Homeಮುಖಪುಟಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ

ಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ

- Advertisement -
- Advertisement -

ಮಂಡ್ಯ ಜಿಲ್ಲೆಯ ಕಿರುಗಾವಲು ಪಂಚಾಯ್ತಿಯ ಕಲ್ಕುಳಿ ಗ್ರಾಮಕ್ಕೆ ಸೇರಿದ, ಪಂಚಾಯ್ತಿಯಲ್ಲಿ ಪೌರಕಾರ್ಮಿಕ ಸೇವೆ ಸಲ್ಲಿಸುತ್ತಿದ್ದ ಬಸವರಾಜು (45) ರವರು ಕೊರೊನಾ ಹರಡದಂತೆ ಔಷಧಿ ಸಿಂಪಡಿಸುವಾಗ ಆದ ಅನಾಹುತದಿಂದಾಗಿ ನಿನ್ನೆ ಮಂಡ್ಯದಲ್ಲಿ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ತಮ್ಮ ಪಂಚಾಯ್ತಿ ಸುತ್ತಲಿನ ಗ್ರಾಮಗಳಿಗೆ ಕರೋನಾ ಸೋಂಕು ಹರಡದಂತೆ ಔಷಧಿ ಸಿಂಪಡಿಸುವ ಸಿಬ್ಬಂದಿಗಳಿಗೆ ಜೊತೆಗಾರರಾಗಿ ಮತ್ತು ಮಾರ್ಗದರ್ಶಕರಾಗಿ ಪಂಚಾಯ್ತಿ ಆದೇಶದ ಮೇರೆಗೆ ಬಸವರಾಜು ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಅವರಿಗೆ ಸಿಂಪಡಿಸಲಾಗುತ್ತಿದ್ದ ಔಷಧದ ಅಡ್ಡಪರಿಣಾಮ ಉಂಟಾಗಿದೆ. ಅದರಿಂದ ಅಸ್ವಸ್ಥರಾಗಿದ್ದ ಅವರನ್ನು ಏಪ್ರಿಲ್‌ 21ರಂದು ಮಂಡ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೀ ರಕ್ತಕ್ಕೆ ಪ್ರಬಲ ರಾಸಾಯನಿಕಗಳು ಸೇರಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಬಸವರಾಜುರವರ ಸಾವಿನ ಸುದ್ದಿ ತಲುಪುತ್ತಿದ್ದಂತೆಯೇ ಹಲವಾರು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಪೌರಕಾರ್ಮಿಕರಿಗೆ ಸೂಕ್ತ ರಕ್ಷಣೇ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೊರೊನಾ ವಿರೋಧಿ ಹೋರಾಟದಲ್ಲಿ ಬಲಿಯಾಗುವ ಪೌರಕಾರ್ಮಿಕರ ಪ್ರಾಣಕ್ಕೆ ಬೆಲೆಯಿಲ್ಲವೇ?
ಸಾರ್ವಜನಿಕರಿಗೆ ಕರೋನಾ ಬರದಂತೆ ತಡೆಯಲು ಔಷಧಿ ಸಿಂಪಡಣೆ ಮಾಡುವಾಗ ದೇಹದಲ್ಲಿ ಔಷಧಿ ಸೇರಿದ ಪರಿಣಾಮವಾಗಿ ಸಾವಿಗೀಡಾದ ಪೌರಕಾರ್ಮಿಕ ಬಸವರಾಜು ಅವರದ್ದು ತ್ಯಾಗವಲ್ಲವೇ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ.

ಪೊಲೀಸರು, ವೈದ್ಯರಿಗಾಗಿ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟುವ ನಾಗರೀಕರೇ, ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳ ನಿಸ್ವಾರ್ಥ ಸೇವೆಗೆ ಕೃತಜ್ಞತೆ ಸಲ್ಲಿಸೋಣ. ಅವರಂತೆಯೇ ಪ್ರಾಣಾಪಾಯವನ್ನು ಲೆಕ್ಕಿಸದೆ ನಮ್ಮ ಸೇವೆಯಲ್ಲಿ ತೊಡಗಿರುವ ಪೌರಕಾರ್ಮಿಕರನ್ನೂ ನೆನೆಯಬೇಕು. ಅವರ ತ್ಯಾಗವನ್ನು ಪರಿಗಣಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು! ಎಂದು ಆಗ್ರಹಿಸಲಾಗಿದೆ.

ಈ ಕುರಿತು ಬಸವರಾಜುರವರ ಸಂಬಂಧಿ ಮತ್ತು ಕರ್ನಾಟಕ ಜನಶಕ್ತಿಯ ಕಾರ್ಯಕರ್ತರಾದ ಸಿದ್ದರಾಜುರವರು ಮಾತನಾಡಿ “ಒಂದು ವಾರದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ನಿನ್ನೆ ಬೆಳಿಗ್ಗೆ ಪ್ರಜ್ಞೆ ತಪ್ಪಿದರು. ಆಗ ಕೂಡಲೇ ನಾನೇ ಜಿಲ್ಲಾಸ್ಪತ್ರೆಗೆ ತೋರಿಸಿ ಅಡ್ಮಿಟ್ ಮಾಡಿದೆ. ರಾತ್ರಿ ವೆಂಟಿಲೇಟರ್‌ಗೆ ಹಾಕಿದ್ದರು. ಆದರೂ ಬಸವರಾಜು ಬದುಕುಳಿಯಲ್ಲಿಲ್ಲ. ಈ ಕುರಿತು ಜಿಲ್ಲಾ ಪಂಚಾಯತ್‌ ಸಿಇಒ, ಇಒ ರವರಿಗೆ ಮಾಹಿತಿ ನೀಡಿದ್ದೇವೆ. ಅವರು ಎರಡು ದಿನದ ನಂತರ ಪರಿಹಾರ ಹಣ ನೀಡುವ ಬಗ್ಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಮೊದಲೇ ಬಡವರಾಗಿರುವ ಪೌರಕಾರ್ಮಿಕರು ಈ ರೀತಿ ಲಾಕ್‌ಡೌನ್‌ ಸಮಯದಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂಜಾಗ್ರತಾ ಸಲಕರಣೆಗಳನ್ನು ನೀಡುವ ಮೂಲಕ ಸರ್ಕಾರ ಅವರ ರಕ್ಷಣೆಗೆ ಮುಂದಾಗಬೇಕು’ ಎಂದಿದ್ದಾರೆ.

