Homeಅಂತರಾಷ್ಟ್ರೀಯಕೊರೊನಾ: ಜಗತ್ತಿನಲ್ಲಿ 20 ಲಕ್ಷ ದಾಟಿದ ಸಾವಿನ ಸಂಖ್ಯೆ!

ಕೊರೊನಾ: ಜಗತ್ತಿನಲ್ಲಿ 20 ಲಕ್ಷ ದಾಟಿದ ಸಾವಿನ ಸಂಖ್ಯೆ!

ಮೊದಲ 8 ತಿಂಗಳಲ್ಲಿ 10 ಲಕ್ಷ ಕೋವಿಡ್ ಸೋಂಕಿತರು ಸಾವನ್ನಪ್ಪಿದರೆ, ನಂತರದ 4 ತಿಂಗಳಲ್ಲಿ 10 ಲಕ್ಷ ಸೋಂಕಿತರು ಸಾವನ್ನಪ್ಪಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಜಗತ್ತಿನಾದ್ಯಂತ ಲಸಿಕೆ ಅಭಿವೃದ್ಧಿಪಡಿಸುವ ಪ್ರಕ್ರಿಯೆ ವೇಗವಾಗಿ ನಡೆಯುತ್ತಿದ್ದು, ಈಗಾಗಲೆ ಕೆಲವು ದೇಶಗಳು ಲಸಿಕೆ ವಿತರಿಸಲು ಮುಂದಾಗಿವೆ. ಈ ಸಂದರ್ಭದಲ್ಲಿ ಕೊರೊನಾ ಸೋಂಕಿನಿಂದ ಮೃತರಾದವರ ಸಂಖ್ಯೆ 20 ಲಕ್ಷ ದಾಟಿದೆ.

ಚೀನಾದ ನಗರ ವುಹಾನ್‌ನಲ್ಲಿ ಕೊರೊನಾ ಸೋಂಕು ಪತ್ತೆಯಾದ ಒಂದು ವರ್ಷದಲ್ಲಿ ಇಡೀ ಜಗತ್ತನ್ನು ಆವರಿಸಿದ್ದು ಇದುವರೆಗೂ 20 ಲಕ್ಷ ಜನರನ್ನು ಬಲಿ ಪಡೆದಿದೆ. “ಇದುವರೆಗೆ ಸತ್ತವರ ಸಂಖ್ಯೆ ಬ್ರಸೆಲ್ಸ್, ಮೆಕ್ಕಾ, ಮಿನ್ಸ್ಕ್ ಅಥವಾ ವಿಯೆನ್ನಾದ ಜನಸಂಖ್ಯೆಗೆ ಸಮನಾಗಿದೆ” ಎಂದು ಮೃತರ ಕುರಿತಾದ ಅಂಕಿ ಅಂಶಗಳನ್ನು ಸಂಗ್ರಹಿಸಿರುವ ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯವು ಹೇಳಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಉಪಸ್ಥಿತಿಯಲ್ಲೆ ಬಿಜೆಪಿ ಸಮಾವೇಶದಲ್ಲಿ ಕೊರೊನಾ ನಿಯಮ ಉಲ್ಲಂಘನೆ!

ಈ ಮಾಹಿತಿ ಪ್ರಪಂಚದಾದ್ಯಂತದ ಕೇವಲ ಸರ್ಕಾರಿ ಸಂಸ್ಥೆಗಳು ಒದಗಿಸಲಾದ ಅಂಕಿಅಂಶಗಳನ್ನು ಮಾತ್ರ ಆಧರಿಸಿದ್ದು, ವಾಸ್ತವ ಸಂಖ್ಯೆಯು ಇನ್ನೂ ಹೆಚ್ಚಿದೆ ಎಂದು ಊಹಿಸಲಾಗಿದೆ.

ಮೊದಲ 8 ತಿಂಗಳಲ್ಲಿ 10 ಲಕ್ಷ ಕೋವಿಡ್ ಸೋಂಕಿತರು ಸಾವನ್ನಪ್ಪಿದರೆ, ನಂತರದ 4 ತಿಂಗಳಲ್ಲಿ 10 ಲಕ್ಷ ಸೋಂಕಿತರು ಸಾವನ್ನಪ್ಪಿದ್ದಾರೆ.

“ಈ ಭಯಾನಕ ಸಂಖ್ಯೆಯ ಹಿಂದೆ ಮರೆಯಲಾಗದ ಹೆಸರುಗಳು ಮತ್ತು ಮುಖಗಳಿವೆ. ಊಟದ ಮೇಜಿನ ಬಳಿ ಸದಾ ಖಾಲಿ ಇರುವ ಆಸನ, ಪ್ರೀತಿಪಾತ್ರರ ಮೌನದೊಂದಿಗೆ ಪ್ರತಿಧ್ವನಿಸುವ ಕೋಣೆ, ಅವರ ನಗು ಸ್ಮರಣೆಯಾಗಿ ಉಳಿದಿದೆ. ಆದರೆ ಜಾಗತಿಕ ಸಂಘಟಿತ ಪ್ರಯತ್ನದ ಕೊರತೆಯಿಂದಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ವಿಜ್ಞಾನ ಯಶಸ್ವಿಯಾಗಿದೆ, ಆದರೆ ಒಗ್ಗಟ್ಟು ವಿಫಲವಾಗಿದೆ” ಎಂದು ವಿಶ್ವಸಂಸ್ಥೆ ಕಾರ್ಯದರ್ಶಿ ಆಂಟೋನಿಯೊ ಗುಟರೆಸ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೇವೆ ಎಂದು ನನಗೆ ತೃಪ್ತಿ ಇದೆ: ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...