Homeಮುಖಪುಟಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ

ಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ

- Advertisement -
- Advertisement -

ಮಂಡ್ಯ ಜಿಲ್ಲೆಯ ಕಿರುಗಾವಲು ಪಂಚಾಯ್ತಿಯ ಕಲ್ಕುಳಿ ಗ್ರಾಮಕ್ಕೆ ಸೇರಿದ, ಪಂಚಾಯ್ತಿಯಲ್ಲಿ ಪೌರಕಾರ್ಮಿಕ ಸೇವೆ ಸಲ್ಲಿಸುತ್ತಿದ್ದ ಬಸವರಾಜು (45) ರವರು ಕೊರೊನಾ ಹರಡದಂತೆ ಔಷಧಿ ಸಿಂಪಡಿಸುವಾಗ ಆದ ಅನಾಹುತದಿಂದಾಗಿ ನಿನ್ನೆ ಮಂಡ್ಯದಲ್ಲಿ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ತಮ್ಮ ಪಂಚಾಯ್ತಿ ಸುತ್ತಲಿನ ಗ್ರಾಮಗಳಿಗೆ ಕರೋನಾ ಸೋಂಕು ಹರಡದಂತೆ ಔಷಧಿ ಸಿಂಪಡಿಸುವ ಸಿಬ್ಬಂದಿಗಳಿಗೆ ಜೊತೆಗಾರರಾಗಿ ಮತ್ತು ಮಾರ್ಗದರ್ಶಕರಾಗಿ ಪಂಚಾಯ್ತಿ ಆದೇಶದ ಮೇರೆಗೆ ಬಸವರಾಜು ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಅವರಿಗೆ ಸಿಂಪಡಿಸಲಾಗುತ್ತಿದ್ದ ಔಷಧದ ಅಡ್ಡಪರಿಣಾಮ ಉಂಟಾಗಿದೆ. ಅದರಿಂದ ಅಸ್ವಸ್ಥರಾಗಿದ್ದ ಅವರನ್ನು ಏಪ್ರಿಲ್‌ 21ರಂದು ಮಂಡ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೀ ರಕ್ತಕ್ಕೆ ಪ್ರಬಲ ರಾಸಾಯನಿಕಗಳು ಸೇರಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಬಸವರಾಜುರವರ ಸಾವಿನ ಸುದ್ದಿ ತಲುಪುತ್ತಿದ್ದಂತೆಯೇ ಹಲವಾರು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಪೌರಕಾರ್ಮಿಕರಿಗೆ ಸೂಕ್ತ ರಕ್ಷಣೇ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೊರೊನಾ ವಿರೋಧಿ ಹೋರಾಟದಲ್ಲಿ ಬಲಿಯಾಗುವ ಪೌರಕಾರ್ಮಿಕರ ಪ್ರಾಣಕ್ಕೆ ಬೆಲೆಯಿಲ್ಲವೇ?
ಸಾರ್ವಜನಿಕರಿಗೆ ಕರೋನಾ ಬರದಂತೆ ತಡೆಯಲು ಔಷಧಿ ಸಿಂಪಡಣೆ ಮಾಡುವಾಗ ದೇಹದಲ್ಲಿ ಔಷಧಿ ಸೇರಿದ ಪರಿಣಾಮವಾಗಿ ಸಾವಿಗೀಡಾದ ಪೌರಕಾರ್ಮಿಕ ಬಸವರಾಜು ಅವರದ್ದು ತ್ಯಾಗವಲ್ಲವೇ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ.

ಪೊಲೀಸರು, ವೈದ್ಯರಿಗಾಗಿ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟುವ ನಾಗರೀಕರೇ, ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳ ನಿಸ್ವಾರ್ಥ ಸೇವೆಗೆ ಕೃತಜ್ಞತೆ ಸಲ್ಲಿಸೋಣ. ಅವರಂತೆಯೇ ಪ್ರಾಣಾಪಾಯವನ್ನು ಲೆಕ್ಕಿಸದೆ ನಮ್ಮ ಸೇವೆಯಲ್ಲಿ ತೊಡಗಿರುವ ಪೌರಕಾರ್ಮಿಕರನ್ನೂ ನೆನೆಯಬೇಕು. ಅವರ ತ್ಯಾಗವನ್ನು ಪರಿಗಣಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು! ಎಂದು ಆಗ್ರಹಿಸಲಾಗಿದೆ.

ಈ ಕುರಿತು ಬಸವರಾಜುರವರ ಸಂಬಂಧಿ ಮತ್ತು ಕರ್ನಾಟಕ ಜನಶಕ್ತಿಯ ಕಾರ್ಯಕರ್ತರಾದ ಸಿದ್ದರಾಜುರವರು ಮಾತನಾಡಿ “ಒಂದು ವಾರದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ನಿನ್ನೆ ಬೆಳಿಗ್ಗೆ ಪ್ರಜ್ಞೆ ತಪ್ಪಿದರು. ಆಗ ಕೂಡಲೇ ನಾನೇ ಜಿಲ್ಲಾಸ್ಪತ್ರೆಗೆ ತೋರಿಸಿ ಅಡ್ಮಿಟ್ ಮಾಡಿದೆ. ರಾತ್ರಿ ವೆಂಟಿಲೇಟರ್‌ಗೆ ಹಾಕಿದ್ದರು. ಆದರೂ ಬಸವರಾಜು ಬದುಕುಳಿಯಲ್ಲಿಲ್ಲ. ಈ ಕುರಿತು ಜಿಲ್ಲಾ ಪಂಚಾಯತ್‌ ಸಿಇಒ, ಇಒ ರವರಿಗೆ ಮಾಹಿತಿ ನೀಡಿದ್ದೇವೆ. ಅವರು ಎರಡು ದಿನದ ನಂತರ ಪರಿಹಾರ ಹಣ ನೀಡುವ ಬಗ್ಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಮೊದಲೇ ಬಡವರಾಗಿರುವ ಪೌರಕಾರ್ಮಿಕರು ಈ ರೀತಿ ಲಾಕ್‌ಡೌನ್‌ ಸಮಯದಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂಜಾಗ್ರತಾ ಸಲಕರಣೆಗಳನ್ನು ನೀಡುವ ಮೂಲಕ ಸರ್ಕಾರ ಅವರ ರಕ್ಷಣೆಗೆ ಮುಂದಾಗಬೇಕು’ ಎಂದಿದ್ದಾರೆ.

