Homeಕರ್ನಾಟಕಕೊರೊನಾ ಸಾವು: ₹1 ಲಕ್ಷ ಪರಿಹಾರ ಆದೇಶ ಹಿಂಪಡೆದ ರಾಜ್ಯದ ಬಿಜೆಪಿ ಸರ್ಕಾರ

ಕೊರೊನಾ ಸಾವು: ₹1 ಲಕ್ಷ ಪರಿಹಾರ ಆದೇಶ ಹಿಂಪಡೆದ ರಾಜ್ಯದ ಬಿಜೆಪಿ ಸರ್ಕಾರ

- Advertisement -
- Advertisement -

ಕೊರೊನಾ ಸೋಂಕಿನಿಂದಾಗಿ ಮೃತರಾದವರ ವಾರಸುದಾರರಿಗೆ 1 ಲಕ್ಷ ರೂ.ಗಳನ್ನು ಪರಿಹಾರ ಧನ ನೀಡುವುದಾಗಿ ರಾಜ್ಯದ ಬಿಜೆಪಿ ಸರ್ಕಾರ ಈ ಹಿಂದೆ ಘೋಷಿಸಿತ್ತು. ಆದರೆ ಇದೀಗ ಈ ಆದೇಶವನ್ನು ವಾಪಾಸು ಪಡೆದು ಪರಿಷ್ಕೃತ ಆದೇಶವನ್ನು ಮಂಗಳವಾರ ಹೊರಡಿಸಿದೆ.

ರಾಜ್ಯ ಸರ್ಕಾರವು ಜುಲೈ ತಿಂಗಳಲ್ಲಿ, ಕೊರೊನಾದಿಂದಾಗಿ ದುಡಿಯುವ ಸದಸ್ಯರನ್ನು ಕಳೆದುಕೊ೦ಡ೦ತಹ, ಬಡತನ ರೇಖೆಗಿ೦ತ ಕೆಳಗಿರುವ ಕುಟುಂಬಕ್ಕೆ 1 ಲಕ್ಷ ರೂ.ಗಳನ್ನು ಪರಿಹಾರ ನೀಡುವುದಾಗಿ ಘೋಷಿಸಿತ್ತು. ಅದರಂತೆ, ಈ ಹಣವನ್ನು ಅರ್ಹ ಸ೦ತ್ರಸ್ತ ಕುಟುಂಬದ ಕಾನೂನುಬದ್ದ ವಾರಸುದಾರರಿಗೆ ನೀಡುವುದಾಗಿ ಹೇಳಿತ್ತು.

ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಬೂದಿ ಮುಚ್ಚಿದ ಕೆಂಡವಾದ ಗ್ರಾಮ

ಇಷ್ಟೇ ಅಲ್ಲದೆ, ಜಿಲ್ಲಾಧಿಕಾರಿಗಳ ಜಿಲ್ಲಾ ವಿಪತ್ತು ಪರಿಹಾನ ನಿಧಿಯಿಂದ(DDRF) ಪಿ.ಡಿ. ಖಾತೆಯಲ್ಲಿ ಪ್ರಸ್ತುತ ಲಭ್ಯವಿರುವ ಅನುದಾನದಿಂದ 1 ಲಕ್ಷ ರೂ. ವಿತರಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೆಪ್ಟೆಂಬರ್‌ 23 ರ ಗುರವಾರದಂದು ಆದೇಶ ನೀಡಲಾಗಿತ್ತು.

ಆದರೆ, ಒಕ್ಕೂಟ ಸರ್ಕಾರವು ಕೊರೊನಾದಿ೦ದಾಗಿ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ 50 ಸಾವಿರ ರೂ.ಗಳು ನೀಡಬೇಕು ಎಂದು ಸೂಚನೆ ನೀಡಿದ್ದರಿಂದ, ಗುರುವಾರ ರಾಜ್ಯ ಸರ್ಕಾರ ನೀಡುವುದಾಗಿ ಘೋಷಿಸಿದ್ದ 1 ಲಕ್ಷ ರೂ. ಪರಿಹಾರದ ಆದೇಶವನ್ನು ವಾಪಾಸು ಪಡೆದಿದೆ.

“ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ನೀಡಿರುವ ಸೆಪ್ಟೆಂಬರ್‌ 25 ರ ನಿರ್ದೇಶನದ೦ತೆ, ಕೊರೊನಾದಿಂದಾಗಿ ಮೃತಪಟ್ಟ ವ್ಯಕ್ತಿಯ ಕಾನೂನು ಬದ್ಧ ವಾರಸುದಾರರಿಗೆ 50 ಸಾವಿರ ರೂ. ಪರಿಹಾರ ನೀಡಬೇಕಾಗಿದೆ. ಹೀಗಾಗಿ ರಾಜ್ಯ ಸರ್ಕಾರದಿ೦ದ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಬೇಕಾಗಿದ್ದು, ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿ ಸೆಪ್ಟೆಂಬರ್‌ 23 ರಂದು ಹೊರಡಿಸಲಾಗಿದ್ದ ಆದೇಶವನ್ನು ಯಥಾವತ್ತಾಗಿ ಹಿಂಪಡೆಯಲಾಗಿದೆ” ಎಂದು ಮಂಗಳವಾರದ ಆದೇಶದಲ್ಲಿ ತಿಳಿಸಲಾಗಿದೆ.

ಕೊರೊನಾದಿಂದಾಗಿ ಮೃತಪಟ್ಟ ಬಿಪಿಎಲ್‌ ಕುಟುಂಬದ ದುಡಿಯುವ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಣೆ ಕುರಿತ೦ತೆ ರಾಜ್ಯದಲ್ಲಿ ಒಟ್ಟು 7,711 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ದಿಫೈಲ್ ವರದಿ ಮಾಡಿದೆ.

ಇದನ್ನೂ ಓದಿ: ಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...