ಬಸವರಾಜುರವರ ಸಾವನ್ನು ಯಾವುದೇ ಪೊಳ್ಳುಕಾರಣ ನೀಡಿ ಕೊರೋನಾ ಸಂಬಂಧಿ ಸಾವಲ್ಲ ಎಂಬಂತೆ ಬಿಂಬಿಸುವ ಪ್ರಯತ್ನವನ್ನು ಅಧಿಕಾರಿಗಳು ಮಾಡಬಾರದೆಂದು. ಇಂತಹ ಸಂದರ್ಭದಲ್ಲೂ ಸೇವೆಗೆ ಹಾಜರಾಗಿ ಪ್ರಾಣತ್ಯಾಗ ಮಾಡಿದ ಬಸವರಾಜು ಅವರನ್ನು ಕೊರೋನಾ ವಿರೋಧಿ ಸಂಗ್ರಾಮದ ಹುತಾತ್ಮ ಎಂದು ಸರ್ಕಾರ ಪರಿಗಣಿಸಬೇಕು. ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲೇಬೇಕು. ಪೌರ ಕಾರ್ಮಿಕರ ಸುರಕ್ಷತೆ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳಿಗೆ‌ ಆದೇಶ ಹೊರಡಿಸಬೇಕು ಎಂಬ ಆಗ್ರಹಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿವೆ.


ಇದನ್ನೂ ಓದಿ: ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ: ರಾಹುಲ್ ಗಾಂಧಿ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಪೌರಕಾರ್ಮಿಕರ ಸೇವೆಯನ್ನು ಅಗತ್ಯ ಸೇವೆ ಎಂದು ಪರಿಗಣಿಸಿ ಅವರ ಕೆಲಸವನ್ನು ಖಾಯಂಗೊಳಿಸುವಂತೆ, ಅಗತ್ಯ ಸಂಖ್ಯೆಯಲ್ಲಿ ನೇಮಕಾತಿಗೊಳಿಸುವಂತೆ, ಇವರನ್ನು ಮುಖ್ಯವಾಹಿನಿಗೆ ತರಲು ಇವರ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ಕಲ್ಪಿಸುವಂತೆ, ಇವರಿಗೆ ವಿಶೇಷ ಜೀವವಿಮೆ ಕಲ್ಪಿಸುವಂತೆ, ಇವರಿಗೆ ಹಾಗೂ ಇವರ ಅವಲಂಭಿತರಿಗೆ ಸಂಪೂರ್ಣ ಉಚಿತ ವೈಧ್ಯಕೀಯ ಸೇವೆಗಳನ್ನು ಕಲ್ಪಿಸುವಂತೆ ಭ್ರಷ್ಟಾಚಾರ ವಿರೋಧಿ ಹೋರಾಟ ವೇದಿಕೆವತಿಯಿಂದ ನಿರಂತರ ಹೋರಾಟ ನಡೆಸಿದ್ದೆವು. ಆದರೆ ಇಂದಿಗೂ ಪೌರಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ಸೇವೆಗೆ ತೆಗೆದುಕೊಂಡು ವಂಚಿಸಲಾಗುತ್ತಿದೆ: ಕೆ.ನರೇಂದ್ರಬಾಬು, ವಕೀಲರು ಮತ್ತು ಸಂಸ್ಥಾಪಕ ಅಧ್ಯಕ್ಷರು, ಭ್ರಷ್ಟಾಚಾರ ವಿರೋಧಿ ಹೋರಾಟ ವೇದಿಕೆ, 7022272226

  2. ರಾಷ್ಟ್ರದಾದ್ಯಂತ ಕೊರೋನಾ ಕಾರಣದಿಂದ ಮರಣಿಸಿದವರಿಗಿಂತಾ ಹಸಿವೆಯಿಂದ ಮರಣಿಸುವವರ ಸಂಖ್ಯೆ ಹೆಚ್ಚಾಗುವ ಸಂಭವ ಹೆಚ್ಚಾಗಿದೆ. ಜನ ಬೀದಿಗೆ ಬರುವ ಬದಲಾಗಿ ನ್ಯಾಯಬೆಲೆ ಅಂಗಡಿಯವರು ಪ್ರತಿಯೊಬ್ಬರ ಜನಮನೆ ಬಾಗಿಲಿಗೆ ಹೋಗಿ ಪಡಿತರ ಚೀಟಿಗಳನ್ನು ಪರಿಶೀಲಿಸದೇ ಪಡಿತರವನ್ನು ಅಳೆದುಕೊಡುವಂತೆ ಒತ್ತಾಯಿಸಲಾಗಿತ್ತು, ಆದರೆ ಇಚ್ಚಾಕೊರತೆ ಕಾಡಿದೆ

  3. ನಿಜ ಹೇಳಬೇಕೆಂದರೆ ಪೌರಕಾರ್ಮಿಕರೇ ಮುಂಚೂಣಿಯ ಹೋರಾಟಗಾರರು
    RIP

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...