕವಾಗಿ ಕಳಂಕಿತರಾಗುವರೆನೋ ಎಂಬ ಭಯಕ್ಕೆ ಹೀಗೆ ಮಾಡುತ್ತಿರಬಹುದು. ಆದರೆ, ತಮ್ಮ ಬಗ್ಗೆ ಸರಿಯಾದ ಸಂಪರ್ಕ ವಿವರಗಳನ್ನು ಮತ್ತು ಇತರ ಸಂಬಂಧಿತ ಸಂಪರ್ಕವನ್ನು ಪತ್ತೆಹಚ್ಚುವ ಮಾಹಿತಿಯನ್ನು ನೀಡುವಂತೆ ಮತ್ತು ಇದು ಸೋಂಕು ಹರಡುವ ಪ್ರಮಾಣವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಅತಿ ಹೆಚ್ಚು ಅಂಕ ಗಳಿಸಿದ 12 ನೇ ತರಗತಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಘೋಷಿಸಿದ ಪಂಜಾಬ್ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...