Homeಕರೋನಾ ತಲ್ಲಣತನ್ನ ಬದಲಿಗೆ ಜಿಲ್ಲಾಧಿಕಾರಿ ನಂಬರ್ ನೀಡಿದ್ದ ಕೊರೊನಾ ಸೋಂಕಿತ ವ್ಯಕ್ತಿ!

ತನ್ನ ಬದಲಿಗೆ ಜಿಲ್ಲಾಧಿಕಾರಿ ನಂಬರ್ ನೀಡಿದ್ದ ಕೊರೊನಾ ಸೋಂಕಿತ ವ್ಯಕ್ತಿ!

ಕರೆ ಬಂದ ನಂತರ ಆಶ್ಚರ್ಯಗೊಂಡ ಶಂಕರ್ ತಾನು ಜಿಲ್ಲಾಧಿಕಾರಿ ಎಂದು ಹೇಳಿದ್ದಾರೆ. ಇದರ ಕುರಿತು ಹೆಚ್ಚಿನ ವಿವರಗಳಿಗಾಗಿ ನಿಯಂತ್ರಣ ಕೊಠಡಿ ಸಿಬ್ಬಂದಿಯನ್ನು ವಿಚಾರಿಸಿದಾಗ ಕೊರೊನಾ ಸೋಂಕಿತ ವ್ಯಕ್ತಿಯು ತಪಾಸಣೆ ವೇಳೆ ತಮ್ಮ ನಂಬರ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -
- Advertisement -

ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರಿಗೆ ಜಿಲ್ಲಾ ಕೊರೊನಾ ನಿಯಂತ್ರಣ ವಿಭಾಗದಿಂದ ಶನಿವಾರ ಕರೆ ಬಂದಿದ್ದು, ತಮಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು ಕ್ವಾರಂಟೈನ್ ನಲ್ಲಿರುವಂತೆ ಹೇಳಲಾಗಿದೆ. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದ ವ್ಯಕ್ತಿಯೊಬ್ಬರು ಕೊರೊನಾ ಪರೀಕ್ಷೆ ವೇಳೆ ತಮ್ಮ ನಂಬರ್ ಬದಲಿಗೆ ಜಿಲ್ಲಾಧಿಕಾರಿ ನಂಬರ್ ನೀಡಿದ್ದಾರೆ ಎಂಬುದು ತದನಂತರ ತಿಳಿದುಬಂದಿದೆ.

ಕರೆ ಬಂದ ನಂತರ ಆಶ್ಚರ್ಯಗೊಂಡ ಶಂಕರ್ ತಾನು ಜಿಲ್ಲಾಧಿಕಾರಿ ಎಂದು ಹೇಳಿದ್ದಾರೆ. ಇದರ ಕುರಿತು ಹೆಚ್ಚಿನ ವಿವರಗಳಿಗಾಗಿ ನಿಯಂತ್ರಣ ಕೊಠಡಿ ಸಿಬ್ಬಂದಿಯನ್ನು ವಿಚಾರಿಸಿದಾಗ ಕೊರೊನಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದಾತ ಪರೀಕ್ಷೆ ವೇಳೆ ತಮ್ಮ ನಂಬರ್ ನೀಡಿದ್ದಾನೆ ಎಂದು ತಿಳಿಸಿದ್ದಾರೆ.

ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ ವ್ಯಕ್ತಿಗಳು ತಪಾಸಣೆ ವೇಳೆ ತಪ್ಪು ನಂಬರ್ ನೀಡಿದ್ದಾರೆ. ಒಂದು ವೇಳೆ ಪಾಸಿಟಿವ್ ಬಂದರೆ ಕ್ವಾರಂಟೈನ್‌ಗೆ ಒಳಗಾಗಲು, ಅಥವಾ ಆಸ್ಪತ್ರೆಗೆ ದಾಖಲಾಗಲು ಹಿಂಜರಿಯುವವರು ಮಾಡಿರುವ ಕೆಲಸ ಇದು. ಈ ಕುರಿತು ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಅಭಿರಾಮ್ ಜಿ ಶಂಕರ್ ತಿಳಿಸಿದ್ದಾರೆ.

“ನಾವು  ಆ ವ್ಯಕ್ತಿಗೆ ಎಚ್ಚರಿಕೆ ನೀಡಿದ್ದೇವೆ. ಇದು ಮತ್ತೆ ಸಂಭವಿಸದಂತೆ ನಾವು ಜಾಗರೂಕತೆ ವಹಿಸಬೇಕು. ಜನರಿಂದ ಮಾಹಿತಿ ಸಂಗ್ರಹಿಸುವುದು ರೋಗಿಗಳಿಗೆ ತೊಂದರೆ ಅಥವಾ ಶಿಕ್ಷೆ ನೀಡುವುದಕ್ಕಲ್ಲ. ಹಾಗಾಗಿ ಜನರು ಸರಿಯಾದ ಡೇಟಾವನ್ನು ನೀಡಬೇಕು” ಎಂದು ಜಿಲ್ಲಾದಿಕಾರಿ ತಿಳಿಸಿದರು.

“ಕೆಲವೊಮ್ಮೆ ಅವರು ತಪ್ಪು ನಂಬರ್ ಗಳನ್ನು ನೀಡುತ್ತಿರುವುದರಿಂದ ಅಥವಾ ಅವರ ಫೋನ್‌ಗಳನ್ನು ರಿಸೀವ್ ಮಾಡದ ಕಾರಣ ಸೋಂಕು ದೃಡಪಟ್ಟಿರುವವರೊಂದಿಗೆ ಸಂಪರ್ಕ ಹೊಂದಿರುವವರನ್ನು ಸಹ ತಲುಪಲು ನಮಗೆ ಸಾಧ್ಯವಾಗುವುದಿಲ್ಲ. ಹೀಗೆ ತಪ್ಪಿಸಿಕೊಳ್ಳುವುದರಿಂದ ಅವರಿಗೆ ಏನು ಲಾಭ ಎಂದು ನಮಗೆ ತಿಳಿದಿಲ್ಲ. ಅವರಿಗೆ ಸೋಂಕು ತಗುಲಿದ್ದರೆ ಅದು ಅವರಿಗೆ ತಿಳಿದಿರುವುದಿಲ್ಲ” ಎಂದು ಅವರು ಹೇಳಿದರು.

ಬಹುಶಃ ಜನರು ಸಾಮಾಜಿಕವಾಗಿ ಕಳಂಕಿತರಾಗುವರೆನೋ ಎಂಬ ಭಯಕ್ಕೆ ಹೀಗೆ ಮಾಡುತ್ತಿರಬಹುದು. ಆದರೆ, ತಮ್ಮ ಬಗ್ಗೆ ಸರಿಯಾದ ಸಂಪರ್ಕ ವಿವರಗಳನ್ನು ಮತ್ತು ಇತರ ಸಂಬಂಧಿತ ಸಂಪರ್ಕವನ್ನು ಪತ್ತೆಹಚ್ಚುವ ಮಾಹಿತಿಯನ್ನು ನೀಡುವಂತೆ ಮತ್ತು ಇದು ಸೋಂಕು ಹರಡುವ ಪ್ರಮಾಣವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಅತಿ ಹೆಚ್ಚು ಅಂಕ ಗಳಿಸಿದ 12 ನೇ ತರಗತಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಘೋಷಿಸಿದ ಪಂಜಾಬ್ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...