Homeಮುಖಪುಟಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ

ಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ

- Advertisement -
- Advertisement -

ಮಂಡ್ಯ ಜಿಲ್ಲೆಯ ಕಿರುಗಾವಲು ಪಂಚಾಯ್ತಿಯ ಕಲ್ಕುಳಿ ಗ್ರಾಮಕ್ಕೆ ಸೇರಿದ, ಪಂಚಾಯ್ತಿಯಲ್ಲಿ ಪೌರಕಾರ್ಮಿಕ ಸೇವೆ ಸಲ್ಲಿಸುತ್ತಿದ್ದ ಬಸವರಾಜು (45) ರವರು ಕೊರೊನಾ ಹರಡದಂತೆ ಔಷಧಿ ಸಿಂಪಡಿಸುವಾಗ ಆದ ಅನಾಹುತದಿಂದಾಗಿ ನಿನ್ನೆ ಮಂಡ್ಯದಲ್ಲಿ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ತಮ್ಮ ಪಂಚಾಯ್ತಿ ಸುತ್ತಲಿನ ಗ್ರಾಮಗಳಿಗೆ ಕರೋನಾ ಸೋಂಕು ಹರಡದಂತೆ ಔಷಧಿ ಸಿಂಪಡಿಸುವ ಸಿಬ್ಬಂದಿಗಳಿಗೆ ಜೊತೆಗಾರರಾಗಿ ಮತ್ತು ಮಾರ್ಗದರ್ಶಕರಾಗಿ ಪಂಚಾಯ್ತಿ ಆದೇಶದ ಮೇರೆಗೆ ಬಸವರಾಜು ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಅವರಿಗೆ ಸಿಂಪಡಿಸಲಾಗುತ್ತಿದ್ದ ಔಷಧದ ಅಡ್ಡಪರಿಣಾಮ ಉಂಟಾಗಿದೆ. ಅದರಿಂದ ಅಸ್ವಸ್ಥರಾಗಿದ್ದ ಅವರನ್ನು ಏಪ್ರಿಲ್‌ 21ರಂದು ಮಂಡ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೀ ರಕ್ತಕ್ಕೆ ಪ್ರಬಲ ರಾಸಾಯನಿಕಗಳು ಸೇರಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಬಸವರಾಜುರವರ ಸಾವಿನ ಸುದ್ದಿ ತಲುಪುತ್ತಿದ್ದಂತೆಯೇ ಹಲವಾರು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಪೌರಕಾರ್ಮಿಕರಿಗೆ ಸೂಕ್ತ ರಕ್ಷಣೇ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೊರೊನಾ ವಿರೋಧಿ ಹೋರಾಟದಲ್ಲಿ ಬಲಿಯಾಗುವ ಪೌರಕಾರ್ಮಿಕರ ಪ್ರಾಣಕ್ಕೆ ಬೆಲೆಯಿಲ್ಲವೇ?
ಸಾರ್ವಜನಿಕರಿಗೆ ಕರೋನಾ ಬರದಂತೆ ತಡೆಯಲು ಔಷಧಿ ಸಿಂಪಡಣೆ ಮಾಡುವಾಗ ದೇಹದಲ್ಲಿ ಔಷಧಿ ಸೇರಿದ ಪರಿಣಾಮವಾಗಿ ಸಾವಿಗೀಡಾದ ಪೌರಕಾರ್ಮಿಕ ಬಸವರಾಜು ಅವರದ್ದು ತ್ಯಾಗವಲ್ಲವೇ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ.

ಪೊಲೀಸರು, ವೈದ್ಯರಿಗಾಗಿ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟುವ ನಾಗರೀಕರೇ, ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳ ನಿಸ್ವಾರ್ಥ ಸೇವೆಗೆ ಕೃತಜ್ಞತೆ ಸಲ್ಲಿಸೋಣ. ಅವರಂತೆಯೇ ಪ್ರಾಣಾಪಾಯವನ್ನು ಲೆಕ್ಕಿಸದೆ ನಮ್ಮ ಸೇವೆಯಲ್ಲಿ ತೊಡಗಿರುವ ಪೌರಕಾರ್ಮಿಕರನ್ನೂ ನೆನೆಯಬೇಕು. ಅವರ ತ್ಯಾಗವನ್ನು ಪರಿಗಣಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು! ಎಂದು ಆಗ್ರಹಿಸಲಾಗಿದೆ.

ಈ ಕುರಿತು ಬಸವರಾಜುರವರ ಸಂಬಂಧಿ ಮತ್ತು ಕರ್ನಾಟಕ ಜನಶಕ್ತಿಯ ಕಾರ್ಯಕರ್ತರಾದ ಸಿದ್ದರಾಜುರವರು ಮಾತನಾಡಿ “ಒಂದು ವಾರದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ನಿನ್ನೆ ಬೆಳಿಗ್ಗೆ ಪ್ರಜ್ಞೆ ತಪ್ಪಿದರು. ಆಗ ಕೂಡಲೇ ನಾನೇ ಜಿಲ್ಲಾಸ್ಪತ್ರೆಗೆ ತೋರಿಸಿ ಅಡ್ಮಿಟ್ ಮಾಡಿದೆ. ರಾತ್ರಿ ವೆಂಟಿಲೇಟರ್‌ಗೆ ಹಾಕಿದ್ದರು. ಆದರೂ ಬಸವರಾಜು ಬದುಕುಳಿಯಲ್ಲಿಲ್ಲ. ಈ ಕುರಿತು ಜಿಲ್ಲಾ ಪಂಚಾಯತ್‌ ಸಿಇಒ, ಇಒ ರವರಿಗೆ ಮಾಹಿತಿ ನೀಡಿದ್ದೇವೆ. ಅವರು ಎರಡು ದಿನದ ನಂತರ ಪರಿಹಾರ ಹಣ ನೀಡುವ ಬಗ್ಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಮೊದಲೇ ಬಡವರಾಗಿರುವ ಪೌರಕಾರ್ಮಿಕರು ಈ ರೀತಿ ಲಾಕ್‌ಡೌನ್‌ ಸಮಯದಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂಜಾಗ್ರತಾ ಸಲಕರಣೆಗಳನ್ನು ನೀಡುವ ಮೂಲಕ ಸರ್ಕಾರ ಅವರ ರಕ್ಷಣೆಗೆ ಮುಂದಾಗಬೇಕು’ ಎಂದಿದ್ದಾರೆ.