ಬಸವರಾಜುರವರ ಸಾವನ್ನು ಯಾವುದೇ ಪೊಳ್ಳುಕಾರಣ ನೀಡಿ ಕೊರೋನಾ ಸಂಬಂಧಿ ಸಾವಲ್ಲ ಎಂಬಂತೆ ಬಿಂಬಿಸುವ ಪ್ರಯತ್ನವನ್ನು ಅಧಿಕಾರಿಗಳು ಮಾಡಬಾರದೆಂದು. ಇಂತಹ ಸಂದರ್ಭದಲ್ಲೂ ಸೇವೆಗೆ ಹಾಜರಾಗಿ ಪ್ರಾಣತ್ಯಾಗ ಮಾಡಿದ ಬಸವರಾಜು ಅವರನ್ನು ಕೊರೋನಾ ವಿರೋಧಿ ಸಂಗ್ರಾಮದ ಹುತಾತ್ಮ ಎಂದು ಸರ್ಕಾರ ಪರಿಗಣಿಸಬೇಕು. ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲೇಬೇಕು. ಪೌರ ಕಾರ್ಮಿಕರ ಸುರಕ್ಷತೆ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳಿಗೆ‌ ಆದೇಶ ಹೊರಡಿಸಬೇಕು ಎಂಬ ಆಗ್ರಹಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿವೆ.


ಇದನ್ನೂ ಓದಿ: ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ: ರಾಹುಲ್ ಗಾಂಧಿ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಪೌರಕಾರ್ಮಿಕರ ಸೇವೆಯನ್ನು ಅಗತ್ಯ ಸೇವೆ ಎಂದು ಪರಿಗಣಿಸಿ ಅವರ ಕೆಲಸವನ್ನು ಖಾಯಂಗೊಳಿಸುವಂತೆ, ಅಗತ್ಯ ಸಂಖ್ಯೆಯಲ್ಲಿ ನೇಮಕಾತಿಗೊಳಿಸುವಂತೆ, ಇವರನ್ನು ಮುಖ್ಯವಾಹಿನಿಗೆ ತರಲು ಇವರ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ಕಲ್ಪಿಸುವಂತೆ, ಇವರಿಗೆ ವಿಶೇಷ ಜೀವವಿಮೆ ಕಲ್ಪಿಸುವಂತೆ, ಇವರಿಗೆ ಹಾಗೂ ಇವರ ಅವಲಂಭಿತರಿಗೆ ಸಂಪೂರ್ಣ ಉಚಿತ ವೈಧ್ಯಕೀಯ ಸೇವೆಗಳನ್ನು ಕಲ್ಪಿಸುವಂತೆ ಭ್ರಷ್ಟಾಚಾರ ವಿರೋಧಿ ಹೋರಾಟ ವೇದಿಕೆವತಿಯಿಂದ ನಿರಂತರ ಹೋರಾಟ ನಡೆಸಿದ್ದೆವು. ಆದರೆ ಇಂದಿಗೂ ಪೌರಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ಸೇವೆಗೆ ತೆಗೆದುಕೊಂಡು ವಂಚಿಸಲಾಗುತ್ತಿದೆ: ಕೆ.ನರೇಂದ್ರಬಾಬು, ವಕೀಲರು ಮತ್ತು ಸಂಸ್ಥಾಪಕ ಅಧ್ಯಕ್ಷರು, ಭ್ರಷ್ಟಾಚಾರ ವಿರೋಧಿ ಹೋರಾಟ ವೇದಿಕೆ, 7022272226

  2. ರಾಷ್ಟ್ರದಾದ್ಯಂತ ಕೊರೋನಾ ಕಾರಣದಿಂದ ಮರಣಿಸಿದವರಿಗಿಂತಾ ಹಸಿವೆಯಿಂದ ಮರಣಿಸುವವರ ಸಂಖ್ಯೆ ಹೆಚ್ಚಾಗುವ ಸಂಭವ ಹೆಚ್ಚಾಗಿದೆ. ಜನ ಬೀದಿಗೆ ಬರುವ ಬದಲಾಗಿ ನ್ಯಾಯಬೆಲೆ ಅಂಗಡಿಯವರು ಪ್ರತಿಯೊಬ್ಬರ ಜನಮನೆ ಬಾಗಿಲಿಗೆ ಹೋಗಿ ಪಡಿತರ ಚೀಟಿಗಳನ್ನು ಪರಿಶೀಲಿಸದೇ ಪಡಿತರವನ್ನು ಅಳೆದುಕೊಡುವಂತೆ ಒತ್ತಾಯಿಸಲಾಗಿತ್ತು, ಆದರೆ ಇಚ್ಚಾಕೊರತೆ ಕಾಡಿದೆ

  3. ನಿಜ ಹೇಳಬೇಕೆಂದರೆ ಪೌರಕಾರ್ಮಿಕರೇ ಮುಂಚೂಣಿಯ ಹೋರಾಟಗಾರರು
    RIP

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...