ಬಸವರಾಜುರವರ ಸಾವನ್ನು ಯಾವುದೇ ಪೊಳ್ಳುಕಾರಣ ನೀಡಿ ಕೊರೋನಾ ಸಂಬಂಧಿ ಸಾವಲ್ಲ ಎಂಬಂತೆ ಬಿಂಬಿಸುವ ಪ್ರಯತ್ನವನ್ನು ಅಧಿಕಾರಿಗಳು ಮಾಡಬಾರದೆಂದು. ಇಂತಹ ಸಂದರ್ಭದಲ್ಲೂ ಸೇವೆಗೆ ಹಾಜರಾಗಿ ಪ್ರಾಣತ್ಯಾಗ ಮಾಡಿದ ಬಸವರಾಜು ಅವರನ್ನು ಕೊರೋನಾ ವಿರೋಧಿ ಸಂಗ್ರಾಮದ ಹುತಾತ್ಮ ಎಂದು ಸರ್ಕಾರ ಪರಿಗಣಿಸಬೇಕು. ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲೇಬೇಕು. ಪೌರ ಕಾರ್ಮಿಕರ ಸುರಕ್ಷತೆ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳಿಗೆ‌ ಆದೇಶ ಹೊರಡಿಸಬೇಕು ಎಂಬ ಆಗ್ರಹಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿವೆ.


ಇದನ್ನೂ ಓದಿ: ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ: ರಾಹುಲ್ ಗಾಂಧಿ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಪೌರಕಾರ್ಮಿಕರ ಸೇವೆಯನ್ನು ಅಗತ್ಯ ಸೇವೆ ಎಂದು ಪರಿಗಣಿಸಿ ಅವರ ಕೆಲಸವನ್ನು ಖಾಯಂಗೊಳಿಸುವಂತೆ, ಅಗತ್ಯ ಸಂಖ್ಯೆಯಲ್ಲಿ ನೇಮಕಾತಿಗೊಳಿಸುವಂತೆ, ಇವರನ್ನು ಮುಖ್ಯವಾಹಿನಿಗೆ ತರಲು ಇವರ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ಕಲ್ಪಿಸುವಂತೆ, ಇವರಿಗೆ ವಿಶೇಷ ಜೀವವಿಮೆ ಕಲ್ಪಿಸುವಂತೆ, ಇವರಿಗೆ ಹಾಗೂ ಇವರ ಅವಲಂಭಿತರಿಗೆ ಸಂಪೂರ್ಣ ಉಚಿತ ವೈಧ್ಯಕೀಯ ಸೇವೆಗಳನ್ನು ಕಲ್ಪಿಸುವಂತೆ ಭ್ರಷ್ಟಾಚಾರ ವಿರೋಧಿ ಹೋರಾಟ ವೇದಿಕೆವತಿಯಿಂದ ನಿರಂತರ ಹೋರಾಟ ನಡೆಸಿದ್ದೆವು. ಆದರೆ ಇಂದಿಗೂ ಪೌರಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ಸೇವೆಗೆ ತೆಗೆದುಕೊಂಡು ವಂಚಿಸಲಾಗುತ್ತಿದೆ: ಕೆ.ನರೇಂದ್ರಬಾಬು, ವಕೀಲರು ಮತ್ತು ಸಂಸ್ಥಾಪಕ ಅಧ್ಯಕ್ಷರು, ಭ್ರಷ್ಟಾಚಾರ ವಿರೋಧಿ ಹೋರಾಟ ವೇದಿಕೆ, 7022272226

  2. ರಾಷ್ಟ್ರದಾದ್ಯಂತ ಕೊರೋನಾ ಕಾರಣದಿಂದ ಮರಣಿಸಿದವರಿಗಿಂತಾ ಹಸಿವೆಯಿಂದ ಮರಣಿಸುವವರ ಸಂಖ್ಯೆ ಹೆಚ್ಚಾಗುವ ಸಂಭವ ಹೆಚ್ಚಾಗಿದೆ. ಜನ ಬೀದಿಗೆ ಬರುವ ಬದಲಾಗಿ ನ್ಯಾಯಬೆಲೆ ಅಂಗಡಿಯವರು ಪ್ರತಿಯೊಬ್ಬರ ಜನಮನೆ ಬಾಗಿಲಿಗೆ ಹೋಗಿ ಪಡಿತರ ಚೀಟಿಗಳನ್ನು ಪರಿಶೀಲಿಸದೇ ಪಡಿತರವನ್ನು ಅಳೆದುಕೊಡುವಂತೆ ಒತ್ತಾಯಿಸಲಾಗಿತ್ತು, ಆದರೆ ಇಚ್ಚಾಕೊರತೆ ಕಾಡಿದೆ

  3. ನಿಜ ಹೇಳಬೇಕೆಂದರೆ ಪೌರಕಾರ್ಮಿಕರೇ ಮುಂಚೂಣಿಯ ಹೋರಾಟಗಾರರು
    RIP

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...